Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ – ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ|Highcourt

ರಿಪ್ಪನ್‌ಪೇಟೆ – ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ರಿಪ್ಪನ್‌ಪೇಟೆ – ಇಲ್ಲಿನ ತಾಲೂಕ್ ಒಕ್ಕಲಿಗರ ಸಂಘದ ನಿರ್ದೇಶಕ ಸ್ಥಾನಕ್ಕೆ 29|10|2023 ರಂದು ನಡೆಯಬೇಕಿದ್ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಸಂಘದ ನಿರ್ದೇಶಕ ಹಾಗೂ ದೂರುದಾರ ಪುರುಷೋತ್ತಮ್ ಹೆಚ್ ಹೆಚ್ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 29|10|2023 ರಂದು ಹೊಸನಗರ ತಾಲೂಕ್ ಒಕ್ಕಲಿಗರ ಸಂಘ ರಿಪ್ಪನ್‌ಪೇಟೆಯ 19 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಸಲು ತೀರ್ಮಾನಿಸಲಾಗಿತ್ತು. ಈ ಸಂಬಂಧ ಸಂಘದ ಹಾಲಿ ನಿರ್ದೇಶಕರುಗಳಾದ ಹಾಲುಗುಡ್ಡೆಯ ಪುರುಷೋತ್ತಮ್ ಹೆಚ್…

Read More

ಹೊಸನಗರ : ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ|abvp

ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ ಹೊಸನಗರ : ಹಿಂದುಳಿದ ವರ್ಗಗಳ ಇಲಾಖೆ ಕೃಷಿ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಆಯುಷ್ಯ ಇಲಾಖೆ ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಅಡಿಯಲ್ಲಿ ನೀಡುತ್ತಿರುವ ವಿದ್ಯಾರ್ಥಿವೇತನಗಳನ್ನು ರಾಜ್ಯ ಸರ್ಕಾರ ಈಗ ತಡೆಹಿಡಿದಿದ್ದು ಈ ಪ್ರಕ್ರಿಯೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಮಾರಕವಾಗಿದ್ದ ಕಾರಣ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಹೊಸನಗರ ಘಟಕದವರು ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಿಂದ ತಾಲೂಕು ಕಚೇರಿವರೆಗೆ ಜಾಥ…

Read More

ಅಪ್ಪ-ಅಮ್ಮನಿಲ್ಲದ ಕೊರಗು – ಬೇಸತ್ತ ಯುವಕ ನೇಣಿಗೆ ಶರಣು|bdvt

ಅಪ್ಪ-ಅಮ್ಮನಿಲ್ಲದ ಕೊರಗು – ಬೇಸತ್ತ ಯುವಕ ನೇಣಿಗೆ ಶರಣು ತಂದೆ ತಾಯಿಯಿಲ್ಲದ ಕೊರಗಿನಿಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸೈದರಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಯುವಕ ವೀರೇಶ್ (21) ಅಡಕೆ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ದೇವೆಂದ್ರಪ್ಪ ಎಂಂಬುವವರ ಅಡಕೆ ತೋಟದ ಅಂಚಿನಲ್ಲಿರುವ ಮಾವಿನ ಮರಕ್ಕೆ ಒಂದು ಬಿಳಿ ಪಂಚೆಯನ್ನು ಕುತ್ತಿಗೆಗೆ ಬಿಗಿದುಕೊಂಡು ಮೃತ ಪಟ್ಟಿದ್ದು, ವೀರೇಶನು ತಂದೆ-ತಾಯಿ ಇಲ್ಲದ ಕೊರಗಿನಿಂದ ಜಿಗುಪ್ಪೆಗೊಂಡಿದ್ದರು ಎನ್ನಲಾಗಿದೆ.  ಈ ಸಂಬಂಧ ಪೊಲೀಸ್…

Read More

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ – ಒಂಬತ್ತು ಮಂದಿಗೆ ಗಾಯ|accident

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಹಲವರಿಗೆ ಗಾಯ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರದ ಬಳಿಯಲ್ಲಿ ನಿನ್ನೆ ರಾತ್ರಿ ಅಪಘಾತವೊಂದು ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದೆ.  ನಡೆದಿದ್ದೇನು..?? ಖಾಸಗಿ ಬಸ್​ ಸಾಗರ ತಾಲ್ಲೂಕಿನಿಂದ ಬೆಂಗಳೂರಿಗೆ ಹೊರಟಿತ್ತು. ಆನಂದಪುರದ ಬಳಿಯಲ್ಲಿ ಸಿಗುವ ಐಗಿನಬೈಲ್​ ಟರ್ನಿಂಗ್​ನಲ್ಲಿ ಬಸ್​ ಪಲ್ಟಿಯಾಗಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಒಂದು ಕಡೆಗೆ ಉರುಳಿದೆ. ರಾತ್ರಿ ಸುಮಾರು 12 ಗಂಟೆಯ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಬಸ್​…

