Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಮಾರ್ಗ ಸರ್ಕಾರಿ ಬಸ್ ಓಡಿಸುವಂತೆ ಆಗ್ರಹಿಸಿ ಮಹಿಳೆಯರಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ|KSRTC

ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಮಾರ್ಗ ಸರ್ಕಾರಿ ಬಸ್ ಓಡಿಸುವಂತೆ ಆಗ್ರಹಿಸಿ ಮಹಿಳೆಯರಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ರಿಪ್ಪನ್‌ಪೇಟೆ;-ರಾಜ್ಯದ ಕಾಂಗ್ರೆಸ್ ಸರ್ಕಾರ ಅನುಷ್ಟಾನಗೊಳಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯಡಿ ಹೊಸನಗರ ತಾಲ್ಲೂಕಿನ ಮಹಿಳೆಯರು ಶಾಲಾ ಕಾಲೇಜ್‌ಗಳಿಗೆ ತೆರಳುವ ವಿದ್ಯಾರ್ಥಿಗಳನ್ನು ವಂಚಿತರಾನ್ನಾಗಿಸಿದ್ದು ತಕ್ಷಣ ಸಾಗರ-ಹೊಸನಗರ  ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಗಮನಹರಿಸಿ ಶಿವಮೊಗ್ಗ ಹೊಸನಗರ ಮತ್ತು ಸಾಗರ-ತೀರ್ಥಹಳ್ಳಿ ಮಾರ್ಗದಲ್ಲಿ ಸರ್ಕಾರಿ ಬಸ್ ಬಿಡುವಂತೆ ಅಗ್ರಹಿಸಿ ಇಂದು ಮಹಿಳೆಯರು ನಾಡಕಛೇರಿಯ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು….

Read More

ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ 99 ವಾಹನಗಳು ಸೀಜ್ – ಕಾರಣವೇನು ಗೊತ್ತಾ???? ಈ ಸುದ್ದಿ ನೋಡಿ

ಸಂಚಾರ ನಿಯಮಗಳ ಉಲ್ಲಂಘನೆ ಮಾಡಿದ 99 ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ಮತ್ತು ಸೊರಬದಲ್ಲಿ ಪ್ರತ್ಯೇಕವಾಗಿ ವಾಹನಗಳ ತಪಾಸಣೆ ನಡೆಸಲಾಯಿತು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕರ್ಕಶ ಶಬ್ದ ಮಾಡುವ ಹಾರನ್‌ ಬಳಸುತ್ತಿದ್ದವರ ವಿರುದ್ಧ ಶಿವಮೊಗ್ಗ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದರು. ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ 39 ವಾಹನಗಳನ್ನು ವಶಕ್ಕೆ  ಪಡೆಯಲಾಗಿದೆ. ವಾಹನಗಳ ಮಾಲೀಕರು, ಚಾಲಕರ ವಿರುದ್ಧ ಮೋಟರ್‌ ವೆಹಿಕಲ್‌ ಕಾಯ್ದೆ ಅಡಿಯ ಪ್ರಕರಣ…

Read More

ರಿಪ್ಪನ್‌ಪೇಟೆ : ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನಾಥವಾಗಿರುವ ಕೈಗಾರಿಕಾ ವಸಾಹತು ಪ್ರದೇಶದ ಜಾಗ|RPT

ರಿಪ್ಪನ್‌ಪೇಟೆ : ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನಾಥವಾಗಿರುವ ಕೈಗಾರಿಕಾ ವಸಾಹತು ಪ್ರದೇಶದ ಜಾಗ ರಿಪ್ಪನ್‌ಪೇಟೆ : 2013 ರಲ್ಲಿ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದ ಮಾಜಿ ಸಚಿವ ಕಾಗೋಡು ತಮ್ಮಪ್ಪನವರ ಕನಸಿನ ಹಲವು ಅಭಿವೃದ್ದಿ ಕಾರ್ಯಕ್ರಮಗಳಲ್ಲಿ ಒಂದಾಗಿದ್ದ ಸ್ವಾವಲಂಭಿ ಉದ್ಯೋಗಕ್ಕೆ ಉತ್ತೇಜನ ನೀಡುವ ಮಹಾತ್ವಾಕಾಂಕ್ಷಿ ಯೋಜನೆಯಡಿ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆರೆಹಳ್ಳಿ ಹೋಬಳಿಯ ಕೆರೆಹಳ್ಳಿ ಗ್ರಾಮದ ಗ್ರಾಮ ಠಾಣಾದ 4 ಎಕರೆ ಜಾಗವನ್ನು ಮಂಜೂರು ಮಾಡಿಸುವ ಮೂಲಕ “ಕೈಗಾರಿಕಾ ವಸಾಹತು’’ಸ್ವಂತ…

