Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Shivamogga | ಕಾಲೇಜಿನ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು ಪ್ರಕರಣ – ಪ್ರಾಂಶುಪಾಲ ಸೇರಿದಂತೆ ಎಂಟು ಜನ ಮೇಲೆ ಪ್ರಕರಣ ದಾಖಲು

Shivamogga | ಕಾಲೇಜಿನ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು ಪ್ರಕರಣ – ಪ್ರಾಂಶುಪಾಲ ಸೇರಿದಂತೆ ಎಂಟು ಜನ ಮೇಲೆ ಪ್ರಕರಣ ದಾಖಲು ಶಿವಮೊಗ್ಗ : ಕಾಲೇಜಿನ ಕಟ್ಟಡದಿಂದ ಬಿದ್ದು ಪ್ರಾಣ ಕಳೆದುಕೊಂಡ 17 ವರ್ಷದ ವಿದ್ಯಾರ್ಥಿನಿ ಮೇಘಶ್ರೀಯ ಸಾವಿನ ಪ್ರಕರಣದಲ್ಲಿ ಎಂಟು ಜನರ ಮೇಲೆ ಎಫ಼್ ಐಆರ್ ದಾಖಲಾಗಿದೆ. ಹೆಚ್ಚಿನ ಅಂಕ ಗಳಿಸದೆ ಇದ್ದರೆ ಶಾಲೆಯ ಹೆಸರು ಹಾಳಾಗಲಿದೆ ಎಂದು ಒತ್ತಡಹಾಕುತ್ತಿದ್ದ ಕಾಲೇಜಿನ ಪ್ರಾಂಶುಪಾಲ, ಶಿಕ್ಷಕ ಪ್ರಫುಲ್ಲಾ, ದಿವ್ಯಾ, ಮಧು, ಹಾಗೂ ಹಾಸ್ಟೆಲ್ ನ ವಾರ್ಡನ್ ಗಳಾದ…

Read More

Humcha | ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಎರಡು ತಿಂಗಳಿಂದ ನಾಪತ್ತೆ – ಲಾಕರ್ ಗಳ ಬೀಗ ಒಡೆದ ಅಧಿಕಾರಿಗಳು

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಎರಡು ತಿಂಗಳಿಂದ ನಾಪತ್ತೆ – ಲಾಕರ್ ಗಳ ಬೀಗ ಒಡೆದ ಅಧಿಕಾರಿಗಳು ರಿಪ್ಪನ್‌ಪೇಟೆ : ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ನಾಪತ್ತೆಯಾಗಿದ್ದು ಈ ಹಿನ್ನಲೆಯಲ್ಲಿ ಅಧಿಕಾರಿಗಳು ಸಂಘಕ್ಕೆ ಸಂಬಂದಿಸಿದ ಲಾಕರ್ ಬೀಗ ಒಡೆದು ಪರಿಶೀಲನೆ ನಡೆಸಿರುವ ಘಟನೆ ನಡೆದಿದೆ. ಕಳೆದ ಎರಡು ತಿಂಗಳಿಂದ ಕಾರ್ಯದರ್ಶಿ ಸಂತೋಷ್ ಕೃಷ್ಣನಾಯ್ಕ್ ಕಛೇರಿಗೆ ಹಾಜರಾಗದೇ ನಾಪತ್ತೆಯಾಗಿರುವ ಹಿನ್ನಲೆಯಲ್ಲಿ ಅಡಳಿತ ಮಂಡಳಿಯವರು ಸಾಗರ ಸಹಕಾರ ಸಂಘಗಳ ಸಹಾಯಕ ನಿಂಬಂಧಕರಿಗೆ…

Read More

ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ| Life imprisonment

 ಹಳೆಯ ದ್ವೇಷಕ್ಕೆ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ – ಹಳೆಯ ದ್ವೇಷದ‌ ಹಿನ್ನಲೆಯಲ್ಲಿ ಬಾರ್ ಎಂಡ್ ರೆಸ್ಟೋರೆಂಟ್ ನ ಎದುರು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ 10 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಇಲ್ಲಿನ ರಾಜೀವ್ ಗಾಂಧಿ ಬಡಾವಣೆಯ ವಾಸಿ ಪರಶುರಾಮ ಎಂಬಾತನು ಚಂದ್ರಶೇಖರ್, ಎಂಬುವನ ಮೇಲೆ ಹಳೆಯ ದ್ವೇಶದ ಹಿನ್ನೆಲೆಯಲ್ಲಿ, ದಿನಾಂಕಃ 02-03-2022 ರಂದು ಮಧ್ಯ ರಾತ್ರಿ ಶಿವಮೊಗ್ಗ ಟೌನ್ ಪಿಂಗಾರ…

