Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಇನ್ನೂ ಮುಂದೆ “ರಕ್ತ ಮಾರಾಟಕ್ಕಿಲ್ಲ” | ಸಂಸ್ಕರಣಾ ಶುಲ್ಕ ಹೊರತುಪಡಿಸಿ ಉಳಿದೆಲ್ಲಾ ಶುಲ್ಕ ಮನ್ನಾ – ಕೇಂದ್ರ ಸರ್ಕಾರದ ಮಹತ್ವದ ಕ್ರಮ GOOD NEWS

ಇನ್ನೂ ಮುಂದೆ “ರಕ್ತ ಮಾರಾಟಕ್ಕಿಲ್ಲ” | ಸಂಸ್ಕರಣಾ ಶುಲ್ಕ ಹೊರತುಪಡಿಸಿ ಉಳಿದೆಲ್ಲಾ ಶುಲ್ಕ ಮನ್ನಾ – ಕೇಂದ್ರ ಸರ್ಕಾರ ಮಹತ್ವದ ಕ್ರಮ ಆಸ್ಪತ್ರೆಗಳು ಮತ್ತು ಖಾಸಗಿ ರಕ್ತ ಬ್ಯಾಂಕುಗಳಲ್ಲಿ ರಕ್ತಕ್ಕೆ ಹೆಚ್ಚಿನ ಶುಲ್ಕ ವಿಧಿಸುವ ತೊಂದರೆಯನ್ನ ಪರಿಹರಿಸಲು, ಸಂಸ್ಕರಣಾ ಶುಲ್ಕವನ್ನ ಹೊರತುಪಡಿಸಿ ಎಲ್ಲಾ ಶುಲ್ಕಗಳನ್ನ ಕೇಂದ್ರ ಸರ್ಕಾರ ಮನ್ನಾ ಮಾಡಿದೆ. “ರಕ್ತವು ಮಾರಾಟಕ್ಕಿಲ್ಲ” ಎಂಬ ಆಧಾರದ ಮೇಲೆ ಈ ನಿರ್ಧಾರವನ್ನ ತೆಗೆದುಕೊಳ್ಳಲಾಗಿದೆ, ಇದರ ಆಧಾರದ ಮೇಲೆ ಆರೋಗ್ಯ ನಿಯಂತ್ರಕವು ಭಾರತದಾದ್ಯಂತ ರಕ್ತ ವಿತರಣೆಯನ್ನ ಹೊರತುಪಡಿಸಿ ಎಲ್ಲಾ ಶುಲ್ಕಗಳನ್ನ…

Read More

ವಿಚ್ಚೇದನ ನೀಡದಿದ್ದಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೇ ಬ್ಲಾಕ್ ಮೇಲ್ ಮಾಡಿದ ಪತಿರಾಯ – ಮುಂದೇನಾಯ್ತು ಗೊತ್ತಾ..??

ವಿಚ್ಚೇದನ ನೀಡದಿದ್ದಲ್ಲಿ ಅಶ್ಲೀಲ ವಿಡಿಯೋ ವೈರಲ್ ಮಾಡುವುದಾಗಿ ಪತ್ನಿಗೇ ಬ್ಲಾಕ್ ಮೇಲ್ ಮಾಡಿದ ಪತಿರಾಯ – ಮುಂದೇನಾಯ್ತು ಗೊತ್ತಾ..?? ತನ್ನ ಪತ್ನಿಯ ಅಶ್ಲೀಲ ವಿಡಿಯೋ ಇಟ್ಟುಕೊಂಡು ಡೈವೋರ್ಸ್ ನೀಡುವಂತೆ ಬ್ಲಾಕ್‌ಮೇಲ್ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಘಟನೆ ಸಂಬಂಧ ಆರೋಪಿ ಬೆಳಗಾವಿಯ ಕಿರಣ್ ಪಾಟೀಲ್ ಎಂಬಾತನನ್ನು ಬಂಧಿಸಲಾಗಿದೆ. ಪತ್ನಿ ಬುದ್ಧಿ ಹೇಳಿದರೂ ಕೇಳ ಪತಿ. ಡೈವೋರ್ಸ್‌ ಗಾಗಿ ಪತ್ನಿ ಅಶ್ಲೀಲ್ ವಿಡಿಯೋ ಮಾಡಿಕೊಂಡಿರುವ ವಿಕೃತ ಪತಿರಾಯ. ಪತ್ನಿಯೊಂದಿಗೆ ಏಕಾಂತದಲ್ಲಿದ್ದಾಗಿನ ಫೋಟೊ ವಿಡಿಯೋಗಳು ರೆಕಾರ್ಡ್. ಅಶ್ಲೀಲ ವಿಡಿಯೋ ಇಟ್ಟುಕೊಂಡು…

Read More

HOSANAGARA | ಮಕ್ಕಳನ್ನು ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ; ಅರ್ಜುನ್‌ರಾಜ್

