Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಶಿವಮೊಗ್ಗ ನಗರ ಕ್ಷೇತ್ರಕ್ಕೆ ಆಯನೂರು ಮಂಜುನಾಥ್ , ಚೆನ್ನಬಸಪ್ಪ ,ಯೋಗೀಶ್ ನಾಮಪತ್ರ ಸಲ್ಲಿಕೆ – ತ್ರಿಕೋನ ಸ್ಪರ್ಧೆಗೆ ಸಜ್ಜಾದ ಕ್ಷೇತ್ರ|election

 ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಪಕ್ಷದ ಘಟಾನುಗಟಿಗಳು ಇಂದು ನಾಮಪತ್ರ ಸಲ್ಲಿಸುವ ಮೂಲಕ ಚುನಾವಣ ಕಣ ರಂಗೇರಿದೆ.  ಕಾಂಗ್ರೆಸ್‌ನಿಂದ ಹೆಚ್.ಸಿ. ಯೋಗೀಶ್, ಬಿಜೆಪಿಯಿಂದ ಎಸ್.ಎನ್. ಚನ್ನಬಸಪ್ಪ ಹಾಗೂ ಜೆಡಿಎಸ್‌ನಿಂದ ಆಯನೂರು ಮಂಜುನಾಥ್ ಇಂದು ವಿಧಾನಸಭಾ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದರು. ಇಂದು ಮೊದಲು ಬಿಜೆಪಿಯಿಂದ ಜೆಡಿಎಸ್ ಪಕ್ಷ ಸೇರಿ ಬಿ ಫಾರಂ ಪಡೆಯಲು ಯಶಸ್ವಿಯಾದ ಆಯನೂರು ಮಂಜುನಾಥ್ ಪ್ರಥಮ ಬಾರಿಗೆ ಜಿಲ್ಲಾ ಜೆಡಿಎಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿದರು. ನಂತರ ಜಿಲ್ಲಾ ಜೆಡಿಎಸ್…

Read More

ಕೊನೆಗೂ ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯ ಹೆಸರು ಪ್ರಕಟ|election

ಶಿವಮೊಗ್ಗ ನಗರದ ಬಿಜೆಪಿ ಪಕ್ಷದ ಅಭ್ಯರ್ಥಿ ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಅಂತಿಮ ಪಟ್ಟಿಯನ್ನು ಪಕ್ಷ ಪ್ರಕಟಿಸಿದ್ದು ಶಿವಮೊಗ್ಗದಿಂದ ಎಸ್‍.ಎನ್.ಚನ್ನಬಸಪ್ಪ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಮಹಾನಗರ ಪಾಲಿಕೆ ಸದಸ್ಯರಾಗಿರುವ ಎಸ್‍.ಎನ್.ಚನ್ನಬಸಪ್ಪ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.ಚನ್ನಬಸಪ್ಪ ಮಹಾನಗರ ಪಾಲಿಕೆ ಉಪ ಮೇಯರ್ ಆಗಿದ್ದರು. ಬಳಿಕ ಪಾಲಿಕೆ ಆಡಳಿತ ಪಕ್ಷದ ನಾಯಕರಾಗಿಯು ಜವಾಬ್ದಾರಿ ನಿಭಾಯಿಸಿದ್ದರು. ಎಸ್‍.ಎನ್.ಚನ್ನಬಸಪ್ಪ ಅವರು ಈಶ್ವರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಅಳೆದು ತೂಗಿ ಚನ್ನಬಸಪ್ಪ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.

