Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Accident | ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕಟ್ಟೆಗೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

Accident | ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕಟ್ಟೆಗೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪ ಕಾರೊಂದು ಅಫಘಾತಕ್ಕೀಡಾಗಿದೆ. ಘಟನೆಯಲ್ಲಿ ಕಾರು ನುಜ್ಜುಗುಜ್ಜಾಗಿ ಮೂವರಿಗೆ ಗಾಯವಾದ ಘಟನೆ ನಡೆದಿದೆ. ಪಿಳ್ಳಂಗೇರಿ ಗ್ರಾಮದ ಹೆದ್ದಾರಿ ಸಮೀಪದಲ್ಲಿಯೇ ಇರುವ ಗಣಪತಿ ದೇವಸ್ಥಾನದ ಕಟ್ಟೆಗೆ ಕಾರು ಡಿಕ್ಕಿಯಾಗಿದೆ.  ಕಾರಿನಲ್ಲಿದ್ದವರು ಚನ್ನಗಿರಿಯ ಅರಿಶಿನಘಟ್ಟಕ್ಕೆ ಹೋಗುತ್ತಿದ್ದರು. ಈ ವೇಳೆ ಮಾರ್ಗಮಧ್ಯೆ ಈ ಘಟನೆ ಸಂಭವಿಸಿದೆ. ಪಿಳ್ಳಂಗೇರಿ ಗ್ರಾಮದ ಸಮೀಪ ಚಾಲಕ ನಿಯಂತ್ರಣ ತಪ್ಪಿ, ಕಾರು ದೇವಸ್ಥಾನದ ಕಟ್ಟೆಗೆ…

Read More

Shivamogga | ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ

ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರಿಂದ ಪ್ರತಿಭಟನೆ ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಪೊಲೀಸರು ಹಲ್ಲೆ ನಡೆಸಿರುವುದನ್ನ ಖಂಡಿಸಿ ಇಂದು ಶಿವಮೊಗ್ಗದ ಬಾರ್ ಅಸೋಸಿಯೇಷನ್ ನ್ಯಾಯಾಂಗ ಕಲಾಪ ಬಹಿಷ್ಕರಿಸಿ ಗೋಪಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಲಾಯಿತು. ಜಿಲ್ಲಾ ರಕ್ಷಾಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸುವಂತೆ ಪ್ರತಿಭಟಿಸಲಾಯಿತು. ಚಿಕ್ಕಮಗಳೂರಿನ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ ಸ್ಪೆಕ್ಟರ್, ಅಸಿಸ್ಟೆಂಟ್ ಸಬ್ ಇನ್ ಸ್ಪೆಕ್ಟರ್ ಮತ್ತು ಪೊಲೀಸ್ ಇತರೆ ಸಿಬ್ಬಂದಿಗಳ ಲಾಠಿ ದೊಣ್ಣೆಯಿಂದ ವಕೀಲರ ಸಂಘದ ಸದಸ್ಯ…

Read More

Anandapura | ಕನ್ನಡ ರಾಜ್ಯೋತ್ಸವದಲ್ಲಿ ಅಶ್ಲೀಲ ನೃತ್ಯ ಪ್ರಕರಣ – ಆಯೋಜಕರ ವಿರುದ್ದ ದಾಖಲಾಯ್ತು ಫೋಕ್ಸೋ ಕೇಸ್

Anandapura | ಕನ್ನಡ ರಾಜ್ಯೋತ್ಸವದಲ್ಲಿ ಅಶ್ಲೀಲ ನೃತ್ಯ ಪ್ರಕರಣ – ಆಯೋಜಕರ ವಿರುದ್ದ ದಾಖಲಾಯ್ತು ಫೋಕ್ಸೋ ಕೇಸ್ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ನಡೆದಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಅಪ್ರಾಪ್ತನ ಜೊತೆಗೆ ಯುವತಿಯೊಬ್ಬಳು ಅಸಭ್ಯವಾಗಿ ಕುಣಿದ ಪ್ರಕರಣಕ್ಕೆ ಸಂಬಂದಪಟ್ಟಂತೆ ಪೋಕ್ಸೋ ಕೇಸ್ ದಾಖಲಾಗಿದೆ ಅಶ್ಲೀಲ ನೃತ್ಯದ ವೀಡಿಯೋ ಎಲ್ಲೆಡೆ ವೈರಲ್ ಆದ ಹಿನ್ನಲೆಯಲ್ಲಿ ಸದ್ಯ ಘಟನೆ ಸಂಬಂಧ ಪೊಲೀಸ್ ಇಲಾಖೆಯು ಸಹ ಎಚ್ಚೆತ್ತುಕೊಂಡಿದ್ದು, ವೈರಲ್ ವಿಡಿಯೋವನ್ನು ಆಧರಿಸಿ ಪೋಕ್ಸೋ ಕಾಯಿದೆಯಡಿ ಆನಂದಪುರ ಪೊಲೀಸ್ ಠಾಣೆಯಲ್ಲಿ…

