Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಆನಂದಪುರ : ರೈಲಿಗೆ ಸಿಲುಕಿ ಅನಾಮಿಕ ಸಾವು – ಗುರುತು ಪತ್ತೆಗೆ ಮನವಿ|Train

ಆನಂದಪುರ : ರೈಲಿಗೆ ಸಿಲುಕಿ ಅನಾಮಿಕ ಸಾವು – ಗುರುತು ಪತ್ತೆಗೆ ಮನವಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ರೈಲಿಗೆ ಸಿಲುಕಿ ಅನಾಮಿಕ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಅನಾಮಿಕ ವ್ಯಕ್ತಿಯ ವಯಸ್ಸು ಸುಮಾರು 45 ರಿಂದ 50 ವಯಸ್ಸಾಗಿದೆ ಎನ್ನಲಾಗುತ್ತಿತ್ತು. ಮೃತ ವ್ಯಕ್ತಿಯ ಗುರುತು ಪತ್ತೆಗಾಗಿ ಪೊಲೀಸರು ಮನವಿ ಮಾಡಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ಇದ್ದಲ್ಲಿ ಪೊಲೀಸರಿಗೆ ಸಂಪರ್ಕಿಸಲು ಕೋರಿದೆ.

Read More

ತೀರ್ಥಹಳ್ಳಿಯಲ್ಲಿ ವ್ಯಕ್ತಿಗೆ ತಗುಲಿದ ಬಂದೂಕಿನ ಗುಂಡು – ಸ್ಥಿತಿ ಗಂಭೀರ|firing

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ ಮತ್ತೆ ಕೋವಿಯ ಸದ್ದು ಕೇಳಿ ಬಂದಿದೆ. ಈ ಹಿಂದೆ ಶಿಕಾರಿಗೆ ಹೋಗಿದ್ದ ಸಂದರ್ಭದಲ್ಲಿ ಕಾಂತರಾಜ್ ಎಂಬಾತ ಸಾವನ್ನಪ್ಪಿದ್ದರು. ಆನಂತರ ಪ್ರಕರಣ ಬೇರೆ ಬೇರೆ ತಿರುವು  ಪಡೆದುಕೊಂಡಿತ್ತು. ಇದೀಗ ಅಂದಿನ ಘಟನೆಯಲ್ಲಿ ಕೇಳಿಬಂದಿದ್ದ ಪರಿಚಿತ ಹೆಸರುಗಳೇ ನಿನ್ನೆ ರಾತ್ರಿ ತೀರ್ಥಹಳ್ಳಿಯಲ್ಲಿ ಕೇಳಿ ಬಂದ ಗುಂಡಿನ ಸದ್ದಿನ ಜೊತೆಗೂ ಕೇಳಿಬರುತ್ತಿದೆ.  ತೀರ್ಥಹಳ್ಳಿ ತಾಲ್ಲೂಕಿನ ಆರಗದ ಸಮೀಪ ಗಿರಿಧರ್​ ಎಂಬವರ ತೋಟವಿದೆ. ಆ ತೋಟದ ಸಮೀಪ ನಿನ್ನೆ ಕೆಲವರು ಶಿಕಾರಿಗೆ ಹೋಗಿದ್ದಾರೆ. ತೋಟದಲ್ಲಿ ಏನೋ ಸದ್ದಾಗುತ್ತಿರುವದನ್ನ ಗಮನಿಸಿದ…

Read More

SSLC ಪಾಸಾದವರಿಗೆ ಗುಡ್ ನ್ಯೂಸ್ | ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

ಗ್ರಾಮೀಣ ಅಂಚೆ ಸೇವಕರ ನೇಮಕಾತಿ ಸಂಬಂಧ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫೆ. 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ವಯೋಮಿತಿ 18 ರಿಂದ 40 ವರ್ಷಗಳು. ಎಲ್ಲಾ ಹುದ್ದೆಗಳಿಗೆ 10 ನೇ ತರಗತಿ ತೇರ್ಗಡೆ ಕಡ್ಡಾಯವಾಗಿರಬೇಕು. ಗಣಿತ ಮತ್ತು ಇಂಗ್ಲಿಷ್ ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು. ಕನ್ನಡವನ್ನು 10 ನೇ ತರಗತಿಯಲ್ಲಿ ಒಂದು…

Read More

ಗಾಯಗೊಂಡಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪಕ್ಕೆ ಶಸ್ತ್ರ ಚಿಕಿತ್ಸೆ

