Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ನಾಪತ್ತೆಯಾಗಿದ್ದ ಶಾರದಮ್ಮ ಮನೆಯಿಂದ 6 ಕಿಮೀ ದೂರದ ದಟ್ಟ ಕಾಡಿನಲ್ಲಿ ಜೀವಂತವಾಗಿ ಪತ್ತೆ

ನಾಪತ್ತೆಯಾಗಿದ್ದ ಶಾರದಮ್ಮ ಮನೆಯಿಂದ 6 ಕಿಮೀ ದೂರದ ದಟ್ಟ ಕಾಡಿನಲ್ಲಿ ಜೀವಂತವಾಗಿ ಪತ್ತೆ  ಹೊಸನಗರ: ಮನೆಯಲ್ಲಿದ್ದ ವೃದ್ಧೆ ಮನೆಪಕ್ಕದ ತೋಟಕ್ಕೆ ಹೋಗಿ ನಾಪತ್ತೆಯಾಗಿರುವ ಘಟನೆ ಸುಖಾಂತ್ಯವಾಗಿದೆ. ಕರಿಮನೆ ಗ್ರಾಪಂ ವ್ಯಾಪ್ತಿಯ ಸಾದಗಲ್ ಗ್ರಾಮದ ಚನ್ನಪ್ಪಗೌಡ ಎಂಬುವವರ ಪತ್ನಿ 85 ವರ್ಷದ ಶಾರದಮ್ಮ ಮೂರು ದಿನದಿಂದ ನಾಪತ್ತೆಯಾಗಿದ್ದರು. ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ಸಾದಗಲ್ ವೃದ್ಧೆಯ ಶೋಧ ಕಾರ್ಯ ನಗರ ಠಾಣೆ ಪಿಎಸ್ಐ ರಮೇಶ್ ನೇತೃತ್ಬದಲ್ಲಿ ಶ್ವಾನದಳ ಶೋಧಕಾರ್ಯ ನಡೆಸಲಾಗಿತ್ತು. ಮತ್ತೊಂದಡೆ ಅರಣ್ಯ ಇಲಾಖೆ ತಂಡ ಕೂಡ ಶೋಧ…

Read More

POSTMAN NEWS ವರದಿಯ ಫಲಶ್ರುತಿ | ದೂನ ಸರ್ಕಾರಿ ಶಾಲೆಗೆ ಸಿಕ್ತು ಕಸದಿಂದ ಮುಕ್ತಿ – ಮುಚ್ಚಿದ ಶಾಲೆ ಪುನರಾರಂಭಕ್ಕೆ ಮುಂದಾದ ಯುವಕರು..!!

POSTMAN NEWS ವರದಿಯ ಫಲಶ್ರುತಿ | ದೂನ ಸರ್ಕಾರಿ ಶಾಲೆಗೆ ಸಿಕ್ತು ಕಸದಿಂದ ಮುಕ್ತಿ – ಮುಚ್ಚಿದ ಶಾಲೆ ಪುನರಾರಂಭಕ್ಕೆ ಮುಂದಾದ ಯುವಕರು ರಿಪ್ಪನ್‌ಪೇಟೆ ಸಮೀಪದ ದೂನ ಗ್ರಾಮದ ಸರ್ಕಾರಿ ಶಾಲೆಗೆ ಅಂತೂ ಇಂತೂ ಕಸದಿಂದ ಮುಕ್ತಿ ಸಿಕ್ಕಿದೆ.ವರದಿಗೆ ಎಚ್ಚೆತ್ತ ಅರಸಾಳು ಗ್ರಾಮಾಡಳಿತ ಕಸವನ್ನು ಶಾಲೆಯಿಂದ ತೆರವುಗೊಳಿಸಿದೆ. ಶಿವಮೊಗ್ಗ ಜಿಲ್ಲೆಯ ಈ ಒಂದು ಕುಗ್ರಾಮದಲ್ಲಿ ಸುಂದರವಾದ ಶಾಲೆ ಇತ್ತು ತುಂಬಾ ಚೆನ್ನಾಗಿ ಆಟ ಪಾಠ ಎಲ್ಲಾ ನಡೆಯುತಿತ್ತು.ಯಾವಾಗ ಆ ಶಾಲೆಯ ಮೇಲೆ ಖಾಸಗಿ ಶಾಲೆಗಳ ಕಣ್ಣು ಬಿತ್ತು…

Read More

Shivamogga | ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಬೇಜವಾಬ್ದಾರಿಗೆ ಬಾಲಕಿ ಬಲಿ..!!

