Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಸಾಲಭಾದೆಗೆ ಬೇಸತ್ತು ವಿಷ ಸೇವಿಸಿ ರೈತ ಸಾವು|Debt

ಸೊರಬ: ರೈತನೊರ್ವ ಸಾಲಬಾಧೆಯಿಂದ  ಕಂಗೆಟ್ಟು ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಇಂಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಇಂಡಿಹಳ್ಳಿ ಗ್ರಾಮದ ದಿನೇಶ್ (35) ಮೃತ ರೈತ. ಸಾಲಬಾಧೆಯಿಂದಾಗಿ ಮನೆಯ ಹಿಂಭಾಗದಲ್ಲಿ ವಿಷ ಸೇವಿಸಿದ್ದ. ಕೂಡಲೇ ಆತನನ್ನ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.  ಎರಡೂವರೆ ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡಿದ್ದ ಈತ, ವಿವಿಧ ಬ್ಯಾಂಕ್ ನಲ್ಲಿ 8 ಲಕ್ಷ ರೂ., ಮತ್ತು ಹೊರಗಡೆ ಕೈಗಡವಾಗಿ 7 ಲಕ್ಷ ರೂ., ಸೇರಿ ಒಟ್ಟು 15 ಲಕ್ಷ ರೂ….

Read More

ಮನೆಯ ಗೇಟ್ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನ ಬರ್ಬರ ಹತ್ಯೆ.!!|crime

ಶಿವಮೊಗ್ಗ: ರೌಡಿ‌ಶೀಟರ್ ಮುಜೀಬ್ (32) ಎಂಬಾತನನ್ನು‌ ಮಾರಕಾಸ್ತ್ರಗಳಿಂದ‌ ಕೊಚ್ಚಿ‌ ಕೊಲೆಗೈದ ಘಟನೆ ಕಳೆದ ರಾತ್ರಿ ಭದ್ರಾವತಿಯಲ್ಲಿ ನಡೆದಿದೆ. ಬೊಮ್ಮನಕಟ್ಟೆ ಬಳಿಯ ಹಳೆ ನಂಜಾಪುರದಲ್ಲಿ ಘಟನೆ ಜರುಗಿದೆ. ಮುಜೀಬ್ ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಪ್ರಮುಖ‌ ಆರೋಪಿಯಾಗಿದ್ದ.  ಇಂದು ಬೆಳಗ್ಗೆ ಸ್ಥಳೀಯರು ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೇಪರ್‌ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಜೀಬ್‌ಗೆ ಎರಡು ಮದುವೆಯಾಗಿದ್ದು, ಮೊದಲನೇ ಪತ್ನಿಗೆ ಇಬ್ಬರು ಮತ್ತು ಎರಡನೇ ಪತ್ನಿಗೆ ಒಂದು‌ ಮಗುವಿದೆ. ನಿನ್ನೆ ರಾತ್ರಿ 12…

Read More

ಹೊಸನಗರ ತಾಲೂಕಿನಲ್ಲೊಂದು ಪೋಕ್ಸೋ ಪ್ರಕರಣ ದಾಖಲು|pocso

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಯುವಕನೊಬ್ಬ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರದ ಯುವತಿಯೋರ್ವಳನ್ನು ಪ್ರೀತಿಸಿ ನಂಬಿಸಿ ಮೋಸ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಣೇಬೆನ್ನೂರಿನಿಂದ ನಗರಕ್ಕೆ ಕಬ್ಬಿಣದ ಕೆಲಸಕ್ಕೆ ಬಂದಿದ್ದ ಅಂದಾಜು 28 ವರ್ಷದ ಯುವಕ ನಗರದ 17 ವರ್ಷದ ಯುವತಿಯನ್ನು ಪ್ರೀತಿಸಿ ನಂಬಿಸಿ ಗರ್ಭಿಣಿಯನ್ನಾಗಿ ಮಾಡಿದ್ದಾನೆ. ನಂತರ ಆಕೆಯನ್ನು ತನ್ನ ಊರಿಗೆ ಕರೆದೋಯ್ದು ಆಸ್ಪತ್ರೆಯಲ್ಲಿ ಮಗು ತೆಗೆಸಲು ಪ್ರಯತ್ನ ಮಾಡಿದ್ದಾನೆ. ಆದರೆ ಅಲ್ಲಿನ ವೈದ್ಯರಿಗೆ ಆಕೆಯ ಬಗ್ಗೆ ಅನುಮಾನ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ…