ಹೊಸನಗರದಲ್ಲಿ 10ನೇ ತಾಲೂಕು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಮಕ್ಕಳನ್ನು ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ; ಅರ್ಜುನ್‌ರಾಜ್ ಹೊಸನಗರ: ಮಕ್ಕಳಲ್ಲಿ ಹುದುಗಿರುವ ಅಮೂಲ್ಯವಾದ ಸಾಹಿತ್ಯ ಶಕ್ತಿಯನ್ನು ವೃದ್ಧಿಪನಗೊಳಿಸಿ ಮಕ್ಕಳನ್ನು ಕೂಡ ಸಮಾಜದ ಏಳಿಗೆಗೆ ಪ್ರಯತ್ನಿಸುವಂತೆ ಮಾಡುವುದು ಸಾಹಿತ್ಯದ ಶಕ್ತಿ ಎಂದು 10ನೇ ತರಗತಿಯ ವಿದ್ಯಾರ್ಥಿ ಅರ್ಜುನ್‌ರಾಜ್‌ರವರು ಹೇಳಿದರು. ಪಟ್ಟಣದ ಹೊರವಲಯದ ಮಾವಿನಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಆವರಣದಲ್ಲಿ ಕನ್ನಡ ಸಾಹಿತ್ಯ ಸಾಂಸ್ಕೃತೀಕ ವೇದಿಕೆ ಕನ್ನಡ ಸಾಹಿತ್ಯ ಪರಿಷತ್, ತಾಲ್ಲೂಕು…

Read More

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿದ್ದ ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನವನ್ನು ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಗಿಳಾಲಗುಂಡಿ ಸಮೀಪದಲ್ಲಿ ನಡೆದಿದೆ. ಪ್ರಯಾಣಿಕರಿದ್ದ ಬಸ್​ ಗೆ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ಧಾರಿ ಬದಿಗೆ ಬಸ್ ಇಳಿದಿದ್ದು , ಗೂಡ್ಸ್ ವಾಹನವು ಜಖಂ ಆಗಿದೆ. ಇಲ್ಲಿನ ಕೋಣೆಹೊಸೂರು ಹಾಗೂ ಗಿಳಾಲಗುಂಡಿ ನಡುವೆ ಇಂದು ಬೆಳಗ್ಗೆ ಈ…

Read More

HOSANAGARA | ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ.!!

ಹೊಸನಗರ : ಅಕ್ರಮ ಮರಳು ಸಾಗಾಟ – ಎರಡು ಟಿಪ್ಪರ್ ಲಾರಿ ವಶಕ್ಕೆ.!! ಹೊಸನಗರ :  ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಾಲೂಕಿನಾದ್ಯಂತ ವಿವಿಧ ಪ್ರದೇಶದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಹಿನ್ನಲೆಯಲ್ಲಿ ಹೊಸನಗರ ಪೊಲೀಸ್ ಠಾಣೆ ಪಿಎಸ್‌ಐ ಶಿವಾನಂದ್ ಕೆ ನೇತೃತ್ವದ ಸಿಬ್ಬಂದಿಗಳ ತಂಡ ಎರಡು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸಾಗರದ ಚಂದ್ರು ಎಂಬಾತನಿಗೆ ಸೇರಿದ(KA 19 AB 9021) ಮತ್ತು…

Read More

Ripponpete | ಬಜರಂಗದಳದ ವತಿಯಿಂದ ಗೋಶಾಲೆಗೆ ಮೇವು ಸಂಗ್ರಹ ಅಭಿಯಾನ

Ripponpete | ಬಜರಂಗದಳದ ವತಿಯಿಂದ ಗೋಶಾಲೆಗೆ ಮೇವು ಸಂಗ್ರಹ ಅಭಿಯಾನ ರಿಪ್ಪನ್‌ಪೇಟೆ : ನಂದಗೋಕುಲ ಗೋಶಾಲೆ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಹೊಸನಗರದಲ್ಲಿರುವ ಗೋಶಾಲೆಗೆ ಪಟ್ಟಣದ ಬಜರಂಗದಳ ಘಟಕದ ವತಿಯಿಂದ ಉಚಿತ ಮೇವು ಸಂಗ್ರಹ ಅಭಿಯಾನ ನಡೆಯಿತು. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮಸ್ಥರು ಸುಮಾರು 100 ಕ್ಕೂ ಹೆಚ್ಚು ಹೊರೆ ಹುಲ್ಲನ್ನು ನೀಡುವ ಮೂಲಕ ಈ ಮೇವು ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.ಈ ಮೂಲಕ ಮೇವುಗಳನ್ನು ಹೊಸನಗರದ ರಮಿತ್ ನೇತ್ರತ್ವದ ಗೋಶಾಲೆಗೆ ಕಳುಹಿಸಿಕೊಡಲಾಗಿದೆ. ಈ…

