Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

RIPPONPET|ಖಾಸಗಿ ಬಸ್ ಹಾಗೂ ಓಮಿನಿ‌ ಕಾರಿನ ನಡುವೆ ಮುಖಾಮುಖಿ ಡಿಕ್ಕಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಮದಲ್ಲಿ ಖಾಸಗಿ ಬಸ್ಸು ಹಾಗೂ‌ ಒಮಿನಿ ಕಾರಿನ ನಡುವೆ ಅಪಘಾತವಾದ ಘಟನೆ ನಡೆದಿದೆ. ರಿಪ್ಪನ್‌ಪೇಟೆಯಿಂದ ಶಿವಮೊಗ್ಗ ಕಡೆಗೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಮಾರುತಿ‌ ಒಮಿನಿ‌ಕಾರಿನ ನಡುವೆ ಅರಸಾಳು ಕೆರೆ ಸಮೀಪದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಚಾಲಕನೊಬ್ಬನೆ ಇದ್ದು ಆತನಿಗೆ ಸಣ್ಣಪುಟ್ಟ ಗಾಯಾಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸಂತೆಗಳಲ್ಲಿ ಮಂಡಕ್ಕಿ ವ್ಯಾಪಾರ ನಡೆಸುತಿದ್ದ ಗರ್ತಿಕೆರೆ ಮೂಲದ ವ್ಯಕ್ತಿ ಶಿವಮೊಗ್ಗದಿಂದ ಗರ್ತಿಕೆರೆಗೆ ತೆರಳುವಾಗ ಈ ಘಟನೆ ನಡೆದಿದೆ…

Read More

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ|rpet

ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಕನ್ನಡ ಭಾಷೆ ಉಳಿಸಿ ಬೆಳಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಸಿದ್ದರಾಗಬೇಕು, ಕಲೆ ಸಾಹಿತ್ಯದ ತವರೂರು ಶಿವಮೊಗ್ಗ ಜಿಲ್ಲೆಯಾಗಿದ್ದು ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಅಭಿಮಾನಿ ಬಳಗದ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಾಡು…

Read More

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಕೆಂಪು ಬಸ್‌ಗಳಲ್ಲಿ ಪುರುಷರಿಗೆ ಡಬಲ್ ಚಾರ್ಜ್ ; ಸಂಸದ ಬಿವೈಆರ್ ಗಂಭೀರ ಆರೋಪ|BYR

ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಕೆಂಪು ಬಸ್‌ಗಳಲ್ಲಿ ಪುರುಷರಿಗೆ ಡಬಲ್ ಚಾರ್ಜ್ ; ಸಂಸದ ಬಿವೈಆರ್ ಗಂಭೀರ ಆರೋಪ ರಿಪ್ಪನ್‌ಪೇಟೆ: ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಯನ್ನು ಘೋಷಿಸಿದ್ದು ಸಾಗರ, ಹೊಸನಗರ, ತೀರ್ಥಹಳ್ಳಿ, ಶಿಕಾರಿಪುರ, ಸೊರಬ ತಾಲ್ಲೂಕು ಸೇರಿದಂತೆ 4700 ಗ್ರಾಮಗಳಿಗೆ ಕೆಂಪು ಬಸ್‌ಗಳೇ ಇಲ್ಲದಿದ್ದು ಸರ್ಕಾರದ ಗ್ಯಾರಂಟಿ ಯೋಜನೆಯ ಸೌಲಭ್ಯದಿಂದ ವಂಚಿತರನ್ನಾಗಿಸಿರುವ ಕೆಂಪು ಬಸ್‌ಗಳಲ್ಲಿ ಸಂಚರಿಸುವ ಪುರುಷರಿಂದ ಡಬಲ್ ಚಾರ್ಜ್ ವಸೂಲಿ ಮಾಡುವುದರೊಂದಿಗೆ ಹಣ ಹೊಂದಿಸುವ ಕಾರ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ…

Read More

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು ನೀಡಿದ ಜಾನಪದ ಕಲಾ ಪ್ರಕಾರ|rpet

ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ 68ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಬ್ರಹ್ಮಾವರದ ಅಂಕದಮನೆ ಜಾನಪದ ಕಲಾ ತಂಡದ ಕಂಗಿಲು ನೃತ್ಯ,ಉಡುಪಿಯ ಮಹಾಗಣಪತಿ ಚಂಡೆ ಬಳಗ,ಮಂಗಳೂರಿನ…