ತೀರ್ಥಹಳ್ಳಿ : ಪ್ರಾಣಿ, ಪಕ್ಷಿಗಳಿಗೆ ಶಸ್ತ್ರಚಿಕಿತ್ಸೆ ಮಾಡುವುದು ತುಂಬಾ ಕಷ್ಟಕರವಾದ ಕೆಲಸ. ಆದರೆ ತೀರ್ಥಹಳ್ಳಿಯ ಕಾಳಿಂಗ ಫೌಂಡೇಷನ್ ಸದಸ್ಯರು ಗಾಯಗೊಂಡಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಆಪರೇಷನ್ ನಡೆಸಿ ಆರೋಗ್ಯ ಸುಧಾರಿಸಿದ ಮೇಲೆ ಕಾಡಿಗೆ ಬಿಟ್ಟಿದ್ದಾರೆ. ತೀರ್ಥಹಳ್ಳಿಯ ಕಮ್ಮರಡಿಯ ಮನೆಯೊಂದರ ಬಳಿ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಮಾಹಿತಿ ತಿಳಿಯುತ್ತಿದಂತೆ ಕಾಳಿಂಗ ಫೌಂಡೇಶನ್ ಸದಸ್ಯರು ಭೇಟಿ ನೀಡಿದ್ದರು. ಆಗ ಕಾಳಿಂಗ ಸರ್ಪ ಗಾಯಗೊಂಡಿರುವ ವಿಚಾರ ಗೊತ್ತಾಗಿದೆ. ನಂತರ ಹಾವನ್ನು ಹಿಡಿದು ಮೇಗರವಳ್ಳಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿ…

Read More

ಮಲ್ಲಿಕಾರ್ಜುನ ಖರ್ಗೆಯವರನ್ನು ಕೀಳು ಮಟ್ಟದಿಂದ ನೋಡುವ ರಾಜಕಾರಣಿ ನಾನಲ್ಲ – ಆರಗ ಜ್ಞಾನೇಂದ್ರ |araga

ಮಲ್ಲಿಕಾರ್ಜುನ ಖರ್ಗೆಯವರನ್ನು ಕೀಳು ಮಟ್ಟದಿಂದ ನೋಡುವ ರಾಜಕಾರಣಿ ನಾನಲ್ಲ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಅರಣ್ಯ ಸಚಿವರ ಹೇಳಿಕೆ ವಿರುದ್ಧ ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಆಡಿದಂತಹ ಕೆಲವು ಮಾತುಗಳನ್ನು ಆಡದೇ ಇರುವ ಮಾತುಗಳನ್ನು ಸೇರಿಸಿ ರಾಜಕಾರಣಕ್ಕೆ ಬಳಸಿ ರಾಜ್ಯಾದ್ಯಂತ ಸುದ್ದಿಯಾಗಿದೆ. ಅದರ ಬಗ್ಗೆ ಯಾರಿಗಾದರೂ ಮನಸ್ಸಿಗೆ ಕಸಿವಿಸಿ ಆಗಿದ್ದರೆ ವಿಶೇಷವಾಗಿ ಮಲ್ಲಿಕಾರ್ಜುನ ಖರ್ಗೆಯವರಿಗೆ ಕ್ಷಮೆಯಾಚನೆ ಮಾಡುತ್ತೇನೆ ಎಂದು ಶಾಸಕ, ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ವಿಷಾದ ವ್ಯಕ್ತಪಡಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನೆಡೆಸಿ…

Read More

ಉಳ್ಳೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – ಗಾಯಾಳುಗಳು ಆಸ್ಪತ್ರೆಗೆ ದಾಖಲು

ಸಾಗರ ತಾಲೂಕಿನ ಉಳ್ಳೂರಿನ ಹೆದ್ದಾರಿಯ ರಸ್ತೆಯಲ್ಲಿ KSRTC ಬಸ್ ಪಲ್ಟಿಯಾದ ಘಟನೆ ನಡೆದಿದೆ.ಬಸ್ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತಿದ್ದ ವೇಳೆ ಈ ಘಟನೆ ನಡೆದಿದೆ. ಉಳ್ಳೂರು ರಸ್ತೆಯ ತಿರುವಿನ ಬಳಿ ಬೈಕ್ ಒಂದು ಅಡ್ಡ ಬಂದಿದ್ದು ಬೈಕ್ ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದ ಬಸ್ ಚಾಲಕ ತಿರುವು ತೆಗೆದುಕೊಂಡಿದ್ದಾರೆ. ಆದರೆ ರಸ್ತೆಯ ಮೇಲೆ ಮಣ್ಣು ಇದ್ದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ಈ ಘಟನೆ ನಡೆದಿದ್ದು, ಬಸ್ ನಲ್ಲಿದ್ದ 20 ಜನರಿಗೆ…

Read More

ತನ್ನ‌ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್|arrested

ತನ್ನ‌ ಭಾವನನ್ನೇ ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾಮೈದುನ ಅರೆಸ್ಟ್ ಹೊಳೆಹೊನ್ನೂರು : ಇಲ್ಲಿನ ಸಮೀಪದ ಅರದೋಟ್ಲು ಬಳಿ ತನ್ನ ಭಾವನನ್ನು ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾವಮೈದುನನ್ನು ಪೊಲೀಸರು ಬಂಧಿಸಿದ್ದಾರೆ. ಭಾವಮೈದುನನ ವಿರುದ್ಧ 307 ಕೇಸ್ ದಾಖಲಾಗಿದೆ. ಆನವೇರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಂಗಪ್ಪ(53) ಎಂಬವರಿಗೆ 17 ವರ್ಷಗಳ ಹಿಂದೆ ತನ್ನ ಅಕ್ಕನ ಮಗಳಾದ ಭಾಗ್ಯರನ್ನು ಮದುವೆಯಾಗಿದ್ದು ಅವರು ಸಹ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು. ಘಟನೆಯ ಹಿನ್ನಲೆ :  ಎರಡುವರೆ ವರ್ಷಗಳ ಹಿಂದೆ ಉಪನ್ಯಾಸಕರಿಗೆ ಮತ್ತು ಹೆಂಡತಿ…

