Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Ripponpete | ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು

ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ರಿಪ್ಪನ್‌ಪೇಟೆ : ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ನಾಲ್ವರು ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನ 23 ಮತ್ತು 24 ರಂದು ಮಂಡ್ಯ ಜಿಲ್ಲೆಯ ನಾಗಮಂಗಲದ ಆದಿಚುಂಚನಗಿರಿ ಮಠದ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17 ವರ್ಷ ವಯೋಮಿತಿಯೊಳಗಿನ ಹಾಗೂ 14 ವರ್ಷ ವಯೋಮಿತಿಯ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಮುಂದಿನ ತಿಂಗಳು ದೆಹಲಿ ಹಾಗೂ ಜಾರ್ಖಂಡ್…

Read More

ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಕ್ತಿಯೇ ಗುರು : ರಂಭಾಪುರಿ ಜಗದ್ಗುರುಗಳು| Malali matt

ಮಳಲಿಮಠದ ಕಾರ್ತಿಕ ದೀಪೋತ್ಸವ ಶ್ರೀಗಳ ಪಟ್ಟಾಧಿಕಾರ ರಜತ ಮಹೋತ್ಸವದಲ್ಲಿ ರಂಭಾಪುರಿ ಜಗದ್ಗುರುಗಳು  ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಕ್ತಿಯೇ ಗುರು  ರಿಪ್ಪನ್‌ಪೇಟೆ;-ಮನುಷ್ಯ ಜೀವನದಲ್ಲಿ ಅರ್ಥ ಅರಿವು ಆಯುಷ್ಯ ಬಹಳ ಮುಖ್ಯ. ಗುರುವೆಂದರೆ ವ್ಯಕ್ತಿಯಲ್ಲ. ಅದೊಂದು ಮಹಾನ್ ಶಕ್ತಿ. ಅಜ್ಞಾನದ ಕತ್ತಲೆ ಕಳೆದು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಕ್ತಿಯೇ ಶ್ರೀ ಗುರು ಎಂದು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಸಮೀಪದ ಮಳಲಿ ಸಂಸ್ಥಾನಮಠದಲ್ಲಿ ಅಯೋಜಿಸಲಾದ ಕಾರ್ತಿಕ ದೀಪೋತ್ಸವ ಹಾಗೂ ಡಾ||ನಾಗಭೂಷಣ ಶ್ರೀಗಳವರ ಪಟ್ಟಾಧಿಕಾರದ ರಜತ ಮಹೋತ್ಸವ ಸಮಾರಂಭದ ದಿವ್ಯ…

Read More

ಹೊಸನಗರ ತಾಲೂಕಿನಲ್ಲಿ ನಿಲ್ಲದ ಅಕ್ರಮ ಮರಳು ಸಾಗಾಟ – ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹ – ಗಿರೀಶ್ ಆಚಾರ್ |sand mafia

ಹೊಸನಗರ ತಾಲೂಕಿನಲ್ಲಿ ನಿಲ್ಲದ ಅಕ್ರಮ ಮರಳು ಸಾಗಾಟ – ಫ್ರೀಡಂ ಪಾರ್ಕ್ ನಲ್ಲಿ ಸತ್ಯಾಗ್ರಹಕ್ಕೆ ಗಿರೀಶ್ ಆಚಾರ್ ನಿರ್ಧಾರ ಹೊಸನಗರ ಹಾಗೂ ಸಾಗರ ತಾಲೂಕಿನ ಸುತ್ತಮುತ್ತಲ ಪ್ರದೇಶದಿಂದ ನಿತ್ಯವೂ ನೂರಾರು ಲೋಡ್ ಮರಳು ಅಕ್ರಮ ಸಾಗಾಟ ನಡೆಯುತ್ತಿದ್ದು ಈ ಬಗ್ಗೆ ಎಷ್ಟೇ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಹಾಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುವುದಾಗಿ ಜನಸಂಗ್ರಾಮ ಪರಿಷತ್ ಸದಸ್ಯ ಗಿರೀಶ್ ಆಚಾರ್ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು ತಾಲೂಕಿನಾದ್ಯಂತ…

Read More

Shivamogga | ಸಾಗರ ರಸ್ತೆಯಲ್ಲಿ ಸರಣಿ ಅಪಘಾತ

Shivamogga | ಸಾಗರ ರಸ್ತೆಯಲ್ಲಿ ಸರಣಿ ಅಪಘಾತ  ಶಿವಮೊಗ್ಗದ ಎಪಿಎಂಸಿ ಯಾರ್ಡ್ ಮುಂಭಾಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. ಅದೃಷ್ಣವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ಎಪಿಎಂಸಿಯ ದುರ್ಗಾಂಬ ಪೆಟ್ರೋಲ್ ಬಂಕ್ ಬಳಿ ಚಲಿಸುತ್ತಿದ್ದ ಬ್ರೀಜಾ ಕಾರೊಂದು ಓಮಿನಿಗೆ ಗುದ್ದಿದೆ. ಓಮಿನಿ ಕಾರು ಮುಂದಿನ ಆಟೋಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯನ್ನ ತಪ್ಪಿಸಲು ಮುಂದಾದ ಓಮಿನಿ ಕಾರು ಡಿವೈಡರ್ ಮೇಲೆ ಹತ್ತಿ ನಿಂತಿದೆ. ಘಟನಾ ಸ್ಥಳದಲ್ಲಿ ಜನ ಜಮಾವಣೆಯಾಗಿದ್ದಾರೆ. ಪೂರ್ವ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ…

