Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಲಿವಿಂಗ್​ ರಿಲೇಶನ್​ಶಿಪ್​ನಲ್ಲಿದ್ದ ಮಹಿಳೆ ಕೊಲೆ – ಆರೋಪಿ ಪ್ರಿಯಕರ ಬಂಧನ|arrested

ಲಿವಿಂಗ್​ ರಿಲೇಶನ್​ಶಿಪ್​ನಲ್ಲಿದ್ದ ಮಹಿಳೆ ಕೊಲೆ – ಆರೋಪಿ ಪ್ರಿಯಕರ ಬಂಧನ ಶಿವಮೊಗ್ಗ – ಸಹ ಜೀವನ ನಡೆಸುತ್ತಿದ್ದ ಮಹಿಳೆಯನ್ನು ಪ್ರಿಯಕರನೇ ಹತ್ಯೆಗೈದಿರುವ ಘಟನೆ ಜಿಲ್ಲೆಯ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕ್ಲಿಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮೂಲತಃ ಚಿತ್ರದುರ್ಗ ಜಿಲ್ಲೆಯ ಭರಮಸಾಗರದ ನಿವಾಸಿಯಾದ ರೂಪಾ(30) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಸಿಂಗೇರ್​ನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ರೂಪಾಳ ಪತಿ ಕಳೆದ ಕೆಲವು ವರ್ಷಗಳ ಹಿಂದೆ ಸಾವನ್ನಪ್ಪಿದ್ದ. ಇವರು ಇಲ್ಲಿನ ನೀಲಗಿರಿ ತೋಪಿನಲ್ಲಿ ಕಟಾವು ಕೆಲಸ…

Read More

ಪ್ರೀತಿಸಿ ಮದುವೆಯಾದ ಏಳೇ ತಿಂಗಳಲ್ಲಿ ಯುವತಿ ಅನುಮಾನಸ್ಪದವಾಗಿ ಸಾವು|

ಪ್ರೀತಿಸಿ ಮದುವೆಯಾದ ಏಳೇ ತಿಂಗಳಲ್ಲಿ ಯುವತಿ ಸಾವು, ಇಷ್ಟಪಟ್ಟು ಪ್ರೀತಿ ಮದುವೆಯಾದ ಏಳೇ ತಿಂಗಳಿಗೆ ನವವಿವಾಹಿತೆ ಅನುಮಾಸ್ಪದವಾಗಿ ಮೃತಪಟ್ಟಿದ್ದಾಳೆ. ಗಣಪತಿ ಹಬ್ಬಕ್ಕೆಂದು ತವರು ಮನೆಗೆ ಹೋದ್ದಾಕೆಯನ್ನು ಪತಿ ರಾತ್ರೋರಾತ್ರಿ ಶಿವಮೊಗ್ಗ ತಾಲೂಕಿನ ಹರಿಗೆ ಗ್ರಾಮದಲ್ಲಿ ತನ್ನ ನಿವಾಸಕ್ಕೆ ಕರೆದುಕೊಂಡು ಬಂದಿದ್ದಾರೆ. ಬಳಿಕ ಏನಾಯ್ತೋ ಏನೋ ನವವಿವಾಹಿತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಜೀವಬಿಟ್ಟಿದ್ದಾಳೆ.  ಪ್ರೀತಿಸಿ ಮದುವೆಯಾದ  ಏಳೇ ತಿಂಗಳಿಗೆ ನವವಿವಾಹಿತೆ ಅನುಮಾನಸ್ಪದ ಸಾವನ್ನಪ್ಪಿದ್ದಾಳೆ. ಶಿವಮೊಗ್ಗದ ಎನ್ ಟಿ ರಸ್ತೆಯ ಶಾರದಾ ನಗರದ ನವವಿವಾಹಿತೆ ನಮಿತಾ (22) ಮೃತಪಟ್ಟಿದ್ದು, ಗಣೇಶ…

Read More

ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣ – ಗಗನ್ ಕಡೂರೊಂದಿಗೆ ಶಿವಮೊಗ್ಗದಲ್ಲಿ ಸಿಸಿಬಿ ಮಹಜರ್|ccb

