Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಆರೋಗ್ಯ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ|job

2023-24 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ & ಎನ್ಯುಹೆಚ್‌ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಆರೋಗ್ಯ ಸಂಸ್ಥೆಗಳಿಗೆ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇಎನ್ಟಿ ಸರ್ಜನ್, ಜನರಲ್ ಫಿಸಿಷಿಯನ್, ಸೈಕಿಯಾಟ್ರಿ ಹಾಗೂ ವೈದ್ಯರ ಹುದ್ದೆಗಳಿಗೆ ದಿ: 15-07-2023 ರಂದು ಹಾಗೂ ನೇತ್ರ ಸಹಾಯಕರು, ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ತಾಲ್ಲೂಕು ಮೇಲ್ವಿಚಾರಕರು, ಕಿ.ಮ.ಆ ಸಹಾಯಕಿಯರು, ಶುಶ್ರೂಷಕಿಯರು, ಕಿ.ಪು.ಆ.ಸಹಾಯಕರ ಹುದ್ದೆಗಳಿಗೆ ದಿ: 18-07-2023 ರಂದು ಬೆಳಿಗ್ಗೆ 10.30…

Read More

ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ – ಜುಲೈ 20 ರಿಂದ ಟಿಕೆಟ್ ಬುಕ್ಕಿಂಗ್ ಆರಂಭ|ಯಾವೆಲ್ಲಾ ಮಾರ್ಗ..??

ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನಗಳ ಹಾರಾಟಕ್ಕೆ ದಿನಗಣನೆ ಆರಂಭವಾಗಿದೆ. ವಿಮಾನ ಹಾರಾಟ ಆರಂಭಕ್ಕೆ 21 ದಿನಗಳ ಮುಂಚಿತವಾಗಿಯೇ ಟಿಕೆಟ್ ಬುಕ್ಕಿಂಗ್ ಆರಂಭವಾಗಲಿದೆ. ಆಗಸ್ಟ್ 11ರಂದು ಶಿವಮೊಗ್ಗ ವಿಮಾನ ನಿಲ್ದಾಣ ಕಾರ್ಯಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಜುಲೈ 20ರಿಂದ ವಿಮಾನ ಟಿಕೆಟ್ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಇಂಡಿಗೋ ವಿಮಾನಯಾನ ಸಂಸ್ಥೆಯ ಹುಬ್ಬಳ್ಳಿಯ ಮುಖ್ಯಸ್ಥ ಮನೋಜ್ ಪ್ರಭು ತಿಳಿಸಿದ್ದಾರೆ. ವಿಮಾನ ಪ್ರತಿದಿನ ಬೆಳಿಗ್ಗೆ 9ಕ್ಕೆ ಬೆಂಗಳೂರಿನಿಂದ ಹೊರಡಲಿದ್ದು, ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣಕ್ಕೆ 10:30ಕ್ಕೆ ಬರಲಿದೆ. ಮಧ್ಯಾಹ್ನ 12ಕ್ಕೆ ವಾಪಸ್…

Read More

ರಿಪ್ಪನ್‌ಪೇಟೆ : ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಗಂಭೀರ|accident

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಆಸ್ಪತ್ರೆಗೆ ದಾಖಲು ರಿಪ್ಪನ್‌ಪೇಟೆ : ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂದಿರದ ಬಳಿ ನಡೆದಿದೆ‌. ಜ್ಯೋತಿ ಮಾಂಗಲ್ಯ ಮಂದಿರದ ಬಳಿಯ ತಿರುವಿನಲ್ಲಿ ಈ ಘಟನೆ ನಡೆದಿದ್ದು ಗರ್ತಿಕೆರೆ ನಿವಾಸಿ ನವೀನ್ ಎಂಬಾತನಿಗೆ ಗಂಭೀರ ಪೆಟ್ಟಾಗಿದೆ. ಗರ್ತಿಕೆರೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತಿದ್ದ ಬಜಾಜ್ ಪಲ್ಸರ್ ಮತ್ತು ರಿಪ್ಪನ್‌ಪೇಟೆ ಕಡೆಯಿಂದ ಜ್ಯೋತಿ ಮಾಂಗಲ್ಯ ಮಂದಿರದ ಕಡೆಗೆ ತೆರಳುತಿದ್ದ…

