Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

23 ಕೋಟಿ ಮೌಲ್ಯದ ಚಿನ್ನ ಸೀಜ್

ತರೀಕೆರೆಯಲ್ಲಿ ಚುನಾವಣಾ ಸಿಬ್ಬಂದಿ  ಭರ್ಜರಿ ಬೇಟೆಯಾಡಿದ್ದಾರೆ. ಬರೋಬ್ಬರಿ 23 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಿದ್ದಾರೆ. ಸೀಜ್​ ಆದ ಬಂಗಾರದ ತೂಕ 40 ಕೆ.ಜಿ.  ಚಿಕ್ಕಮಗಳೂರು ಜಿಲ್ಲೆ  ತರೀಕೆರೆ ತಾಲೂಕಿನ ಎಂ.ಸಿ ಹಳ್ಳಿ ಪೋಲಿಸ್ ಚೆಕ್ ಪೋಸ್ಟ್ ನಲ್ಲಿ ಚೆಕ್ ಪೋಸ್ಟ್ ನಲ್ಲಿ ಬರೋಬ್ಬರಿ 40 ಕೆ.ಜಿ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.   ಚಿನ್ನವನ್ನು ಕಂಟೇನರ್‌ನಲ್ಲಿ ಸಾಗಿಸಲಾಗುತ್ತಿತ್ತು.ಚೆಕ್‌ಪೋಸ್ಟ್‌ನಲ್ಲಿ ಕಂಟೇನರ್‌ ತಡೆದು ತಪಾಸಣೆ ನಡೆಸಿದಾಗ ಆಭರಣಗಳು ಸಾಗಿಸುತ್ತಿರುವುದು ಕಂಡುಬಂದಿದೆ. ಆಭರಣಗಳಿಗೆ ಪೂರಕವಾಗಿ ಯಾವುದೇ ದಾಖಲೆಗಳು ನೀಡದೇ ಹಿನ್ನೆಲೆಯಲ್ಲಿ ಅದನ್ನು ಸೀಜ್​…

Read More

ರಿಪ್ಪನ್ ಪೇಟೆ ಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ – ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿ‌ ನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ|Ramadan

ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ  ಮುನೀರ್ ಸಖಾಫಿ ಮತ್ತು ಮುಪ್ತಿ ಇಜ್ ಹಾರ್ ಅಹಮದ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ ಒಂದು ತಿಂಗಳಿನಿಂದ ಉಪವಾಸ ಹಾಗೂ ಧಾರ್ಮಿಕ ಆಚರಣೆಗಳ ವಿಧಿವಿಧಾನಗಳನ್ನು ಪಾಲಿಸಿದ ಅವರುಗಳು ಶುಕ್ರವಾರ ಚಂದ್ರದರ್ಶನವಾದ ಹಿನ್ನೆಲೆಯಲ್ಲಿ  ಇಂದು…

Read More

PU RESULT | ಕಲಾ ವಿಭಾಗದಲ್ಲಿ ಶೇ 95% ಅಂಕ ಪಡೆದ ಮಿಸ್ಬಾ – ಆನಂದಪುರ ಪಿಯು ಕಾಲೇಜಿಗೆ ಶೇ 77% ರಷ್ಟು ಫಲಿತಾಂಶ

PUC RESULT | ಆನಂದಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 77% ರಷ್ಟು ಫಲಿತಾಂಶ ಆನಂದಪುರ : ಕಳೆದ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆನಂದಪುರದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇಕಡಾ 77 ರಷ್ಟು ಫಲಿತಾಂಶ ಬಂದಿದೆ. ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಮಿಸ್ಬಾ ಶೇಕಡಾ 95% ಅಂಕ ಗಳಿಸುವ ಮೂಲಕ ಅತ್ಯುನ್ನತ ಸಾಧನೆ ಮಾಡಿದ್ದಾರೆ. ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 143 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 110 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ಕಲಾ…