Read More

ಕಳಚಿ ಬೀಳುವ ದುಸ್ಥಿತಿಯಲ್ಲಿ ರಿಪ್ಪನ್‌ಪೇಟೆ ನಾಡಕಛೇರಿ ಮೇಲ್ಚಾವಣಿ – ಜೀವ ಭಯದಲ್ಲಿ ಸಿಬ್ಬಂದಿಗಳು,ಸಾರ್ವಜನಿಕರು|RPET

ಕಳಚಿ ಬೀಳುವ ದುಸ್ಥಿತಿಯಲ್ಲಿ ರಿಪ್ಪನ್‌ಪೇಟೆ ನಾಡಕಛೇರಿ ಮೇಲ್ಚಾವಣಿ – ಜೀವ ಭಯದಲ್ಲಿ ಸಿಬ್ಬಂದಿಗಳು,ಸಾರ್ವಜನಿಕರು ರಿಪ್ಪನ್‌ಪೇಟೆ : ಪಟ್ಟಣದ ನಾಡಕಛೇರಿಯ ಮೇಲ್ಚಾವಣಿ ಈಗಲೋ ಆಗಲೋ ಬೀಳುವ ಹಂತದಲ್ಲಿದ್ದು ಕಛೇರಿಯ ಸಿಬ್ಬಂದಿಗಳು ಹಾಗೂ ಕೆಲಸ ಕಾರ್ಯಕ್ಕಾಗಿ ಇಲ್ಲಿಗಾಗಮಿಸುವ ಸಾರ್ವಜನಿಕರಿಗೆ ಜೀವಭಯ ಉಂಟಾಗಿದೆ. ಶಿವಮೊಗ್ಗ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳೇ ಕಳಚಿ ಬೀಳುವ ಸ್ಥಿತಿಯಲ್ಲಿರುವ ಲೋಕೋಪಯೋಗಿ ಇಲಾಖೆಯ ರಿಪ್ಪನ್‌ಪೇಟೆ ನಾಢಕಛೇರಿಯನ್ನು  ಒಮ್ಮೆಯಾದರೂ ತಾವು ನೋಡಿ ತಮ್ಮದೇ ಸಿಬ್ಬಂದಿಗಳ ಮತ್ತು ಸಾರ್ವಜನಿಕರ ಭಯವನ್ನು ದೂರ ಮಾಡಿ ಸಾಹೇಬ್ರೇ……………..! ಶಿವಮೊಗ್ಗ-ಹೊಸನಗರ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಗ್ರಾಮ…

Read More

ಶಿವಮೊಗ್ಗದಲ್ಲಿ ಯುವಕನೊಬ್ಬನ ಕಗ್ಗೊಲೆ – ಆರೋಪಿಯ ಬಂಧನ|crime-news

ಶಿವಮೊಗ್ಗ: ತನ್ನ ಸೊಸೆಗೆ ಕಿರುಕುಳ ನೀಡಿದ ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಸ್ನೇಹಿತನೇ ಕೊಲೆ ಮಾಡಿದ್ದಾನೆ. ಆಸೀಫ್ (25) ಕೊಲೆಯಾಗಿರುವ ಯುವಕ. ಆತನ ಸ್ನೇಹಿತ ಜಬೀ (25) ಎಂಬಾತ ಚಾಕುವಿನಿಂದ ಇರಿದು ಆಸೀಫ್‌ನ ಹತ್ಯೆ ಮಾಡಿದ್ದಾನೆ. ಶಿವಮೊಗ್ಗದ ಇಲಿಯಾಜ್ ನಗರದಲ್ಲಿ ಘಟನೆ ನಡೆದಿದೆ. ಮಂಡ್ಲಿಯ ನಿವಾಸಿ ಆಸೀಫ್​ ಎಂಬಾತ ಕೊಲೆಯಾದ ಯುವಕ!. 25 ವರ್ಷದ ಆಸೀಪ್​ ಜಬಿ ಎಂಬಾತನ ಸಹೋದರಿಯ ಮಗಳಿಗೆ ತೊಂದರೆ ಕೊಡುತ್ತಿದ್ದ ಎಂಬುದು ಪ್ರಾಥಮಿಕವಾಗಿ ತಿಳಿದಬಂದಿರುವ ಮಾಹಿತಿ. ಇದೇ ಕಾರಣಕ್ಕೆ ಸಿಟ್ಟಾದ ಜಭಿ,…

