Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಒತ್ತುವರಿ ತೆರವಿಗೆ ಹೋದ ಅಧಿಕಾರಿಗಳಿಗೆ ಬೆದರಿಕೆ – ಏಳು ಜನರ ಬಂಧನ|enforcement

ಸಾಗರ : ಸರ್ಕಾರಿ ಜಾಗ ಒತ್ತುವರಿ ತೆರವು ಮಾಡಿ ಅಗಳ ನಿರ್ಮಿಸಲು ಹೋಗಿದ್ದ ತಹಶೀಲ್ದಾರ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ  ಏಳು ಜನರ ವಿರುದ್ದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ತಾಲ್ಲೂಕಿನ ಕಸಬಾ ಹೋಬಳಿ ಮಡಸೂರು ಗ್ರಾಮದ ಸರ್ವೇ ನಂ. 71ರ ಸರ್ಕಾರಿ ಜಮೀನಿನಲ್ಲಿ ಒತ್ತುವರಿ ಮಾಡಿರುವ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ತಹಶೀಲ್ದಾರ್ ಮಲ್ಲೇಶ್ ಬಿ. ಪೂಜಾರ್ ನೇತೃತ್ವದ ಕಂದಾಯ ಇಲಾಖೆ ತಂಡ ಸ್ಥಳಕ್ಕೆ ಭೇಟಿ ನೀಡಿದೆ….

Read More

ರಿಪ್ಪನ್‌ಪೇಟೆ : ಬೀದಿ ನಾಯಿಗಳ ಹಾವಳಿಗೆ ಬೆಚ್ಚಿಬೀಳುತ್ತಿರುವ ನಾಗರೀಕರು|stray dogs

ರಿಪ್ಪನ್‌ಪೇಟೆ : ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್‌, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ. ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ವಾರ್ಡ್‌, ಕಾಲೊನಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳು ಉಪಟಳ ಹೆಚ್ಚಾಗಿದೆ. ಪಟ್ಟಣದ  ,…

Read More

ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ – ಹೊಂಬುಜ ಶ್ರೀ |ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ|protest

ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ ಹೊಂಬುಜ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತದಲ್ಲಿನ ಜೈನ ಮಂದಿರದ ಮುನಿ ಆಚಾರ್ಯ ಶ್ರೀ 108 ಕಾಮಕುಮಾರನಂದಿ ಮಹಾರಾಜರು ತೀವ್ರ ಹಿಂಸಾತ್ಮಕ ರೀತಿಯಲ್ಲಿ ಕೊಲೆ ಮಾಡಿರುವುದು ಖಂಡಿಸಿ ಹೊಂಬುಜದಲ್ಲಿ ಮೌನ ಪ್ರತಿಭಟನೆಯನ್ನು ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಜು. 12ರಂದು ನಡೆಸಲಾಯಿತು. ಶ್ರೀಕ್ಷೇತ್ರದಿಂದ ನಾಡಕಛೇರಿಯವರೆಗೆ ಮೌನ ಪ್ರತಿಭಟನೆ ಮಾಡಲಾಯಿತು. ಶ್ರೀಗಳವರು ಉಪತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ನಮ್ಮ ದೇಶ…

Read More

ತೀರ್ಥಹಳ್ಳಿ : ಹಾಡಹಗಲೇ ಜನಸಮೂಹದ ಮಧ್ಯೆ ತಲ್ವಾರ್ ಅಬ್ಬರ – ಮೂವರಿಗೆ ಗಾಯ|ಕುಡಿದ ಮತ್ತಿನಲ್ಲಿ ಮಂಗಾಟcrime news

