Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ನಾಳೆ ಆಯನೂರಿಗೆ ಪ್ರಧಾನಿ ಮೋದಿ – ಕಾರ್ಯಕ್ರಮಕ್ಕೆ ಸಕಲ ಸಿದ್ದತೆ|MODI

ನಾಳೆ ಶಿವಮೊಗ್ಗದ ಆಯನೂರಿಗೆ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತಿದ್ದಾರೆ. ಕಾರ್ಯಕ್ರಮಕ್ಕಾಗಿ ಆಯನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪಕ್ಕದ ಸುಮಾರು 100 ಎಕರೆ ಜಾಗದಲ್ಲಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ.  ಮೇ 7ರ ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ನೇರವಾಗಿ ಹೆಲಿಕಾಪ್ಟರ್‌ನಲ್ಲಿ ಆಯನೂರಿಗೆ ಆಗಮಿಸುತ್ತಿದ್ದಾರೆ. ವೇದಿಕೆಯ ಪಕ್ಕದಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಬೆಳಗ್ಗೆ 11.30ರಿಂದ ಮಧ್ಯಾಹ್ನ 2.30 ರವರೆಗೆ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ಮೋದಿಯವರು 50 ನಿಮಿಷಗಳ ಕಾಲ ಭಾಷಣ ಮಾಡಲಿದ್ದಾರೆ. ಇನ್ನೂ ಶಿವಮೊಗ್ಗದ ಏಳು ಕ್ಷೇತ್ರ…

Read More

ರಿಪ್ಪನ್‌ಪೇಟೆ – ಕ್ಯಾಂಟರ್ ಲಾರಿ ಮತ್ತು ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|accident

ಕ್ಯಾಂಟರ್ ಲಾರಿ ಹಾಗೂ ಟೊಯೋಟಾ ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಸೂಡೂರು ಗೇಟ್ ಸಮೀಪದಲ್ಲಿ ನಡೆದಿದೆ. ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಟೊಯೋಟಾ ಇನ್ನೋವಾ ಕಾರು ಹಾಗೂ ಶಿವಮೊಗ್ಗದಿಂದ ಹೊಸನಗರಕ್ಕೆ ತೆರಳುತಿದ್ದ ಕ್ಯಾಂಟರ್ ಲಾರಿ ನಡುವೆ ಸೂಡೂರು ಗೇಟ್ ಸಮೀಪದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಘಟನೆಯಲ್ಲಿ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ರಿಪ್ಪನ್‌ಪೇಟೆ – ಬಿಸಿಲ ಬೇಗೆಗೆ ತಂಪೆರೆದ ಮಳೆ|Rain

ರಿಪ್ಪನ್‌ಪೇಟೆ : ಬಿಸಿಲ ಧಗೆ ಪಟ್ಟಣದಲ್ಲಿ ದಿನದಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ,ಶನಿವಾರ ಮಳೆಯ ಸಿಂಚನವು ಕೊಂಚ ತಂಪನೆರೆಯಿತು. ಸಂಜೆಯಿಂದ ಪಟ್ಟಣದ ವಿವಿಧೆಡೆ ಮಳೆ ಸುರಿಯಿತು. ರಿಪ್ಪನ್‌ಪೇಟೆ ಪಟ್ಟಣ , ಅರಸಾಳು ,ಕೆಂಚನಾಲ ,ಹೆದ್ದಾರಿಪುರ ಹಾಗೂ ಚಿಕ್ಕಜೇನಿ ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಬಿಡದೇ ಮಳೆ ಸುರಿಯಿತು. ಏಕಾಏಕಿ ಸುರಿದ ಮಳೆಯಿಂದಾಗಿ, ಸಾರ್ವಜನಿಕರು ದಿಕ್ಕು ತೋಚದೆ ಪರದಾಡಿದರು. ಮಳೆಗೆ ನೆನೆಯದಂತೆ ಸಮೀಪದ ಅಂಗಡಿ, ಕಟ್ಟಡಗಳ ಬಳಿ ನಿಂತರು. ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ ಸವಾರಿ ಮಾಡಿದ ದೃಶ್ಯ…

Read More

ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ – ಸಂಸದ ಬಿ ವೈ ರಾಘವೇಂದ್ರ|BYR

ರಿಪ್ಪನ್‌ಪೇಟೆ : ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಪರ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಈ ಬಾರಿ ಯಾವುದೇ ಗೊಂದಲವಿಲ್ಲದೇ ಬಿಜೆಪಿ ಸರ್ಕಾರ ರಚಿಸಲಿದೆ, ಯಡಿಯೂರಪ್ಪನವರ ನಕ್ಷತ್ರದಲ್ಲಿಯೇ ಬರೆದಿತ್ತು ಆಪರೇಷನ್ ನಡೆಸಿಯೇ ಸರ್ಕಾರ ರಚಿಸಬೇಕಾಗಿತ್ತು ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ ಎಂದು…

