Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಗೃಹ ಸಚಿವರಿಗೂ ತಟ್ಟಿದ ಚುನಾವಣಾ ನೀತಿ ಸಂಹಿತೆಯ ಬಿಸಿ – ಸಭೆ ಅರ್ಧಕ್ಕೆ ಮೊಟಕುಗೊಳಿಸಿದ ಸಚಿವರು|election-code-of-conduct

ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿ ಸಮೀಪದಲ್ಲಿ ಇರುವ ವಿಶ್ವಕರ್ಮ ಸಮುದಾಯ ಭವನದಲ್ಲಿ ವಿಶ್ವಕರ್ಮ ಸಮುದಾಯ ಮುಖಂಡರು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಕರೆಸಿ ಸಭೆಯನ್ನು ಹಮ್ಮಿಕೊಂಡಿದ್ದರು.ಈ ಸಭೆಯಲ್ಲಿ ನೂರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಇರುವುದರಿಂದ ಚುನಾವಣೆಯ ನಿಯಮಾವಳಿಯ ಅನುಸಾರ ಚುನಾವಣಾ ಅಧಿಕಾರಿಗಳಿಂದ ಈ ಕಾರ್ಯಕ್ರಮಕ್ಕೆ ಅನುಮತಿ ಪಡೆಯಬೇಕಾಗಿತ್ತು. ಆದರೆ ಮಂಗಳವಾರ ಸಮುದಾಯ ಭವನದಲ್ಲಿ ನಡೆಯಬೇಕಿದ್ದ ಸಭೆಗೆ ಚುನಾವಣ ಅಧಿಕಾರಿಗಳಿಂದ ಯಾವುದೇ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಚುನಾವಣಾ ಅಧಿಕಾರಿಗಳು ದಿಡಿರ್ ದಾಳಿ…

Read More

ಶಿವಮೊಗ್ಗದಲ್ಲಿ ಗಲಭೆಗೆ ಹುನ್ನಾರ – ಆಯನೂರು ಮಂಜುನಾಥ್ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಲಿ – ಕೆ ದಿವಾಕರ್|AAP

ಶಿವಮೊಗ್ಗದಲ್ಲಿ ಗಲಭೆಗೆ ಹುನ್ನಾರ -ಆಯನೂರು ಹೇಳಿಕೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಲಿ – ಕೆ ದಿವಾಕರ್ ರಿಪ್ಪನ್‌ಪೇಟೆ : ಶಿವಮೊಗ್ಗ ನಗರದಲ್ಲಿ ಚುನಾವಣೆಯ ಹಿನ್ನಲೆಯಲ್ಲಿ ಗಲಭೆಗೆ ಸಿದ್ದತೆ ನಡೆದಿದೆ ಎಂಬ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿಕೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಕೂಡಲೇ ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಸಾಗರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ನಿಯೋಜಿತ ಅಭ್ಯರ್ಥಿ ಕೆ ದಿವಾಕರ್ ಆಗ್ರಹಿಸಿದರು. ಸೋಮವಾರ ಪಟ್ಟಣದ ಆಮ್ ಆದ್ಮಿ ಪಕ್ಷದ ಕಛೇರಿಯಲ್ಲಿ ಪತ್ರೀಕಾ ಗೋಷ್ಠಿಯಲ್ಲಿ…

Read More

ರಿಪ್ಪನ್‌ಪೇಟೆ ಸಮೀಪದ ಮೂಗೂಡ್ತಿಯಲ್ಲಿ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ – ಅಪಾರ ಹಾನಿ|fire

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಮೂಗೂಡ್ತಿ ಗ್ರಾಮದಲ್ಲಿ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದ್ದು ಜಾನವಾರಿಗೆ ಬಳಸಲೆಂದು ಸಂಗ್ರಹಿಸಿಟ್ಟಿದ್ದ ಹುಲ್ಲು ಮತ್ತು ಶೇಖರಿಸಿಟ್ಟಿದ್ದ ಒಣ ಅಡಿಕೆ ಬೆಂಕಿಗೆ ಆಹುತಿಯಾಗಿದೆ. ಮೂಗೂಡ್ತಿ ಗ್ರಾಮದ ಕೃಷಿಕ ರುದ್ರಪ್ಪ ಗೌಡ ಎಂ ಡಿ ಎಂಬುವವರಿಗೆ ಸೇರಿದ ಕೊಟ್ಟಿಗೆಯಲ್ಲಿ ಇಂದು ಸಂಜೆ ಬೆಂಕಿ ಕಾಣಿಸಿಕೊಂಡಿದೆ.ತಕ್ಷಣ ಸ್ಥಳೀಯರ ಸಹಕಾರದಿಂದ ಜಾನುವಾರುಗಳನ್ನು ಹೊರತೆಗೆಯಲಾಯಿತು.ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕಾಗಿಸಿ ಕಾರ್ಯಾಚರಣೆ ನಡೆಸುತಿದ್ದಾರೆ. ಕೊಟ್ಟಿಗೆಯಲ್ಲಿದ್ದ ಒಣ ಹುಲ್ಲು ಹಾಗೂ ಲಕ್ಷಾಂತರ ರೂ ಮೌಲ್ಯದ ಶೇಖರಿಸಿಟ್ಟಿದ್ದ ಗೋಟು ಅಡಿಕೆ ಬೆಂಕಿಗೆ…

