Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಶರಾವತಿ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 150 ಟನ್ ಮರಳು ವಶಕ್ಕೆ

ಶರಾವತಿ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 150 ಟನ್ ಮರಳು ವಶಕ್ಕೆ ಹೊಸನಗರ: ತಾಲೂಕಿನ ಪುರಪ್ಪೇಮನೆ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 150 ಟನ್ ಮರಳನ್ನು ಪೊಲೀಸ್ ಇಲಾಖೆ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪುರಪ್ಪೆಮನೆಯ ನದಿ ತೀರದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ಪುರಪ್ಪೆಮನೆಯ ನದಿಯ ತೀರಕ್ಕೆ ದಾಳಿ ನಡೆಸಿ ಅಕ್ರಮ…

Read More

Arasalu |ನಾಳೆ ಅರಸಾಳಿನ ಮಾಲ್ಗುಡಿಯಲ್ಲಿ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ

Arasalu |ನಾಳೆ ಅರಸಾಳಿನ ಮಾಲ್ಗುಡಿ ಡೇಸ್ ನಲ್ಲಿ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ ಕನ್ನಡ ಚಲನಚಿತ್ರ ರಂಗದ ಪ್ರತಿಭಾವಂತ ನಟ ಹಾಗೂ ನಿರ್ದೇಶಕ ದಿ|| ಶಂಕರ್ ನಾಗ್ ರವರ 69 ನೇ ಹುಟ್ಟುಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಗುರುವಾರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಮಾಲ್ಗುಡಿ ಡೇಸ್ ನಲ್ಲಿ ಆಯೋಜಿಸಲಾಗಿದೆ ಎಂದು ಶಂಕರ್ ನಾಗ್ ಅಭಿಮಾನಿ ಸಂಘದ ಅಧ್ಯಕ್ಷ ಸತೀಶ್ ಹೆಗಡೆ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದರು.  ದಿನಾಂಕ 09-11-23 ರಂದು ಬೆಳಿಗ್ಗೆ 10.30…

Read More

ಜೀವ ಬೆದರಿಕೆ ಪ್ರಕರಣ – ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ 43 ಜನರ ವಿರುದ್ದ ಪ್ರಕರಣ ದಾಖಲು|FIR

ಜೀವ ಬೆದರಿಕೆ ಪ್ರಕರಣ – ಮಾಜಿ ಸಚಿವ ಹರತಾಳು ಹಾಲಪ್ಪ ಸೇರಿದಂತೆ 43 ಜನರ ವಿರುದ್ದ ಪ್ರಕರಣ ದಾಖಲು ಸಾಗರ – ಇಲ್ಲಿನ ಜನತಾ ಶಾಲೆಯ ಎದುರಿನ ನಿವೇಶನಕ್ಕೆ ಸಂಬಧಿಸಿದಂತೆ ಜುಲೈ 10 ರಂದು ನಡೆದ ಪ್ರತಿಭಟನೆಯ ಹಿನ್ನಲೆಯಲ್ಲಿ ಮಾಜಿ ಸಚಿವರಾದ ಹರತಾಳು ಹಾಲಪ್ಪ ಸೇರಿದಂತೆ 43 ಜನರ ವಿರುದ್ದ ಕೋರ್ಟ್ ಆದೇಶದಂತೆ ಸಾಗರದ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಲೈ 10 ರಂದು ನಡೆದ ಪ್ರತಿಭಟನೆ ಸಂಧರ್ಭದಲ್ಲಿ ವಿಜಯ್ ಕುಮಾರ್ ಪಾಟೀಲ್ ರವರು ಪ್ರತಿಭಟನಕಾರರಿಗೆ…

