Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

Election Result | ಆರಗ ಜ್ಞಾನೇಂದ್ರ , ಬೇಳೂರು ಗೋಪಾಲಕೃಷ್ಣ ಗೆಲುವು – ಗೆಲುವಿನ ಅಂತರವೆಷ್ಟು..???

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು ಆರಗ ಜ್ಞಾನೇಂದ್ರ ಗೆಲುವಿನ ನಗೆ ಬೀರಿದ್ದಾರೆ. 19ನೇ ಸುತ್ತು ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ರವರಿಗಿಂತ 12080 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಾಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಮುಕ್ತಾಯವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ 16000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಬೇಳೂರು ಗೋಪಾಲಕೃಷ್ಣ 88143 ಮತ ಪಡೆದರೆ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ 72227…

Read More

Election | ಸಾಗರ ಕ್ಷೇತ್ರದಲ್ಲಿ ಬೇಳೂರು ಗೋಪಾಲಕೃಷ್ಣ ಭಾರಿ ಮುನ್ನಡೆ

ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಭಾರಿ ಮುನ್ನಡೆಯನ್ನು ಸಾಧಿಸಿದ್ದಾರೆ. 11.10 ನಿಮಿಷದ ಫಲಿತಾಂಶದ ಪ್ರಕಾರ 35001 ಮತ ಗಳಿಸಿದ್ದಾರೆ . ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ 25994 ಮತ ಗಳಿಸಿದ್ದಾರೆ. ಬೇಳೂರು ಗೋಪಾಲಕೃಷ್ಣ 9007 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಆಮ್ ಆದ್ಮಿಯ ದಿವಾಕರ್ 412 ಮತ ಗಳಿಸಿದ್ದಾರೆ.

Read More

Election |ಶಿವಮೊಗ್ಗ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಯಾರೆಲ್ಲಾ ಮುನ್ನಡೆ???

ಶಿವಮೊಗ್ಗ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ 10.30 ರವರೆಗಿನ ಫಲಿತಾಂಶ ಸಾಗರ – ಗೋಪಾಲಕೃಷ್ಣ ಬೇಳೂರು (ಕಾಂಗ್ರೆಸ್)‌ – 7571ಮತಗಳ ಅಂತರದಲ್ಲಿ ಮುನ್ನಡೆ ಶಿವಮೊಗ್ಗ ಗ್ರಾಮಾಂತರ – ಶಾರದಾ ಪೂರ್ಯಾನಾಯ್ಕ್‌ (ಜೆಡಿಎಸ್)‌ – 4479 ಮತಗಳ ಅಂತರದಲ್ಲಿ ಮುನ್ನಡೆ ಭದ್ರಾವತಿ  – ಬಿ.ಕೆ.ಸಂಗಮೇಶ್ವರ (ಕಾಂಗ್ರೆಸ್)‌ – 913 ಮತಗಳ ಅಂತರದಲ್ಲಿ ಮುನ್ನಡೆ ಶಿವಮೊಗ್ಗ – ಚನ್ನಬಸಪ್ಪ (ಬಿಜೆಪಿ) – 10576 ಮತಗಳ ಅಂತರದಲ್ಲಿ ಮುನ್ನಡೆ ತೀರ್ಥಹಳ್ಳಿ – ಆರಗ ಜ್ಞಾನೇಂದ್ರ – 1892 ಮತಗಳ ಅಂತರದಲ್ಲಿ ಮುನ್ನಡೆ…

Read More

ELECTION |ಜಿಲ್ಲೆಯ ಮೊದಲ ಸುತ್ತಿನ ಎಣಿಕೆ ಪೂರ್ಣ – ಯಾರೆಲ್ಲಾ ಮುನ್ನಡೆ?? ಬೇಳೂರು ಮುನ್ನಡೆ,ಕಿಮ್ಮನೆಗೆ ಹಿನ್ನಡೆ

ಮತ ಎಣಿಕೆಯಲ್ಲಿ ಮೊದಲ ಸುತ್ತಿನಲ್ಲಿ ಅಭ್ಯರ್ಥಿಗಳ ಮುನ್ನಡೆ ಹೀಗಿದೆ. ಸಾಗರದಲ್ಲಿ ಕಾಂಗ್ರೆಸ್ ಪಕ್ಷದ ಗೋಪಾಲ ಕೃಷ್ಣ ಬೇಳೂರು ಮುನ್ಬಡೆ ಇದ್ದರೆ,  ಬಿಜೆಪಿ : ಹರತಾಳು ಹಾಲಪ್ಪ : ಹಿನ್ನಡೆಯಲ್ಲಿದ್ದಾರೆ. ಮೊದಲ ಸುತ್ತಿನಲ್ಲಿ 1600 ಮತಗಳ ಮುನ್ನಡೆ ಇದ್ದಾರೆ‌. ಭದ್ರಾವತಿಯಲ್ಲಿ ಜೆ ಡಿ ಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿಗೌಡ ಮುನ್ನಡೆಯಲ್ಲಿದ್ದಾರೆ.ಕಾಂಗ್ರೆಸ್ ಬಿಕೆ ಸಂಗಮೇಶ್ ಹಿನ್ನಡೆಯಲ್ಲಿದ್ದಾರೆ.600 ಮತಗಳ ಮುನ್ನಡೆಯಲ್ಲಿದ್ದಾರೆ. ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ 1400 ಮತಗಳ ಮುನ್ನಡೆಯಲ್ಲಿದ್ದಾರೆ.ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪಗೆ 1500…

