Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ – ಇಬ್ಬರ ವಿರುದ್ದ ದೂರು ದಾಖಲು|FIR

ರಿಪ್ಪನ್‌ಪೇಟೆ : ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ ಮಾಡಿರುವ ಪ್ರಕರಣವೊಂದು ನಡೆದಿದ್ದು ರಿಪ್ಪನ್‌ಪೇಟೆ ಠಾಣೆಯಲ್ಲಿ ಇಬ್ಬರ ಮೇಲೆ ದೂರು ದಾಖಲಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಸೀಬಿನಕೆರೆ ಇಂದಿರಾನಗರ ನಿವಾಸಿ ಅರ್ಜುನ್ ರವರ ಪತ್ನಿ ಚೈತ್ರಾ ಎನ್ ಆರ್ ರವರಿಗೆ ಡಿಗ್ರಿ ವಿದ್ಯಾರ್ಹತೆಯ ಮೇರೆಗೆ ರಿಪ್ಪನ್‌ಪೇಟೆ ನಿವಾಸಿ ಶ್ವೇತಾ ಕೋಂ ರಿಶಾಂತ್ ರವರು ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಾರೆಂದು ಪ್ರಕರಣ ದಾಖಲಾಗಿದೆ. ದೂರಿನಲ್ಲೇನಿದೆ….???? ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು…

Read More

ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ರಕ್ಷಿಸಿದ ಪೊಲೀಸರು|district news

ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ರಕ್ಷಿಸಿದ ಪೊಲೀಸರು ಗಾಜಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ಪೊಲೀಸರಿಬ್ಬರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಫ್ರೀಡಂ ಪಾರ್ಕ್​ನಲ್ಲಿ 17 ವರ್ಷದ ಬಾಲಕಿಯೊಬ್ಬಳು, ಗಾಜಿನಿಂದ ತನ್ನ ಕೈಯಿಂದ ಕೊಯ್ದುಕೊಂಡು ಒದ್ದಾಡುತ್ತಿದ್ದಳು. ಈ ವೇಳೆ ERV ವಾಹನದಲ್ಲಿದ್ದ ಪೊಲೀಸ್ ಕಾನ್ಸ್​ಟೇಬಲ್​​ಗಳಾದ ರಾಘವೇಂದ್ರ ಹಾಗೂ ಚಾಲಕ ಚನ್ನಕೇಶವ ಅವರು ರಕ್ತದ ಮಡುವಿನಲ್ಲಿದ್ದ ಬಾಲಕಿಯನ್ನು ತಕ್ಷಣ ತಮ್ಮದೇ ವಾಹನದಲ್ಲಿ…

Read More

ಸಂಸದ ಬಿ ವೈ ರಾಘವೇಂದ್ರ ಮನೆಯ ರಸ್ತೆಯಲ್ಲಿ ಪುನುಗು ಬೆಕ್ಕಿನ ದೇಹ ಪತ್ತೆ – ವಾಮಾಚಾರದ ಶಂಕೆ!!!|black magic

ಸಂಸದ ಬಿ ವೈ ರಾಘವೇಂದ್ರ ಮನೆಯ ರಸ್ತೆಯಲ್ಲಿ ಪುನುಗು ಬೆಕ್ಕಿನ ದೇಹ ಪತ್ತೆ – ವಾಮಾಚಾರದ ಶಂಕೆ!!! ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮತ್ತೆ ವಾಮಾಚಾರ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಹಿಂದೆ ವಿಧಾನಸಭಾ ಚುನಾವಣೆ ಅವಧಿಯಲ್ಲಿ ಶಿಕಾರಿಪುರದಲ್ಲಿ ವಾಮಾಚಾರದ ಸದ್ದು ಭಾರೀ ಕೇಳಿ ಬಂದಿತ್ತು.  ಕಳೆದ ವಿಧಾನಸಭಾ ಚುನಾವಣೆಯ ವೇಳೆ ಸಂಸದ ಬಿವೈ ರಾಘವೇಂದ್ರರವರ ತೋಟದಲ್ಲಿ ಪುನಗು ಬೆಕ್ಕೊಂದು ಕೊಂದು ಹೂತು ಹಾಕಿ ವಾಮಾಚಾರ ಪ್ರಯೋಗ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಇದೀಗ ಬಿವೈ ರಾಘವೇಂದ್ರ…

Read More

ಶಿವಮೊಗ್ಗ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ವ್ಯವಸ್ಥಾಪಕರಾಗಿ ಬಿ ಟಿ ಹಾಲೇಶ್ ಅಧಿಕಾರ ಸ್ವೀಕಾರ|district news

