ಬಸ್ ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿಗೆ ಹೃದಯಾಘಾತ – ಸಮಯ ಪ್ರಜ್ಞೆ ಮೆರೆದ ಆ್ಯಂಬುಲೆನ್ಸ್ ಡ್ರೈವರ್ಗಳು|heart attack
ತೀರ್ಥಹಳ್ಳಿ: ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ತೀರ್ಥಹಳ್ಳಿಯಲ್ಲಿ ಹೃದಯಾಘಾತವಾದ ಘಟನೆ ನಡೆದಿದ್ದು ಆತನನ್ನು ಬದುಕಿಸಲು ತೀರ್ಥಹಳ್ಳಿಗರು ಹೋರಾಟ ನಡೆಸಿದ್ದಾರೆ. ಶುಕ್ರವಾರ ಶಿವಮೊಗ್ಗ-ಮಂಗಳೂರಿಗೆ ದುರ್ಗಾಂಬಾ ಬಸ್ ಹೊರಟಿತ್ತು. ಇನ್ನೇನು ತೀರ್ಥಹಳ್ಳಿ ತಲುಪುವ ಹೊತ್ತಿಗೆ ಬಸ್ನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ಹೃದಯಾಘಾತವಾಗಿದೆ. ಇದನ್ನ ಗಮನಿಸಿದ ಕಂಡಕ್ಟರ್, ಡ್ರೈವರ್ಗೆ ವಿಷಯ ತಿಳಿಸಿದ್ದಾನೆ. ತಕ್ಷಣ ಚಾಲಕ ಬಸ್ನ್ನ ತೀರ್ಥಹಳ್ಳಿ ಜೆಸಿ ಆಸ್ಪತ್ರೆ ಕಡೆಗೆ ಚಲಾಯಿಸಿದ್ದಾನೆ. ಸಮಯಕ್ಕೆ ಸರಿಯಾಗಿ ಬಸ್ನ್ನ ಆಸ್ಪತ್ರೆಗೆ ಚಲಾಯಿಸಿದ ಡ್ರೈವರ್ ಹಾಗೂ ಕಂಡಕ್ಟರ್, ಅಲ್ಲಿ ಪ್ರಯಾಣಿಕನನ್ನ ದಾಖಲಿಸಿ, ಮುಂದಕ್ಕೆ ಹೋಗಿದ್ದಾರೆ. ಆ್ಯಂಬುಲೆನ್ಸ್ ಡ್ರೈವರ್ಗಳ ಮಾನವೀಯತೆ: ಇನ್ನೂ…