Read More

ಇನೋವಾ ಕಾರಿನಲ್ಲಿ ತಂಬಾಕು ಚೀಲದಲ್ಲಿ ದಾಖಲೆಯಿಲ್ಲದ 08 ಕೋಟಿ ಪತ್ತೆ

ಇನೋವಾ ಕಾರಿನಲ್ಲಿ ತಂಬಾಕು ಚೀಲದಲ್ಲಿ ದಾಖಲೆಯಿಲ್ಲದ 08 ಕೋಟಿ ಪತ್ತೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ದಾಖಲೆಯಿಲ್ಲದ 8 ಕೋಟಿ ರೂಪಾಯಿ ಹಣ ಪತ್ತೆಯಾಗಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪೊಲೀಸರು ತಪಾಸಣೆ ವೇಳೆ ಮಲ್ಲಾಡಿ ಹಳ್ಳಿ ಬಳಿಯಲ್ಲಿ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಇನೋವಾ ಕಾರನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಅದರಲ್ಲಿ ತಂಬಾಕು ಚೀಲಗಳಲ್ಲಿ ದಾಖಲೆ ಇಲ್ಲದ 8 ಕೋಟಿ ರೂಪಾಯಿ ಪತ್ತೆಯಾಗಿದೆ.   ಈ ಹಣದ ಮೂಲದ ಬಗ್ಗೆ ಚಿತ್ರದುರ್ಗದ ಪೊಲೀಸ್ ವರಿಷ್ಟಾಧಿಕಾರಿ ಸ್ಥಳೀಯ…

Read More

Ripponpete | ಕನಕದಾಸರು ಜಾತ್ಯತೀತ ದಾರ್ಶನಿಕರಾಗಿದ್ದರು – ಜನಾರ್ಧನ್ ಬಿ ನಾಯಕ್

ಕನಕದಾಸರು ಜಾತ್ಯತೀತ ದಾರ್ಶನಿಕರಾಗಿದ್ದರು – ಜನಾರ್ಧನ್ ಬಿ ನಾಯಕ್ ರಿಪ್ಪನ್ ಪೇಟೆ : ಜಗತ್ತು ಕಂಡ ಸರ್ವ ಶ್ರೇಷ್ಠ ಮಾನವತಾವಾದಿ ಜಾತಿ ವ್ಯವಸ್ಥೆಯನ್ನು ವಿರೋಧಿಸುತ್ತಿದ್ದ ಕನಕದಾಸರು ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆ ಏನಾದರೂ ಬಲ್ಲಿರಾ? ಎಂದು ಹಾಡಿ ಜಾತ್ಯತೀತ ದಾರ್ಶನಿಕರಾಗಿ ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ ಎಂದು ಉಪನ್ಯಾಸಕ  ಜನಾರ್ಧನ್.ಬಿ.ನಾಯಕ್ ಹೇಳಿದರು.  ಗುರುವಾರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಹಮ್ಮಿಕೊಂಡ ಕನಕ ಜಯಂತಿ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.  ಸಮಾಜದಲ್ಲಿ ಸಮಾನತೆ ಪ್ರತಿಪಾದಿಸಿದ ದಾಸ…

Read More

Ripponpete | ಸರ್ವ ಧರ್ಮದ ಸಾರವೂ ಒಂದೇ – ಪ್ರೋ ಹೆಚ್ ವಿ ರಾಮಪ್ಪಗೌಡ

ಸಂತೃಪ್ತಿಯ ಬದುಕಿಗೆ ಧರ್ಮ ಧಾರ್ಮಿಕ ಕಾರ್ಯಗಳು ಪೂರಕ ರಿಪ್ಪನ್‌ಪೇಟೆ;-ಆಘೋಚರ ಶಕ್ತಿಯೇ ದೇವರು.ಸರ್ವಾ ಧರ್ಮದ ಸಾರವೂ ಒಂದೇ ಅಗಿದ್ದು ಏಕಾಗ್ರತೆಯಿಂದ ಭಗವಂತನಲ್ಲಿ ಪ್ರಾರ್ಥಿಸಿದಲ್ಲಿ ಪುಣ್ಯ ಪ್ರಾಪ್ತಿಯೊಂದಿಗೆ ಸಂತೃಪ್ತಿ ದೊರೆಯುವುದೆಂದು  ಶಿವಮೊಗ್ಗ ಹೆರೆಗೊಡಿಗೆ ನಿವೃತ್ತ  ಪ್ರೋ.ಹೆಚ್.ವಿ.ರಾಮಪ್ಪಗೌಡ ಹೇಳಿದರು. ರಿಪ್ಪನ್‌ಪೇಟೆಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾದ ಹೊಸನಗರದ  ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಮಿತಿ ಆಯೋಜಿಸಿದ್ದ ಗ್ರಾಮ ಸುಭಿಕ್ಷೆಗಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ೪೫೮ ನೇ ನಮ್ಮೂರ ನಮ್ಮ ಕೆರೆ ಹಸ್ತಾಂತರ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ದೇಶದಲ್ಲಿ ಭ್ರಷ್ಟಾಚಾರ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!!

