Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ರಿಪ್ಪನ್‌ಪೇಟೆ : ಇಲ್ಲಿನ ಬೆನವಳ್ಳಿ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಹೊಸನಗರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಮಾರುತಿ ಸ್ವಿಫ್ಟ್ ಡಿಜ಼ೈರ್ ಕಾರು ದೂನ ಹಾಗೂ ಬೆನವಳ್ಳಿ ನಡುವೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಉರುಳಿಬಿದ್ದಿದೆ. ಕಾರಿನಲ್ಲಿ ಹೊಸನಗರ ಮೂಲದ ಕುಟುಂಬವೊಂದರ ಐವರು ಪ್ರಯಾಣಿಸುತಿದ್ದರು ಇಬ್ಬರು ಮಹಿಳಾ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ.ಉಳಿದವರು ಅದೃಷ್ಟವಶಾತ್ ಪಾರಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ…

Read More

ರಿಪ್ಪನ್‌ಪೇಟೆ : ಪೊಲೀಸ್ ವಸತಿ ನಿಲಯಗಳ ಬಳಿ NSS ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಪೊಲೀಸ್ ವಸತಿ ನಿಲಯಗಳ ಬಳಿ NSS ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ರಿಪ್ಪನ್‌ಪೇಟೆ;-ಶಿವಮೊಗ್ಗ ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಮತ್ತು ಜಿಲ್ಲಾ ಒಕ್ಕಲಿಗರ ಸಂಘ ಇವರ ಸಹಯೋಗದಲ್ಲಿ ಅಯೋಜಿಸಲಾದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷೀಕ ಶಿಬಿರ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ಜರುಗಿತು. ಶಿವಮೊಗ್ಗ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಶಿಬಿರಾರ್ಥಿಗಳು ಮತ್ತು ಶಿಬಿರಾಧಿಕಾರಿ ಪ್ರಕಾಶ್ ಹಾಗೂ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಪಿ.ಪ್ರವಿಣ್ ಇವರ ನೇತೃತ್ವದಲ್ಲಿ ಪೊಲೀಸ್ ವಸತಿ ನಿಲಯದ…

Read More

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ|soraba

ಕರ್ನಾಟಕದಲ್ಲಿ ಮಕ್ಕಳಿಗೆ ಮಾತೃಭಾಷೆಯಾಗಿ ಕನ್ನಡ ಕಲಿಕೆ ಕಡ್ಡಾಯ: ಸಚಿವ ಮಧು ಬಂಗಾರಪ್ಪ ಕರ್ನಾಟಕದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಶ್ರೀ ಸಿದ್ಧ ವೃಷಬೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡ 14 ವರ್ಷದೊಳಿಗಿನ ಮಕ್ಕಳ ತಾಲ್ಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡುವ ಸಂದರ್ಭದಲ್ಲಿ ಅವರು ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಮೂರು…

Read More

ಶಿವಮೊಗ್ಗ ತಹಶೀಲ್ದಾರ್ ಎನ್ ಜೆ ನಾಗರಾಜ್ ಅಮಾನತ್ತು|suspended

ಶಿವಮೊಗ್ಗ ತಹಶೀಲ್ದಾರ್ ಎನ್ ಜೆ ನಾಗರಾಜ್ ಅಮಾನತ್ತು ಶಿವಮೊಗ್ಗದದಲ್ಲಿ ತಹಶೀಲ್ದಾರ್​ ಆಗಿರುವ ಎನ್​ಜೆ ನಾಗರಾಜ್​ರನ್ನ ಅಮಾನತ್ತುಗೊಳಿಸಲಾಗಿದೆ. ಅವರು ಹೊಳಲ್ಕೆರೆ ತಾಲ್ಲೂಕು ತಹಶೀಲ್ದಾರ್ ಆಗಿದ್ದ ಸಂದರ್ಭದಲ್ಲಿ ಅವರ ಮೇಲೆ ಲೋಕಾಯುಕ್ತ ರೇಡ್ ಆಗಿತ್ತು. ಆನಂತರ ಲೋಕಾಯುಕ್ತ ಪೊಲೀಸ್ ಮಹಾನಿರ್ದೇಶಕರು, ಪ್ರಕರಣಾ ತನಿಖಾ ವರದಿ ಆಧರಿಸಿ, ನಾಗರಾಜ್​ರವರನ್ನು ಅಮಾನತ್ತುಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರದ ಉಲ್ಲೇಖದಂತೆ ಕರ್ನಾಟಕ ಸರ್ಕಾರ ತನ್ನ ನಡಾವಳಿಯಲ್ಲಿ ನಾಗರಾಜ್​ರವರನ್ನು ಅಮಾನತ್ತುಗೊಳಿಸಿ ಇಂದು ಆದೇಶಿಸಿದೆ.  ಸರ್ಕಾರದ ಆದೇಶದಲ್ಲಿ ಏನಿದೆ ..?? ಸರ್ಕಾರದ ಆದೇಶ ಸಂಖ್ಯೆ:ಕಂಇ 45…

