Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಬೆಳಕು ಕೊಟ್ಟ ನಾಡನ್ನು ಕತ್ತಲಲ್ಲಿರಿಸಿದ ಮೂರು ಪಕ್ಷಗಳನ್ನು ತಿರಸ್ಕರಿಸಿ – ಸಾಲೂರು ಶಿವಕುಮಾರ್|AAP

ರಾಜ್ಯಕ್ಕೆ ಬೆಳಕು ಕೊಟ್ಟ ನಾಡನ್ನು ಕತ್ತಲಲ್ಲಿರಿಸಿದ ಮೂರು ಪಕ್ಷಗಳನ್ನು ತಿರಸ್ಕರಿಸಿ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವ ಮೂಲಕ ಸದೃಡ,ನಿರ್ಭೀತ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಾಲೂರು ಶಿವಕುಮಾರ್ ಹೇಳಿದರು. ಹುಂಚ ಹೋಬಳಿಯ ಗರ್ತಿಕೆರೆ ಗ್ರಾಮದಲ್ಲಿ ಮತಯಾಚನೆ ಕಾರ್ಯಕ್ರಮದ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯಕ್ಕೆ ವಿದ್ಯುತ್ ನೀಡಲು ತನ್ನೆಲ್ಲಾ ಸರ್ವಸ್ವವನ್ನೂ ಕಳೆದುಕೊಂಡ ನಾಡನ್ನು ಈಗ ಕತ್ತಲಲ್ಲಿರಿಸಿರುವ ಪ್ರಮುಖ ಮೂರು ಪಕ್ಷಗಳನ್ನು…

Read More

ರಾಷ್ಟ್ರಕವಿ ಕುವೆಂಪು ಜಿಲ್ಲೆಯಲ್ಲಿ ನಾಡಗೀತೆ ಬದಲು ಮೊಳಗಿದ ತಮಿಳುನಾಡಿನ ನಾಡಗೀತೆ|election

ರಾಷ್ಟ್ರ ಕವಿ ಕುವೆಂಪು ರವರ ತವರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳು ನಾಡಗೀತೆ ಹಾಡಿರುವ ಘಟನೆ ನಡೆದಿದೆ. ನಗರದ ಎನ್ ಇಎಸ್ ಮೈದಾನದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ತಮಿಳು ಬಾಂಧವರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ  ಮಾಜಿ ಸಚಿವ ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಹಾಗೂ ಮುಖ್ಯ ಅಥಿತಿಗಳಾಗಿ ಅಣ್ಣಮಲೈ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಾಡಗೀತೆ ಹಾಡುಗೆ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಲು ಮುಂದಾಗಿದ್ದರು. ಆದರೆ ತಮಿಳು ನಾಡಿನ ನಾಡಗೀತೆ ಹಾಡು ಆರಂಭವಾಗಿತ್ತು. ತಕ್ಷಣವೇ ಈಶ್ವರಪ್ಪ…

Read More

ನಿಯಂತ್ರಣ ತಪ್ಪಿದ ಕಾರು ಕಾಂಪೌಂಡ್ ಗೆ ಡಿಕ್ಕಿ – ಚಾಲಕ ಸಾವು|accident

ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ಕಾರು ಕಾಂಪೌಂಡ್‌ಗೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಗೌತಮಪುರ ಸಂಭವಿಸಿದೆ. ಮೃತನನ್ನು ಪ್ರಜ್ವಲ್‌ ಎಂದು ಗುರುತಿಸಲಾಗಿದೆ. ಗೌತಮಪುರದಿಂದ ಕೋಟೆ ಕೊಪ್ಪಕ್ಕೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿದ್ದ ಮನೆಯೊಂದರ  ಕಾಂಪೌಂಡ್‌ಗೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ಪ್ರಜ್ವಲ್‌ ಗಂಭೀರವಾಗಿ ಗಾಯಗೊಂಡಿದ್ದು ಮೃತಪಟ್ಟಿದ್ದಾನೆ.  ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ಸಂಪನ್ನ|nagarahalli

“ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ  ಸಂಪನ್ನ’’ ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ಶ್ರೀನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ   ಶ್ರಿ ನಾಗೇಂದ್ರ ಸ್ವಾಮಿಯ ಹನ್ನೆರಡನೇ ವರ್ಷದ ಪ್ರತಿಷ್ಟಾವಧಂತಿ ಉತ್ಸವ ಮತ್ತು ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತೋತ್ಸವ ಕಾರ್ಯಕ್ರಮವು ಶ್ರದ್ದಾಭಕ್ತಿಯಿಂದ ಜರುಗಿತು. ನಾಗೇಂದ್ರಸ್ವಾಮಿಯ ಸನ್ನಿಧಿಯಲ್ಲಿ ದೇವತಾ ಪ್ರಾಥನೆ ಪೂಜೆ, ದೇವನಾಂದಿ,ಪ್ರಧಾನ ಸಂಕಲ್ಪ,ಮಹಾಗಣಪತಿ ಹವನ, ಸಪರಿವಾರ ಗಣಗಳಿಗೆ ಮೂಲಮಂತ್ರ ಹವನ ಹಾಗೂ ಪ್ರಾಯಶ್ಚಿತ್ತ ಹವನಗಳು ಶ್ರೀಸ್ವಾಮಿಗೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ,ಸಂಜೆ ಪ್ರಾಸಾದ ಶುದ್ಧಿ,ವಾಸ್ತು ,ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ಜಗದ್ಗುರು…

Read More

ಮೂಲೆಗದ್ದೆ ಶ್ರೀಗಳ ಅಶೀರ್ವಾದ ಪಡೆದ ಸಾಗರ ಕ್ಷೇತ್ರದ ಪಕ್ಷೇತ್ರರ ಅಭ್ಯರ್ಥಿ ಶಿವಕುಮಾರ್ ವಿ.ಪಾಟೀಲ್|election

ಮೂಲೆಗದ್ದೆ ಶ್ರೀಗಳ ಅಶೀರ್ವಾದ ಪಡೆದ  ಪಕ್ಷೇತ್ರರ ಅಭ್ಯರ್ಥಿ ಶಿವಕುಮಾರ್ ವಿ.ಪಾಟೀಲ್ ರಿಪ್ಪನ್‌ಪೇಟೆ;- ಮೇ 10 ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯ ಸಾಗರ-ಹೊಸನಗರ ಕ್ಷೇತ್ರದ ಪಕ್ಷೇತರ ಆಭ್ಯ್ಯರ್ಥಿ  ಶಿವಕುಮಾರ್ ವಿ.ಪಾಟೀಲ್  ಇಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀಗಳನ್ನು ಭೇಟಿ ಮಾಡಿ ಆಶಿರ್ವಾದ ಪಡೆದರು. ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಸಾಗರ ಹೊಸನಗರ ತಾಲ್ಲೂಕ್‌ ವ್ಯಾಪ್ತಿಯಲ್ಲಿ ವೀರಶೈವ ಲಿಂಗಾಯ್ತಿ ಮತದಾರರು ಹೆಚ್ಚು ಇದ್ದರೂ ಕೂಡಾ ಯಾವುದೇ ರಾಷ್ಟ್ರೀಯ ಪಕ್ಷದವರು ನಮ್ಮ ಜನಾಂಗವನ್ನು ಗುರುತಿಸದೇ ನಿರ್ಲಕ್ಷಿö್ಯಸುತ್ತಾ ಬಂದಿದ್ದು ಬರೀ ನಮ್ಮ…

Read More

PUC RESULT | ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ಅನ್ವಿತಾ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿಸಂಸ್ಥೆಯಿಂದ ಸನ್ಮಾನ

