Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ : ನಾಪತ್ತೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ|missing

ರಿಪ್ಪನ್‌ಪೇಟೆ : ಕಳೆದ ಏಳು ದಿನಗಳ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಕೃಷಿಕ ವೀರಪ್ಪ(62) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕಳೆದ ಏಳು ದಿನಗಳಿಂದ ಕಾಣೆಯಾಗಿದ್ದ ವೀರಪ್ಪ ರವರನ್ನು ಕುಟುಂಬಸ್ಥರು ಎಲಾ ಕಡೆ ಹುಡುಕಾಡಿದ್ದಾರೆ ನಂತರ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ಕೂಡಾ ದಾಖಲಿಸಿದ್ದರು. ಇಂದು ವೀರಪ್ಪ ರವರ ಮನೆ ಹಿಂಭಾಗ ದಟ್ಟ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ…

Read More

ರಿಪ್ಪನ್‌ಪೇಟೆ : ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿ ವಶಕ್ಕೆ|Illegal quarrying

ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿ ವಶಕ್ಕೆ ರಿಪ್ಪನ್‌ಪೇಟೆ : ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ. ಹೊಸನಗರ ಮತ್ತು ರಿಪ್ಪನ್‌ಪೇಟೆ ರಾಜ್ಯ ಹೆದ್ದಾರಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತಿದ್ದಾಗ ಚಿಕ್ಕಜೇನಿ ಸಮೀಪದಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಲಾರಿಯನ್ನು ಹೆಚ್ಚಿನ ತನಿಖೆಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Read More

ಎರಡು ಕಾರುಗಳ ನಡುವೆ ಅಪಘಾತ – ದುಬಾರಿ ಕಾರುಗಳು ಜಖಂ|Accident

ತೀರ್ಥಹಳ್ಳಿ : ಮುಂದೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದ ಘಟನೆ ಸಕ್ರೆಬೈಲ್​ ಬಳಿಯಲ್ಲಿ ನಡೆದಿದೆ.  ಶಿವಮೊಗ್ಗ-ತೀರ್ಥಹಳ್ಳಿ ಹೆದ್ಧಾರಿಯಲ್ಲಿ ನಡೆದ ಘಟನೆಯಲ್ಲಿ, ಯಾರಿಗೂ ಅಪಾಯ ಸಂಭವಿಸಿಲ್ಲ. ಫೋರ್ಡ್​ ಇಕೋ ಹಾಗೂ ಕಿಯಾ ಕಾರು  ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಆದರೆ ಡಿಕ್ಕಿಯಾದ ರಭಸಕ್ಕೆ ಎರಡು ಕಾರುಗಳ ಒಂದೊಂದು ಬದಿಗೆ ಹೋಗಿ ನಿಂತಿವೆ.  ಘಟನೆ ಬೆನ್ನಲ್ಲೆ ಸ್ಥಳೀಯರು ಬಂದು ಕಾರಿನಲ್ಲಿದ್ದವರಿಗೆ ಆರೈಕೆ ಮಾಡಿದ್ಧಾರೆ.

Read More

ಸಲೂನ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ – 6 ಯುವತಿಯರ ರಕ್ಷಣೆ, ದಂಪತಿ ಬಂಧನ

ಶಿವಮೊಗ್ಗ : ಸಲೂನ್ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಸಲೂನ್ ಮಾಲೀಕರನ್ನು ಬಂಧಿಸಿ, 6 ಜನ ಮಹಿಳೆಯರನ್ನು ಮಹಿಳಾ ಪೊಲೀಸರು ರಕ್ಷಿಸಿ, ದಂಧೆ ನಡೆಸುತ್ತಿದ್ದ ಆರೋಪಿ ದಂಪತಿಯನ್ನು ಬಂಧಿಸಲಾಗಿದೆ. ನಗರದ ಕುವೆಂಪು ರಸ್ತೆಯ ಸಾಯಿ ಆರ್ಕೇಡ್ ಕಟ್ಟಡದ ರಾಯಲ್ ಆರ್ಚ್ ಫ್ಯಾಮಿಲಿ ಸಲೂನ್ ಮತ್ತು ಸ್ಪಾನಲ್ಲಿ ಸ್ಪಾ ಹೆಸರಿನಲ್ಲಿ ಮಹಿಳೆಯನ್ನು ಇಟ್ಟುಕೊಂಡು ದಂಧೆ ನಡೆಸುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಮಹಿಳಾ ಪೊಲೀಸರು ದಾಳಿ‌ ನಡೆಸಿದ್ದಾರೆ. ದಾಳಿಯ ವೇಳೆ ಸ್ಪಾ ನಲ್ಲಿ 6 ಜನ ಯುವತಿಯರನ್ನು…

