Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಹೊಸನಗರ : ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ|Accident

ಮಂಗಳೂರಿನಿಂದ ಶಿವಮೊಗ್ಗದತ್ತ ಹೊರಟಿದ್ದ ಪೆಟ್ರೋಲ್‌ ಟ್ಯಾಂಕರ್‌ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರು ನಗರದಲ್ಲಿ ಇಂದು ಸಂಜೆ ನಡೆದಿದೆ. ಬಿದನೂರು ನಗರದ ಶಾಂತಿಕೆರೆ ಸರ್ಕಲ್ ನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿಯಾಗಿದ್ದು ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸುಮಾರು ಒಂದೂವರೆ ಗಂಟೆಗೂ ಹೆಚ್ಚು ಕಾಲ ಹೊಸನಗರ – ನಗರ ರಸ್ತೆ ಸಂಚಾರ ವ್ಯತ್ಯಯವಾಗಿದ್ದು,  ಸಾವಿರಾರು ಲೀಟರ್ ಪೆಟ್ರೋಲ್ ಸೋರಿಕೆಯಾಗಿದ್ದ ಹಿನ್ನಲೆಯಲ್ಲಿ ನಗರ ಪೊಲೀಸ್…

Read More

ರಿಪ್ಪನ್‌ಪೇಟೆ : ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಸಮಾಲೋಚನೆ|BJP

ರಿಪ್ಪನ್‌ಪೇಟೆ : ಇತ್ತೀಚೆಗೆ ನಡೆದ ವಿಧಾನಸಭಾ ಸಾವತ್ರಿಕ ಚುನಾವಣೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಕಷ್ಟು ಆಭಿವೃದ್ದಿ ಕಾಮಗಾರಿಗಳು ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಅನುಷ್ಟಾನಗೊಳಿಸಲಾಗಿದ್ದರೂ ಕೂಡಾ ಕ್ಷೇತ್ರದಲ್ಲಿ ಪಕ್ಷದ ಹಿನ್ನಡೆಗೆ ಕಾರಣವೇನು ಎಂಬುದರ ಕುರಿತು ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಪರಾಮರ್ಶೆ ನಡೆಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಪಕ್ಷದ ಕಛೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನೆಡಸಿ ಮುಂದಿನ ಜಿಲ್ಲಾ ತಾಲ್ಲೂಕ್ ಪಂಚಾಯ್ತಿ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಪಕ್ಷದ ಸಂಘಟನೆ ಹಾಗೂ ಅಕಾಂಕ್ಷಿಗಳ ಕುರಿತು ಸುದೀರ್ಘವಾಗಿ ಚರ್ಚೆ…

Read More

ಚಾಲಕನಿಗೆ ನಿದ್ರೆ ಮಂಪರು – ಕಾರು ಪಲ್ಟಿ|Accident

ನಿದ್ದೆ ಮಂಪರಿನಲ್ಲಿದ್ದ ಚಾಲಕ – ತಳುವೆ ಬಳಿ ಕಾರು ಪಲ್ಟಿ ! ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಳುವೆಯ ಶಾಲೆಯ ಸಮೀಪ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಪಲ್ಟಿ ಹೊಡೆದಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ತೀರ್ಥಹಳ್ಳಿಯಿಂದ ಕೊಪ್ಪಕ್ಕೆ ಹೋಗುತ್ತಿದ್ದ  ಕಾರಿನಲ್ಲಿ ಚಾಲಕ ಮಾತ್ರ ಇದ್ದ ಎನ್ನಲಾಗುತ್ತಿದ್ದು  ಆತನನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದು ಇದರಿಂದ ಹಾಗಾಗಿ ಯಾವುದೇ ರೀತಿ…

Read More

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು- ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಅಳಲು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ.!HOSPITAL

ಸಮಯಕ್ಕೆ ಸರಿಯಾಗಿ ಹಾಜರಾಗದ ವೈದ್ಯರು ಟಿಟಿ ಚುಚ್ಚುಮದ್ದಿಲ್ಲದೇ ರೋಗಿಗಳ ಕೂಗು ಕೇಳೋರಿಲ್ಲದತಾಂಗಿರುವ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಥೆ………….! ರಿಪ್ಪನ್‌ಪೇಟೆ;- ಜಾನುವಾರು ಹೊಡೆಯಲು ಹೋಗಿ ಅಕಸ್ಮಿಕವಾಗಿ ಬಿದ್ದು ಕಾಲು ಮುರಿದುಕೊಂಡ ಯುವತಿಯ ನೆರಳಾಟ ನಾಯಿ ಕಚ್ಚದ ಮಹಿಳೆಗೆ ಟಿಟಿ ಚುಚ್ಚುಮದ್ದಿಲ್ಲದೇ ಇರುವುದು ಇನ್ನೂ ವೈದ್ಯಾಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳು ಸಮಯಕ್ಕೆ ಸರಿಯಾಗಿ ಹಾಜರಾಗದೇ ಇರುವುದರಿಂದ ರೋಗಿಗಳ ನರಳಾಟ ಕೇಳೋರಿಲ್ಲದಂತಾಗಿರುವುದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆ ನೀಡುವರ‍್ಯಾರು ಎನ್ನುವಂತಾಗಿದೆ. ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಇಲ್ಲಿನ ಅಸ್ಪತ್ರೆಗೆ…

