Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನವರಿಗೆ ಹೊಂಬುಜ ಮಠದಿಂದ “ಸಮಾಜಭೂಷಣ” ಗೌರವ – 75 ನೇ ಜನ್ಮದಿನಾಚರಣೆಗೆ ಶುಭ ಹಾರೈಕೆ

ಹೊಂಬುಜ : ಹಿರಿಯ ರಾಜಕಾರಣಿ, ಶಿವಮೊಗ್ಗ ನಗರದ ಜನಪ್ರೀಯ ಮಾಜಿ ಶಾಸಕರು ಹಾಗೂ ಕರ್ನಾಟಕ ಘನ ಸರ್ಕಾರದ ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪರವರಿಗೆ 75ನೇ ಜನ್ಮ ದಿನಾಚರಣೆಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಹೊಂಬುಜ ಜೈನ ಮಠದ ಪೀಠಾಧಿಕಾರಿಗಳಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಇವರ ಸೇವೆಗಾಗಿ ಅಭಿನಂದಿಸಿ, “ಸಮಾಜಭೂಷಣ” ಉಪಾಧಿಯನ್ನು ನೀಡಿ ಗೌರವಿಸಿ, ಶ್ರೀಕ್ಷೇತ್ರ ಹೊಂಬುಜದ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ಅನುಗ್ರಹ ಸದಾ…

Read More

ಹುಂಚದಕಟ್ಟೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ರವಾನೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಗ್ರಾಮದಲ್ಲಿ ನಡೆದಿದೆ. ಕೊಪ್ಪದಿಂದ ಸಾಗರಕ್ಕೆ ತೆರಳುತಿದ್ದ ಟಿವಿಎಸ್ ಜುಪಿಟರ್ ಸ್ಕೂಟಿ ಹಾಗೂ ಗರ್ತಿಕೆರೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಬಜಾಜ್ CT 100 ಬೈಕ್ ನಡುವೆ ಹುಂಚದಕಟ್ಟೆ ಸರ್ಕಲ್ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಸಾಗರ ನಿವಾಸಿ ಶ್ರೀನಿವಾಸ್(61) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಕೈ ಮತ್ತು ಕಾಲು‌ ಮುರಿತವಾಗಿದೆ.ಮತ್ತೊಂದು ಬೈಕ್ ನಲ್ಲಿದ್ದ ಗರ್ತಿಕೆರೆ ಮೂಲದ ಅಭಿ(23)…

Read More

ಹುಂಚ : ಹೃದಯಾಘಾತದಿಂದ ಜಮೀನ್ದಾರ ಟೀಕನಾಯ್ಕ ನಿಧನ|humcha

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾ.ಪಂ ವ್ಯಾಪ್ತಿಯ ಸುಣಕಲ್ಲು ಗ್ರಾಮದ ಜಮೀನ್ದಾರ ಎಸ್.ಬಿ. ಟೀಕನಾಯ್ಕ (73) ರಾತ್ರಿ 12:05 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಸಂಜೆ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ತಿಳಿದುಬಂದಿದೆ.

Read More

ರೈಲ್ವೆ ಟ್ರ್ಯಾಕ್ ನಲ್ಲಿ ವ್ಯಕ್ತಿಯ ಶವ ಪತ್ತೆ – ಆತ್ಮಹತ್ಯೆ ಶಂಕೆ|smg

ಶಿವಮೊಗ್ಗ ನಗರದ ಪಶು ವೈದ್ಯಕೀಯ ಕಾಲೇಜಿನ ಬಳಿಯ ರೈಲ್ವೆ ಟ್ರ್ಯಾಕ್ ನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.  ಮೃತರನ್ನು ಗುರುರಾಜ್ ಎಂದು ಗುರುತಿಸಲಾಗಿದೆ. ಶಿವಮೊಗ್ಗ ನಗರದ ಶುಭ ಮಂಗಳ ಕಲ್ಯಾಣ ಮಂದಿರದ ಎದುರಿನ ತಿರುವಿನ ನಿವಾಸಿಯಾಗಿದ್ದ ಗುರುರಾಜ್  ಎಪಿಎಂಸಿ ಯಾರ್ಡ್ ಗೆ ಹೋಗಿ ತರಕಾರಿ ತರುವುದಾಗಿ ಗುರುವಾರ ಬೆಳಗ್ಗಿನ ಜಾವ ಮನೆ ಬಿಟ್ಟು ಹೋಗಿದ್ದರು ಆದರೆ ಗುರುರಾಜ್ ನ ಮೃತ ದೇಹ ವೆಟನರಿ ಕಾಲೇಜು ಬಳಿಯ ರೈಲ್ವೆ ಟ್ರ್ಯಾಕ್ ಬಳಿ ಪತ್ತೆಯಾಗಿದೆ. ಗುರುರಾಜ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು…