ಚೈತ್ರಾ ಕುಂದಾಪುರ ಟಿಕೆಟ್ ಡೀಲ್ ಪ್ರಕರಣ – ಗಗನ್ ಕಡೂರೊಂದಿಗೆ  ಶಿವಮೊಗ್ಗದಲ್ಲಿ ಸಿಸಿಬಿ ಮಹಜರ್| ಶಿವಮೊಗ್ಗ : ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಯಿಂದ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಚೈತ್ರಾ ಕುಂದಾಪುರ ಮತ್ತು ತಂಡದಲ್ಲಿ ಗುರುತಿಸಿಕೊಂಡಿದ್ದ ಗಗನ್ ಕಡೂರು ಇವರನ್ನು ಸಿಸಿಬಿ ಪೋಲೀಸರು ಇಂದು ಶಿವಮೊಗ್ಗಕ್ಕೆ ಕರೆತಂದು ನಗರದ ಮಥುರಾ ಸೆಂಟ್ರಲ್ ಬಳಿ ಹಾಗು ಜಿ.ಎಸ್.ಕೆ.ಎಮ್ ರಸ್ತೆಯ ಸುತ್ತಮುತ್ತ ಕೆಲ ಸ್ಥಳಗಳಲ್ಲಿ ಮಹಜರು ನಡೆಸಿದ್ದಾರೆ. ಗಗನ್ ಕಡೂರು ಶಿವಮೊಗ್ಗ ನಗರದಲ್ಲಿ ಉದ್ಯಮಿಯಿಂದ 50ಲಕ್ಷ ರೂಪಾಯಿಗಳನ್ನು…

Read More

ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದಲ್ಲಿ ಗಣಪತಿ ಪ್ರತಿಷ್ಟಾಪನಾ ಪೂಜೆ|moolegadde

ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದಲ್ಲಿ ಗಣಪತಿ ಪ್ರತಿಷ್ಟಾಪನಾ ಪೂಜೆ ರಿಪ್ಪನ್‌ಪೇಟೆ;-ಗಣಪತಿಯು ಜನಸಾಮಾನ್ಯರ ದೇವತೆ.ಗಣಪತಿ ಕೇವಲ ಒಂದು ಪಂಥದ ದೇವರಾಗದೆ ಎಲ್ಲಾ ಪಂಥದವರ ಪೂಜೆಯನ್ನು ಸ್ವೀಕರಿಸುವ ಭಗವಂತನಾದ. ಭಕ್ತರು ಗಣಪತಿಯನ್ನು ಅನೇಕ ರೂಪಗಳಲ್ಲಿ ಪೂಜಿಸುತ್ತಾ ತಮ್ಮ ಭಕ್ತಿಯ ಪರಾಕಾಷ್ಟತೆಯನ್ನು ಸಮರ್ಪಿಸುತ್ತಾ ಬಂದಿದ್ದಾರೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು.  ಮೂಲೆಗದ್ದೆ ಸದಾನಂದಶಿವಯೋಗಾಶ್ರಮದಲ್ಲಿ ಗಣೇಶ ಚತುರ್ಥಿಯಂದು ಗಣಪತಿ ಪ್ರತಿಷ್ಟಾಪನೆ ನೆರವೇರಿಸಿ ಆಶೀರ್ವಚನ ನೀಡಿ ಸ್ವಾತಂತ್ರö್ಯಕ್ಕಾಗಿ ಹೋರಾಟ ನಡೆಸುವ ಸಂದರ್ಭದಲ್ಲಿ ಜನರನ್ನು ಒಂದಡೇ ಸೇರಿಸುವ ಉದ್ದೇಶದಿಂದಾಗಿ ನಮ್ಮ ಪೂರ್ವಿಕರು ಗಣೇಶ…

Read More

ವರಪ್ರದಾಯಿನಿ ಕಳಸೆ ಗೌರಿ ಹೊಂಡದ ಗೌರಿಮಾತೆಗೆ ಮುತ್ತೈದೆಯರಿಂದ ಬಾಗಿನ ಸಮರ್ಪಣೆ|rpet news

ಬೇಡಿದ ವರವನ್ನು ವರ್ಷದೊಳಗೆ ಪೂರ್ಣಗೊಳಿಸುವ ಮಹಾತಾಯಿ;- “ವರಪ್ರದಾಯಿನಿ ಕಳಸೆ ಗೌರಿ ಹೊಂಡದ ಗೌರಿಮಾತೆಗೆ ಮುತ್ತೈದೆಯರಿಂದ ಬಾಗಿನ ಸಮರ್ಪಣೆ’’ ರಿಪ್ಪನ್‌ಪೇಟೆ;-ಪುರಾತನ ಕಾಲದ ದೇವಾಲಯಗಳು ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಮೂಲಧಾರಗಳು ಹಾಗೆಯೇ ಅಲ್ಲಿ ವಾಸಿಸಿದ ಋಷಿಮುನಿಗಳು ಶಿವಯೋಗ್ಯವರೇಣ್ಯರು ತಮ್ಮ ಪವಾಡ-ಪೂಜೆಗಳಿಂದ ಆಯಾ ಭಾಗದ ಕ್ಷೇತ್ರಗಳನ್ನು ಪಾವನಗೊಲಿಸಿ ಜಗದಿಂದ ಮರೆಯಾಗಿ ಹೋಗಿದ್ದಾರೆ.ಅಂತಹ ಸಾಧಕರ ಪಾದಸ್ಫರ್ಶದ ಸ್ಥಳಗಿಳಿಂದು ಪ್ರಚಾರವಿಲ್ಲದೆ.ಮೂಲೆಗುಂಪಾಗುತ್ತಾ ಎಷ್ಟೋ ಪ್ರಮುಖ ಇತಿಹಾಸವೂಳ್ಳ ದೇವಸ್ಥಾನಗಳು ಮತ್ತು ಧಾರ್ಮಿಕ ಪವಾಡದ ಹಲವು ಗುಹೆಗಳು ಆಳಿಯುವಂತಾಗಿರುವುದು ಕಾಣಬಹುದಾಗಿದ್ದರೂ ಕೂಡಾ ಅಳಿದುಳಿದಿರುವ ಕೆಲವು ಪ್ರಮುಖ ಧಾರ್ಮಿಕ ಕೇಂದ್ರಗಳಲೊಂದಾದ…