Read More

ಆರಗ ಆಸ್ತಿ ಮೂರು ಪಟ್ಟು ಹೆಚ್ಚು – ಕಿಮ್ಮನೆ ಆಸ್ತಿಯಷ್ಟೇ ಸಾಲ|ಜಿಲ್ಲೆಯ ಪ್ರಮುಖ ಅಭ್ಯರ್ಥಿಗಳ ಆಸ್ತಿ ಎಷ್ಟಿದೆ.???? ಈ ಸುದ್ದಿ ನೋಡಿ

ಜಿಲ್ಲೆಯ ವಿವಿಧ ವಿಧಾನಸಭೆ ಕ್ಷೇತ್ರ (Karnataka assembly election 2023)ಗಳಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪ್ರಮುಖ ಅಭ್ಯರ್ಥಿಗಳ ಆಸ್ತಿ ವಿವರ ಕೆಳಗಿನಂತಿದೆ. ಆರಗ ಜ್ಞಾನೇಂದ್ರ, ತೀರ್ಥಹಳ್ಳಿ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆರಗ ಅವರ ಆಸ್ತಿ ಕಳೆದ ವರ್ಷಕ್ಕೆ ಹೋಲಿಸಿದರೆ ಮೂರು ಪಟ್ಟು ಏರಿಕೆಯಾಗಿದೆ. ₹6.28 ಕೋಟಿ ಆಸ್ತಿ ಘೋಷಿಸಿದ್ದಾರೆ. 20 ಎಕರೆ ಜಮೀನು ಇದೆ, ಮೂರು ಕಾರು, ಪತ್ನಿ ಬಳಿ 250 ಗ್ರಾಂ ಚಿನ್ನವಿದೆ. ಕಿಮ್ಮನೆ ರತ್ನಾಕರ್, ತೀರ್ಥಹಳ್ಳಿ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಅವರು…

Read More

ರಿಪ್ಪನ್‌ಪೇಟೆ : ನೇಣಿಗೆ ಶರಣಾದ ಆಟೋ ಚಾಲಕ ವೆಂಕಟೇಶ್|crime news

ರಿಪ್ಪನ್‌ಪೇಟೆ : ನೇಣಿಗೆ ಶರಣಾದ ಆಟೋ ಚಾಲಕ ರಿಪ್ಪನ್‌ಪೇಟೆ;- ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿ ಆಟೋ ಚಾಲಕ ವೆಂಕಟೇಶ್ (೫೩)ಎಂಬುವರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕೋವಿಡ್ ಮುಂಜಾಗ್ರತಾ ಚುಚ್ಚುಮದ್ದು ಪಡೆದ ನಂತರ  ದೇಹದ ಎಡಭಾಗ ಸ್ವಾದೀನ ಕಳೆದುಕೊಂಡಿದ್ದು ಮಣಿಪಾಲ ಸೇರಿದಂತೆ ವಿವಿಧಡೆಯಲ್ಲಿ ಚಿಕಿತ್ಸೆ ಕೊಡಿಸಿದರು ಚಿಕಿತ್ಸೆ ಫಲಕಾರಿಯಾಗದೇ ಜೀವನದಲ್ಲಿ ಜಿಗುಪ್ಸೆಗೊಂಡ ಅವರು ಬುಧವಾರ ಬೆಳಗ್ಗೆ ಮನೆಯಲ್ಲಿ ನೇಣಿಗೆ ಕೊರಳೊಡಿದ್ದಾರೆ ಎಂದು ಕುಟುಂಬ ವರ್ಗದವರು ದೂರು ದಾಖಲಿಸಿದ್ದಾರೆ. ಮೃತ…

Read More

ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವು|accident

ರಿಪ್ಪನ್‌ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ನದೀಮ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ  ಸಮೀಪದ ಗರ್ತಿಕೆರೆಯಲ್ಲಿ ಏಪ್ರಿಲ್ 2 ರಂದು ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ  ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಗಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿತ್ತು.ಮೆಗ್ಗಾನ್ ನಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ…

Read More

ಆನ್ ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಡ್ಡೆಯ ಮೇಲೆ ಪೊಲೀಸರ ದಾಳಿ – ಮೂವರ ಬಂಧನ : 25 ಲಕ್ಷ ರೂ ಸೀಜ್