Read More

ರಿಪ್ಪನ್‌ಪೇಟೆ : ಒಂದೇ ರಾತ್ರಿಯಲ್ಲಿ ಮೂರು ಕಡೆ ಲಕ್ಷಾಂತರ ರೂ ಮೌಲ್ಯದ ರಬ್ಬರ್ ಶೀಟ್ ಕಳ್ಳತನ|theft

ರಿಪ್ಪನ್‌ಪೇಟೆ : ಒಂದೇ ರಾತ್ರಿಯಲ್ಲಿ ಮೂರು ಕಡೆ ಲಕ್ಷಾಂತರ ರೂ ಮೌಲ್ಯದ ರಬ್ಬರ್ ಶೀಟ್ ಕಳ್ಳತನ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಗ್ರಾಮೀಣ ಭಾಗಗಳಲ್ಲಿ ವಿವಿದೆಡೆ  ಒಣಗಲು ಹಾಕಿದ್ದ 4 ಕ್ವಿಂಟಲ್ ಗೂ ಅಧಿಕ  ರಬ್ಬರ್ ಶೀಟ್ ಗಳನ್ನು ಬುಧವಾರ ರಾತ್ರಿ ಕಳ್ಳರು ಅಪಹರಿಸಿದ್ದಾರೆ. ಬೆಳಂದೂರು ಗ್ರಾಮದ ಬಿ.ಟಿ. ಪ್ರಕಾಶ್ ಅವರ ಮನೆಯಲ್ಲಿ 160 ಕೆ.ಜಿ. ಹಾಗೂ  ಪುಟ್ಟಸ್ವಾಮಿಗೌಡ ಅವರ ಮನೆಯಲ್ಲಿ 150 ಕೆಜಿ  ಕೆ ಜಿ, ತಳಲೆ ಜಾರ್ಜ್ ಅವರ ಮನೆಯಲ್ಲಿ 50 ಕೆಜಿ,ಗವಟೂರು…

Read More

ಸಾಗರ : ಗಾಂಜಾ ಸಾಗಾಣಿಕೆ – ಓರ್ವನ ಬಂಧನ|arrested

ಸಾಗರ : ಗಾಂಜಾ ಸಾಗಾಣಿಕೆ – ಓರ್ವನ ಬಂಧನ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ವರದಹಳ್ಳಿ ಸರ್ಕಲ್‌ನ ಸೌಪರ್ಣಿಕ ಹೋಟೆಲ್ ಬಳಿ ಅಬಕಾರಿ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಆ.3 ರ ಗುರುವಾರ ವಶಕ್ಕೆ ಪಡೆದಿದ್ದಾರೆ. ರಾಮನಗರದ ಅಹ್ಮದ್ ಹುಸೇನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಗಸ್ತಿನಲ್ಲಿದ್ದ ಅಬಕಾರಿ ಇಲಾಖೆ ಸಿಬ್ಬಂದಿಗಳು ಅಹ್ಮದ್ ಹುಸೇನ್ ನನ್ನು ತಪಾಸಣೆಗೆ ಒಳಪಡಿಸಿದಾಗ ಆತನ ಬಳಿಯಿದ್ದ 53 ಗ್ರಾಂ.ಒಣ ಗಾಂಜಾ ಪತ್ತೆ ಮಾಡಲಾಗಿದೆ. ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ…

Read More

ಧರ್ಮಸ್ಥಳದ ಹೆಗ್ಗಡೆಯವರ ತೇಜೋವಧೆ ಖಂಡನೀಯ – ಹೊಂಬುಜ ಶ್ರೀ|hombuja

  ಧರ್ಮಸ್ಥಳದ ಹೆಗ್ಗಡೆಯವರ ತೇಜೋವಧೆ ಖಂಡನೀಯ ಹೊಂಬುಜ : 2012ರಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣವನ್ನು ಮುಂದಿಟ್ಟುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವರು ಬಹಿರಂಗವಾಗಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ತೇಜೋವಧೆ ಮಾಡುತ್ತಿರುವುದು ಖಂಡನೀಯ ಎಂದು ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ತಿಳಿಸಿದ್ದಾರೆ. ಕಾನೂನಿನ ಮೂಲಕ ನ್ಯಾಯಕ್ಕಾಗಿ ಸರ್ಕಾರವನ್ನು ಆಗ್ರಹಿಸಿರುವ ಸಂತ್ರಸ್ಥರು ಕಾನೂನಿನ ಮೇಲೆ ನಂಬಿಕೆಯಿಟ್ಟು ತೀರ್ಮಾನ ಬರುವವರೆಗೆ ತಾಳ್ಮೆಯಿಂದ ಇರಬೇಕು. ಸಂತ್ರಸ್ಥರು ನ್ಯಾಯಾಂಗ ತನಿಖೆಗೆ…

Read More