Read More

SSLC ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗೆ ಸನ್ಮಾನ

ಭದ್ರಾವತಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 573(91.56) ಅಂಕಗಳನ್ನು ಗಳಿಸಿ ಅದ್ವಿತೀಯ ಸಾಧನೆಗೈದ ಶ್ರೀ ಬಾಲಗಂಗಾಧರ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ ಶಶಾಂಕ್ ರವರಿಗೆ ಹಳೇನಗರ ಪೊಲೀಸ್ ಠಾಣೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಹಳೇನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಚನ್ನಕೇಶವ ಮತ್ತು ಲತಾಮಣಿ ದಂಪತಿಗಳ ಪುತ್ರನಾದ ಶಶಾಂಕ್ ರವರು ನ್ಯೂಟೌನ್ ನ ಶ್ರೀ ಬಾಲಗಂಗಾಧರ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಯಾಗಿದ್ದು SSLC ಪರೀಕ್ಷೆಯಲ್ಲಿ 91.56% ಅಂಕ ಗಳಿಸುವ ಮೂಲಕ ಶಾಲೆಯಲ್ಲಿಯೇ ಪ್ರಥಮ ಸ್ಥಾನ ಗಳಿಸಿದ್ದಾರೆ. ಗುರುವಾರ ಹಳೇನಗರ ಪೊಲೀಸ್ ಠಾಣೆಯಲ್ಲಿ…

Read More

ಹೊಸನಗರದ ಮಹಿಳೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ – ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ|missing

ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲುಸಾಲೆ ಮಳವಳ್ಳಿ ಗ್ರಾಮ ವಾಸಿ ಸದಾನಂದ ಎಂ.ಎಂ. ಎಂಬುವವರ ಪತ್ನಿ ಗೀತಾ (30) ಎಂಬ ಮಹಿಳೆಯು ತನ್ನ 11 ವರ್ಷದ ಮಗಳು ಪ್ರಿಯಾಂಕ ಹಾಗೂ 9 ವರ್ಷದ ಮಗ ಪ್ರಸಾದ್ ಇವರುಗಳನ್ನು ಕರೆದುಕೊಂಡು ಏ.11 ರಿಂದ ಕಾಣೆಯಾಗಿದ್ದು, ಈವರೆಗೂ ವಾಪಾಸ್ಸಾಗಿರುವುದಿಲ್ಲ. ಈಕೆಯ ಚಹರೆ ದುಂಡುಮುಖ, ಸಾಧಾರಣ ಮೈಕಟ್ಟು, 5 ಅಡಿ ಎತ್ತರ, ಎಡಕೆನ್ನೆಯ ಮೇಲೆ ಹಳೆ ಗಾಯದ ಗುರುತು ಇರುತ್ತದೆ. ಕೆಂಪು ಬಣ್ಣದ ಚೂಡಿದಾರ್ ಧರಿಸಿರುತ್ತಾರೆ. ಕನ್ನಡ ಭಾಷೆ ಮಾತನಾಡುತ್ತಾರೆ. ಈ…

Read More

ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನಲೆ ಇಂದು ಸಂಜೆ 6 ರಿಂದ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ – ವಿಜಯೋತ್ಸವ,ಪಟಾಕಿ ಸಿಡಿಸಲು,ಬೈಕ್ ರ್‍ಯಾಲಿಗೆ ಇಲ್ಲ ಅವಕಾಶ

ನಾಳೆ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಸಂಜೆ 6 ಗಂಟೆಯಿಂದ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಮೇ 12ರ ಸಂಜೆ 6 ರಿಂದ ಮೇ14 ರ ರಾತ್ರಿ 10 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ವಿಜಯೋತ್ಸವ ಸಾರ್ವಜನಿಕವಾಗಿ ಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಸಾರ್ವಜನಿಕವಾಗಿ ಚೂರಿ ಇನ್ನಿತರ ಆಯುಧಗಳನ್ನು ತೆಗೆದುಕೊಂಡು ಹೋಗುವುದು, ಸಾರ್ವಜನಿಕ ಸಮಾರಂಭ ಪ್ರತಿಭಟನೆ ನಡೆಸುವುದು ಎಲ್ಲವನ್ನು ನಾಳೆ ಶಿವಮೊಗ್ಗ ಜಿಲ್ಲೆಯಾದ್ಯಂತ ಸಂಪೂರ್ಣ…

