Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ

ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ ಶಿವಮೊಗ್ಗ, ಡಿಸೆಂಬರ್ 1: ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವುದಾಗಿ ಶಿವಮೊಗ್ಗ 1ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಥಹಳ್ಳಿ ತಾಲ್ಲೂಕಿನ ಮೂವಳ್ಳಿ ಗ್ರಾಮದ ಆಲ್ಬರ್ಟ್ (45) ಶಿಕ್ಷೆಗೆ ಗುರಿಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಜೊತೆಗೆ ರೂ.15,000 ದಂಡ ಹಾಗೂ ದಂಡ…

Read More

ಪೊಕ್ಸೊ ಪ್ರಕರಣದಲ್ಲಿ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ

ಪೊಕ್ಸೊ ಪ್ರಕರಣದಲ್ಲಿ ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಶಿವಮೊಗ್ಗ  ಡಿಸೆಂಬರ್ 1: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಭದ್ರಾವತಿಯ ಯುವಕನೋರ್ವನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ – 1 ಕೋರ್ಟ್ ತೀರ್ಪು ನೀಡಿದೆ. 21 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದ ಯುವಕನಾಗಿದ್ದಾನೆ  ಜೈಲು ಶಿಕ್ಷೆಯ ಜೊತೆಗೆ 61 ಸಾವಿರ ರೂ. ದಂಡ ವಿಧಿಸಲಾಗಿದೆ….

Read More

ಶರಾವತಿ ಸಂತ್ರಸ್ತರ ಸಮಸ್ಯೆಗೆ ಬಿಜೆಪಿ‌ ಮೇಲೆ ಗೂಬೆ ಕೂರಿಸಬೇಡಿ – ಮಾಜಿ ಸಚಿವ ಹರತಾಳು ಹಾಲಪ್ಪ

ಶರಾವತಿ ಸಂತ್ರಸ್ತರ ಸಮಸ್ಯೆಗೆ ಬಿಜೆಪಿ‌ ಮೇಲೆ ಗೂಬೆ ಕೂರಿಸಬೇಡಿ – ಮಾಜಿ ಸಚಿವ ಹರತಾಳು ಹಾಲಪ್ಪ ಸೊರಬ : ಶರಾವತಿ ಸಂತ್ರಸ್ಥರ ಸಮಸ್ಯೆ ಬಿಜೆಪಿಯ ಕೂಸು ಎಂದು ಹೇಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವ ಜಿಲ್ಲೆಯ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವಿವೇಕತನವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹೆಚ್. ಹಾಲಪ್ಪ ಕಿಡಿಕಾರಿದರು. ಸೋಮವಾರ ಪಟ್ಟಣದಲ್ಲಿ ತಾಲೂಕಿನ ಬಿಜೆಪಿಯ ರೈತ ಮೋರ್ಚಾ ವತಿಯಿಂದ ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ ಜನಪರ…

Read More

ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!

ಕುಂಸಿಯ ವೃದ್ಧೆಯ ಕ್ರೂರ ಹತ್ಯೆ ಕೇಸ್ – ಕೊಲೆಗಾರ ಮಗನಲ್ಲ..!! ವೃದ್ದೆಯ ಕೈಯಿಂದ ಫಲಾವ್ ತಿಂದು ಹಿಂಬದಿಯಿಂದ ಹತ್ಯೆಗೈದಿದ್ದಇಬ್ಬರು ಯುವಕರ ಬಂಧನ ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ 70 ವರ್ಷದ ಬಸಮ್ಮ ಅವರ ಮೇಲೆ ನಡೆದಿದ್ದ ಕ್ರೂರ ಹತ್ಯೆ ರಹಸ್ಯಕ್ಕೆ ಎರಡು ತಿಂಗಳ ಬಳಿಕ ತೆರೆ ಬಿದ್ದಿದೆ. ದೂರದೃಷ್ಟಿಯಿಂದ ರೂಪಿಸಿದ ದರೋಡೆ–ಕೊಲೆ ಯತ್ನದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ದೋಚಿದ್ದ ಚಿನ್ನಾಭರಣ, ಬೈಕ್ ಸೇರಿದಂತೆ ಸಾಕ್ಷ್ಯಾಧಾರಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ; ಕುಂಸಿ ಗ್ರಾಮದ…