Read More

ಚೂರಿ ಇರಿದು ಯುವಕನ ಹತ್ಯೆ | crime news

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹೊಸಮನೆ ಠಾಣಾ ವ್ಯಾಪ್ತಿಯ ಸಾಯಿನಗರದಲ್ಲಿ ಶುಕ್ರವಾರ ಚೂರಿ ಇರಿದು ಯುವಕನನ್ನು ಕೊಲೆ ಮಾಡಲಾಗಿದೆ.  ಕೋಡಿಹಳ್ಳಿ ನಿವಾಸಿ ನವೀನ್ ಕುಮಾರ್ (25) ಮೃತ. ಚೂರಿಯಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳ ಗುಂಪು ಪರಾರಿಯಾಗಿದೆ. ಹೀಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಮೃತಪಟ್ಟಿದ್ದಾನೆ.  ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಹೊಸಮನೆ ಸತ್ಯಸಾಯಿನಗರದಲ್ಲಿ ಮೂವರು ಸೇರಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.ನವೀನ್ ಗೆ ಇತ್ತೀಚೆನ ಒಂದು…

Read More

ಜ್ಞಾನೇಂದ್ರ ಮತ್ತು ಹಾಲಪ್ಪ ಗೆಲುವಿಗೆ ಏಪ್ರಿಲ್ 23ರ ಭಾನುವಾರ ವಿಶೇಷ ಆಶ್ಲೇಷ ಬಲಿ-ಉದ್ಯಾಪನ ಹೋಮ

ಶ್ರೀ ಕರಿಬಸವೇಶ್ವರ ಮತ್ತು ಬಾಲಸುಬ್ರಮಣ್ಯ ಸ್ವಾಮಿ ಹಾಗೂ ನಾಗದೇವತೆ ನಾಗಕ್ಷೇತ್ರದಲ್ಲಿ ಆಶ್ಲೇಷ ಬಲಿ ರಿಪ್ಪನ್‌ಪೇಟೆ : ಇಲ್ಲಿಗೆ ಸಮೀಪದ ತಮ್ಮಡಿ ಕೊಪ್ಪದ ಉಕ್ಕಡಗಾತ್ರಿ ಶ್ರೀ ಗುರು ಕರಿಬಸವೇಶ್ವರ ಹಾಗೂ ಬಾಲಸುಬ್ರಮಣ್ಯ ಸ್ವಾಮಿ ಮತ್ತು ನಾಗದೇವತೆಗಳ ದೇವಾಲಯದಲ್ಲಿ ಏಪ್ರಿಲ್ 23ರ ಭಾನುವಾರ ವಿಶೇಷ ಆಶ್ಲೇಷ ಬಲಿ ಉದ್ಯಾಪನ ಹೋಮ ಲಕ್ಷ್ಮಿ ಹೃದಯ ಹೋಮವನ್ನು ಏರ್ಪಡಿಸಲಾಗಿದೆ. ದೇವಸ್ಥಾನದ ಧರ್ಮದರ್ಶಿ ಪ್ರಕಾಶ್ ಹಾಗೂ ದೇವಸ್ಥಾನದ ಭಕ್ತಾದಿಗಳು ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಶಾಸಕ ಹರತಾಳು ಹಾಲಪ್ಪ ಇವರುಗಳು ಮುಂಬರುವ ವಿಧಾನಸಭಾ…