ಚುನಾವಣೆಯ ಚಟುವಟಿಕೆಗಳ ನಡುವೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್​ ಕೂಡ ಜೋರಾಗಿದೆ. ಈ ಸಂಬಂಧ ಶಿವಮೊಗ್ಗ ಪೊಲೀಸ್ ಆನ್‌ ಲೈನ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ದಂಧೆಗೆ ಕಡಿವಾಣ ಹಾಕಿದ್ದಾರೆ.  ಶಿವಮೊಗ್ಗದಲ್ಲಿ ಕ್ರಿಕೆಟ್ ಬೆಟ್ಟಿಂಗ್​(ipl betting) ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಸಿಇಎನ್​ ಪೊಲೀಸ್​ ಸ್ಟೇಷನ್​ ಪಿಐ ಸಂತೋಷ್ ಪಾಟೀಲ್ ನೇತೃತ್ವದಲ್ಲಿ ಟೀಂವೊಂದನ್ನ ರಚಿಸಲಾಗಿತ್ತು. ಸದ್ಯ ಈ ಟೀಂ ಕಳೆದ  15-04-2023 ರಂದು ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ಆಡುತಿದ್ದವರ ಮೇಲೆ ದಾಳಿ ನಡೆಸಿದೆ. ಇನ್ನೂ ಈ…

Read More

ರಿಪ್ಪನ್‌ಪೇಟೆ : ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್

ಅಧಿಕಾರಿಗಳ ನಿರ್ಲಕ್ಷ್ಯ – ನಾಡಕಛೇರಿ ಮುಂಭಾಗದಲ್ಲಿ ರಾರಾಜಿಸುತ್ತಿದೆ 2018 ರ ಚುನಾವಣೆಯ ಬ್ಯಾನರ್ ರಿಪ್ಪನ್‌ಪೇಟೆ;- ಐದು ವರ್ಷಕ್ಕೊಮ್ಮೆ ನಡೆಯುವ ವಿಧಾನಸಭಾ ಚುನಾವಣೆ ಕಳೆದು ಪುನ: ಚುನಾವಣೆ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಇಲ್ಲಿನ ನಾಡಕಛೇರಿ ಮತ್ತು ಗ್ರಾಮ ಪಂಚಾಯ್ತಿ ಕಛೇರಿ ಮುಂಭಾಗ ಇನ್ನೂ ಚುನಾವಣಾ ಅಯೋಗದವರು 2018 ರ ವಿಧಾನಸಭಾ ಚುನಾವಣೆ ಬ್ಯಾನರ್ ತಗೆಯದೇ ನಿರ್ಲಕ್ಷö್ಯ ವಹಿಸಿದ್ದಾರೆಂಬುದಕ್ಕೆ ಇಲ್ಲಿ ರಾರಾಜಿಸುತ್ತಿರುವ ಹಳೆಯ ಬ್ಯಾನರ್‌ಗಳೇ ಸಾಕ್ಷಿಕರಿಸುತ್ತಿವೆ. ಈಗಾಗಲೇ 2023 ರ ವಿಧಾನಸಭಾ ಚುನಾವಣೆ ಪ್ರಕಟಗೊಂಡು ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದರೂ…

Read More

ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿರುವ ಬಿ ವೈ ವಿಜಯೇಂದ್ರ ರ ಒಟ್ಟು ಆಸ್ತಿ ಎಷ್ಟು ಗೊತ್ತಾ???? ಪತ್ನಿಗೆ ಸಾಲ ಕೊಟ್ಟಿರುವ BYV ಗೆ ಸ್ವಂತ ಕಾರು ಇಲ್ಲ!!! ಈ ಸುದ್ದಿ ನೋಡಿ

ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉತ್ತರಾಧಿಕಾರಿಯಾಗಿ ಶಿಕಾರಿಪುರದಲ್ಲಿ ಕಣಕ್ಕಿಳಿದಿದ್ದಾರೆ. ಯಡಿಯೂರಪ್ಪ ಅವರು ಚುನಾವಣೆ ರಾಜಕೀಯದಿಂದ ಹಿಂದೆ ಸರಿದು ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಟ್ಟಿದ್ದಾರೆ. ಅದರಂತೆ ವಿಜಯೇಂದ್ರ ಅವರು ಶಿಕಾರಿಪುರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ತಮ್ಮ ಕುಟುಂಬದ ಆಸ್ತಿ ಎಷ್ಟು? ಅವರ ಬಳಿ ಏನೆಲ್ಲಾ ಇದೆ ಎನ್ನುವುದನ್ನು ವಿಜಯೇಂದ್ರ ಅವರು ನಾಮಿನೇಷನ್​ನಲ್ಲಿ ಮಾಹಿತಿ ನೀಡಿದ್ದಾರೆ.  ಬಿವೈ ವಿಜಯೇಂದ್ರ ಮತ್ತು ಅವರ ಪತ್ನಿ ಪ್ರೇಮಾ ವಿಜಯೇಂದ್ರ ಒಟ್ಟು…

Read More

ಇದು ನನ್ನ ಕೊನೆಯ ಚುನಾವಣೆ – ಆರಗ ಜ್ಞಾನೇಂದ್ರ |ಸಾವಿರಾರು ಅಭಿಮಾನಿಗಳೊಂದಿಗೆ ಮೆರವಣಿಗೆ ತೆರಳಿ ನಾಮಪತ್ರ ಸಲ್ಲಿಸಿದ ಆರಗ

ತೀರ್ಥಹಳ್ಳಿ : ಈ ಬಾರಿಯ ಚುನಾವಣೆ ನನ್ನ ಕೊನೆ ಚುನಾವಣೆಯಾಗಿದ್ದು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ಹತ್ತನೇ ಬಾರಿಗೆ ಒಂದೇ ಪಕ್ಷ ಒಂದೇ ಚಿಹ್ನೆಯಲ್ಲಿ ನಾಮಪತ್ರ ಸಲ್ಲಿಸಿದ್ದೇನೆ. ಕಳೆದ 9 ಚುನಾವಣೆಯಲ್ಲಿ 4 ಬಾರಿ ತೀರ್ಥಹಳ್ಳಿ ಜನ ನನ್ನನ್ನು ಗೆಲ್ಲಿಸಿದ್ದಾರೆ. 15 ಸಾವಿರಕ್ಕೂ ಹೆಚ್ಚು ಜನ ಇವತ್ತು ಬಂದು ನನಗೆ ಆಶೀರ್ವದಿಸಿದ್ದಾರೆ ಇದೇ ನನ್ನ ಕೊನೆಯ ಚುನಾವಣೆಯಾಗಿದ್ದು…

Read More

ಹಾಲಪ್ಪ ಮನೆ ಹಾಳು ಮಾಡೋದ್ರಲ್ಲಿ ನಂಬರ್ ಒನ್: ಬೇಳೂರು ಗೋಪಾಲಕೃಷ್ಣ ಆರೋಪ|political news

ಹಾಲಪ್ಪ ಮನೆ ಹಾಳು ಮಾಡೋದ್ರಲ್ಲಿ ನಂಬರ್ ಒನ್, : ಬೇಳೂರು ಗೋಪಾಲ ಕೃಷ್ಣ ಆರೋಪ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರಿಂದ ಭರ್ಜರಿ ಚುನಾವಣಾ ಪ್ರಚಾರ. ರಿಪ್ಪನ್ ಪೇಟೆ :ಹಿಂದೆ ಸೊರಬದಲ್ಲಿ ಬಂಗಾರಪ್ಪ ಕುಟುಂಬ ಒಡೆದು, ಮನೆ ಹಾಳು ಮಾಡಿದ್ರು.ಈಗ ಸಾಗರದಲ್ಲಿ ಕಾಗೋಡು ತಿಮ್ಮಪ್ಪ ಕುಟುಂಬ ಒಡೆದು, ಮನೆ ಹಾಳು ಮಾಡೋಕೆ ರೆಡಿ ಆಗಿದ್ದಾರೆ. ಎಂದು ಮಾಜಿ ಶಾಸಕ ಹಾಗೂ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಪಟ್ಟಣದಲ್ಲಿ  ಚುನಾವಣಾ ಪ್ರಚಾರ  ಭಾಷಣ …

Read More