Shivamogga | ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ..!! ತರಕಾರಿ ಬೆಳೆದು ಬದುಕುತ್ತಿದ್ದ ಸುಂದರ ಸಂಸಾರದ ಮುದ್ದು ಮಗಳು ರೈಲ್ವೆ ಕಾಮಗಾರಿಯ ಅಸಮರ್ಪಕ ಕಾರ್ಯಕ್ಕೆ ಬಲಿಯಾಗಿರುವ ಘಟನೆ ನಿನ್ನೆ ಸಂಜೆ ಶಿವಮೊಗ್ಗ ತಾಲೂಕಿನ ಕೋಟೆಗಂಗೂರಿನಲ್ಲಿ ನಡೆದಿದೆ. ರೈಲ್ವೆ ಟರ್ಮಿನಲ್ ನಿರ್ಮಾಣದ ಹಿನ್ನೆಲೆಯಲ್ಲಿ ರೈತರಿಂದ ಭೂಮಿ ಪಡೆದು ನಡೆಯುತ್ತಿರುವ ಕಾಮಗಾರಿಯಲ್ಲಿ ಕೋಟೆಗಂಗೂರು ಹಾಗೂ ಅಲ್ಲಿಂದ ಅನ್ಯ ಊರಿನ ಸಂಪರ್ಕ ಹಾಗೂ ತೋಟ ಹೊಲಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಆಳವಾದ ಗುಂಡಿಯನ್ನು ತೆಗೆದಿದ್ದರು.  ಅಲ್ಲಿ ಓಡಾಡುವ ಜನರ ರಕ್ಷಣೆಗೆ ಅಗತ್ಯ ವ್ಯವಸ್ಥೆ…

Read More

Accident | ಕಾಡುಪ್ರಾಣಿ ಅಡ್ಡ ಬಂದು ಬೈಕ್ ಅಪಘಾತ – ಪತಿ ಸಾವು ,ಪತ್ನಿ ಗಂಭೀರ

ಕಾಡುಪ್ರಾಣಿಯೊಂದು ದಾರಿಗೆ ಅಡ್ಡಬಂದ ಪರಿಣಾಮ ಭೀಕರ ಅಪಘಾತವೊಂದು ಸಂಭವಿಸಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಯರೆಕಟ್ಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವರು ಸಾವನ್ನಪ್ಪಿದ್ದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.  ಶಿಕಾರಿಪುರದ ಇಟ್ಟಿಗೆಹಳ್ಳಿ ಮೂಲದ ಗಣೇಶ್ ಮೃತರು, ಇನ್ನೂ ಘಟನೆಯಲ್ಲಿ  ಇವರ ಪತ್ನಿ ರಂಜಿತಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಪತ್ನಿ ರಂಜಿರನ್ನು ಅವರು ಕೆಲಸ ಮಾಡುತ್ತಿದ್ದ ಜಾಗಕ್ಕೆ ಬಿಡಲು ಹೊರಟಿದ್ದ ವೇಳೆ ಈ ಘಟನೆ ಸಂಭವಿಸಿದೆ.  ಇಲ್ಲಿನ ಯರೆಕಟ್ಟೆ ಬಳಿಯಲ್ಲಿ ಇರುವ ಬೂತಪ್ಪನ ಕಟ್ಟೆಯ ಹತ್ತಿರ ವನ್ಯಜೀವಿಯೊಂದು ಅಡ್ಡಬಂದಿದೆ….