Read More

ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ‌ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ| Smg

ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿ ‌ಮಹಡಿಯಿಂದ ಕೆಳಗೆ ಬಿದ್ದು ಸ್ಥಿತಿ ಗಂಭೀರ – ಒಂದೇ ದಿನ ನಡೆಯಿತು ಎರಡು ದುರ್ಘಟನೆ ಶಿವಮೊಗ್ಗ : ಇಲ್ಲಿನ ಪೆಸಿಟ್ ಕಾಲೇಜಿನ ಪದವಿ ವಿದ್ಯಾರ್ಥಿನಿಯೊಬ್ಬಳು ಮಹಡಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಕುವೆಂಪು ರಸ್ತೆಯ ಆದಿಚುಂಚನಗಿರಿ ಪಿಯು ಕಾಲೇಜಿನ ಕಟ್ಟಡದಿಂದ ವಿದ್ಯಾರ್ಥಿನಿ ಮೇಘನಾ ಕೆಳಗೆ ಬಿದ್ದು ಮೃತ ಪಟ್ಟ ಘಟನೆಯ ಬೆನ್ನಲ್ಲೆ ಮತ್ತೊಬ್ಬ ವಿದ್ಯಾರ್ಥಿಯು ಮಹಡಿ ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಮೂಲತಃ ಚಿಕ್ಕಮಗಳೂರು…

Read More

Crime News | ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ – ಓರ್ವ ವಶಕ್ಕೆ

ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ ಕಾರ್ಮಿಕರಿಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಕೇರಳ ರಾಜ್ಯದ ಕಣ್ಣೂರು ಮೂಲದ ಶಿಜು(42) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಕೇರಳ ಮೂಲದ ವ್ಯಕ್ತಿಗಳು ರಬ್ಬರ್​ ತೋಟದಲ್ಲಿ ಕೆಲಸ ಮಾಡುತ್ತಿದ್ದರು.ಇವರ ನಡುವಿನ ಜಗಳ ಕೊಲೆಗೆ ಕಾರಣ ಎನ್ನಲಾಗುತ್ತಿದೆ.  ಘಟನೆ ಸಂಬಂಧ ಓರ್ವ ಆರೋಪಿಯನ್ನ ವಶಕ್ಕೆ ಪಡೆಯಲಾಗಿದೆ. ಘಟನೆಗೆ ವೈಯಕ್ತಿಕ ವಿಚಾರ ಕಾರಣವಾಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಕಾಡಾನೆ ದಾಳಿ – ನಿರ್ಲಕ್ಷ್ಯ ವಹಿಸಿದ ಅರಣ್ಯಾಧಿಕಾರಿಗಳಿಗೆ ಘೆರಾವ್ ಹಾಕಿದ ಗ್ರಾಮಸ್ಥರು | smg

ಕಾಡಾನೆ ದಾಳಿ – ನಿರ್ಲಕ್ಷ್ಯ ವಹಿಸಿದ ಅರಣ್ಯಾಧಿಕಾರಿಗಳಿಗೆ ಘೆರಾವ್ ಹಾಕಿದ  ಗ್ರಾಮಸ್ಥರು ಶಿವಮೊಗ್ಗ : ಕಾಡಾನೆಗಳು ದಾಳಿ ನಡೆಸಿದರು ಸ್ಥಳಕ್ಕೆ ಮಧ್ಯರಾತ್ರಿ ತಡವಾಗಿ ಬಂದ ಅರಣ್ಯಧಿಕಾರಿಗಳು ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದ ನಡೆದ ಘಟನೆ ಉಂಬ್ಳೆಬೈಲಿನಲ್ಲಿ  ನಡೆದಿದೆ. ಕಳೆದ ರಾತ್ರಿ ಉಂಬ್ಳೆಬೈಲಿನ ಗ್ರಾಮದ ಒಳಗೆ ನುಗ್ಗಿ ದಾಳಿ ನಡೆಸಿದ್ದ ಕಾಡಾನೆ ಗ್ರಾಮದ ಮನೆಗಳಿಗೆ, ಕೊಟ್ಟಿಗೆ ಹಾಗೂ ತೋಟಗಳಿಗೆ ಹಾನಿ ಮಾಡಿದೆ ಹಲವು ಬಾರಿ ಈ ರೀತಿ ಕಾಡಾನೆ ದಾಳಿ ನಡೆಸಿದ್ದರು ಅರಣ್ಯಧಿಕಾರಿಗಳು ಮಾತ್ರ ತಲೆಕೆಡಿಸಿಕೊಂಡಿರಲಿಲ್ಲ ಎನ್ನುವುದು ಗ್ರಾಮಸ್ಥರ…