Read More

ಸೋರುತಿಹುದು ರಿಪ್ಪನ್‌ಪೇಟೆ ಪೊಲೀಸರ ಮನೆಯ ಮಾಳಿಗೆ – ವಸತಿಗೃಹಕ್ಕೆ ಟಾರ್ಪಲ್ ರಕ್ಷಣೆ|Police quarters

ಸೋರುತಿಹುದು ರಿಪ್ಪನ್‌ಪೇಟೆ ಪೊಲೀಸರ ಮನೆಯ ಮಾಳಿಗೆ – ಟಾರ್ಪಲ್ ಗೆ ಮೊರೆ ಹೋದ ಪೊಲೀಸರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಪೋಲಿಸ್ ಸಿಬ್ಬಂದಿಗಳಿಗೆ ಕೋಟ್ಯಾಂತರ ರೂ ವೆಚ್ಚ ಮಾಡಿ ಸರ್ಕಾರ ಪೊಲೀಸ್ ವಸತಿಗೃಹಗಳನ್ನು ನಿರ್ಮಿಸಿದೆ. ಆದರೆ ಸಂಬಂಧಪಟ್ಟವರ ನಿರ್ಲಕ್ಷ್ಯದಿಂದ ಕೋಟ್ಯಂತರ ರೂ ಬೆಲೆಬಾಳುವ ಪೊಲೀಸ್ ವಸತಿ ಗೃಹಗಳು ಮಳೆಯ ನೀರಿನಿಂದ ಸೋರುತ್ತಿದೆ. ಸೋರುತ್ತಿರುವ ವಸತಿ ಗೃಹ ಗಳ  ಮೇಲೆ ಪ್ಲಾಸ್ಟಿಕ್ ಟಾರ್ಪಲ್ ಹಾಕಿಕೊಂಡು ಮಳೆಯ ನೀರಿನಿಂದ ರಕ್ಷಣೆ   ಪಡೆಯುತ್ತಿದ್ದಾರೆ. ನಾಡಿನಲ್ಲಿ…

Read More

ಅರಸಾಳಿನ ಮಾಲ್ಗುಡಿ ರೈಲು ನಿಲ್ದಾಣದಲ್ಲಿ ನಿಲ್ಲದ ಇಂಟರ್‌ಸಿಟಿ ರೈಲು – ಮಲೆನಾಡಿನ ಪ್ರಯಾಣಿಕರಿಗಿಲ್ಲ ಟ್ರೈನ್ ಹತ್ತುವ ಭಾಗ್ಯ……..!!Train