Read More

Thirthahalli | ಸಾಲ ಬಾಧೆ ತಾಳಲಾರದೆ ಹೊಟೇಲ್ ಮಾಲೀಕ ಆತ್ಮಹತ್ಯೆ

 ಹೋಟೆಲ್ ಮಾಲೀಕ ನೇಣಿಗೆ ಶರಣು ! ತೀರ್ಥಹಳ್ಳಿ: ಸಾಲದ ಸಂಕಷ್ಟಕ್ಕೆ ಒಳಗಾಗಿ ಹೋಟೆಲ್ ಮಾಲೀಕರೊಬ್ಬರು  ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಜ್ಜವಳ್ಳಿಯಲ್ಲಿ ನೆಡೆದಿದೆ. ತಾಲೂಕಿನ ಬೆಜ್ಜವಳ್ಳಿಯ ಅನ್ನಪೂರ್ಣ ಹೋಟೆಲ್ ಮಾಲೀಕರಾದ ಉಮೇಶ್ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದ ಉಮೇಶ್ ಸಾಲದ ಸುಳಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಇವರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.  ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Ripponpete | ಸರ್ಕಾರಕ್ಕೆ ಸಲ್ಲಿಸಿರುವ ಬರಪೀಡಿತದ ವರದಿ ಅವೈಜ್ಞಾನಿಕ ; ತುರ್ತು ಸಮಗ್ರ ವರದಿಗೆ ಜೆಡಿಎಸ್ ಆಗ್ರಹ

ಸರ್ಕಾರಕ್ಕೆ ನೀಡಿದ ಬರಪೀಡಿತದ ವರದಿ ಅವೈಜ್ಞಾನಿಕ ; ತುರ್ತು ಸಮಗ್ರ ವರದಿಗೆ ಜೆಡಿಎಸ್ ಆಗ್ರಹ ರಿಪ್ಪನ್‌ಪೇಟೆ – ಶಿವಮೊಗ್ಗ ಜಿಲ್ಲೆಯಲ್ಲಿ ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡಿದ್ದು, ಬರಪೀಡಿತ ವರದಿ ಮಾತ್ರ ಅವೈಜ್ಞಾನಿಕವಾಗಿರುತ್ತದೆ. ಮಲೆನಾಡಿನ ಜಿಲ್ಲೆಯಲ್ಲಿ ಸಕಾಲದಲ್ಲಿ ಮಳೆ ಬರದಿದ್ದು, ಇದರಿಂದ ರೈತರು ತಮ್ಮ ಸಂಪೂರ್ಣ ಬೆಳೆಯನ್ನು ಕಳೆದುಕೊಂಡಿದ್ದು ಸರ್ಕಾರ ನೆಪಕ್ಕೆ ಮಾತ್ರ ಅಧಿಕಾರಿಗಳಿಂದ ವರದಿ ತರಿಸಿ ಶಿವಮೊಗ್ಗ ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆಂದು ರಾಜ್ಯ ಜೆಡಿಎಸ್ ಪ್ರಧಾನಕಾರ್ಯದರ್ಶಿ ಆರ್.ಎ.ಚಾಬುಸಾಬ್ ಆರೋಪಿಸಿದರು. ರಿಪ್ಪನ್‌ಪೇಟೆಯಲ್ಲಿ ಇಂದು ನಾಡಕಛೇರಿಯ ಮುಂಭಾಗ ರಾಜ್ಯ…