Read More

ಸಾಹಿತ್ಯ ಲೋಕಕ್ಕೆ ಹೊಸನಗರ ತಾಲೂಕಿನ ಕೊಡುಗೆ ಅಪಾರ : ವೈ.ಎಸ್.ಪ್ರೇಮನಾಥ್

ಸಾಹಿತ್ಯ ಲೋಕಕ್ಕೆ ಹೊಸನಗರ ತಾಲೂಕಿನ ಕೊಡುಗೆ ಅಪಾರ        – ವೈ.ಎಸ್.ಪ್ರೇಮನಾಥ್ ಕನ್ನಡ ಸಾಹಿತ್ಯ ಲೋಕಕ್ಕೆ ಹೊಸನಗರ ತಾಲೂಕಿನ ಸಾಹಿತಿಗಳು ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ನಿವೃತ್ತ ಪ್ರಾಂಶುಪಾಲ ವೈ ಎಸ್ ಪ್ರೇಮನಾಥ್ ಹೇಳಿದರು.  ಹೊಸನಗರ ತಾಲೂಕಿನಲ್ಲಿ 40 ಕ್ಕೂ ಹೆಚ್ಚು ಸಾಹಿತಿಗಳಿದ್ದು, ಸಾಹಿತ್ಯ ಲೋಕದ ಅನೇಕ ಕೃತಿಗಳನ್ನ ರಚನೆ ಮಾಡಿದ್ದಾರೆ ಎಂದು ತಾಲೂಕಿನ ಸಾಹಿತಿಗಳು ಮತ್ತು ಅವರ ಕೃತಿಗಳ ಬಗ್ಗೆ ವಿವರಿಸುತ್ತಾ ಹೇಳಿದರು.  ಬುಧವಾರ ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ…

Read More

ಮೆಸ್ಕಾಂ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತ ಕಲ್ಲು ತೂರಾಟ ಪ್ರಕರಣ : ಪೆಟ್ರೋಲ್, ಡಿಸೇಲ್ ದರ ಹೆಚ್ಚಾಗಿದ್ದಕ್ಕೆ ಪೆಟ್ರೋಲ್ ಬಂಕ್ ಗೆ ಕಲ್ಲು ಹೊಡಿತೀರಾ – ಬೇಳೂರು ಗೋಪಾಲಕೃಷ್ಣ ವಾಗ್ದಾಳಿ|GKB

ಶಿವಮೊಗ್ಗ: ಪೆಟ್ರೋಲ್- ಡಿಸೇಲ್ ಬೆಲೆ ನೂರರ ಗಡಿ ದಾಟಿದೆ. ಈಗ ಪೆಟ್ರೋಲ್ ಬಂಕ್ ಮೇಲೆ  ಬಿಜೆಪಿಯವರು ಕಲ್ಲು ಹೊಡಿತಾರಾ ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ. ಶಿವಮೊಗ್ಗ ಮೆಸ್ಕಾಂ ಕಚೇರಿ ಮೇಲೆ ಬಿಜೆಪಿ ಕಾರ್ಯಕರ್ತ ಕಲ್ಲು ತೂರಾಟ ವಿಚಾರವಾಗಿ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿ ಸರ್ಕಾರ ಹೋಗಿದೆ.ಕಾಂಗ್ರೆಸ್ ಸರ್ಕಾರ ಬಂದಿದೆ.ಹಾಗಾಗಿ ಬಿಜೆಪಿಯವರು  ಹತಾಶರಾಗಿದ್ದಾರೆ ಎಂದು ಹೇಳಿದರು. ಬಿಜೆಪಿಯವರು ಪೆಟ್ರೋಲ್, ಡಿಸೇಲ್ ಬೆಲೆ ಜಾಸ್ತಿ ಮಾಡಿದ್ರಲ್ಲಾ, ನಾವು ಕಲ್ಲೂ ತೂರಾಟ ಮಾಡಿಲ್ಲ. ಹೋರಾಟಾನು ಮಾಡಿಲ್ಲ ಎಂದ ಅವರು,ಈಗ ಪೆಟ್ರೋಲ್- ಡಿಸೇಲ್…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯ ಕೈ ಅಭ್ಯರ್ಥಿಯಾಗ್ತಾರ ಬಿಜೆಪಿಯ ಮಾಜಿ ಶಾಸಕ..?|ಯಡಿಯೂರಪ್ಪ ಪುತ್ರನನ್ನು ಖೆಡ್ಡಾಕ್ಕೆ ಕೆಡವಲು ಕಾಂಗ್ರೆಸ್ ರಣತಂತ್ರ???

