Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

20 ಲಕ್ಷ ರೂ. ಹಣವನ್ನು ಕಳ್ಳತನ ಮಾಡಿದ್ದ ಕಾರು ಚಾಲಕಕ ಗೋವಾದ ಕ್ಯಾಸಿನೋದಲ್ಲಿ ಜೂಜಾಡುವಾಗ ಸೆರೆ!

ಕಾರ್ಮಿಕರಿಗೆ ವೇತನ ಕೊಡಲು ತಂದಿದ್ದ 20 ಲಕ್ಷ ರೂ. ಇದ್ದ ಬ್ಯಾಗ್ ಕದ್ದು ಪರಾರಿಯಾಗಿದ್ದ ಆರೋಪಿಯೊಬ್ಬ ಗೋವಾದ ಕ್ಯಾಸಿನೋದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಶಿರಾಳಕೊಪ್ಪ ನೆಹರು ಕಾಲೋನಿಯ ಎ.ಎಸ್.ನಿತೀಶ್ ಬಂಧಿತ ಆರೋಪಿ. ಬಂಧಿತನಿಂದ 7.61 ಲಕ್ಷ ರೂ. ನಗದು ಜಪ್ತಿ. ಗೋವಾದ ಕ್ಯಾಸಿನೊದಲ್ಲಿರುವ ಬಗ್ಗೆ ಮಾಹಿತಿ ಕಲೆಹಾಕಿದ ಪೊಲೀಸರು ಕ್ಯಾಸಿನೋಗೆ ತೆರಳಿ ಆರೋಪಿ ಬಂಧಿಸಿ ಕರೆತಂದ ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು.  ಶಿವಮೊಗ್ಗ ನಗರದಲ್ಲಿ ನಡೆಯುತ್ತಿರುವ 24*7 ಕುಡಿಯುವ ನೀರು ಸರಬರಾಜಿನ ಯೋಜನಾ ವ್ಯವಸ್ಥಾಪಕ ಹೇಮಂತ್ ಕುಮಾರ್ ಕಾರಿನ…

Read More

ಆರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯ|DSS

ಖರ್ಗೆಯನ್ನು ಅವಮಾನಿಸಿದ ಆರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯ ಹೊಸನಗರ : ಮಲ್ಲಿಕಾರ್ಜುನ ಖರ್ಗೆಯವರನ್ನು ಅವಮಾನಿಸಿದ ತೀರ್ಥಹಳ್ಳಿಯ ಶಾಸಕ ಆರಗ ಜ್ಞಾನೇಂದ್ರರವರನ್ನು ತಕ್ಷಣ ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ದಲಿತ ಸಂಘರ್ಷ ಸಮಿತಿ ಹೊಸನಗರ ಶಾಖೆ ಜಿಲ್ಲಾ ಸಂಚಾಲಕ ಕೆ.ವಿ.ನಾಗರಾಜ್ ಅರಳಸುರಳಿಯವರ ನೇತೃತ್ವದಲ್ಲಿ ಹೊಸನಗರ ಪ್ರಭಾರ ತಹಶೀಲ್ದಾರ್ ರಾಕೇಶ್‌ರವರಿಗೆ ಮನವಿ ಪತ್ರ ಸಲ್ಲಿಸಿದರು. ನಂತರ ಮಾತನಾಡಿದ ನಾಗರಾಜ್‌, ಆರಗ ಜ್ಞಾನೇಂದ್ರರವರು ಸಾರ್ವಜನಿಕ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನೂ ವಿರೋಧಿಸಿ…

Read More

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಆರ್ ಎನ್ ಮಂಜಪ್ಪ ರವರ ನಿಧನದ ಹಿನ್ನಲೆ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. ಪಟ್ಟಣದ ಮೃತರ ಸ್ವಗೃಹಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ನಂತರ ಮಾತನಾಡಿ ರೈತ ಚಳವಳಿಗಳ ನಾಯಕ ಹಿರಿಯ ವ್ಯಕ್ತಿತ್ವವಾದ ಆರ್ ಎನ್ ಮಂಜಪ್ಪ ನವರು ನಮ್ಮನ್ನು ಅಗಲಿರುವುದು ಅತೀವ…

Read More

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಶಿವಮೊಗ್ಗ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸ)ರ ನ್ಯಾಯಾಧೀಶರ ತೀರ್ಪು ನೀಡಿದೆ. ಶಿವಮೊಗ್ಗ ನಗರದ 27 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾದ ಆರೋಪಿ ಎಂದು ತಿಳಿದುಬಂದಿದೆ. ಕಳೆದ ವರ್ಷ 2022ರಲ್ಲಿ…