PUC RESULT | ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ಅನ್ವಿತಾ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿಸಂಸ್ಥೆಯಿಂದ ಸನ್ಮಾನ – IAS ಗುರಿ ಹೊಂದಿರುವ ಗ್ರಾಮೀಣ ಪ್ರತಿಭೆಯ ಮನದಾಳದ ಮಾತು ರಿಪ್ಪನ್ ಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಎರಡನೇ ರ್‍ಯಾಂಕ್ ಪಡೆದ ಗ್ರಾಮೀಣ ಪ್ರತಿಭೆ ಡಿ ಎನ್ ಅನ್ವಿತಾ ರವರಿಗೆ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಶಿವಮೊಗ್ಗದ ವಿಕಾಸ ಪಿಯುಸಿ ಕಾಂಪೊಸಿಟ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ಡಿ.ಎನ್….

Read More

ಸಾಗರ – ಶಿಕಾರಿಪುರದಲ್ಲಿ ಎಟಿಎಂ ವಾಹನದಲ್ಲಿ ದಾಖಲೆ ಇಲ್ಲದ ಕೋಟಿ ಕೋಟಿ ಹಣ ಪತ್ತೆ|ATM

ಶಿವಮೊಗ್ಗ: ಜಿಲ್ಲೆಯ ಮೂರು ಕಡೆಗಳಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 9.15 ಕೋಟಿ ರೂ. ದಾಖಲೆ ಇಲ್ಲದ ಹಣ ಪತ್ತೆಯಾಗಿದೆ.  ಶಿವಮೊಗ್ಗದ ಸಾಗರ, ಸೊರಬ ಮತ್ತು ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ಬೃಹತ್‌ ಮೊತ್ತದ ಹಣ ಪತ್ತೆಯಾಗಿದೆ. ಎಟಿಎಂಗೆ ಹಣ ತುಂಬುವ ವಾಹನಗಳಲ್ಲಿ ಈ ಹಣವನ್ನು ಅನಧಿಕೃತವಾಗಿ ತುಂಬಿಕೊಂಡು ಹೋಗಲಾಗುತ್ತಿತ್ತು. ಇದು ಯಾರ ಹಣ, ಎಲ್ಲಿಗೆ ಸಾಗಿಸಲಾಗುತ್ತಿತ್ತು? ಚುನಾವಣೆಗೂ ಇದಕ್ಕೂ ಏನಾದರೂ ಸಂಬಂಧವಿದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಎಟಿಎಂಗೆ…

Read More

ಲೋಕ ಕಲ್ಯಾಣಕ್ಕಾಗಿ ಸಂಪನ್ನಗೊಂಡ ಆಶ್ಲೇಷ ಬಲಿ ಪೂಜೆ|worship

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ತಮಡಿಕೊಪ್ಪ ಗ್ರಾಮದಲ್ಲಿ ಶ್ರೀ ಗುರು ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಸ್ವಾಮಿ ಹಾಗೂ ನಾಗದೇವತೆ ನಾಗಕ್ಷೇತ್ರದಲ್ಲಿ ಲೋಕಕಲ್ಯಾಣಕ್ಕಾಗಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ  ಶಾಸಕ ಹರತಾಳು ಹಾಲಪ್ಪ ಗೆಲುವಿಗಾಗಿ ಅವರ ಪರವಾಗಿ ಶ್ರೀ ಕ್ಷೇತ್ರದ ಧರ್ಮದರ್ಶಿಗಳು ಹಾಗೂ ಭಕ್ತರು ಹಾಗೂ ಗೃಹ ಸಚಿವರ ಆಪ್ತ ಸಹಾಯಕರಿಂದ ಹಾಗೂ ಹಾಲಪ್ಪ ಅಭಿಮಾನಿಗಳಿಂದ ಭಾನುವಾರ ಶ್ರೀ ಕ್ಷೇತ್ರದಲ್ಲಿ ವಿಶೇಷ ಆಶ್ಲೇಷ ಬಲಿ ಪೂಜೆ ವಿದ್ಯಾಪನ ಹೋಮ ಲಕ್ಷ್ಮಿ ಹೃದಯ ಹೋಮವು ಸಂಪನ್ನಗೊಂಡಿತು. ವೇದ…