Read More

Thirthahalli | ಕಾಣೆಯಾಗಿದ್ದ ವ್ಯಕ್ತಿ ಬಸ್ ನಿಲ್ದಾಣದಲ್ಲಿ ಶವವಾಗಿ ಪತ್ತೆ

Thirthahalli | ಕಾಣೆಯಾಗಿದ್ದ ವ್ಯಕ್ತಿ ಬಸ್ ನಿಲ್ದಾಣದಲ್ಲಿ ಶವವಾಗಿ ಪತ್ತೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಅಕ್ಲಾಪುರದ ನಿವಾಸಿ ರವಿ ಎಲ್ ಗೌಡ (55 ) ಎಂಬುವವರ ಶವ ಹೊದಲ ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊದಲ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದೆ. ರವಿ ಗೌಡ ಶುಕ್ರವಾರ ಸಂಜೆಯಿಂದ ಕಾಣೆಯಾಗಿದ್ದು ಕುಟುಂಬಸ್ಥರು ಎಲ್ಲಾ ಕಡೆ ಹುಡುಕಿ ನಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಇಂದು ಶವವಾಗಿ ಪತ್ತೆಯಾಗಿದ್ದಾರೆ. ರವಿ ಅವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು…

Read More

Sagara | ಆಕಸ್ಮಿಕ ಬೆಂಕಿ: ಕೊಟ್ಟಿಗೆ, ಕಾರು ಸಂಪೂರ್ಣ ಭಸ್ಮ

Sagara | ಆಕಸ್ಮಿಕ ಬೆಂಕಿ: ಕೊಟ್ಟಿಗೆ, ಕಾರು ಸಂಪೂರ್ಣ ಭಸ್ಮ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುದರೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ, ಸುಳ್ಳಳ್ಳಿ ಸಮೀಪದ ಕೊಡನವಳ್ಳಿಯಲ್ಲಿ ಗಣಪತಿ ಕೆಂಚ ನಾಯ್ಕ ಅವರ ದನದ ಕೊಟ್ಟಿಗೆಯಲ್ಲಿ ಕಾಣಿಸಿದ ಆಕಸ್ಮಿಕ ಬೆಂಕಿಯ ಕಾರಣದಿಂದ ಕೊಟ್ಟಿಗೆ, ಸಂಗ್ರಹಿಸಿದ ಒಣ ಹುಲ್ಲು ಹಾಗೂ ಓಮಿನಿ ಕಾರು ಸಂಪೂರ್ಣ ಭಸ್ಮವಾದ ಘಟನೆ ನಡೆದಿದೆ. ಪ್ರಾಥಮಿಕ ಅಂದಾಜುಗಳ ಪ್ರಕಾರ ಸುಮಾರು ಏಳರಿಂದ ಎಂಟು ಲಕ್ಷ ರೂ.ಗಳ ನಷ್ಟ ಉಂಟಾಗಿದೆ ಎಂದು ಭಾವಿಸಲಾಗಿದೆ. ಬೆಂಕಿಯನ್ನು ನಂದಿಸಲು ಗಣಪತಿ,…

Read More

Sagara | ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿದಂಬರರಾವ್ ಜಂಬೆ ರವರನ್ನು ಅಭಿನಂದಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ

ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿದಂಬರರಾವ್ ಜಂಬೆ ರವರನ್ನು ಅಭಿನಂದಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ ಸಾಗರ : 2023 ನೇ ಸಾಲಿನ ರಾಜ್ಯೋತ್ಸವ (ರಂಗಭೂಮಿ ಕ್ಷೇತ್ರ) ಪ್ರಶಸ್ತಿಗೆ ಭಾಜನರಾದ ನಾಡಿನ ಹೆಸರಾಂತ ರಂಗ ನಿರ್ದೇಶಕ ಚಿದಂಬರ ರಾವ್ ಜಂಬೆ ರವರನ್ನು ಅವರ ಸ್ವಗೃಹದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅಭಿನಂದಿಸಿ ಸನ್ಮಾನಿಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆಳದಿ ಸಮೀಪದ ಅಡ್ಡೇರಿ ಗ್ರಾಮದವರಾದ ಜಂಬೆಯವರು. ಕೆಳದಿಯ ಭಾರತಿ ಕಲಾವಿದರು ಸಂಸ್ಥೆಯ “ಸಂಗ್ಯಾ-ಬಾಳ್ಯಾ” ನಾಟಕದ ಮೂಲಕ ರಂಗಭೂಮಿಯನ್ನು ಪ್ರವೇಶಿಸಿ,…

