Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಬಳೆಗಳು ಜೀವನದ ಸುರಕ್ಷಾ ಕಂಕಣ – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ|hombuja

ಹೊಂಬುಜ ಜೈನ ಮಠದಲ್ಲಿ ನವರಾತ್ರಿಯ ವಿಶೇಷ ಅಲಂಕಾರ ಬಳೆಗಳು ಜೀವನದ ಸುರಕ್ಷಾ ಕಂಕಣ- ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ರಿಪ್ಪನ್ ಪೇಟೆ :ಸುರಕ್ಷಾ ಕವಚದಂತೆ ಧರಿಸುವ ಬಳೆಗಳು ಭಾರತೀಯ ಸಂಸ್ಕೃತಿಯಲ್ಲಿ ಸ್ತಿçÃಯರಿಗೆ ಕೇವಲ ಅಲಂಕಾರ ವಸ್ತುವಾಗಿರದೇ ಶಾರೀರಿಕ-ಮಾನಸಿಕ ಆರೋಗ್ಯ ವರ್ಧಿಸುವಂತೆ ಮಾಡುತ್ತದೆ ಎಂದು ಹೊಂಬುಜದ ಜೈನ ಮಠದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಶುಭಾಶೀರ್ವಚನದಲ್ಲಿ ಹೇಳಿದರು. ನವರಾತ್ರಿಯ ಏಳನೇಯ ದಿನವಾದ ಶನಿವಾರದಂದು ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾಸ್ಥಳವಾದ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ…

Read More

ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ|HSN

ಹೊಸನಗರ ಕೆಇಬಿ ವೃತ್ತ ಇನ್ನು ಮುಂದೆ ಡಾ. ಪುನೀತ್ ರಾಜಕುಮಾರ್ ವೃತ್ತ – ಶಾಸಕ ಬೇಳೂರು ಘೋಷಣೆ ಹೊಸನಗರ : ಪಟ್ಟಣದ ನಗರ ರಸ್ತೆಯ ಲೋಕೋಪಯೋಗಿ ಇಲಾಖೆ ಮೆಸ್ಕಾಂ ಇಲಾಖೆ ಅರಣ್ಯ ಅಧಿಕಾರಿಗಳ ಕಚೇರಿ ಸಂಪರ್ಕಿಸುವ ವೃತ್ತ ವನ್ನು ಸುಸಜ್ಜಿತವಾಗಿ ರಚಿಸಿ ಈ ವೃತ್ತವನ್ನು ಮುಂದೆ ಯುವರತ್ನ ಪುನೀತ್ ರಾಜಕುಮಾರ್ ನಾಮಕರಣ ಮಾಡಲಾಗುವುದು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ರವರು ಘೋಷಿಸಿದರು. ಅವರು ಇಂದು ಪಟ್ಟಣದ ಕುವೆಂಪು ವಿದ್ಯಾ ಶಾಲೆಯ ಆವರಣದಲ್ಲಿ ಏರ್ಪಡಿಸಿದ ಶರಣ ಸಾಹಿತ್ಯ ಸಮ್ಮೇಳನದ…

Read More

ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದ ವಾತಾವರಣ ಬೇಕು – ತಿರುಪತಿ ನಾಯಕ್|HSN

ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದ ವಾತಾವರಣ ಬೇಕು – ತಿರುಪತಿ ನಾಯಕ್ ಹೊಸನಗರ : ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದಾಯಕವಾದ ವಾತಾವರಣ ಸಮಾಜದ ಎಲ್ಲಾ ಸ್ತರಗಳಿಂದ ಸಿಗಬೇಕಾಗಿದೆ. ಈ ತರಹದ ಪ್ರೋತ್ಸಾಹ ಸಿಕ್ಕಲ್ಲಿ ಎಲ್ಲಾ ಕಡೆಯಲ್ಲೂ ಸಾಹಿತ್ಯದ ವಾತಾವರಣ ಕಾಣಬಹುದು ಎಂದು ತಾಲೂಕಿನ ಹಿರಿಯ ಸಾಹಿತಿ ಹೊಸನಗರದ ತಿರುಪತಿ ನಾಯಕ್ ತಿಳಿಸಿದರು. ಅವರು ದಿನಾಂಕ 21-10-2023 ರಂದು ಹೊಸನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕಚೇರಿಯಲ್ಲಿ ನಡೆದ ದಸರಾ ಕವಿಗೋಷ್ಠಿಯ ಉದ್ಘಾಟನೆ ನೆರವೇರಿಸಿ ಮಾತನಾಡಿ ಸಾಹಿತ್ಯ ಬರೆಯುವವರಿಗೆ ಪ್ರೋತ್ಸಾಹದಾಯಕವಾದ ವಾತಾವರಣ ಸಮಾಜದ…