Read More

ರಿಪ್ಪನ್‌ಪೇಟೆ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ|Rpet news

ರಿಪ್ಪನ್‌ಪೇಟೆ  ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿ ಚುನಾವಣೆ – ಎಂ ಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ.  ರಿಪ್ಪನ್ ಪೇಟೆ: ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ   ಮಂಡಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಹಾಗೂ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕ ಎಂಎಂ ಪರಮೇಶ್ ತಂಡಕ್ಕೆ ಭರ್ಜರಿ ಜಯ ಲಭಿಸಿದೆ. ಪಟ್ಟಣದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 12 ಜನ ಸದಸ್ಯರ ಆಡಳಿತ ಮಂಡಳಿ ಇದ್ದು, ಇದರಲ್ಲಿ ಏಳು ಜನ ಸದಸ್ಯರುಗಳು…

Read More

ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ರಿಪ್ಪನ್ ಪೇಟೆಯ ಆರ್.ಎನ್.ಮಂಜಪ್ಪ ಹೃದಯಾಘಾತದಿಂದ ನಿಧನ|Ripponpet

ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ  ರಿಪ್ಪನ್ ಪೇಟೆಯ ಆರ್.ಎನ್.ಮಂಜಪ್ಪ ಹೃದಯಾಘಾತದಿಂದ ನಿಧನ  ರಿಪ್ಪನ್‌ಪೇಟೆ;- ಪಟ್ಟಣದ ಸಾಗರ ರಸ್ತೆಯ ನಿವಾಸಿಯಾಗಿರುವ  ಶಿವಮೊಗ್ಗ ಜಿಲ್ಲಾ ರೈತ ಮುಖಂಡ ಹಾಗೂ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಆರ್.ಎನ್.ಮಂಜಪ್ಪ (೮೯) ತಮ್ಮ ಸ್ವಗೃಹದಲ್ಲಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನಹೊಂದಿದ್ದಾರೆ. ಮೃತ ಮಂಜಪ್ಪನವರು  ಜಿಲ್ಲಾ ರೈತ ಸಂಘಟನೆಯಲ್ಲಿ  ಮತ್ತು ರೈತ ಹೋರಾಟ  ಹಾಗೂ ಚಳುವಳಿಯಲ್ಲಿ   ಪ್ರಮುಖ ರೂವಾರಿಯಾಗಿ ಇದ್ದರು. ರೈತರ ಪರವಾಗಿ ನೂರಾರು ಭಾರಿ ಹೋರಾಟ ನಡೆಸಿದ ಇವರು ರೈತರ ಹಿತಕ್ಕಾಗಿ ಅನೇಕ ಬಾರಿ…

Read More

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ|madhu bangarappa

ಶಾಲೆ ಸಮಯಕ್ಕೆ ಬಸ್ ಬಿಡಿಸಿ ಸರ್: ಸಚಿವ ಮಧು ಬಂಗಾರಪ್ಪ ಬಳಿ ಮಕ್ಕಳ ಮನವಿ ಸೊರಬ: ಶಾಲಾ ಅವಧಿಗೆ ಸರಿಯಾರಿ ತಲುಪಲು ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿನಿಯರು ಶಿಕ್ಷಣ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.  ತಾಲೂಕಿನ ತಲಗಡ್ಡೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮಕ್ಕೆ ಸಚಿವರು ಆಗಮಿಸಿದ ವೇಳೆ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದರು.  ತಲಗಡ್ಡೆ ಗ್ರಾಮದಿಂದ ಜಡೆ ಗ್ರಾಮಕ್ಕೆ ಶಾಲಾ ಅವಧಿಗೆ ತೆರಳು ಬಸ್ ವ್ಯವಸ್ಥೆ ಇಲ್ಲದೇ ಇಲ್ಲದೇ…

Read More

ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್ ಪ್ರಕರಣ – ಓರ್ವನ ಬಂಧನ|arrested