Read More

ರಿಪ್ಪನ್‌ಪೇಟೆ : ಅಂದರ್ – ಬಾಹರ್ ಆಡುತ್ತಿದ್ದ 8 ಜನ ಅಂದರ್

ರಿಪ್ಪನ್‌ಪೇಟೆ : ಅಂದರ್ – ಬಾಹರ್ ಆಡುತ್ತಿದ್ದ 8 ಜನ ಅಂದರ್ – 14 ಸಾವಿರ ರೂ ನಗದು ವಶ ರಿಪ್ಪನ್‌ಪೇಟೆ : ಪಟ್ಟಣದ ಗವಟೂರು ಗ್ರಾಮದ ಖಾಸಗಿ ಕಟ್ಟಡದ ಹಿಂಭಾಗದಲ್ಲಿ ಹಣವನ್ನು ಪಣಕಿಟ್ಟು ಅಂದರ್ ಬಾಹರ್ ಇಸ್ಪೀಟ್ ಆಟವನ್ನು ಕಾನೂನು ಬಾಹಿರವಾಗಿ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ 14,700 ರೂ ನಗದು ವಶಪಡಿಸಿಕೊಳ್ಳಲಾಗಿದೆ. ಗವಟೂರು ಗ್ರಾಮದ ಖಾಸಗಿ ಕಟ್ಟಡವೊಂದರ ಹಿಂಭಾಗದಲ್ಲಿ ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ವರ್ತಮಾನ ಪಡೆದ ರಿಪ್ಪನ್‌ಪೇಟೆ ಪೊಲೀಸ್ ಸಬ್ ಇನ್ಸ್ಪೆಕ್ಟರ್…

Read More

ಅಸ್ವಸ್ಥ ಸ್ಥಿತಿಯಲ್ಲಿ ಅಪರೂಪದ ಚಿರತೆ ಬೆಕ್ಕು ಪತ್ತೆ – ಅರಣ್ಯಾಧಿಕಾರಿಂದ ರಕ್ಷಣೆ|Leopard cat

ಅಸ್ವಸ್ಥ ಸ್ಥಿತಿಯಲ್ಲಿ ಅಪರೂಪದ ಚಿರತೆ ಬೆಕ್ಕು ಪತ್ತೆ – ಅರಣ್ಯಾಧಿಕಾರಿಂದ ರಕ್ಷಣೆ|Leopard ಚತ್ ಪ್ರಾಣಿಗಳ ದಾಳಿಯಿಂದ ಅಸ್ವಸ್ಥ ಸ್ಥಿತಿಯಲ್ಲಿ ಜೀವನ್ಮರಣ ಹೋರಾಟ ನಡೆಸುತಿದ್ದ ಅಪರೂಪದ ಚಿರತೆ ಬೆಕ್ಕನ್ನು(Leopard cat)ಅರಣ್ಯಾಧಿಕಾರಿಗಳು ರಕ್ಷಿಸಿರುವ ಘಟನೆ ಹೊಸನಗರ ತಾಲೂಕಿನ ಪುರಪ್ಪೆಮನೆ ಬಳಿ ನಡೆದಿದೆ. ಚಿರತೆ ಬೆಕ್ಕು ಪಶ್ಚಿಮ ಘಟ್ಟಗಳಲ್ಲಿ ಕಂಡುಬರುವ ಅಪರೂಪದ ಜಾತಿಗಳಲ್ಲಿ ಒಂದಾಗಿದೆ. ಪುರಪ್ಪೆ ಮನೆ – ಗಡಿಕಟ್ಟೆ ಮಾರ್ಗ ಮಧ್ಯದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಜೀವನ್ಮರಣ ಹೋರಾಟದಲ್ಲಿದ್ದ ಚಿರತೆ ಬೆಕ್ಕು ರಸ್ತೆ ಬದಿಯ ಚರಂಡಿಯಲ್ಲಿ ಬಿದ್ದಿತ್ತು. ಚಿರತೆಯಂತೆ ಕಾಣಿಸುವ…

Read More

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ|SMG

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ ಶಿವಮೊಗ್ಗ : ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್‌ ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್‌ಟ್ರಸ್ಟ್‌ನಲ್ಲಿ ಭಾನುವಾರ ನಡೆದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ  ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ದೃಷ್ಠಿಯ ಜೊತೆಗೆ ಸಮಾಜಮುಖಿ ಕಾರ್ಯಗಳತ್ತವೂ ಸಂಘ ದಿಟ್ಟ…

