Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಕಿರಿ ವಯಸ್ಸಿನಲ್ಲಿ ಹಿರಿ ಸಾಧನೆ – ಉತ್ತರಕನ್ನಡ ಜಿಲ್ಲೆಯ ಪ್ರಥಮ ಮಹಿಳಾ ಪೈಲಟ್ ಕಾವ್ಯಶ್ರೀ ಭಟ್

ಕಿರಿ ವಯಸ್ಸಿನಲ್ಲಿ ಹಿರಿ ಸಾಧನೆ – ಉತ್ತರಕನ್ನಡ ಜಿಲ್ಲೆಯ ಪ್ರಥಮ ಮಹಿಳಾ ಪೈಲಟ್ ಕಾವ್ಯಶ್ರೀ ಭಟ್ ಉತ್ತರಕನ್ನಡ: ಹಾರಬೇಕೆನ್ನೋ ಕನಸು  ಕಾಣದೇ ಇರೋ ಹೆಣ್ಣು ಮನಸಿಲ್ಲ, ಆದರೆ ಆ ಕನಸು ಜವಾಬ್ದಾರಿಗೋ ಮರ್ಜಿಗೋ ಕುಸಿದು ಬೀಳೋದು ಇದ್ದೇ ಇದೆ. ಈ ಹುಡುಗಿ ಬರೀ ಆಗಸದಲ್ಲಿ ಹಾರಾಟ ಮಾಡಿಲ್ಲ ಬದಲಿಗೆ ಈಕೆಯ ಕನಸಿನ ರೆಕ್ಕೆಗಳು ಕೋಟಿ ಕಂಗಳಿಗೆ  ಸ್ಫೂರ್ತಿಯಾಗಿದೆ. ಜಪ ಮಾಡೋರ ಮಗಳ ಕೈಗೆ ಬಂತು ಜಾಯ್‌ಸ್ಟಿಕ್ : ಅಪ್ಪ ಪುಟ್ಟ ಮಗುವನ್ನು ಎತ್ತಿಕೊಂಡು ಆಕಾಶದಲ್ಲಿ ವಿಮಾನ ಹಾರಾಡುತ್ತಿರುವುದನ್ನು…

Read More

ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ

ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ | ಹಳದಿ ರುದ್ರಾಕ್ಷಿ ಹಲಸಿನ ಪ್ರಭೇದ ಸಂರಕ್ಷಣೆಗೆ ಮಾನ್ಯತೆ ರಿಪ್ಪನ್ ಪೇಟೆ: ನವದೆಹಲಿಯಲ್ಲಿ  ಬುಧವಾರ ನಡೆದ ಸಸ್ಯ ಪ್ರಭೇದಗಳ ಮತ್ತು ರೈತರ ಹಕ್ಕು ಪ್ರಾಧಿಕಾರದ  ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ‘ಜಿನೋಮ್ ಸೇವಿಯರ್ ‘ ಪ್ರಶಸ್ತಿಯನ್ನು  ಅನಂತಮೂರ್ತಿ ಜವಳಿಯವರಿಗೆ ನೀಡಿ…

Read More

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಭದ್ರಾವತಿಯಲ್ಲಿ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು…

Read More

21 ವರ್ಷದ ಯುವತಿ ಕಾಣೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

21 ವರ್ಷದ ಯುವತಿ ಕಾಣೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಗ್ರಾಮದ ಹೆಗಲತ್ತಿ ವಾಸಿ ಗುರುಪ್ರಸಾದ ಅವರ ಮಗಳು ನಾಗಶ್ರೀ (21) ಅವರು ನವೆಂಬರ್ 11ರಂದು ರಾತ್ರಿ ಮನೆಯಿಂದ ಹೊರಟು ಹೋದ ಬಳಿಕ ಈವರೆಗೆ ವಾಪಾಸಾಗಿಲ್ಲ. ಕಾಣೆಯಾದ ನಾಗಶ್ರೀ ಅವರು ಸುಮಾರು 5 ಅಡಿ ಎತ್ತರ, ದುಂಡು ಮುಖ, ಗೋಧಿ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮನೆಯಿಂದ ಹೊರಟಾಗ ಲೈಟ್ ಪಿಂಕ್ ಟೀ ಶರ್ಟ್ ಮತ್ತು ಕಪ್ಪು ಜೀನ್ಸ್…