Read More

ತೀರ್ಥಹಳ್ಳಿಯ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಗೆ ಬಹುತೇಕ ಖಚಿತ – ಇಂದೇ ಘೋಷಣೆಯ ಸಾಧ್ಯತೆ|kimmane

ತೀರ್ಥಹಳ್ಳಿ : ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಕಾಂಗ್ರೆಸ್​ ಈಗಾಗಲೇ ತನ್ನ ಮೊದಲ ಪಟ್ಟಿಯನ್ನು ರಿಲೀಸ್​ ಮಾಡಿದ್ದು ಎರಡನೇ ಪಟ್ಟಿಯನ್ನು ಇಂದು ಸಂಜೆ ಅಥವಾ ನಾಳೆ ರಿಲೀಸ್ ಮಾಡಲಿದ್ದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕಿಮ್ಮನೆ ರತ್ನಾಕರ್ ಗೆ ಬಹುತೇಕ ಖಚಿತವಾಗಿದೆ ಎಂದು ಉನ್ನತ ಮೂಲಗಳ ಮಾಹಿತಿಯಿಂದ ತಿಳಿದುಬಂದಿದೆ. ಎರಡನೆ ಪಟ್ಟಿಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕ್ಷೇತ್ರದ ಅಭ್ಯರ್ಥಿಯನ್ನು ಮಾತ್ರ ಘೋಷಿಸುತಿದ್ದು ಇನ್ನುಳಿದಂತಹ ಶಿವಮೊಗ್ಗ ನಗರ,ಶಿವಮೊಗ್ಗ ಗ್ರಾಮಾಂತರ ಮತ್ತು ಶಿಕಾರಿಪುರ ಕ್ಷೇತ್ರ ಅಭ್ಯರ್ಥಿಗಳನ್ನು ಇನೂ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (05-04-2023) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 05/04/23 ರಂದು ಬೆಳಿಗ್ಗೆ 9-00 ರಿಂದ ಮಧ್ಯಾಹ್ನ 3.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ ಪೇಟೆ  110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ  ನಾಳೆ ಬೆಳಿಗ್ಗೆ 9-00 ರಿಂದ ಮಧ್ಯಾಹ್ನ 3-00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ…

Read More

ಹೊಸನಗರ : ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ – ಕಾರು ಜಪ್ತಿ , ಆರೋಪಿ ಪರಾರಿ!!????|EXCISE

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಅಬಕಾರಿ ಇಲಾಖೆ ಹದ್ದಿನ ಕಣ್ಣಿಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ನಿವಣೆ ಬಳಿ ಅಬಕಾರಿ ಅಧಿಕಾರಿಗಳು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯವನ್ನು(liquor) ವಶಕ್ಕೆ ತೆಗೆದುಕೊಂಡಿದ್ದು ಆರೋಪಿ ಪರಾರಿಯಾಗಿದ್ದಾನೆ‌. ನಿವಣೆ ಗ್ರಾಮದ ಅಗಸನಗದ್ದೆ ಸಮೀಪ ಅಕ್ರಮವಾಗಿ ಓಮ್ನಿ ವಾಹನದಲ್ಲಿ ಸುಮಾರು 198.72 ಲೀಟರ್ ಮದ್ಯವನ್ನು ಸಾಗಾಟ ನಡೆಸುತ್ತಿದ್ದು ಖಚಿತ ಮಾಹಿತಿಯ ಮೇರೆಗೆ ತೀರ್ಥಹಳ್ಳಿಯ ಅಬಕಾರಿ ನಿರೀಕ್ಷಕರಾದ ಅಮಿತ್‌ಕುಮಾರ್‌ರವರ ನೇತೃತ್ವದಲ್ಲಿ ಅಕ್ರಮ ಮದ್ಯ ಹಾಗೂ…

Read More

ಚುನಾವಣೆಯ ಠೇವಣಿ ಕಟ್ಟಲು ದೇಣಿಗೆ ಕೊಟ್ಟ ಗ್ರಾಮಸ್ಥರು – ಭಾವುಕರಾಗಿ ಕಣ್ಣೀರಿಟ್ಟ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ|Beluru

