Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಹುಲಿಕಲ್ ಘಾಟ್ ರಸ್ತೆ ಕಾಮಗಾರಿ ಪೂರ್ಣ – ವಾಹನ ಸಂಚಾರ ಪುನರಾರಂಭ|hulikal ghat

ಕರಾವಳಿ ಹಾಗೂ ಮಲೆನಾಡಿಗೆ ಸಂಪರ್ಕ ಕಲ್ಪಿಸುವ ಬಾಳೆಬರೆ (ಹುಲಿಕಲ್‌) ಘಾಟ್‌ನ ‌ಕಾಂಕ್ರಿಟೀಕರಣ ಕಾಮಗಾರಿಯು ಪೂರ್ಣಗೊಂಡಿದ್ದು, ಶನಿವಾರ (ಏ.15) ರಾತ್ರಿಯಿಂದ ವಾಹನ ಸಂಚಾರ ಪುನಃ ಆರಂಭಗೊಂಡಿದೆ. ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ, ಚರಂಡಿ ನಿರ್ಮಾಣ ಕಾಮಗಾರಿಗಳಿಗಾಗಿ ಫೆ. 5 ರಿಂದ ಏ. 5ರ ವರೆಗೆ ಈ ಘಾಟಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಆ ಬಳಿಕ ಏ. 5ರಂದು ಕಾಮಗಾರಿ ಪೂರ್ಣಗೊಳ್ಳದ ಕಾರಣ ಮತ್ತೆ 10 ದಿನಗಳ ವರೆಗೆ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ….

Read More

ಐಶರಾಮಿ ಜೀವನ ನಡೆಸುವ ಬೇಳೂರು ದೇಣಿಗೆಯ ನಾಟಕವಾಡುತಿದ್ದಾರೆ – ಹರತಾಳು ಹಾಲಪ್ಪ ವಾಗ್ದಾಳಿ|election

ರಿಪ್ಪನ್‌ಪೇಟೆ : ಯಡಿಯೂರಪ್ಪನವರ ರಾಜ್ಯದ ಮುಖ್ಯಮಮತ್ರಿಗಳಾಗಿದ್ದ ಆವಧಿಯಲ್ಲಿ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರೆಸಾರ್ಟ್ ರಾಜಕೀಯ ಮಾಡುವ ಮೂಲಕ ಕಣ್ಣಿರು ಹಾಕಿಸಿದರ ಪರಿಣಾಮ ಈಗ ಮತದಾರರ ಮುಂದೆ ಕಣ್ಣಿರು ಹಾಕಿ ಅನುಕಂಪ ಗಿಟ್ಟಿಸಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ, ಈಗ ಹೋದಲ್ಲಿ ಬಂದಲ್ಲಿ ಕಣ್ಣೀರು ಹಾಕುತ್ತಿರುವುದು ಯಡಿಯೂರಪ್ಪ ನವರಿಗೆ ಕಣ್ಣೀರು ಹಾಕಿಸಿದ ಪಾಪ,ಯಡಿಯೂರಪ್ಪ ನವರಿಗೆ ಕಣ್ಣಿರು ಹಾಕಿಸಿದ ಮೊದಲ ವ್ಯಕ್ತಿ ಈ ಬೇಳೂರು ಗೋಪಾಲಕೃಷ್ಣ ಎಂದು ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೇಳಿದರು. ಅವರು ಇಂದು ರಿಪ್ಪನ್‌ಪೇಟೆಯಲ್ಲಿ ಕಾರ್ಯಕರ್ತರ…

Read More

ಬೇಳೂರು ಗೋಪಾಲಕೃಷ್ಣ ನಾಮಪತ್ರ ಸಲ್ಲಿಕೆ – ಸಾಗರದಲ್ಲಿ ಪ್ರೀತಿಯಿಂದ ಹರಿದು ಬಂದ ಅಭಿಮಾನಿಗಳ ಜನಸಾಗರ|nomination