Read More

ಪಾದಚಾರಿಯ ಮೇಲೆ ಹರಿದು ಲೈಟ್ ಕಂಬಕ್ಕೆ ಡಿಕ್ಕಿಯಾದ ಬೈಕ್ – ಇಬ್ಬರು ಸಾವು|accident

ಪಾದಚಾರಿಯ ಮೇಲೆ ಹರಿದು ಲೈಟ್ ಕಂಬಕ್ಕೆ ಡಿಕ್ಕಿಯಾದ ಬೈಕ್ – ಇಬ್ಬರು ಸಾವು ಬೈಕ್​ ಅಪಘಾತವೊಂದರಲ್ಲಿ  ಪಾದಚಾರಿ ಹಾಗೂ ಬೈಕ್​ ಸವಾರ ಇಬ್ಬರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆ ಗ್ರಾಮಾಂತರ ವ್ಯಾಪ್ತಿಯ ಸುತ್ತುಕೋಟೆಯಲ್ಲಿ ನಡೆದಿದೆ. ಅಪಘಾತದಲ್ಲಿ ಹನುಮಮಂತಪ್ಪ ಹಾಗೂ ಮೇಘರಾಜ್ ಎಂಬವರು ಸಾವನ್ನಪ್ಪಿದ್ದಾರೆ.  ಶಿವಮೊಗ್ಗದ ಹೊನ್ನಾಪುರದ ಮೇಘರಾಜ್ ಎಂಬವರು ಶಿವಮೊಗ್ಗ, ಆಯನೂರು , ಕುಂಸಿ ಚೋರಡಿ ಮಾರ್ಗವಾಗಿ ಶಿರಾಳಕೊಪ್ಪದ ಮಂಚಿಕೊಪ್ಪಕ್ಕೆ ಹೋಗುತ್ತಿದ್ದರು. ಈ ವೇಳೆ ಸುತ್ತುಕೋಟೆಯಲ್ಲಿ  ಬಳಿ ಹನುಮಂತಪ್ಪ ಎಂಬವರು ನಡೆದುಕೊಂಡು ಬರುತ್ತಿದ್ದರು. ರಾತ್ರಿ ಕತ್ತಲಲ್ಲಿ ಮೇಘರಾಜ್​ ಬೈಕ್ ಹನುಮಂತಪ್ಪರವರಿಗೆ ಡಿಕ್ಕಿ ಹೊಡೆದಿದೆ….

Read More

ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಶವ ಪತ್ತೆ|Thirthahalli

ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಶವ ಪತ್ತೆ ತೀರ್ಥಹಳ್ಳಿ : ಪಟ್ಟಣದ ಜಯಚಾಮರಾಜೇಂದ್ರ ಸೇತುವೆಯ  ಕೆಳಭಾಗದ  ತುಂಗಾ ನದಿಯ  ನೀರಿನಲ್ಲಿ ಗುರುವಾರ ವ್ಯಕ್ತಿಯೋರ್ವನ ಶವ ಒಂದು ಪತ್ತೆಯಾಗಿದೆ. ದೇವರಾಜ್ 48 ವರ್ಷ ಮೃತಪಟ್ಟ ವ್ಯಕ್ತಿ. ಈತ ಪ್ರತಿದಿನ ಬೆಳಗ್ಗೆ ಮನೆ ಮನೆಗೆ ಹಾಲು ಹಾಕುತ್ತಿದ್ದ. ಕಳೆದ 2-3 ದಿನಗಳಿಂದ ಕಾಣೆಯಾಗಿದ್ದು ಕುಟುಂಬಸ್ಥರು ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು. ಈತ ಸ್ವಲ್ಪ ಮಾನಸಿಕ ಅಸ್ವಸ್ಥನಾಗಿದ್ದ ಎನ್ನಲಾಗಿದೆ. ಈತ ಪಟ್ಟಣದಲ್ಲಿ ದೇವು ಎಂದೇ ಚಿರಪರಿಚಿತರಾಗಿದ್ದರು. ಇತನ ಸಾವಿಗೆ ನಿಖರವಾದ  ಕಾರಣ…