Read More

Hosanagar | ಸೇನಾ ನಿವೃತ್ತಿ ಹೊಂದಿ ಊರಿಗೆ ಮರಳಿದ ಸೈನಿಕನಿಗೆ ಅದ್ದೂರಿ ಸನ್ಮಾನ

Hosanagar | ಸೇನಾ ನಿವೃತ್ತಿ ಹೊಂದಿ ಊರಿಗೆ ಮರಳಿದ ಸೈನಿಕನಿಗೆ ಅದ್ದೂರಿ ಸನ್ಮಾನ  ಹೊಸನಗರ – ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಊರಿಗೆ ಮರಳಿದ ತಾಲೂಕಿನ ಕಾರಣಗಿರಿಯ ಸೈನಿಕನೋರ್ವನಿಗೆ ಅದ್ದೂರಿ ಸ್ವಾಗತ ಕೋರಲಾಯಿತು.  ಇಲ್ಲಿನ ಚರಣ್ ಕೆರೆಹೊಂಡ ಎಂಬುವವರು ಭಾರತೀಯ ಸೇನೆಯಲ್ಲಿ 16 ವರ್ಷ ಸುಧೀರ್ಘ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ತಮ್ಮ ಹುಟ್ಟೂರು ಕಾರಣಗಿರಿಗೆ ಗುರುವಾರ ಮರಳಿದರು.  ಇವರ ಆಗಮನದ ನಿರೀಕ್ಷೆಯಲ್ಲಿದ್ದ ಸ್ಥಳೀಯ ಗ್ರಾಮಸ್ಥರು, ವಿವಿಧ ಸಂಘ ಸಂಸ್ಥೆಗಳು ವೀರ ಯೋಧನಿಗೆ ಅದ್ದೂರಿ…

Read More

KODURU | ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ – ಅದೃಷ್ಟವಶಾತ್ ಪ್ರಾಣಾಪಯದಿಂದ ದಂಪತಿಗಳು ಪಾರು

ಭಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಮರ – ಅದೃಷ್ಟವಶಾತ್ ಪ್ರಾಣಾಪಯದಿಂದ ದಂಪತಿಗಳು ಪಾರು ಭಾನುವಾರ ತಡರಾತ್ರಿ ಎಡೆಬಿಡದೆ ಸುರಿದ ಧಾರಾಕಾರ ಮಳೆಗೆ ಮನೆಯೊಂದರ ಮೇಲೆ ಬೃಹತ್ ಆಕಾರದ ಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡು ದಂಪತಿಗಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್. ಕುನ್ನೂರು ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ 8:00 ಗಂಟೆಯಿಂದ ಸುರಿದ ಬಿರುಗಾಳಿ ಸಹಿತ ಗುಡುಗು…

Read More

Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನವೇ ಆರೋಪಿಯನ್ನು ಬಂಧಿಸಿದ ಪೊಲೀಸ್

Thirthahalli | ಗಣಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ – ಅಂತ್ಯಕ್ರಿಯೆಗೂ ಮುನ್ನ ಆರೋಪಿಯನ್ನು ಬಂಧಿಸಿದ ಪೊಲೀಸ್ ತೀರ್ಥಹಳ್ಳಿ : ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತ ಪ್ರತಿಮಾ ಅವರ ಹಳೆ ಕಾರು ಚಾಲಕನಾಗಿದ್ದ. ಹಲವು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಿರಣ್ ನನ್ನು ಪ್ರತಿಮಾ ಅವರು ತೆಗೆದುಹಾಕಿದ್ದರು. ಕೆಲಸದಿಂದ ತೆಗದುಹಾಕಿದ್ದಕ್ಕೆ ಕೊಲೆ ಮಾಡಿರುವುದಾಗಿ ಅನುಮಾನ ಮೂಡಿದೆ. ಅಕ್ರಮ ಕಲ್ಲು ಗಣಿಗಾರಿಕೆ…

Read More

Ripponpete | ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಬೇಡ ಆದರೆ ಎಚ್ಚರಿಕೆಯಿರಲಿ – ಡಾ ಕೀರ್ತನಾ