ತೀರ್ಥಹಳ್ಳಿ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣದಲ್ಲಿ ಇತ್ತೀಚೆಗೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ಪಟ್ಟದಲ್ಲಿ ಹಾಡಹಗಲೇ ತಲ್ವಾರ್ ಗಳು ಝಳಪಿಸಿದ್ದು ನಾಲ್ವರು ಯುವಕರು ಮೂವರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಆಗುಂಬೆ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಭರಣ ಜ್ಯುವೆಲ್ಲರಿ ಬಳಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ರಸ್ತೆಯಲ್ಲಿ ತಲ್ವಾರ್ ಹಿಡಿದು ಯುವಕರು ಕುಡಿದ ಮದ್ಯದ ಮತ್ತಿನಲ್ಲಿ ಇಬ್ಬರು ಯುವಕರ ಮೇಲೆ ಬೇಕಾಬಿಟ್ಟಿ ತಲ್ವಾರ್ ಬೀಸಿದ್ದಾರೆ. ಈ ಘಟನೆಯಲ್ಲಿ ಜೀವಿತ್ ಹಾಗೂ ಆಫ್ರೋಜ್ ಎಂಬ ಯುವಕರಿಗೆ ಪೆಟ್ಟಾಗಿದೆ. ಮತ್ತೊಬ್ಬ…

Read More

ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿ ಜಾತ್ರೆ|Kenchanala

ವಿಜೃಂಭಣೆಯಿಂದ ಜರುಗಿದ  ಕೆಂಚನಾಲ ಮಾರಿ ಜಾತ್ರೆ  ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ  ಮಳೆಗಾಲದ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ  ಎರಡು…

Read More

ಪಾರ್ಕಿಂಗ್ ಗೆ ಸ್ಥಳಾವಕಾಶ ಕಲ್ಪಿಸುವಂತೆ ಮನವಿ|taxi parking issues

ಪಾರ್ಕಿಂಗ್ ಗೆ ಸ್ಥಳಾವಕಾಶ ಕಲ್ಪಿಸುವಂತೆ ಮನವಿ ರಿಪ್ಪನ್ ಪೇಟೆ : ಟ್ಯಾಕ್ಸಿ ವಾಹನಗಳ ನಿಲುಗಡೆಗೆ ಸೂಕ್ತ ಸ್ಥಳಾವಕಾಶ ನೀಡುವಂತೆ ಟ್ಯಾಕ್ಸಿ ಮಾಲೀಕರ ಹಾಗೂ ಚಾಲಕರ ಸಂಘದ ಕೆ ಟಿ ಡಿ ಓ ವತಿಯಿಂದ ಪಿಎಸ್ ಐ ಪ್ರವೀಣ್ ರವರಿಗೆ ಮನವಿ ಸಲ್ಲಿಸಿದರು. ಪಟ್ಟಣದ ಟ್ಯಾಕ್ಸಿ ಚಾಲಕರು ಟ್ಯಾಕ್ಸಿ ವಾಹನವನ್ನು ಹಲವಾರು ವರ್ಷಗಳಿಂದ ವಿನಾಯಕ ಸರ್ಕಲ್ ನಿಂದ ತೀರ್ಥಹಳ್ಳಿ ರಸ್ತೆಯ ಟಾಕೀಸ್ ಸಮೀಪದ ಜಾಗದಲ್ಲಿ ಪಾರ್ಕಿಂಗ್ ಮಾಡುತ್ತಿದ್ದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಟ್ಯಾಕ್ಸಿ ವಾಹನ ಚಾಲಕರು ತಮ್ಮ ವಾಹನವನ್ನು ನಿಲ್ಲಿಸುತ್ತಿದ್ದು…

Read More

ಜಡಿಮಳೆಗೆ ಕೆಸರುಗದ್ದೆಯಾದ ರಸ್ತೆ: ಭತ್ತ ನಾಟಿ ಮಾಡಿ ಆಕ್ರೋಶ ಹೊರ ಹಾಕಿದ ಗ್ರಾಮಸ್ಥರು|Hosanagar News

ಸಂಪೂರ್ಣ ಹದಗೆಟ್ಟಿರುವ ರಸ್ತೆಯಲ್ಲಿ ಭತ್ತ ನಾಟಿ ಮಾಡುವ ಮೂಲಕ ಗ್ರಾಮದ ಮಹಿಳೆಯರು, ಸಮಸ್ಯೆ ಬಗೆಹರಿಸದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಕೆರೆಗದ್ದೆಗೆ ತೆರಳಲು ಸರಿಯಾದ ರಸ್ತೆ ಸೌಕರ್ಯ ಇಲ್ಲದೆ, ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮಹಿಳೆಯರು ಸೇರಿ ಹದಗೆಟ್ಟ ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ….