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 40 ಶಾಸಕರಿಗೆ ನಿಗಮ ಭಾಗ್ಯ..! | ಚಳಿಗಾಲ ಅಧಿವೇಶನದೊಳಗೆ ಆದೇಶ..!! ಶಾಸಕರು, ವಿಧಾನಪರಿಷತ್ ಸದಸ್ಯರೂ ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರು ಸೇರಿದಂತೆ 40 ಮಂದಿಯನ್ನು ಮೊದಲ ಹಂತದಲ್ಲಿ ನಿಗಮ ಮಂಡಳಿಗೆ ನೇಮಿಸಲು ನಿರ್ಧರಿಸಲಾಗಿದ್ದು ಒಂದೆರಡು ದಿನಗಳಲ್ಲಿ ಅಂತಿಮ ಪಟ್ಟಿ ಹೊರಬಿಳಲಿದೆ.ತಪ್ಪಿದಲ್ಲಿ ವಿಧಾನಮಂಡಲ ಅಧಿವೇಶನಕ್ಕೂ ಮೊದಲೇ ಅಂತಿಮ ಪಟ್ಟಿ ಹೊರ ಬೀಳುವುದು ಗ್ಯಾರಂಟಿಯಾಗಿದೆ. ಮೂರು ಬಾರಿ ಶಾಸಕರಾಗಿರುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರಿಗೆ ನಿಗಮ ಮಂಡಳಿ ಸ್ಥಾನಮಾನ ದೊರೆಯುವ…

Read More

Ripponpete | ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ ಪ್ರಕರಣ – ಶಿಕ್ಷಣ ಸಚಿವರಿಗೆ ಪತ್ರ ಬರೆದ ಬ್ರಾಹ್ಮಣ ಮಹಾಸಭಾ

ಶಿವಮೊಗ್ಗ : ಇತ್ತೀಚೆಗೆ ಹೊಸನಗರ ತಾಲೂಕಿನ ಅಮೃತ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳಿಗೆ ಮೊಟ್ಟೆ ಬಲವಂತವಾಗಿ ಮೊಟ್ಟೆ ತಿನ್ನಿಸುತ್ತಿರುವ ಆರೋಪ ಕೇಳಿ ಬಂದಿತ್ತು.ನಂತರ ಈ ಬಗ್ಗೆ ಪೋಷಕರು ದೂರು ದಾಖಲಿಸಿದ್ದರು ಆ ನಂತರ ಹಿರಿಯ ಅಧಿಕಾರಿಗಳೆಲ್ಲಾ ಶಾಲೆಗೆ ಭೇಟಿ ನೀಡಿ ಶಿಕ್ಷಕನ ಬಳಿ ಕ್ಷಮೆ ಕೇಳಿಸಿ ಪ್ರಕರಣಕ್ಕೆ ತೇಪೆ ಹಚ್ಚುವ ಕೆಲಸವನ್ನು ಮಾಡಿದ್ದರು ಈ ಬಗ್ಗೆ ಈಗ ರಾಜ್ಯ ಸರ್ಕಾರದ ವಿರುದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಕಿಡಿ ಕಾರುತ್ತಿದೆ. ಸಚಿವ ಮಧುಬಂಗಾರಪ್ಪಗೆ ಪತ್ರ ಬರೆದ ಬ್ರಾಹ್ಮಣ…

Read More

Shivamogga | ಗದ್ದೆಯಲ್ಲಿ ಕೆಲಸ ಮಾಡುತಿದ್ದಾಗ ಸಿಡಿಲು ಬಡಿದು ಸಹೋದರರಿಬ್ಬರು ಸಾವು

ಶಿವಮೊಗ್ಗ – ಸಿಡಿಲು ಬಡಿದು ಇಬ್ಬರು ಸಹೋದರರು ಮೃತಪಟ್ಟಿರುವ ದಾರುಣ ಘಟನೆ ಭದ್ರಾವತಿ ನಗರದ ಹುಣಸಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಮೃತರನ್ನು ಎಸ್ ಬೀರೇಶ್(33) ಮತ್ತು ಎಸ್ ಸುರೇಶ್ (30) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ಕಟಾವಿಗೆ ಸಿದ್ಧವಾಗಿದ್ದ ಭತ್ತದ ಬೆಳೆಗೆ ಕಾವಲು ಕಾಯಲು ಸಹೋದರರಿಬ್ಬರು ಹೋಗಿದ್ದರು. ರಾತ್ರಿ ಗದ್ದೆಗೆ ಕಾವಲಿಗೆಂದು ಹೋಗಿದ್ದವರು ಬೆಳಗ್ಗೆ ಮನೆಗೆ ಬಾರದ ಕಾರಣ ಆತಂಕಗೊಂಡಿದ್ದ ಕುಟುಬಸ್ಥರು ಗದ್ದೆಗೆ ತೆರಳಿ ನೋಡಿದಾಗ, ಸಹೋದರರಿಬ್ಬರೂ ಅಲ್ಲೇ…

Read More