Ripponpete | ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಬೇಡ ಆದರೆ ಎಚ್ಚರಿಕೆಯಿರಲಿ – ಡಾ ಕೀರ್ತನಾ  ರಿಪ್ಪನ್‌ಪೇಟೆ : ಸ್ತನ ಕ್ಯಾನ್ಸರ್ ಬಗ್ಗೆ ಆತಂಕ ಮತ್ತು ಭಯ ಬೇಡ ಆದರೆ ಎಚ್ಚರವಿರಲಿ ಎಂದು ನಾರಾಯಣ ಹೃದಯಾಲಯದ  ವೈದ್ಯರಾದ ಡಾ. ಕೀರ್ತನಾ ಹೇಳಿದರು. ಇಂದು ಪಟ್ಟಣದ ಗ್ರಾಮ ಪಂಚಾಯತ್ ಆವರಣದಲ್ಲಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮತ್ತು ನಾರಾಯಣ ಹೃದಯಾಲಯ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಮ್ಯಾಮೊಗ್ರಫಿ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು ಸ್ತನ ಕ್ಯಾನ್ಸರ್ ಬಗ್ಗೆ ನಿರ್ಲಕ್ಷ್ಯ ತೋರುವುದರಿಂದ ಜೀವ…

Read More

RIPPONPETE | ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ

RIPPONPETE | ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ರಿಪ್ಪನ್‌ಪೇಟೆ : ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಮೂಗೂಡ್ತಿ ಸಮೀಪದಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ತೀರ್ಥಹಳ್ಳಿ ಕಡೆಗೆ ತೆರಳುತಿದ್ದ ಮಾರುತಿ Ritz ಕಾರು ಹಾಗೂ ಮೂಗೂಡ್ತಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಹೀರೋ ಹೋಂಡ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಮೂಗೂಡ್ತಿ ಸಮೀಪದ ಕಣಬಂದೂರು ಕ್ರಾಸ್ ಬಳಿಯಲ್ಲಿ ಈ ಘಟನೆ ನಡೆದಿದ್ದು ಘಟನೆಯಲ್ಲಿ ಬೈಕ್ ಸವಾರ ಮೂಗೂಡ್ತಿ ನಿವಾಸಿ ಏಜೆಂಟ್ ಗಣೇಶ್…

Read More

ಬೈಕ್ ಅಪಘಾತ – ವಾಲಿಬಾಲ್ ಪಂದ್ಯಾಟಕ್ಕೆ ಹೊರಟಿದ್ದ ರಿಪ್ಪನ್‌ಪೇಟೆ ಮೂಲದ ಇಬ್ಬರು ಯುವಕರು ಸಾವು|accident

ಬೈಕ್ ಅಪಘಾತ – ವಾಲಿಬಾಲ್ ಪಂದ್ಯಾಟಕ್ಕೆ ಹೊರಟಿದ್ದ ರಿಪ್ಪನ್‌ಪೇಟೆ ಮೂಲದ ಇಬ್ಬರು ಯುವಕರು ಸಾವು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ನ್ಯಾರ್ಶಿ ಸಮೀಪ ಬೈಕ್ ಕಂದಕಕ್ಕೆ ಉರುಳಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತರಾದ  ಘಟನೆ ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಸಂಭವಿಸಿದೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಬಳಿಯ ಬಾಳೂರು ಗ್ರಾಮದ ಕ್ಯಾಂಪ್ ನಿವಾಸಿಗಳಾದ ಸುಬ್ರಹ್ಮಣ್ಯ (20) ಮತ್ತು ಹರೀಶ (20) ಮೃತಪಟ್ಟ ದುರ್ಧೈವಿಗಳಾಗಿದ್ದಾರೆ. ಸೊರಬ ತಾಲೂಕಿನ ಚಂದ್ರಗುತ್ತಿ ಸಮೀಪದ ಕಂಚಿಕೊಪ್ಪ ಗ್ರಾಮದಲ್ಲಿ ಆಯೋಜಿಸಿದ್ದ…

Read More