Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ರಿಪ್ಪನ್‌ಪೇಟೆ – ಆಯನೂರು ಮಾರ್ಗ ಬಂದ್|ಪರ್ಯಾಯ ಮಾರ್ಗ ಯಾವುದು..?? ಇಲ್ಲಿದೆ ಮಾಹಿತಿ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ 9ನೇ ಮೈಲಿಕಲ್ಲು ಬಳಿ ಭಾರಿ ಗಾಳಿ ಮಳೆಗೆ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. 9ನೇ ಮೈಲಿಕಲ್ಲು ಬಳಿಯಲ್ಲಿ ಭಾರಿ ಗಾಳಿ ಮಳೆಗೆ ಬೃಹತ್ ಜಂಬೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಪೂರ್ಣವಾಗಿ ಕಡಿತಗೊಂಡಿದ್ದು ಪರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಾಗಿದೆ. ಸ್ಥಳಕ್ಕೆ ಪಿಎಸ್ ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಪರ್ಯಾಯ ಮಾರ್ಗ…

Read More

ಭಾರಿ ಮಳೆಯ ಹಿನ್ನಲೆ – ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಣೆ|Rain

ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಿ ಡಿಡಿಪಿಐ ಪರಮೇಶ್ವರಪ್ಪ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ರವರ ಸೂಚನೆ ಮೇರೆಗೆ ಜು. 24 ರಂದು ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.  ಈ ರಜೆಯನ್ನು ಮುಂದಿನ ರಜಾ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ…

Read More

ಭಾರಿ ಮಳೆ ಗಾಳಿಗೆ ಮದರಸದ ಗೋಡೆ ಮೇಲ್ಚಾವಣಿ ಕುಸಿತ|Rain

ಭಾರಿ ಮಳೆ ಗಾಳಿಗೆ ಮದರಸದ ಗೋಡೆ ಮೇಲ್ಚಾವಣಿ ಕುಸಿತ ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚುಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿ ಬೈಲು ಗ್ರಾಮದಲ್ಲಿ ಇರುವ ಐತಿಹಾಸಿಕ ಹಿನ್ನೆಲೆ ಉಳ್ಳಂತಹ ಮದರಸದ ಶಾಲೆಯ ಮೇಲ್ಚಾವಣಿ ಹಾಗೂ ಕಟ್ಟಡವು ಭಾನುವಾರ ಸುರಿದ ಭಾರಿ ಮಳೆಗೆ ಕುಸಿದು ಬಿದ್ದ ಘಟನೆ ನಡೆದಿದೆ. ಪ್ರತಿನಿತ್ಯ ಈ ಮದರಸದಲ್ಲಿ ಹಲವು ಮಕ್ಕಳು ಅರೆಬಿಕ್ ವಿದ್ಯಾಭ್ಯಾಸ ನಡೆಸುತಿದ್ದು ಭಾನುವಾರ ರಜಾ ದಿನವಾಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಇತರೆ ದಿನಗಳಲ್ಲಿ ಘಟನೆ ಸಂಭವಿಸಿದ್ದಲ್ಲಿ ಅಹಿತಕರ…

Read More

ರಿಪ್ಪನ್‌ಪೇಟೆ : ಪ್ರೋ ಕಬ್ಬಡಿ ಲೀಗ್ ಗೆ ಆಯ್ಕೆಯಾದ ಯುವ ಪ್ರತಿಭೆಗೆ ಮಾಜಿ ಸಚಿವರಿಂದ ಅಭಿನಂದನೆ|pro kabbadi

ರಿಪ್ಪನ್‌ಪೇಟೆ : ಹತ್ತನೇ ಆವೃತ್ತಿಯ ಪ್ರೋ ಕಬ್ಬಡಿ ಲೀಗ್ ನಲ್ಲಿ ಯುಪಿ ಯೋಧ ತಂಡಕ್ಕೆ ಆಯ್ಕೆಯಾದ ಯುವ ಪ್ರತಿಭೆ ಗಗನ್ ಗೌಡ ರವರಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಅಭಿನಂದಿಸಿದ್ದಾರೆ. ಇಂದು ಪಟ್ಟಣದ ಸಮೀಪದ ಹಾಲುಗುಡ್ಡೆ ಗ್ರಾಮದಲ್ಲಿರುವ ಗಗನ್ ಗೌಡ ರವರ ಮನೆಗೆ ತೆರಳಿದ ಮಾಜಿ ಸಚಿವರು ಯುವ ಪ್ರತಿಭೆಯ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿ ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಮುಖಂಡರಾದ ದೇವೆಂದ್ರಪ್ಪ ಗೌಡ ,ಆನಂದ್ ಮೆಣಸೆ, ನೇಮಾಕ್ಷಿ ಗೌಡ್ರು, ಜಯದೇವ, ರಾಜೇಂದ್ರ ಘಂಟೆ, ಗಣಪತಿ,…