Read More

ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ – ಹರತಾಳು ಹಾಲಪ್ಪ|Bjp

ವಿಧಾನಸೌಧದಲ್ಲಿ ಬಂಗಾರಪ್ಪನವರ ಸಂತಾಪ ಸಭೆಯಲ್ಲಿ ಮಾತನಾಡದವರು ಮಾನಸ ಪುತ್ರರಾಗಲು ಹೇಗೆ ಸಾಧ್ಯ ರಿಪ್ಪನ್‌ಪೇಟೆ;-ಸಮಾಜವಾದಿ ನೇತಾರ ವರ್ಣರಂಜಿತ ನಾಯಕ ಎಸ್.ಬಂಗಾರಪ್ಪನವರು ನಿಧನದ ಕುರಿತು ವಿಧಾನಸೌಧದಲ್ಲಿ ಅಯೋಜಿಸಲಾದ ಸಂತಾಪ ಸಭೆಯಲ್ಲಿ ಅವಕಾಶವನ್ನು ನೀಡಲಾದರೂ ಕೂಡಾ ಬಂಗಾರಪ್ಪನವರ ಬಗ್ಗೆ ಗುಣಗಾನ ಮಾಡದವರು ಮಾನಸಪುತ್ರರಾಗಲು ಹೇಗೆ ಸಾಧ್ಯವೆಂದು ಶಾಸಕ ಹರತಾಳು ಹಾಲಪ್ಪ ಹೆಸರು ಹೇಳದೆ ಪರೋಕ್ಷವಾಗಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಕಳೆದ…

Read More

ಶಿವಮೊಗ್ಗದಲ್ಲಿ ನಡೆದ ಅಮಿತ್ ಷಾ ರೋಡ್ ಶೋ ಕಾರ್ಯಕ್ರಮದಲ್ಲಿ ಮಕ್ಕಳ ಬಳಕೆ – ದೂರು ದಾಖಲು|amith-sha-rally

ಶಿವಮೊಗ್ಗ : ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಏಪ್ರಿಲ್ 1 ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ರವರು ನಡೆಸಿದ ರೋಡ್ ಶೋ ನಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದಾರೆ ಎಂದು ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದಾರೆ. ಅಮಿತ್ ಶಾ ರವರು ರೋಡ್ ಶೋ ಶಿವಮೊಗ್ಗ ನಗರದ ಶಿವಪ್ಪ ನಾಯಕ ವೃತ್ತದಿಂದ ನೆಹರು ರಸ್ತೆಯ ಮೂಲಕ ಲಕ್ಷ್ಮೀ ಟಾಕೀಸ್ ವೃತ್ತದವರೆಗೂ ರೋಡ್ ಶೋ ನಡೆಸಲಾಗಿತ್ತು. ರೋಡ್ ಶೋನಲ್ಲಿ ಮಕ್ಕಳನ್ನು ಬಳಸಿಕೊಳ್ಳಲಾಗಿದೆ ಎಂದು ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಕಲಂ14 ಅನ್ವಯ…

Read More

ರಿಪ್ಪನ್‌ಪೇಟೆ – ಅಬೂಬಕರ್ ಸಾಬ್ ನಿಧನ|Rpet

ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯ ನಿವಾಸಿ ಅಬೂಬಕರ್ ಸಾಬ್(78) ನಿಧನರಾಗಿದ್ದಾರೆ. ಸ್ವಲ್ಪ ಕಾಲದ ಅನಾರೋಗ್ಯದಿಂದ ಬಳಲುತಿದ್ದ ಅವರು ಗುರುವಾರ ಮಧ್ಯರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಪುತ್ರರಾದ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಜಿಲ್ಲಾ ಸದಸ್ಯ ಅಬ್ದುಲ್‌ ಖುದ್ದೂಸ್, ಪತ್ನಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸಾಗರ ರಸ್ತೆಯ ಖಬರ್ ಸ್ಥಾನ್ ನಲ್ಲಿ ಜರುಗಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ರಿಪ್ಪನ್‌ಪೇಟೆ – ಚಿಪ್ಪಿಗರ ಕೆರೆಯ ಬಳಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ|rpet