ಶಿವಮೊಗ್ಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರನ್ನಾಗಿ ಬಿ ಟಿ ಹಾಲೇಶ್ ರವರನ್ನು ವರ್ಗಾವಣೆಗೊಳಿ ಸರ್ಕಾರ ಆದೇಶ ಹೊರಡಿಸಿದೆ. ಇಂದು ಅರಣ್ಯ ಸಂರಕ್ಷಣಾಧಿಕಾರಿಗಳ ಕಛೇರಿಯಲ್ಲಿ ಅವರು ಅಧಿಕಾರ ಸ್ವೀಕರಿಸಿದರು. ಮೂಲತಃ ಭದ್ರಾವತಿಯ ಬಿ ಟಿ ಹಾಲೇಶ್  ಸಾಗರ ವಿಭಾಗೀಯ ಕಚೇರಿಯಲ್ಲಿ ಕೆಲವು ವರ್ಷಗಳ ಕಾಲ ಸೇವೆ ಮಾಡಿರುತ್ತಾರೆ.ನಂತರ ಹಾಸನ ಜಿಲ್ಲೆಗೆ ಪದೋನ್ನತಿ ಹೊಂದಿ ಅಲ್ಲಿ 2 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅವರು ಸದರಿ ಶಿವಮೊಗ್ಗ ಉಪ ವಿಭಾಗ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯ ಪತ್ರಾಂಕಿತ ವ್ಯವಸ್ಥಾಪಕರಾಗಿ…

Read More

ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್ ​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು|FIR

ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು ಸಾಮಾಜಿಕ ಜಾಲತಾಣದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಅವರು ಆರೋಪಿಸಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಸೂಲಿಬೆಲೆ ವಿರುದ್ಧ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದೆ ತಿಂಗಳ 23 ರಂದು ಚಂದ್ರಯಾನ -3 ಯಶಸ್ವಿಗೆ ಪೂಜೆ ಮಾಡಿಸಿ ಫೋಟೋ ಹಾಕಿ ಎಂದು ಪೋಸ್ಟ್ ಹಾಕಿದ್ದ…

Read More

ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕಡಿದು ಕೊಂದ ಕ್ರೂರಿ ಮಗ|crime news

ಕುಡಿದ ಮತ್ತಿನಲ್ಲಿ ಹೆತ್ತ ತಾಯಿಯನ್ನೇ ಕಡಿದು ಕೊಂದ ಕ್ರೂರಿ ಮಗ ಹೆತ್ತು ಹೊತ್ತ ತಾಯಿಯನ್ನು ಮಗನೇ ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಭೀಬತ್ಸಕರ ಘಟನೆ ಮಲೆನಾಡಿನಲ್ಲಿ ನಡೆದಿದೆ. ಇದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಸೋಮವಾರ ಮಧ್ಯಾಹ್ನ ಬೆಳಕಿಗೆ ಬಂದ ಘೋರ ಹತ್ಯೆಯೊಂದರ ಕಥೆ. ಇಲ್ಲಿನ ಮಾವಿನಕೆರೆ ನಿವಾಸಿ ಸುಲೋಚನಮ್ಮ (60) ಎಂಬವರನ್ನು ಅವರ ಪುತ್ರನೇ ಕೊಂದು ಹಾಕಿದ್ದಾನೆ.  ತಾಯಿಯನ್ನೆ ಕೊಂದ ಕ್ರೂರಿ ಮಗ ಸಂತೋಷ (49) ಆತ ಭಾನುವಾರ ರಾತ್ರಿಯೇ ಕೊಲೆ ಮಾಡಿರುವ ಶಂಕೆ ಇದ್ದು, ಸೋಮವಾರ…

Read More

ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಕಾರ್ಮಿಕರು ಆರ್ಥಿಕವಾಗಿ ಸದೃಢರಾಗಬೇಕು – ಬೇಳೂರು ಗೋಪಾಲಕೃಷ್ಣ|Rpet news

ರಿಪ್ಪನ್‌ಪೇಟೆ : ಸರಕಾರ ಕಟ್ಟಡ ಕಾರ್ಮಿಕರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಸದುಪಯೋಗವ ಪಡೆದುಕೊಂಡು ಕಾರ್ಮಿಕರು ಆರ್ಥಿಕವಾಗಿ ಸದೃಡವಾಗಬೇಕು ಎಂದು ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಜಿಎಸ್ ಬಿ ಕಲ್ಯಾಣ ಮಂದಿರದಲ್ಲಿ ಹೊಸನಗರ ತಾಲೂಕು ಗ್ರಾಮಾಂತರ ವ್ಯಾಪ್ತಿಯ ಕಟ್ಟಡ ಕಾರ್ಮಿಕರ ಸಂಘವನ್ನು ಉದ್ಘಾಟಿಸಿ ನೂತನ ಪದಾಧಿಕಾರಿಗಳಿಗೆ ಆಯ್ಕೆ ಪ್ರಮಾಣ ಪತ್ರಗಳನ್ನು ವಿತರಿಸಿ ಅವರು ಮಾತನಾಡಿ ಸರ್ಕಾರದ ಯೋಜನೆಯನ್ನು ಫಲಾನುಭವಿಗಳಿಗೆ ನೇರವಾಗಿ ದೊರೆಯುವಂತಹ ಕಾರ್ಯಕ್ರಮವನ್ನು ಸಂಘಟನೆಗಳು ಹಮ್ಮಿಕೊಳ್ಳಬೇಕು ಎಂದರು. ಕಾರ್ಮಿಕ…