ತೀರ್ಥಹಳ್ಳಿಯಲ್ಲಿ ಮಿಸ್ ಫೈರಿಂಗ್ ಪ್ರಕರಣ – ಓರ್ವನ ಬಂಧನ ತೀರ್ಥಹಳ್ಳಿ : ಆರಗ ಗ್ರಾಮಪಂಚಾಯಿತಿ ವ್ಯಾಪ್ತಿಯ ದಾಸನಗದ್ದೆ ಸಮೀಪದ ಹಿರೇಗದ್ದೆಯಲ್ಲಿ   ಶುಕ್ರವಾರ ತಡ ರಾತ್ರಿ ಮಿಸ್ ಫೈರಿಂಗ್ ಆಗಿ ವ್ಯಕ್ತಿಯೋರ್ವನಿಗೆ ಗಾಯವಾದ ಪ್ರಕರಣದಲ್ಲಿಗ ತೀರ್ಥಹಳ್ಳಿ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿ ಓರ್ವನನ್ನು ಬಂಧಿಸಲಾಗಿದೆ. ಅಕ್ರಮ ನಾಡ ಬಂದೂಕು ಹೊಂದಿದ್ದು ಮತ್ತು ಕಾಡು ಪ್ರಾಣಿಯನ್ನ ಹಿಡಿಯಲು ಹೋಗಿದ್ದಕ್ಕೆ ಸಹೋದರರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಸಹೋದರರಿಬ್ಬರು ನಾಡ ಬಂದೂಕುಗಳನ್ನ ಹಿಡಿದು ಶಿಕಾರಿಗೆ ಹೋದಾಗ ತಮ್ಮನ ಬಂದೂಕಿನಿಂದ ಹಾರಿದ ಗುಂಡು ಅಣ್ಣನ…

Read More

ಸರ್ವೇ ಇಲಾಖೆಗೆ ದಿಢೀರ್ ಭೇಟಿ ನೀಡಿದ ಶಾಸಕ ಆರಗ ಜ್ಞಾನೇಂದ್ರ|araga

ತೀರ್ಥಹಳ್ಳಿ ತಾಲೂಕಿನಲ್ಲಿ ಇತ್ತೀಚೆಗೆ ನಿರಂತರವಾಗಿ ರೈತರು ಮತ್ತು ಸಾರ್ವಜನಿಕರಿಂದ ತೀರ್ಥಹಳ್ಳಿಯ ಸರ್ವೇ ಅಧಿಕಾರಿಗಳ ಕರ್ತವ್ಯ ಲೋಪದ ವಿರುದ್ಧ ಅನೇಕ ಬಾರಿ ದೂರುಗಳು ಕೇಳಿ ಬಂದ ಮೇರೆಗೆ ಶನಿವಾರ ಸಂಜೆ ಸರ್ವೇ ಇಲಾಖೆಗೆ ಭೇಟಿ ನೀಡಿದ ಶಾಸಕರಾದ ಆರಗ ಜ್ಞಾನೇಂದ್ರ ರೈತರು ಮತ್ತು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ವೇಳೆ ಅಕ್ರಮ ಭೂ ಮಂಜೂರಾತಿಗೆ ಸರ್ವೇ ಕಚೇರಿಯಲ್ಲಿ ಸಹಕರಿಸಿದ್ದಾರೆ ಎನ್ನುವ ದೂರು ಸ್ಥಳದಲ್ಲಿ ಕೇಳಿ ಬಂದ ಮೇರೆಗೆ ದಾಖಲೆಗಳೊಂದಿಗೆ ಸರ್ವೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸರ್ವೇ ಇಲಾಖೆಯ ಕಮಿಷನ್…

Read More

ರಿಪ್ಪನ್‌ಪೇಟೆ : ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಯತ್ನ – ಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತಾವರಣ|Ripponpet news

ರಿಪ್ಪನ್‌ಪೇಟೆ : ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಯತ್ನ – ಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತಾವರಣ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಲಾಡ್ಜ್ ವೊಂದರಲ್ಲಿ ವಿರೋಧದ ನಡುವೆಯೂ ಬಾರ ತೆರೆಯಲು ಹೊರಟಿರುವ ಮಧ್ಯದ ಅಂಗಡಿಗೆ ಸಾರ್ವಜನಿಕರಿಂದ ಬಾರಿ ವಿರೋಧ ವ್ಯಕ್ತವಾಗಿದೆ.ಸ್ಥಳದಲ್ಲಿ ಪ್ರಕ್ಷ್ಯುಬ್ದ ವಾತವರಣ ನಿರ್ಮಾಣವಾಗಿದೆ. ಪಟ್ಟಣದ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಕಟ್ಟಡ ಒಂದರಲ್ಲಿ ನೂತನವಾಗಿ ಸಿ ಎಲ್ 7 ಮದ್ಯದ ಅಂಗಡಿ ತೆರೆಯುವ ಹಿನ್ನೆಲೆಯಲ್ಲಿ ಶನಿವಾರ ಸಂಜೆ…

Read More
Exit mobile version