Read More

ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ

ಬ್ಯಾಂಕ್–ಸರ್ಕಾರಿ ಕಚೇರಿಗಳಲ್ಲಿ ಕನ್ನಡ ಕಡ್ಡಾಯವಾಗಲಿ : ರೂಪೇಶ್ ರಾಜಣ್ಣ ಕಲಾ ಕೌಸ್ತುಭ ಕನ್ನಡ ರಾಜೋತ್ಸವದ ಸಮಾರೋಪ ಸಮಾರಂಭ ರಿಪ್ಪನ್‌ಪೇಟೆ: “ಕನ್ನಡ ನಮ್ಮ ಮಾತೃಭಾಷೆ ಮಾತ್ರವಲ್ಲ, ಭಾವನೆಗಳ ಅಭಿವ್ಯಕ್ತಿ. ಎರಡು ಸಾವಿರ ವರ್ಷಗಳ ಪಾರಂಪರ್ಯ ಹೊಂದಿರುವ ನಮ್ಮ ಕನ್ನಡ ಭಾಷೆ ಅತ್ಯಂತ ಪುರಾತನ,” ಎಂದು ರಾಜ್ಯ ಯುವ ಕರ್ನಾಟಕ ವೇದಿಕೆಯ ಸಂಸ್ಥಾಪಕ-ರಾಜ್ಯಾಧ್ಯಕ್ಷ ಹಾಗೂ ಕನ್ನಡಪರ ಹೋರಾಟಗಾರ, ಬಿಗ್ ಬಾಸ್ 9 ಫೈನಲಿಸ್ಟ್ ರೂಪೇಶ್ ರಾಜಣ್ಣ ಹೇಳಿದ್ದಾರೆ. ಕಲಾಕೌಸ್ತುಭ ಕನ್ನಡ ಸಂಘದ 32ನೇ ವಾರ್ಷಿಕೋತ್ಸವ ಹಾಗೂ 70ನೇ ಕನ್ನಡ ರಾಜ್ಯೋತ್ಸವ…

Read More

ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಿಳಿಕಿ ಯುವಕರ ತಂಡದ ಕಮಾಲ್

ಜಿಲ್ಲಾ ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಬಿಳಿಕಿ ಯುವಕರ ತಂಡದ ಕಮಾಲ್ ರಿಪ್ಪನ್‌ಪೇಟೆ: ಕೆ. ಹೊಸಕೊಪ್ಪದಲ್ಲಿ ನಡೆದ ಡಾ. ಪುನೀತ್ ರಾಜ್‌ಕುಮಾರ್ ಪುತ್ಥಳಿ ವಾರ್ಷಿಕೋತ್ಸವ ಹಾಗೂ 5ನೇ ವರ್ಷದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಹಗ್ಗ-ಜಗ್ಗಾಟ ಸ್ಪರ್ಧೆ ಜರುಗಿತು. ನಿಯಮಿತ 8 ಸದಸ್ಯರ ತಂಡ ಮತ್ತು 600 ಕೆ.ಜಿ ಗರಿಷ್ಠ ತೂಕ ನಿಯಮದೊಂದಿಗೆ ನಡೆದ ಪೈಪೋಟಿಯಲ್ಲಿ ಬಿಳಿಕಿ ಗ್ರಾಮದ ಯುವಕರು ತೃತೀಯ ಸ್ಥಾನ ಗಳಿಸಿದರು. ಸಾಗರ ತಾಲೂಕಿನ ಹೊಸಕೊಪ್ಪದಲ್ಲಿ ಕರ್ನಾಟಕ ರತ್ನ ಡಾ. ಪುನೀತ್…

Read More

RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ

RIPPONPETE | ಹಿರೇಮೈಥಿ ಗ್ರಾಮದಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ಗಲಾಟೆ – ಎರಡು ಗುಂಪುಗಳ ನಡುವೆ ಘರ್ಷಣೆ, ಹಲವರಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಹಿರೇಮೈಥಿ ಗ್ರಾಮದಲ್ಲಿ జಮೀನು ವಿವಾದದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ತೀವ್ರ ಗಲಾಟೆ ಸಂಭವಿಸಿ ಪರಸ್ಪರ ದೊಣ್ಣೆ, ಗುದ್ದಲಿ ಹಾಗೂ ಬೇಲಿ ಗೂಟಗಳಿಂದ ಹೊಡೆದಾಟ ನಡೆದ ಪರಿಣಾಮ ಐದು ಜನರಿಗೆ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಾಗರ ಹಾಗೂ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆ-ಪುರುಷರು ಸೇರಿದಂತೆ ಎರಡೂ ಕುಟುಂಬಗಳ ಹಲವು…