Read More

ಚೋರಡಿ ಅಪಘಾತ – ಮತ್ತೊಬ್ಬ ಗಾಯಾಳು ಸಾವು | ನಿನ್ನೆ ಕರ್ತವ್ಯ ಪ್ರಜ್ಞೆ ಮೆರೆದ ಜಿಲ್ಲೆಯ 108 ಆಂಬ್ಯುಲೆನ್ಸ್ ಸಿಬ್ಬಂದಿಗಳು – ಅಪಘಾತದ ಸಂಪೂರ್ಣ ಮಾಹಿತಿ

ನಿನ್ನೆ ಚೋರಡಿಯಲ್ಲಿ  ಸಂಭವಿಸಿದ ಭೀಕರ ಅಪಘಾತದ ಘಟನೆಯಲ್ಲಿ ಸಾವನ್ನಪ್ಪಿರುವ ಸಂಖ್ಯೆ ಮೂರಕ್ಕೆ ಏರಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಇವತ್ತು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ಧಾರೆ.  ನಿನ್ನೆ ಸಂಜೆ ಸುಮಾರು ಆರು ಗಂಟೆಯ ಹೊತ್ತಿಗೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರು. ಇವತ್ತು ಶಿಕಾರಿಪುರ ತಾಲೂಕಿನ ಜೋಗಿಹಳ್ಳಿ ಗ್ರಾಮದ ಮಹೇಶ್ (45 ವರ್ಷ) ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕುಮದ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಹಿಂದಿನಿಂದಲೂ ಡೇಂಜರಸ್​ ಸ್ಪಾಟ್. ಹಳೇಸೇತುವೆ ಪಕ್ಕದಲ್ಲಿ ಅಗಲವಾದ ಹೊಸಸೇತುವೆ ಕಟ್ಟಿ, ಹೈವೆ ಮಾಡಿದರೂ ಇಲ್ಲಿ…

Read More

ಚೋರಡಿ ಬಸ್ ಅಪಘಾತ ಪ್ರಕರಣ – ಮೆಗ್ಗಾನ್ ಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ : ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..???Accident

ಶಿವಮೊಗ್ಗ ಜಿಲ್ಲೆಯ ಚೋರಡಿ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಗೊಂಡವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಇಬ್ಬರು ಸಾವನ್ನಪ್ಪಿದ್ದು ಮೂವತ್ತು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದೌಡಾಯಿಸಿದ ಸಂಸದ ಬಿ ವೈ ರಾಘವೇಂದ್ರ ಬಸ್ ಅಪಘಾತದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಿಶೇಷ ವೈದ್ಯರ ತಂಡ, ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದೆ. ಘಟನೆಯ ಬಗ್ಗೆ ವಿಷಯ ತಿಳಿಯುತ್ತಲೇ ಸಂಸದ ಬಿವೈ ರಾಘವೇಂದ್ರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ  ದೌಡಾಯಿಸಿದ್ದಾರೆ….

Read More

ಚೋರಡಿಯ ಬಳಿ ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ – 8 ರಿಂದ ಹತ್ತು ಮಂದಿ ಸಾವನ್ನಪ್ಪಿರುವ ಶಂಕೆ

ಶಿವಮೊಗ್ಗ – ಸಾಗರ ಹೆದ್ದಾರಿಯ ಚೋರಡಿ ಬಳಿಯಲ್ಲಿ ಕೆಲವು ಎರಡು ಬಸ್ಸುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸಾವು ನೋವುಗಳು ಸಂಭವಿಸಿವೆ ಎನ್ನಲಾಗುತ್ತಿದೆ. ಬಲ್ಲ ಮೂಲಗಳ ಪ್ರಕಾರ 8 ರಿಂದ 10 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.ಅನೇಕ ಮಂದಿಗೆ ಗಂಭೀರ ಗಾಯಗಳಾಗಿರುವ ಮಾಹಿತಿ ಇದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಬಸ್ಸು ಹಾಗೂ ಶಿಕಾರಿಪುರದಿಂದ (ಹಿತ್ಲ ಕಲ್ಮನೆ ಮಾರ್ಗ) ಶಿವಮೊಗ್ಗಕ್ಕೆ ತೆರಳುತಿದ್ದ ಎರಡು ಬಸ್ ಗಳ ನಡುವೆ ಡಿಕ್ಕಿಯಾಗಿದೆ. ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಿಂದ 5 ಅಂಬ್ಯುಲೆನ್ಸ್ ಗಳು ಮತ್ತು ಅಗ್ನಿಶಾಮಕ…

Read More