ಸಾಗರ ವಿಧಾನಸಭಾ ಕ್ಷೇತ್ರದ ಹೊಸನಗರ ತಾಲೂಕಿನ ಹೆಬೈಲು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗ್ರಾಮಸ್ಥರು ದೇಣಿಗೆ ರೂಪದಲ್ಲಿ ಚುನಾವಣೆಗೆ ಠೇವಣಿ ಕಟ್ಟಲು ಹಣ ನೀಡಲು ಮುಂದಾದ ಸಂಧರ್ಭದಲ್ಲಿ ಬೇಳೂರು ಗೋಪಾಲಕೃಷ್ಣ ಭಾವುಕರಾದ ಘಟನೆ ನಡೆದಿದೆ. ಹೆಬ್ಬೈಲು ಲೋಕಪ್ಪರವರ ಮನೆಯಲ್ಲಿ 2023ರ ಚುನಾವಣೆಯ ಕಾರ್ಯಕರ್ತರ ಸಭೆಯಲ್ಲಿ ಗೋಪಾಲಕೃಷ್ಣ ಬೇಳೂರು ಅಭಿಮಾನಿ ಬಳಗ ವಿಜಾಪುರ ಮತ್ತು ಮತ್ತಿಕೊಪ್ಪ ವತಿಯಿಂದ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರುರವರಿಗೆ ದೇಣಿಗೆ ರೂಪದಲ್ಲಿ ಠೇವಣಿಗೆ ಹಣ ನೀಡಿದರು. ಅಭಿಮಾನಿಗಳು ಪ್ರೀತಿಯಿಂದ…

Read More

ಸಾಗರ : ಏಕಾಏಕಿ ಬಾಲಕನಿಗೆ ಗುಮ್ಮಿದ ಗೂಳಿ – ವೀಡಿಯೋ ವೈರಲ್|sagara

ದಾರಿಯಲ್ಲಿ ಹೋಗುತ್ತಿದ್ದ ಗೂಳಿ ಅಪ್ರಚೋದಿತವಾಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಪುಟ್ಟ ಬಾಲಕನ ಮೇಲೆ ದಾಳಿ ನಡೆಸಿ, ಆತನನ್ನು ಕ್ಷಣ ಮಾತ್ರದಲ್ಲಿ ಕೊಂಬುಗಳಿಂದ ಎತ್ತಿ ಬಿಸಾಕಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ನೆಹರೂ ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸಹೋದರರು ಸೈಕಲ್ ನಲ್ಲಿ ಆಟವಾಡುತ್ತಿರುವುದನ್ನು ನೋಡುತ್ತಿದ್ದ ಬಾಲಕನ ಮೇಲೆ ಗೂಳಿ ದಾಳಿ ನಡೆಸಿರುವ ಘಟನೆ ನೆಹರು ನಗರದಲ್ಲಿ ಭಾನುವಾರ ರಾತ್ರಿ ನಡೆದಿದೆ.  ಗಾಯಾಳು ಬಾಲಕನನ್ನು 6 ವರ್ಷದ ನಜಾನ್ ಆಲಿಖಾನ್ ಎಂದು ತಿಳಿದು ಬಂದಿದೆ.ಮನೆಯ ಸಮೀಪವೇ ಏಕಾಏಕಿ ಗೂಳಿ  ದಾಳಿ…

Read More

ಕಮಲ ತೊರೆದು ಕೈ ಹಿಡಿದ ಬಾಳೂರು ಗ್ರಾಪಂ ಉಪಾಧ್ಯಕ್ಷ ದಿವಾಕರ್|congress

ಕಮಲ ತೊರೆದು ಕೈ ಹಿಡಿದ ಬಾಳೂರು ಗ್ರಾಪಂ ಉಪಾಧ್ಯಕ್ಷ ದಿವಾಕರ್ ರಿಪ್ಪನ್‌ಪೇಟೆ : ಬಾಳೂರು(Baluru) ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿವಾಕರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಭಾನುವಾರ ಕೆಂಚನಾಲ(Kenchanala) ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಿಧಾನಸಭಾ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್(Congress) ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪಕ್ಷದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಇವರು ಇಂದು  ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.ಬಾಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷೆ…

Read More

ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ|accident

ಗರ್ತಿಕೆರೆಯಲ್ಲಿ ಬೈಕ್ ಪಾದಚಾರಿಗೆ ಡಿಕ್ಕಿ ಪ್ರಕರಣ – ಗರ್ತಿಕೆರೆ ನಿವಾಸಿ ಚಿನ್ನಪ್ಪ ಸಾವು,ಬೈಕ್ ಸವಾರನ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಗರ್ತಿಕೆರೆ ಬಳಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ಗರ್ತಿಕೆರೆ ನಿವಾಸಿ ಚಿನ್ನಪ್ಪ (54) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ  ಸಮೀಪದ ಗರ್ತಿಕೆರೆಯಲ್ಲಿ ಭಾನುವಾರ ರಾತ್ರಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಪಾದಾಚಾರಿ ಹಾಗೂ ಬೈಕ್ ಸವಾರ ಇಬ್ಬರಿಗೆ ಗಂಭೀರವಾದ  ಗಾಯವಾಗಿತ್ತು. ಇಬ್ಬರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ…

Read More