Read More

ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ

ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ಪಟ್ಟಣ ಪಂಚಾಯಿತಿ ಮಾದರಿಯಲ್ಲಿ ಅಭಿವೃದ್ಧಿ – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್‌ಪೇಟೆ, ನ.13 – ಪಟ್ಟಣದ ವಿನಾಯಕ ಸರ್ಕಲ್‌ನ ಅಭಿವೃದ್ಧಿ ಹಾಗೂ ಅಗಲೀಕರಣ ಕಾಮಗಾರಿಗಳಿಗೆ ಇಂದು ಸಂಜೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, “ಪಟ್ಟಣ ಪಂಚಾಯಿತಿ ಮಾದರಿಯಲ್ಲಿ ರಿಪ್ಪನ್‌ಪೇಟೆಯ ಅಭಿವೃದ್ಧಿ ಮಾಡಲಾಗುವುದು. ನಾಲ್ಕು ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳನ್ನು ಸಂಪರ್ಕಿಸುವ ವಿನಾಯಕ ಸರ್ಕಲ್‌ಗೆ…

Read More

ರಿಪ್ಪನ್‌ಪೇಟೆಯ ಎಂ.ಎಂ. ಪರಮೇಶ್ ಅವರಿಗೆ ರಾಜ್ಯ ಮಟ್ಟದ “ಸಹಕಾರಿ ರತ್ನ” ಪ್ರಶಸ್ತಿ ಗೌರವ

ರಿಪ್ಪನ್‌ಪೇಟೆಯ ಎಂ.ಎಂ. ಪರಮೇಶ್ ಅವರಿಗೆ ರಾಜ್ಯ ಮಟ್ಟದ “ಸಹಕಾರಿ ರತ್ನ” ಪ್ರಶಸ್ತಿ ಗೌರವ ರಿಪ್ಪನ್‌ಪೇಟೆ : ರಾಜ್ಯ ಸರ್ಕಾರದಿಂದ ಪ್ರತಿ ವರ್ಷ ನೀಡಲಾಗುವ ರಾಜ್ಯ ಮಟ್ಟದ ‘ಸಹಕಾರಿ ರತ್ನ’ ಪ್ರಶಸ್ತಿಗೆ ಈ ಬಾರಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಂ.ಎಂ. ಪರಮೇಶ್ ಆಯ್ಕೆಯಾಗಿದ್ದಾರೆ. ನವೆಂಬರ್ 14 ರಂದು ಬೆಂಗಳೂರು ಪ್ಯಾಲೇಸ್ ಗ್ರೌಂಡ್‌ನ ಗಾಯತ್ರಿ ವಿಹಾರ್ನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಕಾರ್ಯಕ್ರಮದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ. ಎಂ.ಎಂ….

Read More

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು ಶಿವಮೊಗ್ಗ: ದೇಶದಲ್ಲಿ ಪದೇ ಪದೆ ದಾಳಿಯಾಗುತ್ತಿದ್ದರೂ ಉಗ್ರರ ಅಟ್ಟಹಾಸ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಷಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಂಚೆ ಕಚೇರಿ ಮುಂಭಾಗ ನಗರ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 2019ರಲ್ಲಿ 800 ಕೆ.ಜಿ ಸ್ಪೋಟಕ ಹೊತ್ತು ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಪುಲ್ವಾಮಾದಲ್ಲಿ ದಾಳಿಯಾಗಿತ್ತು. 2025ರಲ್ಲಿ ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ 26 ನಾಗರಿಕರ ಹತ್ಯೆ ಮಾಡಲಾಗಿತ್ತು….