Read More

ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ

ಚೌಡೇಶ್ವರಿ ರಸ್ತೆ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಚಾಲನೆ ರಿಪ್ಪನ್‌ಪೇಟೆ;-ಇಲ್ಲಿನ ಚೌಡೇಶ್ವರಿ ದೇವಸ್ಥಾನ ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗೆ  ಶಾಸಕರ ವಿಶೇಷ ಅನುದಾನದಡಿಯಲ್ಲಿ   32 ಲಕ್ಷ ರೂ ಬಿಡುಗಡೆ ಮಾಡುವುದರೊಂದಿಗೆ ಸಿಸಿ ರಸ್ತೆ ಕಾಮಗಾರಿಗೆ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಗುದ್ದಲಿ ಪೂಜೆ ನೇರವೇರಿಸುವ ಮೂಲಕ ಚಾಲನೆ ನೀಡಿದರು. ನಂತರ ಚೌಡೇಶ್ವರಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿಯ ವಿಶೇಷ ಪೂಜಾ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡದೆ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಕ್ಷೇತ್ರದ ಹೊಸನಗರ…

Read More

ಮಧು ಬಂಗಾರಪ್ಪನವರ ಹೇಳಿಕೆ ವಿವಾದ: ಬಿಜೆಪಿ ಯುವ ಮೋರ್ಚಾ ನಾಯಕ ಅಭಿಲಾಶ್ ಖಂಡನೆ

ಮಧು ಬಂಗಾರಪ್ಪನವರ ಹೇಳಿಕೆ ವಿವಾದ: ಬಿಜೆಪಿ ಯುವ ಮೋರ್ಚಾ ನಾಯಕ ಅಭಿಲಾಶ್ ಖಂಡನೆ ಶಿವಮೊಗ್ಗ: ಜಿಲ್ಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಆರಗ ಜ್ಞಾನೇಂದ್ರ ಕುರಿತು ಮಾಡಿದ ಏಕವಚನದ ಹೇಳಿಕೆ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಹಿರಿಯ ನಾಯಕ ಹಾಗೂ ಹಾಲಿ ಶಾಸಕರಾದ ಜ್ಞಾನೇಂದ್ರ ಕುರಿತು ಹಗುರ ಸ್ವರೂಪದ ಮಾತು ಬಳಸಿರುವುದು ರಾಜಕೀಯ ಶಿಸ್ತಿಗೆ ವಿರುದ್ಧವಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ನಾಯಕರು ಆರೋಪಿಸಿದ್ದಾರೆ. ತಾಲೂಕು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಭಿಲಾಶ್…

Read More

ಅನೆ ದಾಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಪರಿಶೀಲನೆ

ಅನೆ ದಾಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ , ಪರಿಶೀಲನೆ ರಿಪ್ಪನ್‌ಪೇಟೆ;-  ಹೊಸನಗರ ತಾಲೂಕಿನ ಅರಸಾಳು -ಕೆಂಚನಾಲ -ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಒಂದು ವಾರದಿಂದ ದಿಢೀರ್ ಕಾಣಿಸಿಕೊಂಡಿರುವ  ಕಾಡು ಆನೆಗಳು ರೈತರು ಬೆಳೆದ ಬಾಳೆ ಮತ್ತು ಭತ್ತದ ಗದ್ದೆಗಳಿಗೆ ನುಗ್ಗಿ ಬೆಳೆಯನ್ನು ತಿಂದು ದ್ವಂಸಗೊಳಿಸಿರುವ ಪ್ರದೇಶಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅರಣ್ಯಇಲಾಖೆಯ ಮತ್ತುಕಂದಾಯ ಇಲಾಖೆ ಆಧಿಕಾರಿಗಳೊಂದಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸುವುದರೊಂದಿಗೆ ಹಾನಿಗೊಳಗಾಗಿರುವ ರೈತರಿಗೆ ವೈಯಕ್ತಿಕ ಧನ ಸಹಾಯವನ್ನು ನೀಡಿ…

Read More
Exit mobile version