ಅರಸಾಳಿನ ಮಾಲ್ಗುಡಿ ರೈಲು ನಿಲ್ದಾಣದಲ್ಲಿ ನಿಲ್ಲದ ಇಂಟರ್‌ಸಿಟಿ ರೈಲು – ಮಲೆನಾಡಿನ ಪ್ರಯಾಣಿಕರಿಗಿಲ್ಲ ಟ್ರೈನ್ ಹತ್ತುವ ಭಾಗ್ಯ……..!  ರಿಪ್ಪನ್‌ಪೇಟೆ : ಮೈಸೂರು-ಬೆಂಗಳೂರು-ಶಿವಮೊಗ್ಗ-ಸಾಗರ -ತಾಳಗುಪ್ಪ ಮಾರ್ಗದ ಇಂಟರ್ ಸಿಟಿ ರೈಲು ಆರಸಾಳು ರೈಲ್ವೆ ನಿಲ್ದಾಣದಲ್ಲಿ ನಿಲ್ಲದೆ ಇರುವುದರಿಂದ ಮಲೆನಾಡಿನ ಪ್ರಯಾಣಿಕರಿಗೆ ರೈಲು ಹತ್ತಿ ಇಳಿಯುವ ಯೋಗ ಇನ್ನೂ ಕೂಡಿ ಬಂದಿಲ್ಲ. ಈ ಹಿಂದೆ ತಾಳಗುಪ್ಪದಿಂದ ಹೋಗುತ್ತಿದ್ದ ಪ್ಯಾಸೆಂಜರ್ ರೈಲು ಕೊರೋನಾ ಸಂದರ್ಭದಲ್ಲಿ ನಿಲ್ಲಿಸಲಾಗಿದ್ದು ಅದು ಈಗ ಶಿವಮೊಗ್ಗಕ್ಕೆ ಬಂದು ಅಲ್ಲಿಂದ ಭರ್ತಿಯಾಗಿ ಹೋಗುತ್ತಿದೆ ಇದರಿಂದ ಕಡಿಮೆ ಖರ್ಚಿನಲ್ಲಿ ರಾಜಧಾನಿಗೆ…

Read More

ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯ – ಉಬೇದುಲ್ಲಾ ಷರೀಫ್|kenchanal

ರಿಪ್ಪನ್‌ಪೇಟೆ;-ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳಿಗಾಗಿ ನಲಿಕಲಿ ಶಿಕ್ಷಣ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಕಲಿಕೆಯಲ್ಲಿ ಗುಣಾತ್ಮಕವಾಗಿ ಮಕ್ಕಳ ಬೆಳವಣಿಗೆಯನ್ನಾದರಿಸಿ ಶಿಕ್ಷಣ ನೀಡಿ ಅವರನ್ನು ಪ್ರೋತ್ಸಾಹಿಸುವ ಗುರುತರ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕೆಂಚನಾಲ ಗ್ರಾಮ ಪಂಚಾಯ್ತಿ ಅಧ್ಯಕ್ಷ ಉಬೇದುಲ್ಲ ಷರೀಫ್ ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಅಯೋಜಿಸಲಾದ ಶಿವಮೊಗ್ಗ ಜಿಲ್ಲೆಯ ಆಯ್ದ ಕ್ಲಸ್ಟರ್ ಮಟ್ಟದ ಶಾಲೆಗಳಿಗೆ ಮತ್ತು ಶಿವಮೊಗ್ಗ ನಲಿಕಲಿ ಕ್ರಿಯಾಶೀಲ ತಾರೆಯರು ಸಹಕಾರ ಹಾಗೂ ಬೆಂಗಳೂರು ಮಾರುತಿ ಮೆಡಿಕಲ್ಸ್ ಮಾಲೀಕರಾದ ಮನೋಜ್ ಮೋಟೊ ರವರ ಸಹಕಾರದಿಂದ…

Read More

ಚರ್ಚ್ ಪಾದ್ರಿಯ ವಿರುದ್ದ ಪೋಕ್ಸೋ ದೂರು !pocso

ಚರ್ಚ್ ಪಾದ್ರಿಯ ವಿರುದ್ದ ಪೋಕ್ಸೋ ದೂರು ! ಶಿವಮೊಗ್ಗ : ಖಾಸಗಿ ಕಾಲೇಜಿನ‌ ಪ್ರಾಂಶುಪಾಲ ಹಾಗೂ ಚರ್ಚ್ ಪಾದ್ರಿಯ ವಿರುದ್ದ ಲೈಂಗಿಕ ಕಿರುಕುಳ ಮತ್ತು ಜಾತಿ ನಿಂದನೆ ಪ್ರಕರಣವೊಂದು ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ಕಾಲೇಜಿನ ಪ್ರಾಂಶುಪಾಲ ಹಾಗು ಚರ್ಚ್ ಫಾದರ್ ಆಗಿರುವ ಫ್ರಾನ್ಸಿಸ್ ಫರ್ನಾಂಡೀಸ್ ವಿರುದ್ಧ ದೂರು ದಾಖಲಾಗಿದೆ. ಪ್ರಾಂಶುಪಾಲನ ವಿರುದ್ದ ಪೋಕ್ಸೋ ಹಾಗು ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನ ಪೊಲೀಸರು ಬಂಧಿಸಿದ್ದು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆ ಇದೆ.

Read More

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್|BSY

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಲು ಕೆಳದಿ ಶಿವಪ್ಪನಾಯಕ ಕೃಷಿ ವಿಶ್ವವಿದ್ಯಾನಿಲಯ ತೀರ್ಮಾನಿಸಲಾಗಿದೆ. ಜುಲೈ 21 ರಂದು ( ನಾಳೆ ) ನೆಡೆಯುವ 8ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.‌

Read More

ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯ – ಕಿಮ್ಮನೆ ರತ್ನಾಕರ್|Press Day

ಹೊಸನಗರ,ಜು.೧೯: ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯವಾಗಿದೆ. ಹಿಂಸೆಯನ್ನು ಪ್ರಚೋದಿಸುವ ವರದಿಗಾರಿಕೆಯಿಂದ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕವು ಇಲ್ಲಿನ ಈಡಿಗರ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ,ಮಾದಕ ವ್ಯಸನ ಜಾಗೃತ ಅಭಿಯಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರು ರಂಜನೆಗಿಂತ ವಾಸ್ತವಕ್ಕೆ ಆದ್ಯತೆ ನೀಡಬೇಕು. ಪತ್ರಿಕೆ ಒಮ್ಮೆ ಮುದ್ರಣಗೊಂಡು ಹೊರಬಿದ್ದರೆ ಅದು ಸಾರ್ವಜನಿಕ ಸ್ವತ್ತಾಗುತ್ತದೆ…

Read More

ಹೊಸನಗರ ಕೊಡಚಾದ್ರಿ ಕಾಲೇಜಿನ ವಿದ್ಯಾರ್ಥಿಗಳ ಆಕ್ರೋಶಕ್ಕೆ ಮಣಿದ ಪದವಿ ಶಿಕ್ಷಣ ಇಲಾಖೆ – ಪ್ರಾಂಶುಪಾಲರ ಪದಚ್ಯುತಿ!!|kodachadri

ಹೊಸನಗರದ ಕೊಡಚಾದ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ಧ ಮಂಗಳವಾರ ಪ್ರತಿಭಟನೆ ನಡೆಸಿದರು. ಕೊಡಚಾದ್ರಿ ಕಾಲೇಜಿನ ಪ್ರಾಂಶುಪಾಲ ಅಂಜನ್ ಕುಮಾರ್ ಕಾರ್ಯವೈಖರಿಯನ್ನು ಪ್ರಶ್ನಿಸಿ ಈಚೆಗೆ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಲು ಜಂಟಿ ನಿರ್ದೇಶಕರು ಕಾಲೇಜಿಗೆ ಆಗಮಿಸಿದ ವೇಳೆ ವಿದ್ಯಾರ್ಥಿಗಳಿಂದ ದಿಡೀರ್ ಪ್ರತಿಭಟನೆ ನಡೆಯಿತು.ಈ ಸಂಧರ್ಭದಲ್ಲಿ ವಿದ್ಯಾರ್ಥಿಗಳು ಪ್ರಾಂಶುಪಾಲರ ವಿರುದ್ದ ಧಿಕ್ಕಾರ ಕೂಗಿದ ಪ್ರಸಂಗವು ನಡೆಯಿತು. ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಿದ್ಯಾರ್ಥಿಗಳಿಗೆ ಟಿಸಿ…

Read More