Read More

ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದವರ ಮೇಲೆ ಹರಿದ ಟಿಪ್ಪ‌ರ್ ಲಾರಿ – ಸ್ಥಳದಲ್ಲೇ ತ್ಯಾಗರ್ತಿ ಮೂಲದ ಕಾರ್ಮಿಕ ಸಾವು | accident

ಸಾಗರ ತಾಲೂಕಿನ ತ್ಯಾಗರ್ತಿ ಸಮೀಪದ ಕೊರ್ಲಿಕೊಪ್ಪ ಮೂಲದ ಬಾಳೆಕಾಯಿ ಲೋಡ್ ಮಾಡುವ ವ್ಯಕ್ತಿಯೊಬ್ಬನ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಶಿವರಾಜ್(38) ಸಾಗರ ತಾಲೂಕಿನ ಕೊರ್ಲಿ ಕೊಪ್ಪದ ನಿವಾಸಿಯಾಗಿದ್ದು. ಶಿವರಾಜ್ ಹಾಗೂ ಮಹೇಂದ್ರ ಎಂಬವರು ಪೆಟ್ರೋಲ್ ಪಂಪ್ ಹತ್ತಿರ ತಮ್ಮ ವಾಹನ ಇಟ್ಟು ಮಲಗಿದ್ದರು. ಈ ಸಂದರ್ಭದಲ್ಲಿಯೇ ಟಿಪ್ಪರ್ ಹರಿದಿದೆ. ಇದರಿಂದ ಶಿವರಾಜ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅದೃಷ್ಟವಶಾತ್ ಮಹೇಂದ್ರ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,…

Read More

Shivamogga | ಮಣ್ಣು ಕುಸಿದು ಕಾರ್ಮಿಕ ಸಾವು

ಶಿವಮೊಗ್ಗ : ರೈಲ್ವೆ ಮೇಲ್ಸೇತುವೆ ಕೆಳಭಾಗದ ಅಂಡರ್ ಗ್ರೌಂಡ್ ಪೈಪ್​ಲೈನ್​ ಅಳವಡಿಕೆಗಾಗಿ ಮಣ್ಣು ತೆಗೆಯುವಾಗ ಮಣ್ಣು ಕುಸಿದು ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ. ಮಣ್ಣು ಕುಸಿದು ಮೃತಪಟ್ಟ ಕಾರ್ಮಿಕನನ್ನು ಶಿವಮೊಗ್ಗ ತಾಲೂಕು ಮಂಡೆನಕೊಪ್ಪದ ಸತೀಶ್ ನಾಯ್ಕ ಎಂದು ಗುರುತಿಸಲಾಗಿದೆ.  ಶಿವಮೊಗ್ಗದ ನವಲೆ ರಸ್ತೆಯ ಭಾಗದಲ್ಲಿ ನಡೆಯುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯಲ್ಲಿ ಮೇಲ್ಸೇತುವೆ ಕೆಳಭಾಗದಲ್ಲಿ ಅಂಡರ್ ಗ್ರೌಂಡ್ ಪೈಪ್ ಅಳವಡಿಕೆ ಕಾರ್ಯ ನಡೆಸಲಾಗುತ್ತಿದೆ. ಜೆಸಿಬಿ ಮೂಲಕ ಮಣ್ಣು ತೆಗೆದು ಪೈಪ್ ಅಳವಡಿಸಲಾಗುತ್ತಿತ್ತು. ಪೈಪ್ ಅಳವಡಿಕೆ ಮಾಡಲು ಮಣ್ಣು…

Read More

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಬೋನಿಗೆ – ನಿಟ್ಟುಸಿರು ಬಿಟ್ಟ ಜನತೆ| leopard

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಬೋನಿಗೆ – ನಿಟ್ಟುಸಿರು ಬಿಟ್ಟ ಜನತೆ| leopard ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿಮ ಕಾರೆಹಳ್ಳಿ ಭಾಗದಲ್ಲಿ ಇತ್ತೀಚಿಗೆ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರ ಜನರ ನಿದ್ದೆಗೆಡಿಸಿತ್ತು. ನಾಯಿಯ ಮೇಲೂ ದಾಳಿ ಮಾಡಿತ್ತು. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದರು. ಕಾರೆಹಳ್ಳಿಯಲ್ಲಿ ಮನೆ ಮಾದರಿಯ ಬೋನಿ ನಲ್ಲಿ ನಾಯಿಯನ್ನು ಕಟ್ಟಿ ಹಾಕಲಾಗಿತ್ತು. ಅದಕ್ಕೆ ವಿಶಾಲವಾದ ಬಯಲು ಅನಿಸಿಕೊಂಡೇ ಅದು ಬೇಟೆಯನ್ನು ಅರಸಿಕೊಂಡು ಬೋನಿನ ಒಳಗೆ ಮದ್ಯರಾತ್ರಿ ಪ್ರವೇಶಿಸಿತ್ತು.  ಇಂದು ಬೆಳಿಗ್ಗೆ ವನ್ಯಜೀವಿ ವೈದ್ಯ…

Read More