Read More

ರಿಪ್ಪನ್‌ಪೇಟೆ ಕಾಲೇಜ್‌ಗೆ ಪಿಯು ಪರೀಕ್ಷೆಯಲ್ಲಿ 81.96% ರಷ್ಟು ಫಲಿತಾಂಶ

ರಿಪ್ಪನ್‌ಪೇಟೆ ಕಾಲೇಜ್‌ಗೆ ಪಿಯು ಪರೀಕ್ಷೆಯಲ್ಲಿ ಶೇಕಡಾ 81.96 ರಷ್ಟು ಫಲಿತಾಂಶ ರಿಪ್ಪನ್‌ಪೇಟೆ : ಕಳೆದ ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇಕಡಾ 81.96 ರಷ್ಟು ಫಲಿತಾಂಶ ಬಂದಿದೆ ಎಂದು ಕಾಲೇಜ್ ಪ್ರಾಚಾರ್ಯ ಎ.ಮಂಜುನಾಥ ತಿಳಿಸಿದರು. ಕಾಲೇಜಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಿಂದ 244 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 200 ವಿದ್ಯಾರ್ಥಿಗಳು ಉತ್ತೀರ್ಣಾರಾಗಿದ್ದಾರೆ. ಕಲಾ ವಿಭಾಗದಲ್ಲಿ 101 ವಿದ್ಯಾರ್ಥಿಗಳಲ್ಲಿ 80 ವಿದ್ಯಾರ್ಥಿಗಳು ಉತ್ತೀರ್ಣಾರಾಗುವ…

Read More

ಪಿಯುಸಿ ಫಲಿತಾಂಶ ಪ್ರಕಟ : ತೀರ್ಥಹಳ್ಳಿಯ ಅನ್ವಿತಾ ರಾಜ್ಯಕ್ಕೆ ಎರಡನೇ ರ‍್ಯಾಂಕ್‌ – ಅಮೃತಾ ಕಾಲೇಜಿಗೆ 90.28% ಫಲಿತಾಂಶ

ಕರ್ನಾಟಕದಾದ್ಯಂತ ಯಶಸ್ವಿಯಾಗಿ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಇಂದು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು, 7,26,195 ವಿದ್ಯಾರ್ಥಿಗಳ ಪೈಕಿ 5 ಲಕ್ಷದ 24 ಸಾವಿರ 209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ1,34,876 ಶ್ರ( ಶೇಕಡಾ 61.22ರಷ್ಟು) ವಿದ್ಯಾರ್ಥಿ ಪಾಸ್ ಆಗಿದ್ದರೆ, ವಾಣಿಜ್ಯ ವಿಭಾಗದಲ್ಲಿ 1,82,246 (ಶೇಕಡಾ 75.89ರಷ್ಟು) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಇನ್ನು ವಿಜ್ಞಾನ ವಿಭಾಗದಲ್ಲಿ 2,07,087 (ಶೇಕಡಾ 85.71ರಷ್ಟು) ಪಾಸ್…

Read More

ಕಂತೆ ಕಂತೆ ಹಣ ಎಣಿಸಿದ ಸಾಗರ ನಗರಸಭೆ ಉಪಾಧ್ಯಕ್ಷ – ವೀಡಿಯೋ ವೈರಲ್| ಶಾಸಕ ಹಾಲಪ್ಪ ಆಪ್ತನ ವಿರುದ್ದ ಪ್ರಕರಣ ದಾಖಲು|sagara

ಸಾಗರ ನಗರಸಭೆ ಉಪಾಧ್ಯಕ್ಷರ ಮನೆಯಲ್ಲಿ ಹಣ ತುಂಬುತ್ತಿರುವ ವಿಡಿಯೋ ವೈರಲ್ ಆಗಿದ್ದು, ಚುನಾವಣೆ ಆಯೋಗ ಎಫ್ಐಆರ್ ದಾಖಲಿಸಿಕೊಂಡಿದೆ. ಸಾಗರ ನಗರಸಭೆ ಉಪಾಧ್ಯಕ್ಷ ಮಹೇಶ್ ವಿರುದ್ಧ ಎಪ್ಐಆರ್ ದಾಖಲಾಗಿದೆ. ಸಾಗರ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪನವರ ಆಪ್ತನಾಗಿರುವ  ಮಹೇಶ್ ಹಣವನ್ನ ಬ್ಯಾಗಿಗೆ ತುಂಬುತ್ತಿರುವ ವಿಡಿಯೋ ವೈರಲ್ ಆಗಿದೆ. ಸಾಗರ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ದಾನಪ್ಪ ದೂರಿನ ಅನ್ವಯ ಎಫ್ಐಆರ್ ದಾಖಲಿಸಿದ್ದಾರೆ. ಎಫ್ಐಆರ್ ದಾಖಲಿಸಿಕೊಂಡು  ಸಾಗರ ಠಾಣೆ ಪೋಲೀಸರು ತನಿಖೆ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಮಹೇಶ್ ಬ್ಯಾಗಿಗೆ…