Read More

ಯಶಸ್ವಿಯಾಗಿ ನಭಕ್ಕೆ ಚಿಮ್ಮಿದ ʻಚಂದ್ರಯಾನ-3ʼ ನೌಕೆ : ಆಗಸ್ಟ್‌ನಲ್ಲಿ ಚಂದ್ರನ ಅಂಗಳಕ್ಕೆ

ಭಾರತೀಯರ ಹೆಮ್ಮೆಯ ಪ್ರತೀಕವಾದ ಬಹು‌ನಿರೀಕ್ಷಿತ ಚಂದ್ರಯಾನ-3 ಉಡಾವಣೆ ಯಶಸ್ವಿಯಾಗಿದೆ. ಇಂದು ಮಧ್ಯಾಹ್ನ 2.35ಕ್ಕೆ ಸರಿಯಾಗಿ ಚಂದ್ರಯಾನ ಉಡಾವಣೆ ಮಾಡಲಾಯಿತು. ಉಡಾವಣೆ ಯಶಸ್ವಿಯಾಗುತ್ತಲೇ ಇಸ್ರೋ ವಿಜ್ಞಾನಿಗಳು ಹಾಗೂ ನೆರೆದಿದ್ದ ಸಾವಿರಾರು ಮಂದಿಯಿಂದ ಸಂಭ್ರಮದ ಹರ್ಷೋದ್ಘಾರ, ಭರ್ಜರಿ ಕರತಾಡನ ಕೇಳಿಬಂದಿದೆ‌. ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಚಂದ್ರಯಾನ-3 ಉಡಾವಣೆ ಮಾಡಲಾಯಿತು. ಯಶಸ್ವಿ ಲ್ಯಾಂಡಿಂಗ್ ಆದರೆ ಯುನೈಟೆಡ್ ಸ್ಟೇಟ್ಸ್, ಚೀನಾ ಮತ್ತು ಈ ಸಾಧನೆಯನ್ನು ಮಾಡಿದ ನಾಲ್ಕನೇ ದೇಶವಾಗಿ ಭಾರತ ಹೊರಹೊಮ್ಮಲಿದೆ. ಚಂದ್ರಯಾನ-3ನ್ನು 615 ಕೋಟಿ ರೂಪಾಯಿ ಮೊತ್ತದಲ್ಲಿ ನಿರ್ಮಾಣ ಮಾಡಲಾಗಿದೆ. ಇದರಲ್ಲಿ ಲ್ಯಾಂಡರ್…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿ ಮೇಲೆ ಪೊಲೀಸರ ದಾಳಿ – ಇಬ್ಬರು ವಶಕ್ಕೆ|excise

ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಮಾದಾಪುರ ಹಾಗೂ ಬಾಳೂರು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಮಾದಾಪುರ ಗ್ರಾಮದ ಅಂಗಡಿಯೊಂದರ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ವಿಜಯ್ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಂಡಿದ್ದಾರೆ. ಬಾಳೂರು ಗ್ರಾಮದ ಕಿರಾಣಿ ಅಂಗಡಿಯೊಂದರ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ…

Read More

ತೀರ್ಥಹಳ್ಳಿ ತಲ್ವಾರ್ ದಾಳಿ ಪ್ರಕರಣ : ಚೋರ್ ಸಮೀರ್ ಸೇರಿ 6 ಮಂದಿ ಅರೆಸ್ಟ್|arrested

ತೀರ್ಥಹಳ್ಳಿ : ಕುಡಿದ ನಶೆಯಲ್ಲಿ ಸೋಮವಾರ ಸಂಜೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಆರಂಭಿಸಿ ನಂತರ ತಲ್ವಾರ್ ಹಿಡಿದು ಹಲ್ಲೆ ನೆಡೆಸಿದ್ದ ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪ್ರಕರಣದಲ್ಲಿ ಸಫನ್, ಚೋರ್ ಸಮೀರ್ ಮತ್ತು ಇತರೆ ನಾಲ್ವರ ವಿರುದ್ಧ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಈಗಾಗಲೇ ಆರೋಪಿಗಳನ್ನ ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಗಲಾಟೆಗೆ ಕಾರಣವೇನು? ಜೀವಿತ್ , ಅಪ್ರೋಜ್, ಸಾದಿಕ್ ಮತ್ತು ರಾಘವೇಂದ್ರ ಎಂಬ ಯುವಕರು ತಮ್ಮ ಸ್ನೇಹಿತನೊಬ್ಬ ಮೈಲುತುತ್ತ ಸೇವಿಸಿ ಅಸ್ವಸ್ಥನಾಗಿದ್ದಕ್ಕೆ ಆತನನ್ನ ಅಸ್ಪತ್ರೆಗೆ ದಾಖಲಿಸಿ…