Read More

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ|assault

ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದ ಗ್ರಾಪಂ ಅಧ್ಯಕ್ಷನ ಮೇಲೆ ಹಲ್ಲೆ ಶಿವಮೊಗ್ಗ : ಕಸ ವಿಲೇವಾರಿ ವಿಚಾರದಲ್ಲಿ ಸ್ಥಳೀಯರಿಂದಲೇ ಗ್ರಾಪಂ ಅಧ್ಯಕ್ಷರ ಮೇಲೆ ಹಲ್ಲೆ ನಡೆದಿದೆ. ಹಲ್ಕೆಯ ಸಂಬಂಧ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.‌ ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮ ಪಂಚಾಯ್ತಿ, ಅಧ್ಯಕ್ಷರಾದ ಜಗದೀಶ್ , ತಮ್ಮ ಊರಿನಲ್ಲಿ ಸ್ವಚ್ಛತಾ ಕಾರ್ಯ ಮಾಡಿಸಿದ್ದು, ಸ್ವಚ್ಛತಾ ಕೆಲಸ ಮಾಡಿದ ಕಸವನ್ನು 2 ದಿನಗಳ ನಂತರ ವಿಲೇವಾರಿ ಮಾಡಲು ಯೋಚಿಸಿದ್ದರು.‌ ದಸರಾ ಹಬ್ಬದ ಪ್ರಯುಕ್ತ ಊರಿನಲ್ಲಿ ಟ್ರಾಕ್ಟರ್ ಸಿಗದೇ ಇದ್ದುದರಿಂದ…

Read More

ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ|byr

ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ: ಅಟಲ್ ಬಿಹಾರಿ ವಾಜಪೇಯಿ ಅವರು ಜಾರಿಗೊಳಿಸಿದ ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ಭಾಗದ ಸಂಪರ್ಕ ರಸ್ತೆಗಳ ಅಭಿವೃದ್ಧಿಗಾಗಿ ನಂತರದಲ್ಲಿ ಬಂದ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪಿಎಂಜಿಎಸ್‌ವೈ ಯೋಜನೆಯಿಂದಾಗಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ 200 ಕಿ.ಮೀ ರಸ್ತೆಗೆ 200 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸುವ ಮೂಲಕ ಅಭಿವೃದ್ದಿ ಪಡಿಸುವ ಮೂಲಕ ಪ್ರಗತಿ ಹೊಂದಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು….

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ!|Shrikanth

ಶಿವಮೊಗ್ಗ : ಆಯನೂರು ಮಂಜುನಾಥ್, ಮಧು ಬಂಗಾರಪ್ಪ, ಆರ್. ಎಂ. ಮಂಜುನಾಥ ಗೌಡ ಬಳಿಕ ಶಿವಮೊಗ್ಗದ ಮತ್ತೊಬ್ಬ ಜೆಡಿಎಸ್ ನಾಯಕ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಮಧು ಬಂಗಾರಪ್ಪ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ನಿಂದ ಸೊರಬದಲ್ಲಿ ಗೆದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದಾರೆ. ಬುಧವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ತುಮಕೂರು ಮಾಜಿ ಶಾಸಕ‌ ಎಸ್. ಶಫಿ ಅಹ್ಮದ್ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್ ಪಕ್ಷ…

Read More

ಸಂಸದ ಬಿ ವೈ ರಾಘವೇಂದ್ರ ರವರ ವಾಟ್ಸಾಪ್ ಚಾನೆಲ್ ಲೋಕಾರ್ಪಣೆ|byr

ಶಿವಮೊಗ್ಗ : ಸಂಸದ ಬಿ.ವೈ ರಾಘವೇಂದ್ರ ಅವರ ಅಧಿಕೃತ ವಾಟ್ಸಪ್ ಚಾನೆಲ್ ನ್ನ  ಲೋಕಾರ್ಪಣೆ ಮಾಡಲಾಯಿತು. ನಗರದ ರಾಯಲ್ ಆರ್ಕಿಡ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಾಟ್ಸಪ್ ಚಾನೆಲ್ ಗೆ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಅವರು, ಡಿಜಿಟಲ್ ವಿಶ್ವವಿದ್ಯಾಲಯ, ಡಿಜಿಟಲೀಕರಣದ ಸಾಮಾಜಿಕ ಮಾಧ್ಯಮಗಳಲ್ಲಿ ಜನ ಸಂಪರ್ಕ ಮಾಡಲು ಈ ವಾಟ್ಸಪ್ ಚಾನೆಲ್ ಅನುಕೂಲವಾಗಿದೆ.ಪ್ರಧಾನಿಗಳು ಸಹ ವಾಟ್ಸಪ್ ಚಾನೆಲ್ ನ್ನ ಅಧಿಕೃತ ಚಾನೆಲ್ ಆರಂಭಿಸಿದ್ದಾರೆ. ಮೂಲ ಉದ್ದೇಶ, ಸಾರ್ವಜನಿಕರು ಸ್ಪಂಧನೆಗೆ ಈ ಚಾನೆಲ್ ಅನುಕೂಲವಾಗಲಿದೆ. ಸಾರ್ವಜನಿಕ ಬದುಕನ್ನ…

Read More
Exit mobile version