Read More

ಆಟೋಗೆ ಹಿಂಬದಿಯಿಂದ ಬೊಲೆರೋ ಜೀಪ್ ಡಿಕ್ಕಿ- ಐವರ ಕಾಲು ಮುರಿತ|ಆಸ್ಪತ್ರೆಗೆ ಸಂಸದ ಬಿವೈ ಆರ್ ದೌಡು|accident

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಜಕ್ಕನಹಳ್ಳಿ ಗ್ರಾಮದ ಬಳಿ ಅಪಘಾತ ಒಂದು ಸಂಭವಿಸಿದ್ದು ಐದಕ್ಕೂ ಹೆಚ್ಚು ಜನರಿಗೆ ಕಾಲು ಮುರಿದಿದೆ ಎಂದು ಮಾಹಿತಿ ತಿಳಿದು ಬಂದಿದೆ. ಜಕ್ಕನಹಳ್ಳಿ ಗ್ರಾಮದ ಬಳಿ ಅಪೇ ಆಟೋ ಲಾಗೇಜು ಗಾಡಿಯಲ್ಲಿ ಕಾಲು ಮುಂದೆ ಮಾಡಿಕೊಂಡು ಒಂದಿಷ್ಟು ಜನರು ಪ್ರಯಾಣಿಸುತ್ತಿದ್ದು ಹಿಂಬಂದಿಯಿಂದ ಬಂದ ಬೊಲೆರೋ ಗಾಡಿ ಗುದಿದ್ದ ಪರಿಣಾಮ 5-6 ಜನರಿಗೆ ತೀವ್ರ ಗಾಯವಾಗಿದ್ದು ಕಾಲುಗಳು ಮುರಿದು ಹೋಗಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗಳು ಆಗಿದ್ದು ಗಾಯಳುಗಳನ್ನು ಶಿವಮೊಗ್ಗಕ್ಕೆ…

Read More

ರಿಪ್ಪನ್‌ಪೇಟೆ – ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿ ವಶಕ್ಕೆ|illegal mining

ರಿಪ್ಪನ್‌ಪೇಟೆ : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿಯನ್ನು ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಖಚಿತ ಮಾಹಿತಿ ದೊರೆತ ಹಿನ್ನಲೆಯಲ್ಲಿ ಬುಧವಾರ ಬೆಳಿಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮ ಮರಳು ಸಾಗಿಸುತಿದ್ದ ಒಂದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅರಸಾಳು ಗ್ರಾಮದ ಬಳಿ ಅಕ್ರಮವಾಗಿ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಇಂದು ಬೆಳಿಗ್ಗೆ ಹೊಸನಗರ – ಶಿವಮೊಗ್ಗ ರಸ್ತೆಯಲ್ಲಿ ಗಸ್ತು ತಿರುಗುತಿದ್ದಾಗ ಅದೇ…

Read More

ನಿರ್ಮಲ ಗ್ರಾಮ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಅನೈರ್ಮಲ್ಯದತ್ತ…??? ಎಲ್ಲೆಂದರಲ್ಲಿ ಕಸ ಹರಡಿಕೊಂಡು ದುರ್ನಾತ ಬೀರುತ್ತಿರುವ ತ್ಯಾಜ್ಯ ವಿಲೇವಾರಿ ಘಟಕ……!