Read More

ಜ.5ಕ್ಕೆ ಬಟ್ಟೆಮಲ್ಲಪ್ಪದಲ್ಲಿ ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಹೊಸನಗರ : ತಾಲ್ಲೂಕಿನ ಬಟ್ಟೆಮಲ್ಲಪ್ಪ ಯಕ್ಷರತ್ನ ನಗರ ಜಗನ್ನಾಥಶೆಟ್ಟಿ ವೇದಿಕೆ ಶ್ರೀ ವ್ಯಾಸ ಮಹರ್ಷಿ ಗುರುಕುಲ ವಿದ್ಯಾಲಯದ ಆವರಣ ಬಟ್ಟೆಮಲ್ಲಪ್ಪದಲ್ಲಿ ಹೊಸನಗರ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಲನವನ್ನು ಅರ್ಪಡಿಸಲಾಗಿದೆ ಎಂದು ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ತ.ಮ.ನರಸಿಂಹ ಹೇಳಿದರು. ಪಟ್ಟಣದ ಶೀತಲ್ ಹೋಟೆಲ್ ಆವರಣದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ, ಈ ಕಾರ್ಯಕ್ರಮ ಜ.5ರ ಬೆಳಿಗ್ಗೆ 9 ಗಂಟೆಗೆ ಹೊಸನಗರ ತಹಶೀಲ್ದಾರ್ ರಶ್ಮಿಯವರು ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದು ನಾಡಧ್ವಜವನ್ನು ಕ.ಸಾ.ಪ. ಜಿಲ್ಲಾಧ್ಯಕ್ಷರಾದ ಡಿ….

Read More

ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ..!! Crime News

ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯ್ತು ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ! ತೀರ್ಥಹಳ್ಳಿ: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಡಿ.31ರಂದು ಎನ್.ಆರ್.ಪುರ. ತಾಲೂಕು ಕಣಿವೆ ಬಳಿ ಪತ್ತೆಯಾಗಿದೆ.  ತೀರ್ಥಹಳ್ಳಿ ತಾಲೂಕು ಕೂಡಿಗೆ ಗ್ರಾಮದ ಗೋಪಾಲ್ ಮೃತ ವ್ಯಕ್ತಿಯಾಗಿದ್ದಾರೆ. ಹಲವು ವರ್ಷಗಳ ಕಾಲ ಬಾಂಬೆಯಲ್ಲಿದ್ದು ಬಳಿಕ ಜಮೀನು ಮಾಡಿಕೊಂಡು ಊರಲ್ಲಿ ಇದ್ದರು. 3 ತಿಂಗಳು ಹಿಂದೆ ನಾಪತ್ತೆಯಾಗಿದ್ದ ಗೋಪಾಲ್ ಶವ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶವ ಸಂಪೂರ್ಣ ಕೊಳೆತು…

Read More

Ripponpete | ಪ್ರಸ್ತುತ ಸನ್ನಿವೇಶದಲ್ಲಿ ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ

ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ : ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ ರಿಪ್ಪನ್‌ಪೇಟೆ : ಸಾರ್ವಜನಿಕರು,ವಿದ್ಯಾರ್ಥಿಗಳಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ,ಹಾಗೇಯೆ ಏಡ್ಸ್ ಹರಡುವ ವಿಧಾನಗಳು,ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಚಿಕಿತ್ಸೆ ಕ್ರಮಗಳ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕರಿಬಸಮ್ಮ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರೆಡ್ ರಿಬ್ಬನ್ ಕ್ಲಬ್,  ಯುವ ರೆಡ್ ಕ್ರಾಸ್ ಘಟಕ, ತಾಲೂಕು ಆರೋಗ್ಯ ಇಲಾಖೆ ಹಾಗೂ ಸ್ಥಳೀಯ ಪ್ರಾಥಮಿಕ ಆರೋಗ್ಯ…

Read More

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸ್ವಕ್ಷೇತ್ರಕ್ಕೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ| haratalu halappa

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸ್ವಕ್ಷೇತ್ರಕ್ಕೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ ಆನಂದಪುರ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕವಾಗಿ ಆನಂದಪುರಕ್ಕೆ ಆಗಮಿಸಿದ ಮಾಜಿ ಸಚಿವ ಹರತಾಳು ಹಾಲಪ್ಪನವರಿಗೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತ ಕೋರಿದರು. ಆನಂದಪುರ ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಪಕ್ಷದ ಕಾರ್ಯಕರ್ತರು ಕಾರ್ಯಕರ್ತರು ವಿಜಯೇಂದ್ರ, ಯಡಿಯೂರಪ್ಪ ಹಾಗೂ ಹರತಾಳು ಹಾಲಪ್ಪ ರವರ ಘೋಷಣೆಗಳನ್ನು ಕೂಗಿದರು. ಈ ಸಂಧರ್ಭದಲ್ಲಿ ಮಾತನಾಡಿದ ಹರತಾಳು ಹಾಲಪ್ಪ ಮೋದಿ…

Read More