Read More

ಹಳೇ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ|crime news

ಹಳೇ ವೈಷಮ್ಯ ಹಿನ್ನಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ ಶಿವಮೊಗ್ಗ: ವೈಯಕ್ತಿಕ ಕಾರಣಕ್ಕೆ ಯುವಕನೋರ್ವನನ್ನು ಹತ್ಯೆ ಮಾಡಿರುವ ಘಟನೆ ಭದ್ರಾವತಿಯ ಗೌಡ್ರಳ್ಳಿಯ ಸಮೀಪ ತೋಟವೊಂದರಲ್ಲಿ ವರದಿಯಾಗಿದೆ. ಸಯ್ಯದ್‌ ರಾಝಿಕ್ (30) ಹತ್ಯೆಗೀಡಾದ ಯುವಕ ಎಂದು ಗುರುತಿಸಲಾಗಿದೆ. ‌ ರಾಝಿಕ್ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಸಯ್ಯದ್‌ ರಾಝಿಕ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಶುಕ್ರವಾರ ರಾತ್ರಿ ಘಟನೆ ಸಂಭವಿಸಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ – ಹೀಗೊಂದು ವಿಚಿತ್ರ ಬ್ಯಾನರ್|TTh

ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ “ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ ಸಾಕುತ್ತಾರೆ” ಎಂಬ ವಿಚಿತ್ರವಾದ ಬ್ಯಾನರ್ ನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ದೇವಂಗಿ ಸಮೀಪದ ಹಡಗಿನಮಕ್ಕಿ ಗ್ರಾಮದಲ್ಲಿ ಅಳವಡಿಸಲಾಗಿದೆ. ಹಡಗಿನಮಕ್ಕಿ ಗ್ರಾಮದ ವೃತ್ತವೊಂದರಲ್ಲಿ ಈ ವಿಚಿತ್ರವಾದ ಬ್ಯಾನರ್ ಹಾಕಲಾಗಿದೆ. “ಹಡಗಿನಮಕ್ಕಿ ಗ್ರಾಮದಲ್ಲಿ ನಾಯಿ ಮರಿ ತಂದು ಬಿಡುವವರು ತಮ್ಮ ಹೆಂಡತಿ ಮಕ್ಕಳನ್ನು ಇಲ್ಲೇ ತಂದು ಬಿಡಿ. ಯಾರಾದರೂ…

Read More

ರಿಪ್ಪನ್ ಪೇಟೆಯಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅಂಗವಾಗಿ 31 ಲಕ್ಷ ರೂ ವೆಚ್ಚದ ರಥ ನಿರ್ಮಾಣ

ರಿಪ್ಪನ್ ಪೇಟೆಯಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ಅಂಗವಾಗಿ 31 ಲಕ್ಷ ರೂ ವೆಚ್ಚದ ರಥ ನಿರ್ಮಾಣ ರಿಪ್ಪನ್‌ಪೇಟೆ : ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ದೇವಸ್ಥಾನದಲ್ಲಿ ರಥೋತ್ಸವ ಮತ್ತು ಜಾತ್ರಾ ಮಹೋತ್ಸವ ನೆರವೇರಿಸುವ ಹಿನ್ನಲೆಯಲ್ಲಿ ಸುಮಾರು 31 ಲಕ್ಷ ರೂ ವೆಚ್ಚದ ರಥ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಕೆತ್ತನೆ ಕುಸುರಿ ಕೆಲಸಗಾರ ಹರಿಹರಪುರದ ನಾಗರಾಜ್ ಆಚಾರ್ಯ ರವರ ನೇತೃತ್ವದಲ್ಲಿ ರಥ ನಿರ್ಮಾಣಕ್ಕಾಗಿ ಮರದ ಪರಿಕರಗಳು  ಶುಕ್ರವಾರ ಸಂಜೆ  ಪಟ್ಟಣಕ್ಕೆ ಆಗಮಿಸಿತು. ರಥ ನಿರ್ಮಾಣದ ಮರದ ಪರಿಕರಗಳು…

Read More

ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ – ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿ|hombuja

“ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ”:ಡಾ. ದೇವೇಂದ್ರ ಕೀರ್ತಿ ಭಟ್ಟಾರಕ  ಮಹಾಸ್ವಾಮಿಜಿ  ರಿಪ್ಪನ್‌ಪೇಟೆ;- ಜ್ಞಾನ ಸಂಪನ್ನರಾಗಿರಿ, ಭಾರತ ಸಮೃದ್ಧವಾಗಲಿ , ಜ್ಞಾನದಿಂದ ಕುಟುಂಬ ಸಮಾಜ ಹಾಗೂ ದೇಶದ ಅಭಿವೃದ್ಧಿ ಸಾಧ್ಯ , ಆಧ್ಯಾತ್ಮಿಕ ಜ್ಞಾನವು ನೆಮ್ಮದಿಯ ಬದುಕಿಗೆ ದಾರಿದೀಪವಾಗಿದೆ ಎಂದು ಹೊಂ ಬುಜ ಜೈನ್ ಮಠದ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ  ಹೇಳಿದರು  ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಕ್ಷೇತ್ರವಾದ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀಮಠದ ಜಿನಾಲಯದಲ್ಲಿ   ಶುಕ್ರವಾರ…