Read More

ಹೊಸನಗರದ ನೂತನ ತಹಶೀಲ್ದಾರ್ ಆಗಿ ರಶ್ಮಿ ಹೆಚ್ ಜಿ ಅಧಿಕಾರ ಸ್ವೀಕಾರ|Hosanagara

ಹೊಸನಗರದ ನೂತನ ತಹಶೀಲ್ದಾರ್ ಆಗಿ ರಶ್ಮಿ ಹೆಚ್ ಜಿ ಅಧಿಕಾರ ಸ್ವೀಕಾರ|Hosanagara ಹೊಸನಗರ : ಸುಮಾರು 4 ತಿಂಗಳುಗಳ ಕಾಲ ಹೊಸನಗರ ತಾಲ್ಲೂಕು ಕಛೇರಿಯ ತಹಶೀಲ್ದಾರ್ ಹುದ್ದೆ ಖಾಲಿಯಿದ್ದು ತಾಲ್ಲೂಕು ಕಛೇರಿಯ ಗ್ರೇಡ್2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋರವರು ಪ್ರಭಾರ ತಹಶೀಲ್ದಾರ್ ಆಗಿ ಕಾರ್ಯರ್ವಹಿಸುತ್ತಿದ್ದರು. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಶ್ಮಿ ಹೆಚ್.ಜೆಯವರು ಅಲ್ಲಿಂದ ವರ್ಗಾವಣೆಗೊಂಡು ಹೊಸನಗರ ತಹಶೀಲ್ದಾರ್‌ರಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರಿಸಿ ತಹಶೀಲ್ದಾರ್ ರಶ್ಮಿ ಪತ್ರಕರ್ತರೊಂದಿಗೆ ಮಾತನಾಡಿ, ಹೊಸನಗರ ತಾಲ್ಲೂಕಿನಲ್ಲಿರುವ ಯಾವುದೇ…

Read More

ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ

ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ ಶಿವಮೊಗ್ಗ : ಹೆಂಡತಿಗೆ ಅನಾರೋಗ್ಯವಿದೆ ಎಂದು ಹೇಳಿ ಕಾರನ್ನು ಸ್ನೇಹಿತನಿಂದ ಪಡೆದುಕೊಂಡು ವಾಪಾಸ್ ಕೊಡದೆ ಮೋಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 08 ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್.ಎಂ.ಎಲ್ ನಗರದ ನಿವಾಸಿ ಸೈಯದ್ ಸಾದಿಕ್‌ರವರ ಟಾಟಾ ಇನ್ನೋವಾ ಕಾರನ್ನು ಆತನ ಪರಿಚಯಸ್ಥನಾದ ಕಿರಣ್ ಕುಮಾರ್ @ ಗುಂಡ ಎಂಬಾತ ತೆಗೆದುಕೊಂಡು ಹೋಗಿ…

Read More

ವಿಸಿ ನಾಲೆಗೆ ಉರುಳಿದ ಕಾರು – ಐವರು ಜಲಸಮಾಧಿ|accident

ವಿಸಿ ನಾಲೆಗೆ ಉರುಳಿದ ಕಾರು – ಐವರು ಜಲಸಮಾಧಿ ಮಂಡ್ಯ ತಾಲ್ಲೂಕಿನ ಪಾಂಡವಪುರದಲ್ಲಿರುವ ವಿಸಿ ನಾಲೆಗೆ ಬಿದ್ದ ಕಾರೊಂದರಲ್ಲಿ ಶಿವಮೊಗ್ಗದ ಐವರು ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಮೃತಪಟ್ಟವರನ್ನು ಭದ್ರಾವತಿ ಮೂಲದ ಚಂದ್ರಪ್ಪ(61), ಕೃಷ್ಣಪ್ಪ (60), ಧನಂಜಯ್ಯ (55), ಬಾಬು ಮತ್ತು ಜಯಣ್ಣ ಎಂದು ಗುರುತಿಸಲಾಗಿದೆ. ಮೈಸೂರಿನಿಂದ ಭದ್ರಾವತಿಗೆ ವಾಪಸ್ ಹೋಗುವಾಗ ಘಟನೆ ನಡೆದಿದೆ‌. ಮೃತರು ಗುಂಗರಹಳ್ಳಿ, ನೊಣವಿನಕೆರೆ, ತಿಪಟೂರು ಮೂಲದರಾಗಿದ್ದು, ಭದ್ರಾವತಿಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಚಂದ್ರಪ್ಪಗೆ ಸೇರಿದ (ಕೆಎ -14, ಎ 2457)…