ಸಾಗರ : ವಿಧಾನಸಭಾ ಕ್ಷೇತ್ರದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ಮೊದಲು ಸಾಗರದ ಗಣಪತಿ ದೇವಸ್ಥಾನದಲ್ಲಿ ದಂಪತಿ ಸಮೇತ ಪೂಜೆ ಸಲ್ಲಿಸಿ ಕಾಂಗ್ರೆಸ್ ಕಚೇರಿ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ನಂತರ ಮಾಧ್ಯಮಗಳಿಗೆ ಮಾತನಾಡಿದ, ಗೋಪಾಲಕೃಷ್ಣ ಬೇಳೂರು, ಇವತ್ತು ಒಳ್ಳೆಯ ದಿನ ಎಂದು ನಾಮಪತ್ರ ಸಲ್ಲಿಸಿದ್ದೆನೆ. ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಕಾಂಗ್ರೆಸ್ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದೇನೆ. ಸರಳವಾಗಿ ನಾಮಪತ್ರ ಸಲ್ಲಿಸುವ ಉದ್ದೇಶದಿಂದ ಯಾವ ಕಾರ್ಯಕರ್ತರಿಗೂ ಕರೆ ಕೊಟ್ಟಿಲ್ಲ. ಅದರೂ,…

Read More

ಕಾಂಗ್ರೆಸ್ 140ಕ್ಕೂ ಹೆಚ್ಚು ಸ್ಥಾನವನ್ನು ಗೆಲ್ಲಲಿದೆ – ಮಧು ಬಂಗಾರಪ್ಪ

ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ‌ ಕಾಂಗ್ರೆಸ್ ಪಕ್ಷ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದು ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷರು ಹಾಗೂ ಸೊರಬ ವಿಧಾನಸಭಾ ಅಭ್ಯರ್ಥಿಯಾದ ಮಧುಬಂಗಾರಪ್ಪ ಹೇಳಿದರು. ಅವರು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆದ್ದಾರಿಪುರ ಸಮೀಪದ ಕಗ್ಗಲಿಜಡ್ಡು ಗ್ರಾಮದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ರಾಜ್ಯಕ್ಕೆ ಬೆಳಕು ನೀಡುವ ಉದ್ದೇಶದಿಂದ ಶರಾವತಿ ಮುಳುಗಡೆಯಾಗಿ ಅಲ್ಲಿನ ರೈತರು ಮನೆಮಠವನ್ನು ಕಳೆದು ಕೊಂಡ ಸಂತ್ರಸ್ಥರು ಹೆಚ್ಚು ಹೊಸನಗರ…

Read More

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ಸ್ಥಳದಲ್ಲಿಯೇ ಯುವಕ ಸಾವು|accident

ಶಿವಮೊಗ್ಗ ನಗರದ ಹೊರವಲಯದ ಅಗಸವಳ್ಳಿಯಲ್ಲಿ  ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಹಿಂಬದಿಯ ಸವಾರ ಸ್ಥಳದಲ್ಲಿಯೇ ಸಾವು ಕಂಡಿದ್ದಾನೆ. ಗೋವಿಂದಾಪುರದ ನಿವಾಸಿ ಕಿಶನ್ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಯಾಗಿದ್ದಾರೆ. ಶಿವಮೊಗ್ಗ ನಗರದಲ್ಲಿ ಗಾರೆ ಕೆಲಸಕ್ಕೆಂದು ಗೋವಿಂದಾಪುರದಿಂದ ಲಕ್ಷಣ.ಪಿ ಎಂಬುವವರ ಜೊತೆ ಬೈಕ್ ನಲ್ಲಿ ಬರುವಾಗ‌ ಈ ಅಪಘಾತ ಸಂಭವಿಸಿದೆ. ಅಗಸವಳ್ಳಿಯ ಸಂಪತ್ ಮನೆಯ ಎದುರಿನ ರಸ್ತೆಯಲ್ಲಿ ಕೆಎ28-7851 ಕ್ರಮ ಸಂಖ್ಯೆಯ ನೀರಿನ ಟ್ಯಾಂಕ್ ಲಾರಿಯು ಎದುರಿನಿಂದ ಬಂದು ಡಿಕ್ಕಿಯಾದ ಪರಿಣಾಮ ಕಿಶನ್ (19) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ….