Read More

ಸಾಗರ : ಪಾನ್ ಕಾರ್ಡ್ ಅಪ್‌ಡೇಟ್ ನೆಪದಲ್ಲಿ ವ್ಯಕ್ತಿಯ ಖಾತೆಯಲ್ಲಿದ್ದ 7.25 ಲಕ್ಷ ರೂ ವಂಚನೆ

ಸಾಗರ : ಬ್ಯಾಂಕ್‌ನಿಂದ ಪಾನ್ ಅಪ್‌ಡೇಟ್‌ಗೆ ಬಂದ ವಾಟ್ಸ್‌ಅಪ್ ಸಂದೇಶವೆಂದು ನಂಬಿ ಬ್ಯಾಂಕ್ ಗ್ರಾಹಕರೊಬ್ಬರು ತಮ್ಮ ಪಾನ್ ಹಾಗೂ ಆಧಾರ್ ಲಿಂಕ್ ಎಂದು ಭಾವಿಸಿ ಮಾಹಿತಿಗಳನ್ನು ತುಂಬಿದ ಹಿನ್ನೆಲೆಯಲ್ಲಿ ಅವರ ಬ್ಯಾಂಕ್ ಓವರ್ ಡ್ರಾಫ್ಟ್ ಖಾತೆಯಿಂದ 7.25 ಲಕ್ಷ ರೂ.ಗಳನ್ನು ಖದೀಮರು ವಂಚಿಸಿದ ಪ್ರಕರಣ ನಡೆದಿದೆ. ನಗರದ ಕೆನರಾ ಬ್ಯಾಂಕ್‌ನ ಗ್ರಾಹಕರಾಗಿರುವ ಉದ್ಯಮಿ ಮಹಮ್ಮದ್ ಶರೀಫ್‌ರ ಮೊಬೈಲ್‌ಗೆ ಜುಲೈ 11 ರಂದು ಮಧ್ಯಾಹ್ನದ ವೇಳೆ ಎರಡೆರಡು ಸಂಖ್ಯೆಯಿಂದ ಪಾನ್ ಕಾರ್ಡ್ ಐಡಿಯ ಅಪ್‌ಡೇಟ್ ಮಾಡಲು ವಾಟ್ಸ್‌ಅಪ್ ಸಂದೇಶ…

Read More

ಆನ್ಲೈನ್​ನಲ್ಲಿ ಲೋನ್ ಪಡೆಯುವ ಮುನ್ನ ಹುಷಾರ್!!! ಲೋನ್ ಕಟ್ಟಿಲ್ಲವೆಂದು ಟಾರ್ಚರ್, ನೇಣಿಗೆ ಶರಣಾದ ವಿದ್ಯಾರ್ಥಿ|Loan app

ಈ ಡಿಜಿಟಲ್ APP ಗಳ ಮೂಲಕ ಸಾಲ ನೀಡುವ ಅಕ್ರಮ ಕಂಪನಿಗಳು ಜನರಿಗೆ ಕಿರುಕುಳ ನೀಡಿವೆ. ಈ ಕಂಪನಿಗಳು ಸಾಲ ನೀಡಿ ಜನರನ್ನು ಸಾಲದ ಸುಳಿಯಲ್ಲಿ ಸಿಲುಕಿಸುತ್ತಿವೆ. ಸಾಲಬಾಧೆ ತಾಳಲಾರದೆ ಆತ್ಮಹತ್ಯೆಯಂತಹ ಹೆಜ್ಜೆ ಇಡಲು ಯತ್ನಿಸಿದಂತಹ ಅನೇಕ ಪ್ರಕರಣಗಳು ಮುನ್ನೆಲೆಗೆ ಬಂದಿವೆ. ರಾಜಧಾನಿಯಲ್ಲಿ 2023ರಲ್ಲಿ ಲೋನ್‌ APP ಕಂಪೆನಿಗಳ ಕಿರುಕುಳದ ಸಂಬಂಧ 900 ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಒಂದೇ ಪ್ರಕರಣದಲ್ಲಿ 15 ಲೋನ್‌ APP ವಿರುದ್ಧ ಬೆಂಗಳೂರು ಪೂರ್ವ ವಿಭಾಗದ ಸೈಬರ್‌ ಪೊಲೀಸರು ದೂರು ದಾಖಲಿಸಿದ್ದಾರೆ. ಪ್ರಕರಣ…

Read More

ಪ್ರೀತ್ಸೆ, ಪ್ರೀತ್ಸೆ ಅಂತಾ ಕಾಡಿದ ಯುವಕ – ಮನನೊಂದು ವಿಷ ಸೇವಿಸಿದ್ದ ಯುವತಿ ಸಾವು|crime news

ಸಾಗರ : ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬಿಎಸ್‌ಸಿ ಪದವಿ ಓದುತ್ತಿದ್ದ 19ವರ್ಷದ ಭವ್ಯಾ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸೊರಬ ತಾಲೂಕಿನ ಪ್ರದೀಪ್ ಎಂಬಾತನ ವಿರುದ್ಧ ನಗರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಪ್ರದೀಪನಿಗೆ ಭವ್ಯಾಳ ಪರಿಚಯವಾಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಪದೇ…

Read More

ಒತ್ತುವರಿ ತೆರವಿಗೆ ಹೋದ ಅಧಿಕಾರಿಗಳಿಗೆ ಬೆದರಿಕೆ – ಏಳು ಜನರ ಬಂಧನ|enforcement

ಸಾಗರ : ಸರ್ಕಾರಿ ಜಾಗ ಒತ್ತುವರಿ ತೆರವು ಮಾಡಿ ಅಗಳ ನಿರ್ಮಿಸಲು ಹೋಗಿದ್ದ ತಹಶೀಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ  ಏಳು ಜನರ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ತಾಲ್ಲೂಕಿನ ಕಸಬಾ ಹೋಬಳಿ ಮಡಸೂರು ಗ್ರಾಮದ ಸರ್ವೇ ನಂ. 71ರ ಸರ್ಕಾರಿ ಜಮೀನಿನಲ್ಲಿ ಒತ್ತುವರಿ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್ ನೇತೃತ್ವದ ಕಂದಾಯ ಇಲಾಖೆ ತಂಡ ಸ್ಥಳಕ್ಕೆ ಭೇಟಿ ನೀಡಿದೆ….

Read More