Read More

ನಾಳೆ(11-07-2023) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ  ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ನಾಳೆ (ಜುಲೈ 11)ನಡೆಯಲಿದೆ. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ ಕೆಂಚನಾಲ ಗ್ರಾಮದಲ್ಲಿ ಮಾತ್ರ ವರ್ಷಕ್ಕೆ ಎರಡು ಬಾರಿ ಶ್ರೀ ಮಾರಿಕಾಂಬ…

Read More

ಸಾಗರ : ಜೈನ‌ಮುನಿ ಹತ್ಯೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ|Protest

ಬೆಳಗಾವಿ ಜಿಲ್ಲೆಯ ಚಿಕ್ಕೂಡಿ ತಾಲೂಕಿನ ಹಿರೇಕೊಡಿ ನಂದಿ ಪರ್ವತದ ಜೈನ್ ಮಂದಿರದ ಆಚಾರ್ಯ 108 ಕಾಮಕುಮಾರ ನಂದಿ ಮುನಿ ಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಹತ್ಯೆ ಖಂಡಿಸಿ ಇಂದು ಸಾಗರದಲ್ಲಿ ಬಿಜೆಪಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಬಿ.ವೈ ರಾಘವೇಂದ್ರ, ಸರ್ವಸಂಗ ಪರಿತ್ಯಾಗಿಗಳಾಗಿರುವ ಜೈನ ಮುನಿಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಖಂಡನೀಯ. ಅಲ್ಲದೇ ಅವರ ಹತ್ಯೆ ನಡೆದು ಮೂರು ದಿನವಾಗಿದ್ದು, ಸರ್ಕಾರ ಇನ್ನೂ ಸರಿಯಾದ ರೀತಿಯಲ್ಲಿ ತನಿಖೆ…

Read More

shikaripura|ಗೋಹತ್ಯೆ ಖಂಡಿಸಿ ಶಿಕಾರಿಪುರ ಸ್ವಯಂ ಪ್ರೇರಿತ ಬಂದ್ ಯಶಸ್ವಿ

ಶಿಕಾರಿಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ಗೋ ಹತ್ಯೆ ಖಂಡಿಸಿ ಪಟ್ಟಣದಲ್ಲಿ ಸೋಮವಾರ ನಡೆದ ಶಿಕಾರಿಪುರ ಸ್ವಯಂ ಪ್ರೇರಿತ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬೆಳಿಗ್ಗೆಯಿಂದಲೇ ಪಟ್ಟಣದಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ವ್ಯಾಪಾರಸ್ಥರು ಬಂದ್ ಗೆ ಬೆಂಬಲ ಸೂಚಿಸಿದರು. ಬಸ್ ಗಳ ಓಡಾಟ ಸಹಜವಾಗಿತ್ತು. ಇದೇ ಸಂದರ್ಭದಲ್ಲಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಗೋಹತ್ಯೆ ಖಂಡಿಸಿ ಹಿಂದೂ ಜನಜಾಗೃತಿ ಜಾಥಾ ನಡೆಯಿತು. ಸಾವಿರಾರು ಯುವಕರು ಗೋಹತ್ಯೆ ರಕ್ಷಣೆ ಹಾಗೂ ಗೋ ಹತ್ಯೆ ಖಂಡಿಸಿ ಘೋಷಣೆ ಕೂಗುತ್ತಾ ಸಾಗಿದರು. ಜಾಗೃತಿ ಜಾಥಾ ಸಂದರ್ಭದಲ್ಲಿ…

Read More