Read More

ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಎರಡು ಹಸುಗಳು ಸಜೀವ ದಹನ

ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಎರಡು ಹಸುಗಳು ಸಜೀವ ದಹನ ಶಿವಮೊಗ್ಗ : ಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತಿನಕೊಪ್ಪದಲ್ಲಿ ನಡೆದ ದುರಂತ ಘಟನೆಯಲ್ಲಿ ಎರಡು ಹಸುಗಳು ಸಜೀವ ದಹನವಾಗಿದೆ. ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಸಂತೋಷ್ ಎಂಬುವವರ ಮನೆಯ ಹಿಂಭಾಗದಲ್ಲಿದ್ದ ಅಡಿಕೆ ದಬ್ಬೆ ಪಕ್ಕದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಆ ಸಮಯದಲ್ಲಿ ಕೊಟ್ಟಿಗೆಯೊಳಗೆ ಸದ್ಯದಲ್ಲೇ ಕರು ಹಾಕುವ ಸ್ಥಿತಿಯಲ್ಲಿದ್ದ ಎರಡು ಹಸುಗಳು ಬಿಕ್ಕಟ್ಟಿನಿಂದ ಪಾರಾಗಲಾರದೇ ಬೆಂಕಿಗೆ ಆಹುತಿಯಾಗಿವೆ. ಬೆಂಕಿ ತೀವ್ರಗೊಂಡಿದ್ದು, ಸ್ಥಳೀಯರು ನೀರು ಸುರಿದು…

Read More

‘ವರ್ಕ್ ಫ್ರಂ ಹೋಮ್’ ಆಫರ್ ನಂಬಿ ಮೋಸ ಹೋದ ಇಂಜಿನಿಯರ್ — ಒಂಬತ್ತು ದಿನಗಳಲ್ಲಿ 11 ಲಕ್ಷ ವಂಚನೆ!

‘ವರ್ಕ್ ಫ್ರಂ ಹೋಮ್’ ಆಫರ್ ನಂಬಿ ಮೋಸ ಹೋದ ಇಂಜಿನಿಯರ್ — ಒಂಬತ್ತು ದಿನಗಳಲ್ಲಿ 11 ಲಕ್ಷ ವಂಚನೆ! ಶಿವಮೊಗ್ಗ: ನಗರದ  ಕುವೆಂಪು ನಗರದಲ್ಲಿ ವಾಸಿಸುವ ಮಹಿಳಾ ಎಂಜಿನಿಯರ್‌ರೊಬ್ಬರಿಗೆ ಸೈಬರ್ ವಂಚಕರು ಒಂಬತ್ತು ದಿನದಲ್ಲ್ಲಿ ೧೧ ಲಕ್ಷಕ್ಕೂ ಅಧಿಕ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾರೆ.  ಈ  ಹಿನ್ನೆಲೆ ಮಹಿಳೆ  ಶಿವಮೊಗ್ಗದ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಪ್ರಕಾರ, ನವೆಂಬರ್ ೨, ೨೦೨೫ ರಂದು ಮಹಿಳೆ ಮೊಬೈಲ್ ನೋಡುತ್ತಿದ್ದಾಗ, ವಂಚಕರು ಇನ್‌ಸ್ಟಾಗ್ರಾಮ್ ಅಪ್ಲಿಕೇಶನ್ ಮೂಲಕ ಅವರನ್ನು…

Read More

RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್‌ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ

RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್‌ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ ರಿಪ್ಪನ್ ಪೇಟೆ: ಕನಸು, ಪರಿಶ್ರಮ ಮತ್ತು ಪ್ರತಿಭೆ ಒಂದೇ ಹಾದಿಯಲ್ಲಿ ಸಾಗಿದಾಗ ಅದ್ಭುತಗಳು ಸಂಭವಿಸುತ್ತವೆ ಎಂಬುದಕ್ಕೆ ಜೀವಂತ ಉದಾಹರಣೆ ಅರಸಾಳು ಗ್ರಾಮದ ಯುವತಿ ಕವನಶ್ರೀ ಹೆಚ್.ಎಂ.. ಚೆನ್ನೈನ ಎಸ್.ಆರ್.ಎಂ. ಆಡಿಟೋರಿಯಂನಲ್ಲಿ ನಡೆದ ವಿಶಿಷ್ಟ ‘ಸ್ಯಾಂಪಲ್ಸ್ ಡಿಸ್ಪ್ಲೇ’ ಕಾರ್ಯಕ್ರಮದಲ್ಲಿ, ಕವನಶ್ರೀ ಅವರು ಮದರ್ ಇಂಡಿಯಾಸ್ ಕ್ರೋಶೆಕ್ವೀನ್ಸ್ ವಿಭಾಗದಲ್ಲಿ 1,00,581 ಕ್ರೋಶೆ ಸ್ಕ್ವೇರ್ ಸ್ಯಾಂಪಲ್‌ಗಳನ್ನು ತಯಾರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿ, ಗಿನ್ನೆಸ್…

Read More