Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಪತಿಯ ಅತಿಯಾದ ಸಾಲದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.!!kuruvalli

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಲಿನ ಕುರುವಳ್ಳಿಯ ಸಮೀಪ ಕೆರೆಗೆ ಹಾರಿ ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ಶೃತಿ (36) ಎಂಬ ಯುವತಿ ನೀರಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎಂದು ತಿಳಿದುಬಂದಿದೆ. ಈಕೆ ಕುರುವಳ್ಳಿಯಲ್ಲಿ ಪುಟ್ಟದೊಂದು ಮನೆ ಮಾಡಿಕೊಂಡಿದ್ದು, ಈಕೆಗೆ ನಾಲ್ಕು ಮಂದಿ ಅವಳಿ ಜವಳಿ ಮಕ್ಕಳು ಇವೆ. ಪತಿಯ ಅತಿಯಾದ ಸಾಲದ ಕಾರಣ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಶೃತಿ ಧರ್ಮಸ್ಥಳ ಸಂಘದ ಕಾರ್ಯಕರ್ತೆಯಾಗಿ ಮುತ್ತೂರು ಹೋಬಳಿಯಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ಅತ್ಯಂತ…

Read More

ಚಲಾವಣೆಯಿಂದ 2000 ಮುಖಬೆಲೆಯ ನೋಟುಗಳನ್ನು ಹಿಂಪಡೆದ RBI

ನೋಟು ಅಮಾನ್ಯೀಕರಣದ ನಂತ್ರ ಹೊಸ ನೋಟುಗಳಾಗಿ 2000 ರೂ ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು. ಇದೀಗ ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿ ಐ ನಿರ್ಧಾರ ಕೈಗೊಂಡಿದೆ. ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ಬಿಐ ನಿರ್ಧಾರ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತವೆ ಎಂದು ತಿಳಿಸಿದೆ.

Read More

ಹೊಸನಗರ : ಮೇಯಲು ಹೋದ ಹಸುವಿನ ಕಾಲು ಕಡಿದ ದುಷ್ಕರ್ಮಿಗಳು – ದೂರು ದಾಖಲು|hosanagara

ಹೊಸನಗರ ತಾಲೂಕಿನ ನಿಟ್ಟೂರಿನ ಗೌರಿಕೆರೆ  ಬಳಿಯಲ್ಲಿ ಹಸುವೊಂದರ ಕಾಲನ್ನು ಕಡಿದು ಹಾಕಿರುವ ಬಗ್ಗೆ ವರದಿಯಾಗಿದೆ.  ದುಷ್ಕರ್ಮಿಗಳ ಕೃತ್ಯ ಇದಾಗಿದ್ದು, ಸಿಡ್ಲಕುಣಿ ಸುಭಾಷ್ ಎಂಬುವವರಿಗೆ ಸೇರಿದ ಹಸುವು ಕಾಲಿಗೆ ಕತ್ತಿಯಿಂದ ಏಟು ತಿಂದು ನಡೆಯಲಾಗದೇ ನರಳಾಡುತ್ತಿದೆ. ಘಟನೆಯಲ್ಲಿ ಕಾಲಿನ ನರ ಕಟ್ ಆಗಿದ್ದರಿಂದ ದನ ನೆಲದಿಂದ ಏಳುತ್ತಿಲ್ಲ.  ಮಲೆನಾಡಲ್ಲಿ ರಾಸುಗಳನ್ನ ಬೆಳಗ್ಗೆ ಹೊರಗೆ ಅಟ್ಟಲಾಗುತ್ತದೆ. ಅವುಗಳು ಮೇವು ಮುಗಿಸಿ ಸಂಜೆ ಮನೆಗಳಿಗೆ ವಾಪಸ್ ಆಗುತ್ತವೆ.ಸಂಜೆಯಾದರು ಹಸು ಹಟ್ಟಿಗೆ ವಾಪಾಸು ಬರದ ಹಿನ್ನೆಲೆಯಲ್ಲಿ ಸುಭಾಷ್​ರವರು ಅದನ್ನು ಹುಡುಕಿಕೊಂಡು ಹೋಗಿದ್ದಾರೆ. ಈ…

Read More

ಕಾರು ಡಿಕ್ಕಿಯಾಗಿ ಪಾದಚಾರಿ ಸಾವು – ಚಾಲಕ ಪರಾರಿ|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟಿದ್ದಾರೆ. ಶಿವಕುಮಾರ್ (56) ಮೃತ ದುರ್ದೈವಿ. ಪೊಲೀಸರು ಹಿಟ್ ಅಂಡ್ ರನ್‌ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಶಿವಕುಮಾರ್‌ ಅವರು ಆನಂದಪುರದಿಂದ ಹೊರಟು ಯಡೆಹಳ್ಳಿಯ ಪೆಟ್ರೋಲ್ ಬಂಕ್‌ನಿಂದ ಸ್ವಲ್ಪವೇ ದೂರದಲ್ಲಿದ್ದ ತಮ್ಮ ಮನೆಗೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದ ಶಿವಕುಮಾರ್‌ ಗಂಭೀರ ಗಾಯಗೊಂಡಿದ್ದರು. ಸ್ಥಳೀಯರು ಗಾಯಗೊಂಡಿದ್ದ ಶಿವಕುಮಾರ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು….