Read More

ಕಾಲೇಜಿನ ಕಟ್ಟಡದಿಂದ ಕೆಳಗೆ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು – ಕಾಲೇಜಿನ ಮುಂದೆ ಪೋಷಕರ ಆಕ್ರೋಶ | SMG

ಶಿವಮೊಗ್ಗ ಇಲ್ಲಿನ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿಯೋರ್ವಳು ಶಾಲೆ ಕಟ್ಟದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಕುವೆಂಪು ರಸ್ತೆಯಲ್ಲಿರುವ ಆದಿಚುಂಚನಗಿರಿ ಪಿಯು ಕಾಲೇಜಿನಲ್ಲಿ ಈ ಅವಘಡ ನಡೆದಿದ್ದು ಮೇಘನಾ (18) ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.  ಮೃತ ವಿದ್ಯಾರ್ಥಿನಿ ಚನ್ನಗಿರಿ ತಾಲ್ಲೂಕು ಸಂತೆಬೆನ್ನೂರು ಮೂಲದವರಾಗಿದ್ದಾರೆ ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿತ್ತು. ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ವಾಶ್ ರೂಂಗೆ ಹೋಗುವುದಾಗಿ ಹೇಳಿ ಹೋಗಿದ್ದರು ಎನ್ನಲಾಗಿದೆ. ಈ ವೇಳೆ ಸಿಬ್ಬಂದಿಯು ಅವರ ಜೊತೆಗಿದ್ದರು ಎಂಬ ಮಾಹಿತಿಯಿದೆ.  ಸದ್ಯ ಸ್ಥಳದಲ್ಲಿ ವಿದ್ಯಾರ್ಥಿನಿಯ ಕುಟುಂಬಸ್ಥರು ,ಸಂಬಂಧಿಗಳು  ಕಾಲೇಜಿನ…

Read More

ಗಸ್ತು ಅರಣ್ಯ ಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸುವುದು ಹೇಗೆ, ವೇತನವೆಷ್ಟು..?? – ವಿವರ ಇಲ್ಲಿದೆ ನೋಡಿ | forest guard

ಕರ್ನಾಟಕ ಅರಣ್ಯ ಇಲಾಖೆಯ 13 ವೃತ್ತಗಳಲ್ಲಿ ಒಟ್ಟು 540 ಗಸ್ತು ಅರಣ್ಯ ಪಾಲಕ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಇವು ಗ್ರೂಪ್​ ಸಿ ಹುದ್ದೆಗಳಾಗಿವೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಅಧಿಕೃತ ಮಂಡಳಿಗಳಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ: ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ…

Read More

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ ಇದೇ ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 PSI ಹುದ್ದೆಗಳ ಮರು ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದ್ದು, ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ. ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಡಿ.23ರಿಂದ ಜ. 23ಕ್ಕೆ ಮುಂದೂಡಿರುವುದಾಗಿ ಪರಮೇಶ್ವರ್​ ಮಾಹಿತಿ ನೀಡಿದರು. ಪೊಲೀಸ್​…

Read More

Sagara | ಉಸ್ತುವಾರಿ ಸಚಿವ ಮಧುಬಂಗಾರಪ್ಪ ವಿರುದ್ದ ಸಾಗರ ಪತ್ರಕರ್ತರಿಂದ ಪ್ರತಿಭಟನೆ

Sagara | ಉಸ್ತುವಾರಿ ಸಚಿವ ಮಧುಬಂಗಾರಪ್ಪ ವಿರುದ್ದ ಸಾಗರ ಪತ್ರಕರ್ತರಿಂದ ಪ್ರತಿಭಟನೆ ಸಾಗರ : ಪತ್ರಕರ್ತರ ಆತ್ಮಗೌರವಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಮಾತನಾಡಿದ ವಾರ್ತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರ ನಡೆಯನ್ನು ಖಂಡಿಸಿ ಸಾಗರದ ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ. ಉಪ ವಿಭಾಗಾಧಿಕಾರಿಗಳ ಕಛೇರಿಯ ಎದುರು ಪತ್ರಕರ್ತರು ಕಪು ಬಟ್ಟೆ ಕಟ್ಟಿಕೊಂಡು ಸಚಿವರು ಹಾಗೂ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಕಾರ್ಯದರ್ಶಿ ದೀಪಕ್ ಸಾಗರ್, ಡಿ. ಒಂದರಂದು ಜಿಲ್ಲಾ…

Read More
Exit mobile version