Read More

ಸಾಗರ ವಿಧಾನಸಭಾ ಚುನಾವಣೆಗೆ ಕೆಆರ್ ಎಸ್ ಪಕ್ಷದಿಂದ ಸ್ಪರ್ಧೆಗಿಳಿದ ಟಿಕ್ಕಿ ಅಬ್ಬಿ ಕಿರಣ್|election

ಸಾಗರ ವಿಧಾನಸಭಾ ಚುನಾವಣೆಗೆ ಕೆಆರ್ ಎಸ್ ಪಕ್ಷದಿಂದ ಸ್ಪರ್ಧೆಗಿಳಿದ ಟಿಕ್ಕಿ ಅಬ್ಬಿ ಕಿರಣ್ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ.ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮತ್ತು ಆಮ್ ಆದ್ಮಿ ಪಕ್ಷದಲ್ಲಿ ಅಬ್ಬರದ ಪ್ರಚಾರ ಮೆರವಣಿಗೆಗಳು ನಡೆಯುತ್ತಿವೆ. ಆದರೆ ಈ ಅಬ್ಬರದ ಪ್ರಚಾರದ ಮಧ್ಯೆ ಒಬ್ಬ ಇಂಜಿನಿಯರ್ ವಿಭಿನ್ನವಾಗಿ ಪ್ರಚಾರ ನಡೆಸುತ್ತಿದ್ದು, ಹಣವಂತರು- ಅಬ್ಬರದ ಪ್ರಚಾರದ ಮಧ್ಯೆ ಟೆಕ್ಕಿ (Techie) ಸರಳ ರೀತಿಯಲ್ಲಿ ಅಖಾಡಕ್ಕೆ ಇಳಿದಿದ್ದಾರೆ.  ಹೌದು ಹೊಸನಗರ ತಾಲೂಕಿನ ಮುಂಬಾರು ಗ್ರಾಪಂ ವ್ಯಾಪ್ತಿಯ ಬೇಹಳ್ಳಿ ಗ್ರಾಮದ…

Read More

ಶಿವಮೊಗ್ಗ, ಭದ್ರಾವತಿಯಲ್ಲಿ ಗುಡುಗು ಸಹಿತ ಮಳೆ|Rain

ಶಿವಮೊಗ್ಗ : ಬಾರಿ ಬಿಸಿಲಿನಿಂದಾಗಿ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗ, ಭದ್ರಾವತಿಯಲ್ಲಿ ಮಳೆಯಾಗುತ್ತಿದೆ . ಗುಡುಗು ಸಹಿತ ಮಳೆ ಸುರಿಯುತ್ತಿರುವುದರಿಂದ ಜನರು ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸಂಜೆ ವೇಳೆಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಗಾಳಿ, ಗುಡುಗು ಸಹಿತ ಜೋರಾಗಿ ಮಳೆಯ ಸುರಿಯಲು ಆರಂಭವಾಗಿದೆ. ಇದರಿಂದ ಶಿವಮೊಗ್ಗ ನಗರದಲ್ಲಿ ತಂಪು ವಾತಾವರಣ ನಿರ್ಮಾಣವಾಗಿದೆ.ಇನ್ನು ಭದ್ರಾವತಿ ಯಲ್ಲೂ ಗುಡುಗು, ಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ.  ಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆಯಾಗುತ್ತಿದ್ದಂತೆ ಖುಷಿಯಾದರು. ದಿಢೀರ್‌ ಮಳೆಯಿಂದಾಗಿ ಜನರು ಅಂಗಡಿಗಳು,…

Read More
Exit mobile version