Read More

ರಿಪ್ಪನ್‌ಪೇಟೆ : ವಿರೋದದ ನಡುವೆಯೂ ರಾತ್ರೋರಾತ್ರಿ ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಹುನ್ನಾರ|BAR

ರಿಪ್ಪನ್‌ಪೇಟೆ : ವಿರೋದದ ನಡುವೆಯೂ ರಾತ್ರೋರಾತ್ರಿ ಜುಮ್ಮಾ ಮಸೀದಿ‌ ಮುಂಭಾಗದಲ್ಲಿ ಬಾರ್ ತೆರೆಯಲು ಹುನ್ನಾರ ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮೊಹಿಯುದ್ದೀನ್ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಲಾಡ್ಜ್ ವೊಂದರಲ್ಲಿ ವಿರೋಧದ ನಡುವೆಯೂ ಬಾರ್ ತೆರೆಯಲು ಹುನ್ನಾರ ನಡೆಸಿದ್ದಾರೆ ಎನ್ನಲಾಗುತ್ತಿದೆ. ಜನವರಿ 30 ರಂದು ಜಿಲ್ಲಾ ಅಬಕಾರಿ ಜಿಲ್ಲಾಧಿಕಾರಿಗಳು ಏಕಾಏಕಿ ಮದ್ಯದಂಗಡಿಗೆ ಪರವಾನಿಗೆ ನೀಡುವ ಹುನ್ನಾರದಲ್ಲಿ ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಜುಮ್ಮಾ ಮಸೀದಿಗೂ ರಾಯಲ್ ಕಂಫರ್ಟ್ ಕಟ್ಟಡಕ್ಕೂ ಕೇವಲ 60 ಮೀಟರ್ ಅಂತರದಲ್ಲಿದ್ದರೂ ಅಬಕಾರಿ…

Read More

ಸ್ನೇಹಿತನೊಂದಿಗೆ ನದಿಯಲ್ಲಿ ಈಜಲು ತೆರಳಿದ್ದ ಬಾಲಕ ಸಾವು|Death by drowning

ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರುಪಾಲದ ಘಟನೆ ಇಂದು ಸಂಜೆ ವೇಳೆ ನೆಡೆದಿದೆ. ಪಟ್ಟಣದ ಛತ್ರಕೇರಿ ಹತ್ತಿರದ ಜಯಲಕ್ಷ್ಮಿ ಸಾಮಿಲ್ ಬಳಿ ನದಿಯಲ್ಲಿ ಈಜಲು ಹೋಗಿದ್ದ ಅಶ್ವಥ್ (16 ವರ್ಷ) ಸಾವನ್ನಪ್ಪಿದ್ದಾನೆ. ತನ್ನ ಸ್ನೇಹಿತನ ಜೊತೆ ಸಂಜೆ ವೇಳೆ ಈಜಲು ತೆರಳಿದಾಗ ಈ ಘಟನೆ ಜರುಗಿದೆ. ಅಗ್ನಿಶಾಮಕದಳ ಹಾಗೂ ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಹೊರತೆಗೆಯಲಾಗಿದೆ.  ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

Read More

ನಾಳೆ ನೂತನ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಂದ ಮೊದಲ ಪ್ರಗತಿ ಪರಿಶೀಲನಾ ಸಭೆ|Beluru

ಸಾಗರ-ಹೊಸನಗರ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾಗಿರುವ ಗೋಪಾಲಕೃಷ್ಣ ಬೇಳೂರು ರವರ ನೇತೃತ್ವದಲ್ಲಿ ನಾಳೆ(ಗುರುವಾರ) ತಾಲ್ಲೂಕಿನ ತಮ್ಮ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ. ಈ ಬಗ್ಗೆ ಸಾಗರ ತಾಲೂಕು ಪಂಚಾಯತ್ ಕಾರ್ಯಾಲಯ ಪತ್ರಿಕಾ ಪ್ರಕಟಣೆ ಹೊರಡಿಸಿದೆ.ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಸಾಗರದ ಬಿಹೆಚ್ ರಸ್ತೆಯಲ್ಲಿರುವ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರವರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ತಮ್ಮ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಮೊದಲ ಪ್ರಗತಿ ಪರಿಶೀಲನಾ…