Read More

ಸಾಗರದಲ್ಲಿ ರೌಡಿಗಳ ಪರೇಡ್|sagara

ಸಾಗರದಲ್ಲಿ ರೌಡಿಗಳ ಪರೇಡ್|sagara ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಡಿವೈಎಸ್​ಪಿ ಗೋಪಾಲಕೃಷ್ಣ ನಾಯಕ್​ ಸಾಗರ ಉಪವಿಭಾಗದ ವ್ಯಾಪ್ತಿ ರೌಡಿ ಪರೇಡ್ ನಡೆಸಿದ್ಧಾರೆ.  ಸಾಗರ ಟೌನ್​ ಪೊಲೀಸ್ ಸ್ಟೇಷನ್​ ಎದುರು ಪರೇಡ್ ನಡೆಸಿದ ಅವರು ರೌಡಿಸಂ ನಡೆಸುತ್ತಿರುವವರಿಗೆ ಎಚ್ಚರಿಕೆ ನೀಡಿ ಮಾತನಾಡಿದ ಅವರು, ನಿಮ್ಮ ಹೆಂಡತಿ ಮಕ್ಕಳ ಜೊತೆ ಉತ್ತವiವಾಗಿ ಸಂಸಾರಮಾಡಿಕೊಂಡು ಹೋಗಿ. ಇಲಾಖೆಯಿಂದ ನಿಮಗೆ ಯಾವುದೇ ತೊಂದರೆ ಬರುವುದಿಲ್ಲ. ಒಂದೊಮ್ಮೆ ನಿಮ್ಮ ಹಳೆ ಚಾಳಿಯನ್ನು ಪುನರಾರಂಭಿಸಿದರೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದರು.  ಮಾದಕ ವಸ್ತು…

Read More

ನಾಳೆ (28-07-2023) ರಿಪ್ಪನ್‌ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ

ನಾಳೆ (28-07-2023) ರಿಪ್ಪನ್‌ಪೇಟೆಯಲ್ಲಿ ಕಟ್ಟಡ ಕಾರ್ಮಿಕರ ಸಂಘ ಉದ್ಘಾಟನೆ  ರಿಪ್ಪನ್‌ಪೇಟೆ : ‌ಆಗಸ್ಟ್ 28ರ ಸೋಮವಾರ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಂಘದ ರಿಪ್ಪನ್‌ಪೇಟೆ ಘಟಕ ಉದ್ಘಾಟನೆ ಹಾಗೂ ಉಚಿತ ಸಂಚಾರಿ ಚಿಕಿತ್ಸಾಲಯದ ಉದ್ಘಾಟನೆ ಕಾರ್ಯಕ್ರಮ ನೆರವೇರಲಿದೆ ಎಂದು ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಸುಂದರ್ ಬಾಬು ಹಾಗೂ ಹೊಸನಗರ ಗ್ರಾಮಾಂತರ ಅಧ್ಯಕ್ಷ ಮಹಮ್ಮದ್ ಹುಸೇನ್ ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ‌. ಪಟ್ಟಣದ ಗ್ರಾಮ ಪಂಚಾಯಿತಿ ಕುವೆಂಪು ಸಭಾ ಭವನದಲ್ಲಿ ಪತ್ರೀಕಾಗೋಷ್ಟಿಯನ್ನುದೇಶಿಸಿ ಮಾತನಾಡಿದ ಅವರು ಕಟ್ಟಡ ಕಾರ್ಮಿಕರ…

Read More

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಆರೋಪಿಗಳು ಪರಾರಿ ,ಜಾನುವಾರು ರಕ್ಷಣೆ|crime news

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಆರೋಪಿಗಳು ಪರಾರಿ ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಗವಟೂರಿನ ಬೆಳಕೋಡು ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ನಡೆಸುತಿದ್ದ ವಾಹನ ಸಮೇತ ಜಾನುವಾರನ್ನು ವಶಕ್ಕೆ ಪಡೆದಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಬೆಳಕೋಡು ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತಿದ್ದ ಅಶೋಕ್ ಲೈಲ್ಯಾಂಡ್ ಲಗೇಜ್ ಆಟೋವನ್ನು ಅನುಮಾನದಿಂದ ಸ್ಥಳೀಯರು ತಡೆದು ವಿಚಾರಿಸಲು ಹೋದಾಗ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ವಾಹನದಲ್ಲಿ ಒಂದು ಜಾನುವಾರನ್ನು ಹಿಂಸಾತ್ಮಕವಾಗಿ ಕಟ್ಟಿಹಾಕಲಾಗಿತ್ತು. ಅಶೋಕ್ ಲೈಲ್ಯಾಂಡ್ ಲಗೇಜ್ ಆಟೋ(ka-15-9389)…

Read More
Exit mobile version