Read More

ಸಾಗರ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪಗಿಂತ ಪತ್ನಿ ಯಶೋಧ ಶ್ರೀಮಂತೆ!!! ಆಸ್ತಿ ಎಷ್ಟು ಗೊತ್ತಾ ?|halappa

ಸಾಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹಾಲಪ್ಪ ಹರತಾಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಯಲ್ಲಿ ಹಾಲಪ್ಪನವರು ಚುನಾವಣಾ ಆಯೋಗಕ್ಕೆ ನೀಡಿದ ಆಸ್ತಿ ವಿವರದಲ್ಲಿ ಹಾಲಪ್ಪ ಅವರಿಗಿಂತ ಅವರ ಪತ್ನಿ ಯಶೋಧ ಅವರು ಹೆಚ್ಚು ಆಸ್ತಿ ಹೊಂದಿರುವುದಾಗಿ ತೋರಿಸಲಾಗಿದೆ. ಹಾಲಪ್ಪನವರು 2,75,11,577 ರೂ. ಮೌಲ್ಯದ ಸ್ಥಿರಾಸ್ತಿ ಹಾಗೂ ಚರಾಸ್ತಿ ಹೊಂದಿದ್ದಾರೆ. ಇವರ ಪತ್ನಿ ಯಶೋಧ ಅವರು 3,49,90,897 ರೂ. ಮೌಲ್ಯದ ಸ್ಥಿರಾಸ್ತಿ ಹಾಗೂ ಚರಾಸ್ತಿ ಹೊಂದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಇನ್ನು, ಹಾಲಪ್ಪ ಅವರ ತಾಯಿಯವರು 67,91,324 ರೂ. ಮೌಲ್ಯದ…

Read More

ಪಿಎಸ್ ಐ ಹಗರಣದ ಆರೋಪಿಗಳು ತೀರ್ಥಹಳ್ಳಿಯಲ್ಲಿ ಆರಗ ಪರ ಪ್ರಚಾರ ನಡೆಸುತಿದ್ದಾರೆ – ಕಿಮ್ಮನೆ|election campaign

ಪಿಎಸ್ ಐ ಹಗರಣದ ಆರೋಪಿಗಳು ತೀರ್ಥಹಳ್ಳಿಯಲ್ಲಿ ಆರಗ ಪರ ಪ್ರಚಾರ ನಡೆಸುತಿದ್ದಾರೆ – ಕಿಮ್ಮನೆ ರಿಪ್ಪನ್‌ಪೇಟೆ : ಪಿಎಸ್ ಐ ಹಗರಣದ ಆರೋಪಿಗಳಲ್ಲಿ ಮೂವರು ತೀರ್ಥಹಳ್ಳಿಯಲ್ಲಿ ಗೃಹ ಸಚಿವರ ಪರ ಪ್ರಚಾರ ನಡೆಸುತಿದ್ದಾರೆ ಎಂದು ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಹುಂಚ ಹೋಬಳಿಯ ಕಗಲಿಜಡ್ಡು ಗ್ರಾಮದಲ್ಲಿ ಚುನಾವಣ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಿಎಸ್ ಐ ಹಗರಣದ ಆರೋಪಿ ದಿವ್ಯಾ ಹಾಗರಗಿ ,ಸ್ಯಾಂಟ್ರೋ ರವಿ ಹಾಗೂ…

Read More

ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು

ಏ 17 ರ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸುತ್ತೇನೆ – ಬೇಳೂರು  ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಚುನಾವಣಾ ಕಾವು ರಂಗೇರಿದ್ದು ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಹರತಾಳು ಹಾಲಪ್ಪ ನಾಮಪತ್ರ ಸಲ್ಲಿಸಿದ್ದು ,ಇನ್ನೂ ಹಲವರು ನಾಮಪತ್ರ ಸಲ್ಲಿಸಿದ್ದಾರೆ. ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿರುವ ಬೇಳೂರು ಗೋಪಾಲಕೃಷ್ಣ ನಾಳೆ ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋವೊಂದನ್ನು ಹಂಚಿಕೊಂಡಿರುವ ಬೇಳೂರು ನಾಳೆ 11 ಗಂಟೆಗೆ ಕಾರ್ಯಕರ್ತರು ,ಅಭಿಮಾನಿಗಳು ಹಾಗೂ ಹಿತೈಶಿಗಳನ್ನು…