Read More

ಹೊಸನಗರ : ಅಂದರ್ ಬಾಹರ್ ಆಡುತ್ತಿದ್ದ 9 ಜನ ಅಂದರ್ – 80 ಸಾವಿರ ರೂ ನಗದು ವಶಕ್ಕೆ

ಅಂದರ್ ಬಾಹರ್ ಆಡುತ್ತಿದ್ದ  9 ಜನ ಅಂದರ್ 80 ಸಾವಿರ ರು ನಗದು ವಶ ಹೆಬೈಲು ದೇವಸ್ಥಾನ ಬಳಿ ನಡೆದ ಘಟನೆ ಹೊಸನಗರ : ತಾಲೂಕಿನ ಪುರಪ್ಪೆಮನೆ ಬಳಿಯ ಹೆಬ್ಬೆಲು ಸೋಮೇಶ್ವರ ದೇವಸ್ಥಾನದ ಬಳಿಯ ಅರಣ್ಯ ಪ್ರದೇಶದಲ್ಲಿ ಹಣವನ್ನು ಪಣಕಿಟ್ಟು ಅಂದರ್ ಬಾಹರ್ ಇಸ್ಪೀಟ್ ಆಟವನ್ನು ಕಾನೂನು ಬಾಹಿರವಾಗಿ ಆಡುತಿದ್ದ ಸ್ಥಳಕ್ಕೆ ದಾಳಿ ನಡೆಸಿ 80,500 ರೂ ನಗದು ವಶಪಡಿಸಿಕೊಳ್ಳಲಾಗಿದೆ. ಅಂದರ್ ಬಾಹರ್ ಆಡುತ್ತಿರುವ ಬಗ್ಗೆ ಖಚಿತ ವರ್ತಮಾನ ಪಡೆದ ಹೊಸನಗರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ…

Read More

ರಾಜ್ಯಾದ್ಯಂತ ಭರ್ಜರಿ ಪ್ರದರ್ಶನಗೊಳ್ಳುತ್ತಿರುವ ಮಲೆನಾಡಿನ ಯುವ ನಿರ್ದೇಶಕ ಉಮೇಶ್ ನಿರ್ದೇಶನದ ‘ಟಗರು ಪಲ್ಯ’ ಚಿತ್ರ|sandalwood

ಮಲೆನಾಡಿನ ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶಿಸಿರುವ ಟಗರು ಪಲ್ಯ ಚಲನಚಿತ್ರ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನಗೊಳ್ಳುತಿದ್ದೆ. ಶಿವಮೊಗ್ಗ ಜಿಲ್ಲೆಯ ಕುಂಸಿ ಗ್ರಾಮದ ಉಮೇಶ್ ಕೆ ಕೃಪಾ ರವರ ತಂದೆ ರೈಲ್ವೆ ನೌಕರರಾದ ಕೃಷ್ಣಪ್ಪ ಹಾಗೂ ತಾಯಿ‌ ಕಾಳಮ್ಮ 45 ವರ್ಷಗಳ ಹಿಂದೆ ರೈಲ್ವೆ ಇಲಾಖೆಯಿಂದ ಕೆಲಸಕ್ಕೆ ಬಂದ ಅವರು ಕುಂಸಿ ಗ್ರಾಮದಲ್ಲಿ ನೆಲೆಸಿದ್ದಾರೆ. ಕೃಷ್ಣಪ್ಪ ಹಾಗೂ ಕಾಳಮ್ಮ ದಂಪತಿಗಳಿಗೆ ಯುವ ನಿರ್ದೇಶಕ ಉಮೇಶ್ ,ರೈಲ್ವೆ ಇಲಾಖೆಯ ಉದ್ಯೋಗಿ ರಂಗಸ್ವಾಮಿ ,ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಪ್ರಕಾಶ್…

Read More

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಎರಡು ವರ್ಷ-PRK

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಎರಡು ವರ್ಷ ಮೊನ್ನೆ ಮೊನ್ನೆ ನಡೆದಿದೆಯೇನೋ.. ಎಂಬ ಭಾವನೆ ಇಂದಿಗೂ ಜನರ ಮನಸ್ಸಿನಲ್ಲಿದೆ. ಅಪ್ಪು ಅಗಲಿಕೆಗೆ ಆಗಲೇ ಎರಡು ವರ್ಷ. ಆ ದಿನ ಇಡೀ ಕರುನಾಡು ಕಣ್ಣೀರಿಟ್ಟಿತ್ತು. ಕರ್ನಾಟಕ ರತ್ನ ಡಾ| ಪುನೀತ್ ರಾಜ್‍ಕುಮಾರ್ ರವರ ದ್ವಿತೀಯ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗದ…

Read More