Read More

ಆನಂದಪುರ : ಕಾಲುಜಾರಿ ಕೆರೆಗೆ ಬಿದ್ದು ರೈತ ಸಾವು|ಗಣಪತಿ ವಿಸರ್ಜನೆ ವೇಳೆಯಲ್ಲಿ ನಡೆಯಿತಾ ಅವಘಡ..?? ಜೆಡಿಸರದಲ್ಲಿ ಇಷ್ಟಕ್ಕೂ ನಡೆದಿದ್ದೇನು|Farmers death

ಆನಂದಪುರ : ಕಾಲುಜಾರಿ ಕೆರೆಗೆ ಬಿದ್ದು ರೈತ ಸಾವು|ಗಣಪತಿ ವಿಸರ್ಜನೆ ವೇಳೆಯಲ್ಲಿ ನಡೆಯಿತಾ ಅವಘಡ..?? ಜೆಡಿಸರದಲ್ಲಿ ಇಷ್ಟಕ್ಕೂ ನಡೆದಿದ್ದೇನು..?? ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರದ ಜೇಡಿಸರದ ಬಳಿಯಲ್ಲಿ ವ್ಯಕ್ತಿಯೊಬ್ಬರು ಎಮ್ಮೆಯನ್ನು ಹುಡುಕಿಕೊಂಡು ಕೆರೆ ಏರಿ ಮೇಲೆ ಹೋಗುತ್ತಿದ್ದಾಗ ಕಾಲುಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ. ಸ್ಥಳೀಯ ನಿವಾಸಿ ಸತೀಶ್ ಗೌಡ(51) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಸತೀಶ್​ರವರು ಅಡುಗೆ ಕಂಟ್ರಾಕ್ಟ್ ಮಾಡುತ್ತಿದ್ದರು.  ತಮ್ಮ ಬಾವನ ಮನೆಯಲ್ಲಿ ಇಟ್ಟಿದ್ದ ಗಣಪತಿ ವಿಸರ್ಜನೆಗೆ ಅಂತಾ ತೆರಳಿದ್ದ  ವೇಳೇ ಕೆರೆಯ ಆಳ ನೋಡಲು ಹೋದ ಸಂದರ್ಭದಲ್ಲಿ…

Read More

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು|crime news

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದಲ್ಲಿ ಬಾಳೆಕೊನೆ ಕಡಿಯುವ ವಿಚಾರದಲ್ಲಿ ಗಲಾಟೆ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸಾಗರ ಮೂಲದ ಇಮ್ರಾನ್ ಎಂಬುವವರಿಗೆ ಗೌಡಕೊಪ್ಪ ಗ್ರಾಮದ ಅರುಣ್ ಕುಮಾರ್ ಎಂಬುವವರಿಗೆ ಸೇರಿದ ಬಾಳೆ ತೋಟದ ಬಾಳೆಕೊನೆಯನ್ನು ತೂಕದ ಲೆಕ್ಕದಲ್ಲಿ ಕಟಾವು ಮಾಡಲು ಮಾತುಕತೆ ನಡೆದಿತ್ತು. ಆ ಹಿನ್ನಲೆಯಲ್ಲಿ ಸೋಮವಾರ ಬಾಳೆಕೊನೆ…

Read More

ಆಟೋದಲ್ಲಿ ಮರೆತು ಹೋದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಚಾಲಕ|Honest driver