Read More

ನಾಪತ್ತೆಯಾಗಿದ್ದ ಶಾರದಮ್ಮ ಮನೆಯಿಂದ 6 ಕಿಮೀ ದೂರದ ದಟ್ಟ ಕಾಡಿನಲ್ಲಿ ಜೀವಂತವಾಗಿ ಪತ್ತೆ

ನಾಪತ್ತೆಯಾಗಿದ್ದ ಶಾರದಮ್ಮ ಮನೆಯಿಂದ 6 ಕಿಮೀ ದೂರದ ದಟ್ಟ ಕಾಡಿನಲ್ಲಿ ಜೀವಂತವಾಗಿ ಪತ್ತೆ  ಹೊಸನಗರ: ಮನೆಯಲ್ಲಿದ್ದ ವೃದ್ಧೆ ಮನೆಪಕ್ಕದ ತೋಟಕ್ಕೆ ಹೋಗಿ ನಾಪತ್ತೆಯಾಗಿರುವ ಘಟನೆ ಸುಖಾಂತ್ಯವಾಗಿದೆ. ಕರಿಮನೆ ಗ್ರಾಪಂ ವ್ಯಾಪ್ತಿಯ ಸಾದಗಲ್ ಗ್ರಾಮದ ಚನ್ನಪ್ಪಗೌಡ ಎಂಬುವವರ ಪತ್ನಿ 85 ವರ್ಷದ ಶಾರದಮ್ಮ ಮೂರು ದಿನದಿಂದ ನಾಪತ್ತೆಯಾಗಿದ್ದರು. ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ಸಾದಗಲ್ ವೃದ್ಧೆಯ ಶೋಧ ಕಾರ್ಯ ನಗರ ಠಾಣೆ ಪಿಎಸ್ಐ ರಮೇಶ್ ನೇತೃತ್ಬದಲ್ಲಿ ಶ್ವಾನದಳ ಶೋಧಕಾರ್ಯ ನಡೆಸಲಾಗಿತ್ತು. ಮತ್ತೊಂದಡೆ ಅರಣ್ಯ ಇಲಾಖೆ ತಂಡ ಕೂಡ ಶೋಧ…

Read More

POSTMAN NEWS ವರದಿಯ ಫಲಶ್ರುತಿ | ದೂನ ಸರ್ಕಾರಿ ಶಾಲೆಗೆ ಸಿಕ್ತು ಕಸದಿಂದ ಮುಕ್ತಿ – ಮುಚ್ಚಿದ ಶಾಲೆ ಪುನರಾರಂಭಕ್ಕೆ ಮುಂದಾದ ಯುವಕರು..!!

POSTMAN NEWS ವರದಿಯ ಫಲಶ್ರುತಿ | ದೂನ ಸರ್ಕಾರಿ ಶಾಲೆಗೆ ಸಿಕ್ತು ಕಸದಿಂದ ಮುಕ್ತಿ – ಮುಚ್ಚಿದ ಶಾಲೆ ಪುನರಾರಂಭಕ್ಕೆ ಮುಂದಾದ ಯುವಕರು ರಿಪ್ಪನ್‌ಪೇಟೆ ಸಮೀಪದ ದೂನ ಗ್ರಾಮದ ಸರ್ಕಾರಿ ಶಾಲೆಗೆ ಅಂತೂ ಇಂತೂ ಕಸದಿಂದ ಮುಕ್ತಿ ಸಿಕ್ಕಿದೆ.ವರದಿಗೆ ಎಚ್ಚೆತ್ತ ಅರಸಾಳು ಗ್ರಾಮಾಡಳಿತ ಕಸವನ್ನು ಶಾಲೆಯಿಂದ ತೆರವುಗೊಳಿಸಿದೆ. ಶಿವಮೊಗ್ಗ ಜಿಲ್ಲೆಯ ಈ ಒಂದು ಕುಗ್ರಾಮದಲ್ಲಿ ಸುಂದರವಾದ ಶಾಲೆ ಇತ್ತು ತುಂಬಾ ಚೆನ್ನಾಗಿ ಆಟ ಪಾಠ ಎಲ್ಲಾ ನಡೆಯುತಿತ್ತು.ಯಾವಾಗ ಆ ಶಾಲೆಯ ಮೇಲೆ ಖಾಸಗಿ ಶಾಲೆಗಳ ಕಣ್ಣು ಬಿತ್ತು…

Read More