Read More

ಕ್ರೀಡಾಕೂಟಕ್ಕೆ ಅನುದಾನದ ಕೊರತೆ ಶಾಮಿಯಾನಕ್ಕೂ ಬರೆ- ಬಿಸಿಲ ಝಳಕ್ಕೆ ತತ್ತರಿಸಿದ ವಿದ್ಯಾರ್ಥಿಗಳು|amrutha

ಕ್ರೀಡಾಕೂಟಕ್ಕೆ ಅನುದಾನದ ಕೊರತೆ ಶಾಮಿಯಾನಕ್ಕೂ ಬರೆ- ಬಿಸಿಲ ಝಳಕ್ಕೆ ತತ್ತರಿಸಿದ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ;-ಕ್ರೀಡಾ ಕೂಟಗಳಿಗೆ ಸರ್ಕಾರ ನೀಡುವ ಅನುದಾನ ಬಹಳ ಕಡಿಮೆಯಿದ್ದು ಇದರಿಂದ ಒಂದು ಶಾಮಿಯಾನ ಹಾಕುವುದು ಕಷ್ಟವಾಗಿದೆ ಇನ್ನೂ ಬಹುಮಾನ ಮತ್ತು ಕ್ರೀಡಾ ಸಾಮಗ್ರಿಗಳ ಖರೀಧಿ ಸೇರಿದಂತೆ ಊಟೋಪಚಾರಕ್ಕೆ ಗ್ರಾಮದಲ್ಲಿ ಕೊಡುಗೈ ದಾನಿಗಳನ್ನು ಅವಲಂಭಿಸಬೇಕಾದ ಅನಿರ್ವಾತೆ ಇದೆ ಎಂದು ಎಂ.ಎಲ್.ಸಿ ಎಸ್.ಎಲ್.ಭೋಜೇ ಗೌಡರು ವಿಷಾದ ವ್ಯಕ್ತಪಡಿಸಿದರು. ರಿಪ್ಪನ್‌ಪೇಟೆ ಸಮೀಪದ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಹೊಸನಗರ ತಾಲ್ಲೂಕ್ ಪದವಿ ಪೂರ್ವ ಕಾಲೇಜ್‌ಗಳ…

Read More

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು|accident

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಯನೂರು ಸಮೀಪದ ಚಿನ್ನಮನೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಾರೋಹಿತ್ತಲು ನಿವಾಸಿ ಗುರುಮೂರ್ತಿ(36)  ಮೃತ ಧುರ್ಧೈವಿಯಾಗಿದ್ದಾರೆ. ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬಜಾಜ್ ಡಿಸ್ಕವರ್ ಬೈಕ್ ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಖಾಸಗಿ ಬಸ್ ನಡುವೆ ಚಿನ್ನಮನೆ ಗ್ರಾಮದ ಕೆರೆ ಬಳಿಯ ತಿರುವಿನಲ್ಲಿ…

Read More

ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಕಾರು ನಡುವೆ ಡಿಕ್ಕಿ – 9 ಮಂದಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್ಸು- ಕಾರು ಡಿಕ್ಕಿ, 9 ಮಂದಿಗೆ ಗಾಯ ಶಿವಮೊಗ್ಗದಿಂದ ತರೀಕೆರೆಗೆ ತೆರಳುತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಕಾರು ಡಿಕ್ಕಿಯಾಗಿವೆ. ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ 9 ಜನರಿಗೆ ಗಂಭೀರ ಗಾಯಗಳಾಗಿವೆ. ತರೀಕೆರೆ ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಶಿವಮೊಗ್ಗದಿಂದ ತರೀಕೆರೆಗೆ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ….