Read More

ಶುದ್ದ ರಾಜಕಾರಣದ ಮಾತನಾಡುವ ತೀರ್ಥಹಳ್ಳಿಯ ಇಬ್ಬರು ಅಭ್ಯರ್ಥಿಗಳು ಚುನಾವಣೆ ಹಿಂದಿನ ದಿನ ಮತದಾರನ ಮನೆ ಬಾಗಿಲು ಬಡಿಯುವುದು ಯಾಕೆ – ಯಡೂರು ರಾಜಾರಾಂ|JDS

ಶುದ್ದ ರಾಜಕಾರಣದ ಮಾತನಾಡುವ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳು ಚುನಾವಣೆ ಹಿಂದಿನ ದಿನ ತಮ್ಮ ಕಾರ್ಯಕರ್ತರ ಮೂಲಕ ಮತದಾರನ ಮನೆ ಬಾಗಿಲು ತಟ್ಟುವುದು ಯಾಕೆ ಎಂದು  ಜೆಡಿಎಸ್ ಪಕ್ಷದ ಅಭ್ಯರ್ಥಿ ಯಡೂರು ರಾಜಾರಾಂ ಪ್ರಶ್ನೆ ಮಾಡಿದರು. ಹುಂಚಾ ಹೋಬಳಿ ವ್ಯಾಪ್ತಿಯ ಹುಂಚ, ಹೆದ್ದಾರಿಪುರ, ಕೋಡೂರು, ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಹಲವು ಗ್ರಾಮಗಳಿಗೆ ಭೇಟಿ ನೀಡಿ ಮತಯಾಚಿಸಿ ಕಲ್ಲೂರು ಗ್ರಾಮದಲ್ಲಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ,ಸಚ್ಚಾರಿತ್ರ್ಯದ ನಾಟಕವಾಡುವ ಇಬ್ಬರು ರಾಷ್ಟ್ರೀಯ ಪಕ್ಷದ ರಾಜಕಾರಣಿಗಳು ಚುನಾವಣೆಯ ಹಿಂದಿನ…

Read More

ಪ್ರಧಾನಿ ಮೋದಿಗೆ ಗುಂಡಿಕ್ಕಿ ಎಂದಿದ್ದ ಬೇಳೂರಿಗೆ ನೀವು ಮತ ಹಾಕುತ್ತೀರಾ – ಹರತಾಳು ಹಾಲಪ್ಪ|Political-news

ರಿಪ್ಪನ್‌ಪೇಟೆ : ಕಳೆದ ಚುನಾವಣೆಯ ಸಂದರ್ಭದ ದೇಶದ ಪ್ರಧಾನಿ ಮೋದಿಯವರಿಗೆ ಗುಂಡಿಕ್ಕಿ,ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬವನ್ನು ಜೈಲಿಗೆ ಕಳುಹಿಸಿ ಎಂದಿದ್ದ ಇದೇ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಈಗ ಯಡಿಯೂರಪ್ಪನವರಂತಹ ಪುಣ್ಯಾತ್ಮ ಎಂದು ಮತದಾರರ ಮುಂದೆ ಕಣ್ಣೀರು ಹಾಕುತ್ತಾ ಹಗಲು ವೇಷ ಮಾಡುತ್ತಿದ್ದಾರೆ ಅಂತವರಿಗೆ ನೀವು ಮತ ಹಾಕುತ್ತೀರಾ ಎಂದು ಶಾಸಕ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೇಳಿದರು. ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಬಾಳೂರು-ಕೆಂಚನಾಲ-ಅರಸಾಳು-ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದೊಂದಿಗೆ ಮನೆಮನೆಗೆ ಭೇಟಿ ಸಂದರ್ಭದಲ್ಲಿ ಅರಸಾಳು ಗ್ರಾಮದಲ್ಲಿ…

Read More
Exit mobile version