Read More

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ|accident

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ  ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಲಿನಕುರುವಳ್ಳಿಯಲ್ಲಿ ನಡೆದಿದೆ. ಮೂಡಿಗೆರೆಯಿಂದ ತೀರ್ಥಹಳ್ಳಿಗೆ ಬರುತ್ತಿದ್ದ ಕಾರು ಮೇಲಿನಕುರುವಳ್ಳಿ ಸಮೀಪದ ತೀರಳೆಬೈಲು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕನೊಬ್ಬನೆ ಪ್ರಯಾಣಿಸುತಿದ್ದು ನಿದ್ದೆ ಮಂಪರಿನಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗುತಿದೆ.ತಕ್ಷಣವೇ ಸ್ಥಳೀಯರು ಚಾಲಕನನ್ನು ಕಾರಿನಿಂದ ಹೊರ ತೆಗೆದಿದ್ದಾರೆ. ಚಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಮತ್ತೆ ಮುನ್ನೆಲೆಗೆ ಬಂದ ಹೊಸನಗರ ವಿಧಾನಸಭಾ ಕ್ಷೇತ್ರ ಹೋರಾಟದ ಕೂಗು|Hosanagara

ಹೊಸನಗರ : ಕ್ಷೇತ್ರ ಪುನರ್‌ವಿಂಗಡಣೆ ನಂತರ ಅಸ್ತಿತ್ವ ಕಳೆದುಕೊಂಡಿರುವ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮತ್ತೆ ಪಡೆಯುವ ಹೋರಾಟಕ್ಕೆ ಮತ್ತೆ ಚಾಲನೆ ದೊರೆತಿದೆ. ತಾಲೂಕಿನ ಸಮಾನ ಮನಸ್ಕ ಯುವಕರ ಗುಂಪು ಈ ಹೋರಾಟಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಚಾಲನೆ ನೀಡಿದ್ದಾರೆ.ಈ ಹೋರಾಟಕ್ಕೆ ತಾಲೂಕಿನ ಜನತೆ ಅಭೂತಪೂರ್ವ ಸ್ಪಂದನೆ ನೀಡುವ ಮೂಲಕ ರಾಜ್ಯಕ್ಕೆ ಬೆಳಕು ನೀಡಿ ಕತ್ತಲಲ್ಲಿರುವ ಹೊಸನಗರ ಅಭಿವೃದ್ಧಿಗೆ ಕ್ಷೇತ್ರವೊಂದೇ ಪರಿಹಾರವೆಂದು ಹೋರಾಟ ನಡೆಸಲು ಯುವ ತಂಡಕ್ಕೆ ಸ್ಪೂರ್ತಿ ನೀಡಿದ್ದಾರೆ. ವಿಧಾನಸಭಾ ಕ್ಷೇತ್ರ ಕಳೆದುಕೊಂಡಾಗಿನಿಂದ ಹೊಸನಗರ ಕೇವಲ ತಾಲೂಕಾಗಿ ಉಳಿದುಕೊಂಡಿದೆ….