Read More

ರೈಲ್ವೆ ಗೇಟ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ|accident

ರೈಲ್ವೆ ಗೇಟ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ ಶಿವಮೊಗ್ಗ – ಇಲ್ಲಿನ ಬೊಮ್ಮನಕಟ್ಟೆ ರೈಲ್ವೆ ಗೇಟ್‌ನ ಕಂಬಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ. ನವುಲೆ ಕಡೆಯಿಂದ ಬಂದ ಕಾರು ಏಕಾಏಕಿ ರೈಲ್ವೆ ಗೇಟ್‌ಗೆ ಡಿಕ್ಕಿಯಾದ ಹಿನ್ನಲೆಯಲ್ಲಿ ಕಾರು ಪಲ್ಟಿಯಾಗಿದೆ.ಕಾರನ್ನು ಮಹಿಳೆಯೊಬ್ಬರು ಚಲಾಯಿಸುತಿದ್ದು ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಕಾರಿನಲ್ಲಿ ಮಹಿಳೆ ಮತ್ತು ಅವರ ಮಗಳು ಇದ್ದರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ…

Read More

ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|Hosanagara

ಆರೋಗ್ಯ ಭಾಗ್ಯದ ಮುಂದೆ ಎಲ್ಲಾ ಭಾಗ್ಯಗಳು ನಶ್ವರ – ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ಹೊಸನಗರ :  ಕಲುಷಿತ ವಾತಾವರಣ ಅಸಂಬದ್ಧ ಜೀವನ ಶೈಲಿ ದೇಹಕ್ಕೆ ಒಗ್ಗದ ಆಹಾರ ಕೆಟ್ಟ ಹವ್ಯಾಸಗಳಿಂದ ಮನುಷ್ಯನ ಆರೋಗ್ಯ ಕ್ಷಿ ಣಿಸುತ್ತಿದೆ ಇದರಿಂದ  ಹೃದಯ ದುರ್ಬಲವಾಗುತ್ತಿದೆ ಎಂದು ತಾಲೂಕು ತಹಸಿಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ವಿಶಾಲ ವ್ಯಕ್ತಪಡಿಸಿದರು. ಅವರು ಇಂದು ಪಟ್ಟಣದ ಸಂತ ಅಂತೋನಿ ದೇವಾಲಯದ ಸ್ನೇಹಭವನದಲ್ಲಿ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಮತ್ತು ಐದೃಷ್ಟಿ ಕಣ್ಣಿನ ಆಸ್ಪತ್ರೆ ಸ್ತ್ರಿ…

Read More

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು|sagara

ಸಾಗರದ ಹಿರಿಯ ಪತ್ರಕರ್ತ ಕಛೇರಿಯಲ್ಲೇ ನೇಣಿಗೆ ಶರಣು ಸಾಗರ : ಪಟ್ಟಣದ ಹಿರಿಯ ಪತ್ರಕರ್ತರಾದ ಪಿ. ಆತ್ರಿ  ತಮ್ಮ ಮುದ್ರಣ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪಟ್ಟಣದ ಹಳೇ ಮಥುರ ಹೋಟೆಲ್ ನ ಮೇಲ್ಭಾಗದಲ್ಲಿದ್ದ ಕಚೇರಿಯಲ್ಲಿಯೇ ನೇಣುಬಿಗಿದ ಸ್ಥಿತಿಯಲ್ಲಿ ಪಿ.ಅತ್ರಿ ಪತ್ತೆಯಾಗಿದ್ದು ಅವರ ಕುಟುಂಬ ಮತ್ತು ಆಪ್ತ ವಲಯದಲ್ಲಿ ತುಂಬಲಾಗದ ನಷ್ಟ ಉಂಟಾಗಿದೆ.‌ ಇವರ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬರಬೇಕಿದೆ.‌ ಖ್ಯಾತ ಪತ್ರಕರ್ತ ಹಾಗೂ ಸಮಾಜಮುಖಿಯಾಗಿದ್ದ  ಬಿ. ಆತ್ರಿ  ನಮ್ಮನಗಲಿರುವುದನ್ನು ಕರ್ನಾಟಕ…

Read More
Exit mobile version