ಆಟೋದಲ್ಲಿ ಮರೆತು ಹೋದ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ಚಾಲಕ ಸಾಗರ : ಪ್ರಯಾಣಿಕರೊಬ್ಬರು ಆಟೋದಲ್ಲಿ ಮರೆತು ಹೋಗಿದ್ದ ಲಕ್ಷಾಂತರ ಮೌಲ್ಯದ ಆಭರಣಗಳಿದ್ದ ಬ್ಯಾಗನ್ನು ಆಟೋ ಚಾಲಕರೊಬ್ಬರು ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಸಾಗರ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಚಂದ್ರಮಾವಿನಕೊಪ್ಪಲಿಂದ ಆಟೋ ಹತ್ತಿದ್ದ ಪ್ರಯಾಣಿಕರು ಸೊರಬ ರಸ್ತೆ ಬೈಪಾಸ್ ಬಳಿ ಇಳಿಯುವಾಗ ತಮ್ಮ ಬ್ಯಾಗ್‌ವೊಂದನ್ನು ಬಿಟ್ಟು ಹೋಗಿದ್ದರು. ಬ್ಯಾಗಿನಲ್ಲಿ ಲಕ್ಷಾಂತರ ಮೌಲ್ಯದ ಆಭರಣಗಳು ಕೂಡ ಇದ್ದವು. ಇದೇ ವೇಳೆ ಹಿಂದಿನ ಆಸನದಲ್ಲಿದ್ದ ಪ್ರಯಾಣಿಕರ ಬ್ಯಾಗ್ ಗಮನಿಸಿದ…

Read More

ಒಂಟಿ ಮಹಿಳೆಯರು ಇರುವ ಮನೆ ಲೂಟಿ ಮಾಡುತ್ತಿದ್ದ ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ|arrested

ಒಂಟಿ ಮಹಿಳೆಯರು ಇರುವ ಮನೆ ಲೂಟಿ ಮಾಡುತ್ತಿದ್ದ ಪಶ್ಚಿಮ ಬಂಗಾಳದ ವ್ಯಕ್ತಿ ಬಂಧನ ಸಾಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಒಂಟಿ ಮನೆಗಳ ಗುರುತಿಸಿ ದರೋಡೆ ಮತ್ತು ಹಲ್ಲೆಗೆ ಯತ್ನಿಸುತ್ತಿದ್ದ ಪಶ್ಚಿಮ ಬಂಗಾಳ ರಾಜ್ಯದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪಶ್ಚಿಮಬಂಗಾಳ ರಾಜ್ಯದ ಮುರ್ಷಿದಾಬಾದ್ ಜಿಲ್ಲೆ, ಭಗಂಗೋಲ್ ತಾಲೂಕಿನ ರಾಣಿಲ್ ಗ್ರಾಮದ ಹದೀದ್ ಷಾ ಬಂಧಿತ ಆರೋಪಿ. ಈತ ಆವಿನಹಳ್ಳಿ ಹೋಬಳಿಯ ಕೋಳೂರು, ಗೆಣಸಿನಕುಣಿ, ಗಿಣಿವಾರ, ಕೌತಿ, ಹುಲಿದೇವರಬನ, ಅಂಬಾರಗೋಡ್ಲು ಗ್ರಾಮ ವ್ಯಾಪ್ತಿಯ ಗ್ರಾಮಗಳಲ್ಲಿ ಸುತ್ತಾಡುತ್ತಿದ್ದ….

Read More

ತುಂಗಾ ನದಿಯಲ್ಲಿ ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು! ಓರ್ವನ ಮೃತದೇಹ ಪತ್ತೆ !!!|students drowned in Tunga river

ತುಂಗಾ ನದಿಯಲ್ಲಿ ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು! ಓರ್ವನ ಮೃತದೇಹ ಪತ್ತೆ !! ಶಿವಮೊಗ್ಗ : ಮೀನು ಹಿಡಿಯಲೆಂದು ತುಂಗಾ ನದಿಗೆ ಇಳಿದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಕಾಲೇಜು ವಿದ್ಯಾರ್ಥಿಗಳಾದ ಮೊಯಿನ್‌ ಖಾನ್‌(18) ಮತ್ತು ಅಂಜುಂ ಖಾನ್‌(18) ನೀರಿನಲ್ಲಿ ಕಣ್ಮರೆಯಾದವರು. ಶಿವಮೊಗ್ಗದ ಶಿವಮೊಗ್ಗದ ಕುರುಬರ ಪಾಳ್ಯದಲ್ಲಿ ದುರ್ಘಟನೆ ನಡೆದಿದೆ. ಸವಾಯಿಪಾಳ್ಯದ ಮೊಯಿನ್ ಖಾನ್(18), ಇಲ್ಯಾಸ್ ನಗರದ ಅಂಜುಂ ಖಾನ್(18) ಇಬ್ಬರೂ ಬೇರೆ ಕೆಲವು ಸ್ನೇಹಿತರ ಜತೆ ಮೀನು ಹಿಡಿಯಲೆಂದು ನದಿ ತೀರಕ್ಕೆ ಬಂದಿದ್ದರು. ಅಲ್ಲಿ ನೀರಿಗಿಳಿದು ಮೀನು…

Read More