Read More

ಭಾರಿ ಮಳೆಗೆ ತೆಪ್ಪದಗಂಡಿಯಲ್ಲಿ ರಸ್ತೆಗೆ ಅಡ್ಡಲಾಗಿ ಉರುಳಿದ ಮರ – ಸಂಚಾರ ಅಸ್ತವ್ಯಸ್ತ|CKM

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಬಾಳೆಹೊನ್ನೂರು-ಕಳಸ ಮಾರ್ಗ‌ ಮಧ್ಯೆ ತೆಪ್ಪದಗಂಡಿ ಎಂಬಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ತೆಪ್ಪದಗಂಡಿಯಲ್ಲಿ ಭಾರೀ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಈ ವೇಳೆ ಸ್ಥಳೀಯರು ಹಾಗೂ ಯಾತ್ರಿಕರ ನೆರವಿನಿಂದ‌ ಮರ ತೆರವು ಕಾರ್ಯಾಚರಣೆ ನಡೆಸಿ ಕ್ರೇನ್ ಮುಖಾಂತರ ರಸ್ತೆಗೆ ಬಿದ್ದ‌ ಎರಡು ಮರಗಳನ್ನು ತೆರವುಗೊಳಿಸಲಾಯಿತು. ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ಕಂಬಗಳು ನೆಲಕ್ಕುರುಳಿರುವ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯವುಂಟಾಗಿದೆ….

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ KSRTC ಬಸ್

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಚರಂಡಿಗೆ ಉರುಳಿದ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಶಿವಮೊಗ್ಗದತ್ತ ತೆರಳುತಿದ್ದ KSRTC ಬಸ್ ಸೂಡೂರು ಗೇಟ್ ಬಳಿಯಲ್ಲಿ ವಾಹನವೊಂದನ್ನು ಓವರ್ ಟೇಕ್ ಮಾಡುವಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಚರಂಡಿಗೆ ಉರುಳಿಬಿದ್ದಿದೆ ಎನ್ನಲಾಗುತ್ತಿದೆ.ಈ ಅಪಘಾತದಲ್ಲಿ ಬಸ್ ನ‌ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ ಈ ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಯಾರಿಗೂ ಗಂಭೀರ ಗಾಯಗಳಾಗಿರುವ ಬಗ್ಗೆ ವರದಿಯಾಗಿರುವುದಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ರಿಪ್ಪನ್‌ಪೇಟೆಯ ಗವಟೂರಿನಲ್ಲಿ‌ ನೂತನ ಮದ್ಯದಂಗಡಿ ಆರಂಭಕ್ಕೆ ಭಾರಿ ವಿರೋಧ|protest

ರಿಪ್ಪನ್ ಪೇಟೆ : ಪಟ್ಟಣದ ಗವಟೂರಿನಲ್ಲಿ ನೂತನವಾಗಿ ತೆರೆಯಲು ಹೊರಟಿರುವ ಮಧ್ಯದ ಅಂಗಡಿಗೆ ಸಾರ್ವಜನಿಕರಿಂದ ಬಾರಿ ವಿರೋಧ ವ್ಯಕ್ತವಾಗಿದೆ. ಗವಟೂರಿನ ಖಾಸಗಿ ಕಟ್ಟಡ ಒಂದರಲ್ಲಿ ನೂತನವಾಗಿ ಸಿ ಎಲ್ 7 ಮದ್ಯದ ಅಂಗಡಿ ತೆರವಿಗೆ ಸರ್ಕಾರದಿಂದ ಲೈಸೆನ್ಸ್ ದೊರತ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಮದ್ಯದ ಲೋಡ್ ನ್ನು ಇಳಿಸುತ್ತಿದ್ದಾಗ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಮದ್ಯ ತುಂಬಿದ್ದ ವಾಹನವನ್ನು ತಡೆ ಹಿಡಿದಿದ್ದಾರೆ. ಈ ಸಂದರ್ಭದಲ್ಲಿ ತಳ್ಳಾಟ ನೂಕಾಟ ನಡೆದಿದ್ದು ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಖೈದಿಗೆ ಗಾಂಜಾ ಸಪ್ಲೆಗೆ ಯತ್ನ – ಓರ್ವ ವಶಕ್ಕೆ!!arrested

ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಕೇಂದ್ರ ಕಾರಾಗೃಹದ ಖೈದಿಗೆ ಗಾಂಜಾ ಸಪ್ಲೇ ಮಾಡಲು ಬಂದಿದ್ದ ಓರ್ವನನ್ನ ಡಿಎಆರ್ ಪೊಲೀಸರು ಹಿಡಿದು ದೊಡ್ಟಪೇಟೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಅಸ್ಲಾಮ್ ಎಂಬ ಕೈದಿಯು ಇಂದು ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಮೆಗ್ಗಾನ್  ಗೆ ಡಿಎಆರ್ ಪೊಲೀಸರು ಕರೆತಂದಿದ್ದರು. ಈತನಿಗೆ ಜಿಲಾನ್ ಎಂಬಾತನು ಗಾಂಜಾ ನೀಡಲು ಮುಂದಾಗಿದ್ದಾನೆ. ತಕ್ಷಣವೇ ಅಲರ್ಟ್ ಆದ ಡಿಎಆರ್ ಪೊಲೀಸರು ಯುವಕನನ್ನು ಹಿಡಿದು ದೊಡ್ಡಪೇಟೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಇವರಿಬ್ವರ ಮೇಲೆ ಗಾಂಜಾದ ಮತ್ತೊಂದು ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಈ…

Read More

ಹತ್ತನೇ ಆವೃತ್ತಿಯ ಪ್ರೋ ಕಬ್ಬಡಿ ಲೀಗ್ ತಂಡಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಯುವ ಪ್ರತಿಭೆ ಗಗನ್ ಗೌಡ|pro kabbadi

ರಿಪ್ಪನ್‌ಪೇಟೆ : ಪಟ್ಟಣದ ಯುವ ಕ್ರೀಡಾಪಟುವೊಬ್ಬ ಹತ್ತನೇ ಆವೃತ್ತಿಯ ಪ್ರೊ ಕಬಡ್ಡಿಗೆ ಆಯ್ಕೆ ಆಗಿದ್ದು ಮಲೆನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪಟ್ಟಣದ ಸಮೀಪದ ಹಾಲುಗುಡ್ಡೆ ಗ್ರಾಮದ  ಕಬಡ್ಡಿ ತಾರೆ ಗಗನ್ ಗೌಡ ಅವರು ಪ್ರೊ ಕಬಡ್ಡಿ 10ನೇ ಆವೃತ್ತಿಗೆ ಆಯ್ಕೆ ಆಗಿದ್ದಾರೆ. ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಡಿಎಂ ಉಜಿರೆ ವಿದ್ಯಾಸಂಸ್ಥೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ಕಬಡ್ಡಿ ಆಟಗಾರ ಗಗನ್ ಗೌಡ ಮುಂದೆ ಬರಲಿರುವ ಪ್ರೊ ಕಬಡ್ಡಿ ಹತ್ತನೇ ಆವೃತಿಯಲ್ಲಿ ಯುಪಿ ಯೋಧ ತಂಡದ ಪರವಾಗಿ ಆಡಲಿದ್ದಾರೆ.  ಮೂಲತಃ…

Read More

ಸಾಲಭಾದೆಗೆ ಬೇಸತ್ತು ವಿಷ ಸೇವಿಸಿ ರೈತ ಸಾವು|Debt

ಸೊರಬ: ರೈತನೊರ್ವ ಸಾಲಬಾಧೆಯಿಂದ  ಕಂಗೆಟ್ಟು ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಇಂಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂಡಿಹಳ್ಳಿ ಗ್ರಾಮದ ದಿನೇಶ್ (35) ಮೃತ ರೈತ. ಸಾಲಬಾಧೆಯಿಂದಾಗಿ ಮನೆಯ ಹಿಂಭಾಗದಲ್ಲಿ ವಿಷ ಸೇವಿಸಿದ್ದ. ಕೂಡಲೇ ಆತನನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.  ಎರಡೂವರೆ ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡಿದ್ದ ಈತ, ವಿವಿಧ ಬ್ಯಾಂಕ್ ನಲ್ಲಿ 8 ಲಕ್ಷ ರೂ., ಮತ್ತು ಹೊರಗಡೆ ಕೈಗಡವಾಗಿ 7 ಲಕ್ಷ ರೂ., ಸೇರಿ ಒಟ್ಟು 15 ಲಕ್ಷ ರೂ….

Read More