Read More

ನಗರ : ಇತಿಹಾಸ ಪ್ರಸಿದ್ಧ ದರ್ಗಾ ಉರೂಸ್ ಗೆ ಚಾಲನೆ|Nagara

ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಅಕ್ಬರ್ ಅನ್ವರ್ ಮಾಷೂಂಷಾ ವಲಿಯುಲ್ಲಾ ದರ್ಗಾ ಇದರ ಉರೂಸ್‌ಗೆ ಚಾಲನೆ ನೀಡಲಾಗಿದೆ. ಸರ್ವ ಧರ್ಮಿಯರ ಪವಿತ್ರ ಕ್ಷೇತ್ರ ಬಿದನೂರು ನಗರ ದರ್ಗ ರಾಜ್ಯದ ಪ್ರಮುಖ ಪವಾಡ ಕ್ಷೇತ್ರಗಳ ಸಾಲಿನಲ್ಲಿ ಸೇರಿಕೊಂಡಿದ್ದು ಹಝರತ್ ಶೈಖುಲ್ ಇಕ್ಟರ್‌ ಅನ್ವರ್‌ ಮಾಸುಂಷಾ ವಯುಲ್ಲಾಹಿರವರ 49ನೇ ಉರೂಸ್ ಸಮಾರಂಭವನ್ನು ವಿಶೇಷ ವಾಗಿ ಆಚರಿಸಲಾಗುತ್ತದೆ ಎಂದು ದರ್ಗಾ ಕಮಿಟಿ ಉಪಾಧ್ಯಕ್ಷ ಆರ್ ಎ ಚಾಬುಸಾಬ್ ತಿಳಿಸಿದ್ದಾರೆ. ಇದೇ ಸಂಧರ್ಭದಲ್ಲಿ ದರ್ಗಾ ಕಮಿಟಿಯ…

Read More

ನೂತನ ಸರ್ಕಾರದ ಪದಗ್ರಹಣ – ಗ್ಯಾರಂಟಿ ಕಾರ್ಡ್ ಯೋಜನೆಗೆ ಸಂಪುಟ ಸಭೆಯ ತಾತ್ವಿಕ ಒಪ್ಪಿಗೆ ಹಿನ್ನಲೆಯಲ್ಲಿ ಸಂಭ್ರಮಾಚರಣೆ|congress

ರಿಪ್ಪನ್‌ಪೇಟೆ : ನೂತನ ಕಾಂಗ್ರೆಸ್ ಸರ್ಕಾರದ ಪದಗ್ರಹಣ ಹಾಗೂ ಮುಖ್ಯಮಂತ್ರಿಯಾಗಿ ಎಸ್. ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮತ್ತು ಗ್ಯಾರಂಟಿ ಕಾರ್ಡ್ ಯೋಜನೆಗೆ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ನೂತನ ಸರ್ಕಾರ ಅಸ್ತಿತ್ವಕ್ಕೆ ಹಾಗೂ ಗ್ಯಾರಂಟಿ ಕಾರ್ಡ್ ಯೋಜನೆಗಳಿಗೆ ನೂತನ ಸಂಪುಟ ತಾತ್ವಿಕ ಒಪ್ಪಿಗೆ ನೀಡಿರುವ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ…

Read More

ಅಕ್ರಮ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ|encroachment

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸರ್ವೆ ನಂಬರ್ 85 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 2.5 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಲಾಯಿತು. ಮಳವಳ್ಳಿ ಗ್ರಾಮದ ಶ್ರೀಧರ ಬಿನ್ ತಿಮ್ಮನಾಯ್ಕ ಸರ್ವೆ ನಂ 85 ರಲ್ಲಿ ಸುಮಾರು ಎರಡೂವರೆ ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿ ಅಡಿಕೆ ಸಸಿಗಳನ್ನು ನೆಡಲು ತಯಾರಿ ನಡೆಸಿದ್ದರು. ಇಂದು ಕೆರೆಹಳ್ಳಿ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್ ರವರ ನೇತೃತ್ವದಲ್ಲಿ…

Read More

KSRTC ಬಸ್ ನಲ್ಲಿದ್ದ ಪ್ರಯಾಣಿಕರನ್ನು ಅರ್ಧ ದಾರಿಯಲ್ಲಿ ಇಳಿಸಿದ ಚಾಲಕ – ಪ್ರಯಾಣಿಕರ ಆಕ್ರೋಶ

ತಾಂತ್ರಿಕ ದೋಷದಿಂದ ಕೆಎಸ್‌ಆರ್‌ಟಿಸಿ ಬಸ್‌ ಕೆಟ್ಟು ನಿಂತು, ಪ್ರಯಾಣಿಕರು ಸುಮಾರು ಮೂರು ಗಂಟೆ ಪರದಾಡುವಂತಾಯಿತು. ಸಾಗರ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಪರ್ಯಾಯ ಬಸ್‌ ವ್ಯವಸ್ಥೆ ಮಾಡದ್ದಕ್ಕೆ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಹಿಡಿಶಾಪ ಹಾಕಿದರು. ಶಿವಮೊಗ್ಗ – ಸಾಗರ – ಕಾರವಾರ ಮಾರ್ಗದ ಕೆಎಸ್‌ಅರ್‌ಟಿಸಿ ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಸಾಗರ ಬಸ್‌ ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸನ್ನು ರಿಪೇರಿಗೆ ಕೊಂಡೊಯ್ಯಲಾಯಿತು. ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಆ ಬಸ್ಸಿನಲ್ಲಿದ್ದರು. ಬೆಳಗ್ಗೆ 10.30ರ ಹೊತ್ತಿಗೆ ಸಾಗರ…

Read More
Exit mobile version