Read More

ರಾತ್ರಿ ಅಡಿಗೆ ಯಾಕೆ ಮಾಡಲಿಲ್ಲವೆಂದು ಇಬ್ಬರಿಂದ ಹಲ್ಲೆ – ಕುಪಿತಗೊಂಡ ಅಡಿಗೆಯವ ಮಧ್ಯರಾತ್ರಿ ಇಬ್ಬರ ತಲೆ ಒಡೆದು ಕೊಂದೇ ಬಿಟ್ಟ!!!!!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ ಜೋಡಿ‌ ಕೊಲೆಯಾಗಿದ್ದು ಹಣಕ್ಕಾಗಿ ಕೊಲೆಯಾಗಿರಬಹುದು ಎಂದು ಅಂದಾಜಿಸಲಾಗಿತ್ತು. ಈ ಘಟನೆ ಬಗ್ಗೆ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ನೀಡಿದ ಮಾಹಿತಿ ಅಚ್ಚರಿಗೆ ಕಾರಣವಾಗಿದೆ ಮಧ್ಯಾಹ್ನದ ಅಡಿಗೆಯನ್ನು ಸಂಜೆ ನೀಡಿದ್ದಕ್ಕೆ ರಾಜಣ್ಣ ಎಂಬಾತನಿಗೆ ಇಬ್ಬರು ವ್ಯಕ್ತಿಗಳು ಮನಸ್ಸೊ ಇಚ್ಚೆ ಥಳಿಸಿದ್ದಾರೆ ಇದರಿಂದ ಕುಪಿತಗೊಂಡ ಆರೋಪಿ ರಾಜಣ್ಣ ಮಧ್ಯರಾತ್ರಿ ಹಲ್ಲೆ ಮಾಡಿದ್ದ ಇಬ್ಬರನ್ನು ಅಮಾನುಷವಾಗಿ ಹತ್ಯೆಗೈದಿದ್ದಾನೆ. ಘಟನೆಯ ವಿವರ :  ತೀರ್ಥಹಳ್ಳಿಯ ವಿಶ್ವಕರ್ಮ ಭವನ ನಿರ್ಮಾಣ…

Read More

ತೀರ್ಥಹಳ್ಳಿಯಲ್ಲಿ ಜೋಡಿ ಕೊಲೆ – ಓರ್ವನ ಬಂಧನ|murder

ತೀರ್ಥಹಳ್ಳಿ ತಾಲ್ಲೂಕಿನ, ಕುರುವಳ್ಳಿ ಪುತ್ತಿಗೆ ಮಠದ ಬಳಿಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ಇಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸ್ತಿದ್ಧಾರೆ.  ಮೂಲಗಳ ಪ್ರಕಾರ, ಕೊಲೆಯಾದವರು ದಾವಣಗೆರೆ ಜಿಲ್ಲೆ ಕಾರ್ಮಿಕರು ಎನ್ನಲಾಗಿದೆ.   ನಿನ್ನೆ ರಾತ್ರಿ ನಡೆದ ಗಲಾಟೆ, ಕೊಲೆಯಲ್ಲಿ ಅಂತ್ಯವಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದ್ದು,   ಕೆಲವೇ ದಿನದಲ್ಲಿ ಸಮುದಾಯ ಭವನ ಉದ್ಘಾಟನೆಯಾಗಬೇಕಿದ್ದು, ಅದರ ನಡುವೆ ಸಮುದಾಯದ ಭವನದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ  ಕುಡಿದ ಮತ್ತಿನಲ್ಲಿ ಮೂವರು ಕಾರ್ಮಿಕರ…

Read More

ಡಿ ಕೆ ಸುರೇಶ್ ನಿವಾಸದಲ್ಲಿ ಶಾಸಕರು ಹಾಗೂ ಆಪ್ತರೊಂದಿಗೆ ಡಿಕೆಶಿ ಸಮಾಲೋಚನೆ – ಬೇಳೂರು ,ಆರ್ ಎಂ ಮಂಜುನಾಥ್ ಗೌಡ ಭಾಗಿ|DK

 ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಂಸದ ಡಿ.ಕೆ ಸುರೇಶ್ ಅವರ ದೆಹಲಿ ನಿವಾಸ ಕಾವೇರಿಯಲ್ಲಿ ಶಾಸಕರು ಹಾಗೂ ಆಪ್ತರ ಜತೆ ಸಮಾಲೋಚನೆ ನಡೆಸುತ್ತಿದ್ದಾರೆ. ಶಾಸಕರಾದ ಬೇಳೂರು ಗೋಪಾಲಕೃಷ್ಣ ಮತ್ತು ಕೆಪಿಸಿಸಿ ಸಹಕಾರ ವಿಭಾಗದ ಕಾರ್ಯಾಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ, ಸಿ.ಕೆ ವೀರೇಂದ್ರ ಪಪ್ಪಿ, ಡಾ.ರಂಗನಾಥ್, ಎಚ್.ಸಿ ಬಾಲಕೃಷ್ಣ, ಇಕ್ಬಾಲ್ ಹುಸೇನ್. ಪರಿಷತ್ ಸದಸ್ಯ ಎಸ್.ರವಿ ಸೇರಿ ಕೆಲವು ಆಪ್ತರ ಜೊತೆ ಡಿ.ಕೆ…

Read More

ನವೋದಯ ‘ಪ್ರಥಮ PUC’ ಪ್ರವೇಶ ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ : ಮಹಿಳಾ ಪಾಲಿಟೆಕ್ನಿಕ್ ಪ್ರಥಮ ಸೆಮಿಸ್ಟರ್ ಡಿಪ್ಲೊಮಾಕ್ಕೆ ನೇರ ಪ್ರವೇಶ

ಶಿವಮೊಗ್ಗ : ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದ 11 ನೇ ತರಗತಿಗೆ ಪ್ರವೇಶ ಪಡೆಯಲು ಪ್ರವೇಶ ಪರೀಕ್ಷೆಯನ್ನು ದಿ:22/07/2023 ರಂದು ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್ಸೈಟ್ www.navodaya.gov.in ಮೂಲಕ ಮೇ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಿಳಾ ಪಾಲಿಟೆಕ್ನಿಕ್ ಪ್ರಥಮ ಸೆಮಿಸ್ಟರ್ ಡಿಪ್ಲೊಮಾಕ್ಕೆ ನೇರ ಪ್ರವೇಶ ಶಿವಮೊಗ್ಗ : 2023-24 ನೇ ಸಾಲಿನ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ…

Read More

ರಿಪ್ಪನ್‌ಪೇಟೆ : ಆಟೋ ಮತ್ತು ಬೈಕ್‌ನಡುವೆ ಭೀಕರ ಅಪಘಾತ – ಓರ್ವನ ಸ್ಥಿತಿ ಗಂಭೀರ : ರಕ್ತದ ಮಡುವಿನಲ್ಲಿ ಸಹಾಯಕ್ಕೆ ಅಂಗಲಾಚಿದ ಗಾಯಾಳು|Accident

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆ ಬಳಿ ಬೈಕ್ ಹಾಗೂ ಲಗೇಜ್ ಆಟೋ ಭೀಕರ ಅಪಘಾತವಾಗಿ ಒಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯ ಬಳಿ ಲಗೇಜ್ ಆಟೋ (KA-15 A 4679) ಹಾಗೂ ಹೀರೋ ಹೋಂಡಾ ಸ್ಪೆಂಡರ್ (KA 01 S 8450) ಬೈಕ್ ಗಳ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಗವಟೂರು ನಿವಾಸಿ ಗಣೇಶ್ (46) ರವರಿಗೆ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿದೆ.ಅಪಘಾತ…

Read More

ಸಿಟಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ – ರೊಚ್ಚಿಗೆದ್ದ ಜನರಿಂದ ಬಸ್ ಗ್ಲಾಸ್ ಗೆ ಕಲ್ಲು ತೂರಾಟ|Accident

ದ್ವಿಚಕ್ರ ವಾಹನ ಮತ್ತು ಬಸ್ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನ ಸವಾರನಿಗೆ ಗಾಯಗಳಾಗಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ. ಸಿಟಿ ಬಸ್ಸೊಂದು ಸಿಗ್ನಲ್‌ ಜಂಪ್‌ ಮಾಡಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ನಡೆದಿದೆ. ಘಟನೆಯಿಂದಾಗಿ ಬೈಕ್ ಸವಾರ ತೀವ್ರ ತರವಾಗಿ ಗಾಯಗೊಂಡಿದ್ದಾನೆ. ಸ್ಥಳದಲ್ಲಿದ್ದ ಆಕ್ರೋಶಿತ ಯುವಕರು ಸಿಟಿ ಬಸ್ಸಿನ ಗಾಜನ್ನು ಒಡೆದು ಹಾಕಿದ್ದಾರೆ. ಅಲ್ಲದೆ ಚಾಲಕನ ಮೇಲೂ ಹಲ್ಲೆ ನಡೆಸಿದ್ದಾರೆ. ಇದರಿಂದ ಮಹಾವೀರ ವೃತ್ತದಲ್ಲಿ ಕೆಲ‌ ಕಾಲ ಟ್ರಾಫಿಕ್…

Read More
Exit mobile version