Read More

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆರ್ ಎಂ ಮಂಜುನಾಥ್ ಗೌಡ|RMM

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಮುಂದುವರಿಯುವಂತೆ ರಾಜ್ಯ ರಿಜಿಸ್ಟರ್ ಕೋರ್ಟ್ ಹೈ ಕೋರ್ಟ್ ಅದೇಶಿಸಿದೆ.  ಈ ಮೂಲಕ ಸಹಕಾರಿ ನಾಯಕ ಆರ್. ಎಂ. ಮಂಜುನಾಥ ಗೌಡ ಮತ್ತೆ ನಿರ್ದೇಶಕರಾಗಿ ಮುಂದುವರಿಯಲಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ಅನರ್ಹತೆ ಅನ್ಯಾಯ ವಿರುದ್ಧ ಕಾನೂನು ಹೋರಾಟ ಮುಂದುವರಿಸಿದ್ದ ಮಂಜುನಾಥ ಗೌಡರಿಗೆ ಇದೀಗ ನ್ಯಾಯ ಸಿಕ್ಕಿದೆ.  2020ರಲ್ಲಿ ಚುನಾವಣೆ ನಡೆದು 2025ರವರೆಗೆ ಸೇವಾ ಅವಧಿ ಇತ್ತು. ರಾಜಕೀಯ ದುರುದ್ದೇಶದಿಂದ ಮಾಡಿರುವ ಅನ್ಯಾಯಕ್ಕೆ ಈಗ ಜಯ ಸಿಕ್ಕಿದೆ.ಮುಂದೆ ಕೋರ್ಟ್ ಆದೇಶದಂತೆ ಸೇವೆ ಸಲ್ಲಿಸುತ್ತೇನೆ. ಸಹಕಾರ…

Read More

ಮಲಗಿದ್ದಾಗ ಹಾವು ಕಚ್ಚಿದೆ ಎಂದರು ಎಚ್ಚೆತ್ತುಕೊಳ್ಳದ ಪೋಷಕರು – ಪಿಯುಸಿ ವಿದ್ಯಾರ್ಥಿನಿ ಸಾವು|Snake bite

ಸೊರಬ : ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮಲಗಿದ್ದಾಗ ದಿಡೀರನೇ ಎದ್ದು ಕೂತು ನನಗೆ ಹಾವು ಕಚ್ಚಿದೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಆದರೆ, ಕರೆಂಟ್‌ ಹಾಕಿ ನೋಡಿದಾಗ ಹಾವು ಕಾಣದ ಹಿನ್ನೆಲೆಯಲ್ಲಿ ಮನೆಯವರು ಆಸ್ಪತ್ರೆಗೆ ಕರೆದೊಯ್ಯದೇ ಬೈದು ಮಲಗಿದ್ದರು. ಆದರೆ, ಬೆಳಗ್ಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ವಿಷ ದೇಹದ ತುಂಬಾ ಹರಡಿಕೊಂಡು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಇನ್ನು ಮೃತ ಯುವತಿಯನ್ನು ಅಕ್ಷತಾ ( 17) ಎಂದು ಗುರುತಿಸಲಾಗಿದೆ. ಸೊರಬ ತಾಲೂಕಿನ ಆನವಟ್ಟಿ ಹೋಬಳಿಯ…

Read More

ಸಹೋದರಿಯರ ಮಕ್ಕಳ ಜೊತೆ ಯುವಕ ನೀರುಪಾಲು|Water disaster

ಈಜಲು ನೀರಿಗಿಳಿದಿದ್ದ ವೇಳೆ ಭದ್ರಾ ಚಾನಲ್​ನಲ್ಲಿ ಕೊಚ್ಚಿಕೊಂಡು ಹೋಗಿದ್ದ ಮೂವರ ಪೈಕಿ ಇಬ್ಬರ ಶವ ಪತ್ತೆಯಾಗಿದೆ. ಬೆಳಗ್ಗೆ ಅನನ್ಯ ಎಂಬಾಕೆಯ ಶವ ಪತ್ತೆಯಾಗಿತ್ತು.ಬಳಿಕ ರವಿ ಎಂಬವರ ಶವ ಪತ್ತೆಯಾಗಿದೆ.  ನೀರಿನಲ್ಲಿ ಆಟವಾಡುವಾಗ ಕಾಲು ಜಾರಿ ಲಕ್ಕವಳ್ಳಿ ಡ್ಯಾಮ್ ಸಮೀಪದ ಭದ್ರಾ ಕಾಲುವೆಯಲ್ಲಿ ಮೂವರು ಕೊಚ್ಚಿಕೊಂಡು ಹೋಗಿದ್ಧರು.  ಮೃತರನ್ನು ಲಕ್ಕವಳ್ಳಿ ಮೂಲದ ರವಿ (31), ಶಿವಮೊಗ್ಗ ಮೂಲದ ಹದಿನಾರು ವರ್ಷದ ಅನನ್ಯ ಹಾಗೂ ಚಾಮರಾಜನಗರ ಜಿಲ್ಲೆ, ನಂಜನಗೂಡು ಮೂಲದ 19 ವರ್ಷದ ಶಾಮವೇಣಿ ಎಂದು ಗುರುತಿಸಲಾಗಿದೆ.  ಮೃತ ಶಾಮವೇಣಿ…

Read More