Read More

ಓಮಿನಿ ಓಡಿಸಿದ ಅಪ್ರಾಪ್ತ ಪುತ್ರ – ತಂದೆಗೆ 25 ಸಾವಿರ ದಂಡ!!|awareness news

ಓಮಿನಿ ಓಡಿಸಿದ ಅಪ್ರಾಪ್ತ ಪುತ್ರ – ತಂದೆಗೆ 25 ಸಾವಿರ ದಂಡ!! ಶಿವಮೊಗ್ಗ : ಚಾಲನಾ ಪರವಾನಗಿ (ಡಿ.ಎಲ್) ಇಲ್ಲದೇ ಒಮಿನಿ ವಾಹನ ಚಲಾಯಿಸುತ್ತಿದ್ದ ಬಾಲಕನ ತಂದೆಗೆ ಇಲ್ಲಿನ ಮೂರನೇ ಎಸಿಜೆ ಹಾಗೂ ಜೆಎಂಎಫ್ ನ್ಯಾಯಾಲಯ ₹ 25 ಸಾವಿರ ದಂಡ ವಿಧಿಸಿದೆ. ಚಿಕ್ಕಮಗಳೂರು ಜಿಲ್ಲೆ ಎನ್‌.ಆರ್‌.ಪುರದ ನಿವಾಸಿ ಇಲಿಯಾಸ್ (41) ದಂಡ ಪಾವತಿಸಬೇಕಾದವರು. ಇಲಿಯಾಸ್ ಅವರ 17 ವರ್ಷದ ಪುತ್ರ ಕಳೆದ ಸೆ.9ರಂದು ಶಿವಮೊಗ್ಗ ನಗರದಲ್ಲಿ ಒಮಿನಿ ವಾಹನ ಚಲಾಯಿಸಿಕೊಂಡು ಬಂದಿದ್ದಾನೆ. ಕರ್ನಾಟಕ ಸಂಘದ ಬಳಿಯ…

Read More

ತುಂಗಾ ನದಿ ತೀರದಲ್ಲಿ ಹೆಬ್ಬಾವು ಪತ್ತೆ – ಅರಣ್ಯ ಇಲಾಖೆಯಿಂದ ರಕ್ಷಣೆ|python

ತುಂಗಾ ನದಿ ತೀರದಲ್ಲಿ ಹೆಬ್ಬಾವು ಪತ್ತೆ – ಅರಣ್ಯ ಇಲಾಖೆಯಿಂದ ರಕ್ಷಣೆ ತೀರ್ಥಹಳ್ಳಿ: ತುಂಗಾ ನದಿ ತೀರದಲ್ಲಿ ಹೆಬ್ಬಾವು ಪತ್ತೆಯಾಗಿದ್ದು ಅರಣ್ಯ ಇಲಾಖೆಯ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.   ಪಟ್ಡಣ ಪಂಚಾಯತಿ ವ್ಯಾಪ್ತಿಯ ವಾರ್ಡ್ ನಂಬರ್ ಹದಿನಾಲ್ಕರ  ಕುರುವಳ್ಳಿ ಗಣಪತಿ ಪೆಂಡಲ್ ಹಿಂಭಾಗ ತುಂಗಾ ನದಿಯಲ್ಲಿ ಇಂದು ಮಂಗಳವಾರ ಬೆಳಿಗ್ಗೆ ಹೆಬ್ಬಾವು ಪ್ರತ್ಯಕ್ಷವಾಗಿದೆ. ಹೆಬ್ಬಾವು ಇರುವ ವಿಷಯ ತಿಳಿಯುತ್ತಿದ್ದಂತೆ ಕುರುವಳ್ಳಿಯ ಜನರು ಹೆಬ್ಬಾವು ನೋಡಲು ನದಿಯ ಸಮೀಪ ಬರುತ್ತಿದ್ದಾರೆ ಎನ್ನಲಾಗಿದೆ.  ನದಿಯಲ್ಲಿ ಹೆಬ್ಬಾವು ಇರುವ ವಿಷಯ ಸ್ಥಳೀಯರು…

Read More

ತುಂಗಾ ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು – ಓರ್ವನ ಮೃತದೇಹ ಪತ್ತೆ..!!|crime news

ತುಂಗಾ ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲು – ಓರ್ವನ ಮೃತದೇಹ ಪತ್ತೆ! ತೀರ್ಥಹಳ್ಳಿ: ಬೆಂಗಳೂರಿಂದ ಭೀಮನ ಕಟ್ಟೆಗೆ  ಪ್ರವಾಸಕ್ಕೆ ಬಂದಿದ್ದ ಮೂರು ಯುವಕರಲ್ಲಿ ಇಬ್ಬರು ಯುವಕರು  ನೀರಿನಲ್ಲಿ ಈಜಲು ಹೋಗಿ  ನಾಪತ್ತೆಯಾಗಿದ್ದರು.  ಇವರು ನೀರಿನಲ್ಲಿ ಮುಳುಗಿರಬಹುದು ಎಂದು ಶಂಕಿಸಲಾಗಿ ರಾತ್ರಿಯಿಡಿ ತೀರ್ಥಹಳ್ಳಿ ಪೊಲೀಸರು,ಅಗ್ನಿಶಾಮಕ ದಳ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದರು. ಇದೀಗ ಗೌತಮ್ ( 26) ವರ್ಷ ಅವರ ಮೃತದೇಹವನ್ನು ನೀರಿನಿಂದ ಮೇಲೆ ತೆಗೆಯಲಾಗಿದೆ. ಇನ್ನೋರ್ವ ಯುವಕನ ಪತ್ತೆಗಾಗಿ  ಶೋಧ  ಕಾರ್ಯಚರಣೆ ನಡೆಸುತ್ತಿದ್ದಾರೆ.

Read More
Exit mobile version