Read More

ಹರತಾಳು ಹಾಲಪ್ಪ ಸಚಿವರಾಗಲು ನಿಮ್ಮ ಒಂದೊಂದು ಮತವು ಸಹಕಾರಿ – ಬಿ ವೈ ರಾಘವೇಂದ್ರ|BYR

ಸಾಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಹರತಾಳು ಹಾಲಪ್ಪ ರಿಗೆ ಮತ ನೀಡಿ ಬೆಂಬಲಿಸುವ ಮೂಲಕ ಸಾಗರ ಕ್ಷೇತ್ರದಿಂದ ಮಂತ್ರಿಯೊಬ್ಬರನ್ನು ಗೆಲ್ಲಿಸಲಿದ್ದೀರಿ ಎಂದು ಸಂಸದ ಬಿ ವೈ.ರಾಘವೇಂದ್ರ ಹೇಳಿದ್ದಾರೆ. ಅವರು ಸಾಗರದಲ್ಲಿ ಹರತಾಳು ಹಾಲಪ್ಪನವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ, ಹಾಲಪ್ಪನವರು ಕಟ್ಟಕಡೆಯ ಮನುಷ್ಯನಿಗೆ ಸರ್ಕಾರದ ಕಾರ್ಯಕ್ರಮ ತಲುಪಿಸಿದವರು. ರೈತನ ಮೇಲೆ ಹಲ್ಲೆ ಆದಾಗ ರಾತ್ರಿ ಧರಣಿ ನಡೆಸಿದ್ದವರು,ಶೋಷಿತ ವರ್ಗಕ್ಕೆ ಅನ್ಯಾಯವಾದಗ ಸೆಟೆದು ನಿಂತ ನಾಯಕ ಹರತಾಳು ಹಾಲಪ್ಪ ರವರು ಮೇ ತಿಂಗಳಲ್ಲಿ ಕರ್ನಾಟಕ ರಾಜ್ಯದಲ್ಲಿ…

Read More

Political News ಕಿಮ್ಮನೆ ಕಾಲದಲ್ಲಿ ಅನುದಾನ ತಂದಿದ್ದರೇ ಕಾಮಗಾರಿ ಕಳಪೆಯೋ – ಸರಿಯೋ ಗೊತ್ತಾಗುತಿತ್ತು : ಆರಗ ಜ್ಞಾನೇಂದ್ರ

ಯಾರದ್ದೋ ಮಕ್ಕಳಿಗೆ ನಾನು ತಂದೆ ಎಂದು ಹೇಳಿಕೊಳ್ಳುವುದಿಲ್ಲ – ಮಾಜಿ ಸಚಿವರ ಹೇಳಿಕೆಗೆ ಆರಗ ಟಾಂಗ್ ತೀರ್ಥಹಳ್ಳಿ : 1983 ಚುನಾವಣೆಯಿಂದ 9 ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೇನೆ.  ಈಗ ಹತ್ತನೇ ಬಾರಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ.  ಕಳೆದ 9 ಬಾರಿ ಚುನಾವಣೆಯಲ್ಲಿ ನಾಲ್ಕು ಬಾರಿ ಗೆದ್ದು ಐದು ಬಾರಿ ಸೋತಿದ್ದೇನೆ. ತತ್ವ ಸಿದ್ದಾಂತಕ್ಕಾಗಿ 1975 ರಿಂದ ನನ್ನನ್ನು ನಾನು ಈ ರಾಜಕೀಯದಲ್ಲಿ ತೊಡಗಿಸಿ ಕೊಂಡಿದ್ದೇನೆ. ತುರ್ತು ಪರಿಸ್ಥಿತಿಯ ಕರಾಳ ಕಾಯ್ದೆಯನ್ನ ಈ ದೇಶದ ಮೇಲೆ ಇಂದಿರಾಗಾಂಧಿ…

Read More