ಕಸ ವಿಲೇವಾರಿ, ಸ್ವಚ್ಛತೆ ಹಾಗೂ ನೈರ್ಮಲ್ಯ ವಿಷಯದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿರುವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿಗೆ ಅನೈರ್ಮಲ್ಯದ ಸೋಂಕು ಮೆತ್ತಿಕೊಂಡಿದೆ. ಹೌದು ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ಹಳೆಯ ಕಸ ವಿಲೇವಾರಿ ಘಟಕದಲ್ಲಿರುವ ತ್ಯಾಜ್ಯಗಳನ್ನು ನೋಡಿದರೆ ಹಾಗನಿಸದೇ ಇರದು. 2022 ರಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗಾಗಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಹೊಸನಗರ ರಸ್ತೆಯ ಗವಟೂರು ಹೊಳೆಯ ಸಮೀಪದಲ್ಲಿ ರಾಜ್ಯಕ್ಕೆ ಮಾದರಿಯಾಗುವ ಘನತ್ಯಾಜ್ಯ ಸಂಪನ್ಮೂಲ ಸಂಸ್ಕರಣ ಮತ್ತು ನಿರ್ವಹಣಾ ಘಟಕ ಸ್ಥಾಪನೆ ಮಾಡಲಾಯಿತು.ಪ್ರಸ್ತುತ ಅಲ್ಲಿಯೇ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಾನ್ಲೆ ಕ್ರಾಸ್ ಬಳಿಯಲ್ಲಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದಾರೆ.  ತಾಳಗುಪ್ಪ-ಸಾಗರ ರಸ್ತೆ ನಡುವಲ್ಲಿ ನಿನ್ನೆ ಸಂಜೆ  06:50 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಎರಡು ಬೈಕ್​ಗಳು ಪರಸ್ಪರ ಡಿಕ್ಕಿಯಾಗಿದ್ದು, ಶಿರಸಿ ಮೂಲದ ಮಣಿ ಎಂಬ ಯುವಕ ಸಾವನ್ನಪ್ಪಿದ್ದಾನೆ.  ಘಟನೆಯಲ್ಲಿ ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ಧಾನೆ. ಆತನನ್ನು ಸಹ ಶಿರಸಿ ಮೂಲದ ಮಂಜುನಾಥ್​ ಎನ್ನಲಾಗಿದ್ದು, ಆತನನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಬ್ಬ ಬೈಕ ಸವಾರನಿಗೂ ಗಾಯಗಳಾಗಿದ್ದು,…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಎರಡು ದಿನ ( ಜೂ.08 ಮತ್ತು 09 ರಂದು) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ..|mescom

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 08/06/23 ಮತ್ತು 09/06/2023 ರಂದು ಬೆಳಿಗ್ಗೆ 9-00 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಜ. 23 ಮತ್ತು 24 ರಂದು ಬೃಹತ್ ಕಾಮಗಾರಿ ವಿಭಾಗ ಕವಿಪ್ರನಿನಿ ಶಿವಮೊಗ್ಗ ಇವರು 110 ಕೆವಿ ಎಸ್ಎಸ್ 2 ಮಾರ್ಗವನ್ನು ಕುಂಸಿ ವಿವಿ ಕೇಂದ್ರದ ಹತ್ತಿರ ಕಾಮಗಾರಿ ನಡೆಸಲು 110 ಕೆವಿ ಎಸ್ಎಸ್ 1 ಮತ್ತು 110 ಕೆವಿ ಎಸ್ಎಸ್ 2 ಮಾರ್ಗದ ಮಾರ್ಗ ಮುಕ್ತತೆ…

Read More

ಹೊಸನಗರ – ತೀರ್ಥಹಳ್ಳಿ ತಾಲ್ಲೂಕಿನ ಮಹಿಳೆಯರಿಗಿಲ್ಲ ಕಾಂಗ್ರೆಸ್ ಪಕ್ಷದ ಒಂದು ಗ್ಯಾರೆಂಟಿ| ಉಚಿತವಾಗಿ ಓಡಾಡಲು ಇಲ್ಲಿ ಸರ್ಕಾರಿ ಬಸ್ಸುಗಳೇ ಇಲ್ಲಾ|congress guaranty

ಹೊಸನಗರ – ತೀರ್ಥಹಳ್ಳಿ ತಾಲ್ಲೂಕಿನ ಮಹಿಳೆಯರಿಗಿಲ್ಲ ಕಾಂಗ್ರೆಸ್ ಪಕ್ಷದ ಒಂದು ಗ್ಯಾರೆಂಟಿ ರಿಪ್ಪನಪೇಟೆ : ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆಯಡಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಪಕ್ಷ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹೊಸನಗರ ತಾಲ್ಲೂಕಿನ ಮಹಿಳೆಯರಿಗೆ ಪ್ರೀ ಭಾಗ್ಯ ಯೋಜನೆಯ ಸೌಲಭ್ಯದಿಂದ ವಂಚಿತರನ್ನಾಗಿಸಿದೆ…………! ಶಿವಮೊಗ್ಗ-ತೀರ್ಥಹಳ್ಳಿ-ಹೊಸನಗರ- ಕುಂದಾಪುರ ಮಂಗಳೂರು-ಉಡುಪಿ ರಾಜ್ಯ ಹೆದ್ದಾರಿ ಸಂಪರ್ಕದ ಹಲವು ತಾಲ್ಲೂಕಿನ ಖಾಸಗಿ ಬಸ್‌ಗಳಿಂದಾಗಿ ಸರ್ಕಾರದ ಕೆಂಪು ಬಸ್ ಇಲ್ಲದೆ ರೈತ ಮಹಿಳೆಯರ ಮೂಗಿಗೆ ತುಪ್ಪಾ ಸವರಿದಂತಾಗಿ ಮಹಿಳೆಯರು…

Read More