ಶಿವಮೊಗ್ಗ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಪುತ್ರ ಸಂಸದ ಬಿವೈ ರಾಘವೇಂದ್ರ ಅವರನ್ನು ಸೋಲಿಸಲು ಕಾಂಗ್ರೆಸ್  ರಣತಂತ್ರ ರಚಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕೈ ನಾಯಕರು ಚಿಂತನೆ ನಡೆಸಿದ್ದಾರೆ. ಹಾಗಾಗಿ ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪ  ಮೂಲಕ ಆಪರೇಷನ್ ಕಾಂಗ್ರೆಸ್​ಗೆ  ಮುಂದಾಗಿದೆಯಂತೆ. ಒಂದು ವೇಳೆ ಆಪರೇಷನ್ ಕಾಂಗ್ರೆಸ್ ಯಶಸ್ವಿಯಾದ್ರೆ ಶಿವಮೊಗ್ಗ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸದ್ದು ಮಾಡುವ ಸಾಧ್ಯತೆಗಳಿವೆ. ಹೌದು, ಕಾಗೋಡು ತಿಮ್ಮಪ್ಪ ಅವರ ಮೂಲಕ ಮಾಜಿ ಶಾಸಕ…

Read More

ಮೆಸ್ಕಾಂ ಕಛೇರಿ ಮೇಲೆ ಬಿಜೆಪಿ‌ ಕಾರ್ಯಕರ್ತರಿಂದ ಕಲ್ಲು ತೂರಾಟ- ಶಾಸಕ ಸೇರಿದಂತೆ ಹಲವರು ವಶಕ್ಕೆ|Mescom

ಶಿವಮೊಗ್ಗ : ವಿದ್ಯುತ್‌ ದರ ಹೆಚ್ಚಳ ಖಂಡಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಬಿಜೆಪಿಯ ಕೆಲ ಕಾರ್ಯಕರ್ತರು ಮೆಸ್ಕಾಂ ಕಚೇರಿಯ ಕಿಟಕಿ, ನೊಟೀಸ್‌ ಬೋರ್ಡ್‌ ಗಾಜುಗಳಿಗೆ ಕಲ್ಲು ತೂರಿದ್ದಾರೆ. ಇದೆ ವೇಳೆ ಪೊಲೀಸರು ಶಿವಮೊಗ್ಗ ಶಾಸಕ ಚನ್ನಬಸಪ್ಪ ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ಇರುವ ಮೆಸ್ಕಾಂ ಕಚೇರಿಗೆ ಇವತ್ತು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದರು. ಇದರಿಂದ ಮೆಸ್ಕಾಂ ಕಚೇರಿ ಆವರಣದಲ್ಲಿ ಕೆಲಕಾಲ…

Read More

ಬಸ್ಸಿಗಾಗಿ ಕಾಯುತಿದ್ದ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳುವು|theft

ಶಿವಮೊಗ್ಗ ನಗರದ ಕೆಎಸ್​ಆರ್​ಟಿಸಿ ಬಸ್​ ಸ್ಟ್ಯಾಂಡ್​ನಲ್ಲಿ ಬಸ್​ಗೆ ಕಾಯುತ್ತಿದ್ದಾಗ ಮಹಿಳೆಯೊಬ್ಬರ ಚಿನ್ನಾಭರಣ ಕಳುವಾಗಿರುವ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ ಅಲ್ಲದೆ ಈ ಸಂಬಂಧ IPC 1860 (U/s-379) ಅಡಿಯಲ್ಲಿ ಎಫ್ಐಆರ್ ಸಹ ದಾಖಲಾಗಿದೆ. ಕಳೆದ 10 ನೇ ತಾರೀಖು ನಡೆದ ಘಟನೆ ಇದಾಗಿದ್ದು, ಈ ಸಂಬಂಧ ಹಿರೇಕರೂರು  ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದಾರೆ.  ಶಿವಮೊಗ್ಗದಲ್ಲಿರುವ ತಮ್ಮ ಅಕ್ಕನ ಮನೆಗೆ ಬಂದಿದ್ದ ಮಹಿಳೆ ವಾಪಸಾಗಲು KSRTC ಬಸ್​ ಸ್ಟ್ಯಾಂಡ್​ನಲ್ಲಿ ಬಸ್​ ಹತ್ತಲು ಪ್ಲ್ಯಾಟ್ ಫಾರಂ ನಂಬರ್​…

Read More