ರಿಪ್ಪನ್‌ಪೇಟೆ ಚಿಪ್ಪಿಗರ ಕೆರೆಯ ಬಳಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ  ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯ ಸಮೀಪದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಚಿಪ್ಪಿಗರ ಕೆರೆ ಬಳಿಯ ಪಾರ್ಕ್ ಸಮೀಪ ಸುಮಾರು 45 ರಿಂದ 50 ವಯೋಮಾನದ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪಟ್ಟಣದಲ್ಲಿ ಕಳೆದ ಕೆಲವು ವರ್ಷಗಳಿಂದ ಚಿಂದಿ ಆಯುತಿದ್ದ ಮಹಿಳೆ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಗ್ರಾಪಂ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್ ,ಸದಸ್ಯರಾದ ಆಸೀಫ಼್ ಭಾಷಾಸಾಬ್ ,ಪ್ರಕಾಶ್ ಪಾಲೇಕರ್…

Read More

ಮೊಟ್ಟೆ ತಿನ್ನಲು ಹೋಗಿ ಕೋಳಿ ಗೂಡಿನಲ್ಲಿಯೇ ಬಂಧಿಯಾದ ನಾಗರಹಾವು|Cobra

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಾಹೊಸಳ್ಳಿ ಗ್ರಾಮದಲ್ಲಿ ಕೋಳಿ ಮೊಟ್ಟೆಯನ್ನು ತಿನ್ನಲು ಹೋದ ನಾಗರಹಾವು ಕೋಳಿ ಗೂಡಿನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ. ವಡಾಹೊಸಳ್ಳಿ ಅಂಗನವಾಡಿ ಕಾರ್ಯಕರ್ತೆ ಸುಶೀಲ ಎಂಬುವವರ ಮನೆಯ ಕೋಳಿಗೂಡಿನಲ್ಲಿ ಮೊಟ್ಟೆ ತಿನ್ನಲು ಹೋಗಿ ನಾಗರಹಾವೊಂದು ಗೂಡಿನಲ್ಲಿ ಬಂಧಿಯಾಗಿತ್ತು, ಕೋಳಿಗೂಡಿನಲ್ಲಿ ಮೊಟ್ಟೆ ತಿಂದು ಗೂಡಿನಲ್ಲಿ ಹೆಡೆ ಬಿಚ್ಚಿ ಆಟವಾಡುತ್ತಿರುವ ನಾಗರಹಾವನ್ನು ಕಂಡ ಮನೆಯವರು ತಕ್ಷಣ ರಿಪ್ಪನ್‌ಪೇಟೆಯ ಉರಗ ತಜ್ಞ ಗಂಗಾಧರ(ಗಂಗಣ್ಣ) ರವರಿಗೆ ಸುದ್ದಿ ಮುಟ್ಟಿಸಿದ್ದಾರೆ. ಸುದ್ದಿ ತಿಳಿದ ಉರಗತಜ್ಞ ಗಂಗಾಧರ್ ಸ್ಥಳಕ್ಕೆ ತೆರಳಿ ಕೋಳಿ ಗೂಡಿನಲ್ಲಿ…

Read More

AAP | ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಿ – ಸಂಸ್ಥಾಪಕ ಸದಸ್ಯ ಶಹನವಾಜ್ ಹಿಂದೂಸ್ಥಾನಿ

ರಿಪ್ಪನ್‌ಪೇಟೆ : ದೆಹಲಿಯ ಅರವಿಂದ್ ಕೇಜ್ರಿವಾಲ್ ಸರ್ಕಾರ ನೀಡಿರುವ ಉನ್ನತಮಟ್ಟದ ಶಿಕ್ಷಣ ವ್ಯವಸ್ಥೆ,ಉಚಿತ ನೀರಿನ ವ್ಯವಸ್ಥೆ,ಉಚಿತ ವಿದ್ಯುತ್,ಆರೋಗ್ಯ ವ್ಯವಸ್ಥೆಯನ್ನು ಕರ್ನಾಟಕದ ಜನಸಾಮಾನ್ಯರು ಬಯಸುತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಸದಸ್ಯ ಹಾಗೂ ಸ್ಟಾರ್ ಕ್ಯಾಂಪೇನರ್ ಶಹನವಾಜ್ ಹಿಂದೂಸ್ಥಾನಿ ಹೇಳಿದರು. ರಿಪ್ಪನ್‌ಪೇಟೆ ಪಟ್ಟಣದಲ್ಲಿ ಸಾಗರ ಕ್ಷೇತ್ರದ ಆಪ್ ಅಭ್ಯರ್ಥಿ ಕೆ ದಿವಾಕರ್ ಪರ ಮತಯಾಚನೆ ನಡೆಸಿ ಎಎಪಿ ಕಛೇರಿಯಲ್ಲಿ ಅಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಭಾರತದೇಶದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು ಅದರಲ್ಲಿಯೂ ಕರ್ನಾಟಕದಲ್ಲಿ ಇನ್ನೂ ಹೆಚ್ಚಾಗಿದೆ ಎಂಬ ಬಗ್ಗೆ…

Read More