Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ : ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ – ಲಾರಿ ಸುಟ್ಟು ಭಸ್ಮ|ಬಸವಾಪುರದಲ್ಲಿ ಅಡಿಕೆ ತೋಟಕ್ಕೆ ಬೆಂಕಿ – 200 ಅಡಿಕೆ ಗಿಡ ನಾಶ

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಶ್ರೀರಾಮನಗರದ  ಗ್ಯಾರೇಜ್ ನಲ್ಲಿ ಆಕಸ್ಮಿಕ ಬೆಂಕಿ ಹತ್ತಿಕೊಂಡು ಲಾರಿಯೊಂದು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಶ್ರೀರಾಮನಗರದ ಸುರೇಶ್ ಎಂಬುವವರಿಗೆ ಸೇರಿದ ಗ್ಯಾರೇಜ್ ನಲ್ಲಿ‌ ತಡರಾತ್ರಿ ಏಕಾಏಕಿ ಬೆಂಕಿ ಹತ್ತಿಕೊಂಡಿದೆ.ಕೂಡಲೇ ಅಗ್ನಿಶಾಮಕ ಠಾಣೆ ಗೆ ಮಾಹಿತಿ ನೀಡಿ ಸ್ಥಳೀಯರ ಸಹಾಯದಿಂದ ಬೆಂಕಿ ಆರಿಸಲು ಪ್ರಯತ್ನಿಸಲಾಯಿತು,ನಂತರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ಆರಿಸುವಲ್ಲಿ ಯಶಸ್ವಿಯಾದರು.ಲಾರಿ ಸಂಪೂರ್ಣ ಸುಟ್ಟು ಹೋಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ. ಈ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್…

Read More

ಮೇ.10 ರಂದು ಮತದಾನ,ಮೇ 13ಕ್ಕೆ ಫಲಿತಾಂಶ-ಇಂದಿನಿಂದಲೇ ನೀತಿ ಸಂಹಿತೆ ಜಾರಿ|ನೀತಿ ಸಂಹಿತೆ ಅಂದ್ರೆ ಏನು ? ಹೇಗಿರುತ್ತೆ? ಇಲ್ಲಿದೆ ಮಾಹಿತಿ|election

ಕರ್ನಾಟಕ ವಿಧಾನಸಭಾ ಚುನಾವಣಾ  ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ 10ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.   ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕ ಎಲೆಕ್ಷನ್‌ ಮತ್ತು ಉಪಚುನಾವಣೆ ದಿನಾಂಕ ಪ್ರಕಟಿಲಿದ್ದೇವೆ. ಇತ್ತೀಚೆಗೆ ಈಶಾನ್ಯ ರಾಜ್ಯದ ಚುನಾವಣೆಗಳನ್ನು…

Read More

RIPPONPET NEWS ರಿಪ್ಪನ್‌ಪೇಟೆ : ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಶಾಸಕ ಹರತಾಳು ಹಾಲಪ್ಪ ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದು ಮಾಜಿ ಗ್ರಾಪಂ ಸದಸ್ಯೆ ಸೇರಿದಂತೆ ಅನೇಕ ಮುಖಂಡರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ರಿಪ್ಪನ್‌ಪೇಟೆ ಶಬರೀಶನಗರದ ಕಾಂಗ್ರೆಸ್ ಮುಖಂಡರಾಗಿದ್ದ ಮಂಜನಾಯ್ಕ್ ಮತು ಮಾಜಿ ಗ್ರಾಪಂ ಸದಸ್ಯರಾದ ಗಿರಿಜಾ ಎಂ ನಾಯ್ಕ್ ರವರು ಇಂದು ಶಾಸಕರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಮಳವಳ್ಳಿ ಗ್ರಾಮದ PLD ಬ್ಯಾಂಕ್ ನಿರ್ದೇಶಕರು ಹಾಗೂ ಜೆಡಿಎಸ್ ಮುಖಂಡರಾಗಿದ್ದ ಗೋಪಾಲಣ್ಣ ಹಾಗೂ ಅವರ ಬೆಂಬಲಿಗರಾದ ರಮೇಶ್, ಕುಮಾರ್, ಉಮಾಪತಿ,…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ಗನ್ ಮ್ಯಾನ್ ಜೈಜಗದೀಶ್ ಸೇರಿದಂತೆ ಜಿಲ್ಲೆಯ ಮೂವರಿಗೆ ಮುಖ್ಯಮಂತ್ರಿ ಪದಕ ಘೋಷಣೆ|Reward

ಕರ್ನಾಟಕ ರಾಜ್ಯದ 2022ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಗನ್ ಮ್ಯಾನ್ ಜೈಜಗದೀಶ್ ಸೇರಿದಂತೆ ಶಿವಮೊಗ್ಗ ಜಿಲ್ಲೆಯಿಂದ ಮೂವರು ಆಯ್ಕೆಯಾಗಿದ್ದಾರೆ. 2022 ನೇ ಸಾಲಿನ ಮುಖ್ಯಮಂತ್ರಿ ಪದಕ ಜಿಲ್ಲೆಯಲ್ಲಿ ಮೂವರಿಗೆ ಲಭಿಸಿದೆ. ಪೊಲೀಸ್ ಇಲಾಖೆಯಿಂದ ಪ್ರತಿ ವರ್ಷ ಕೊಡುವ ಮುಖ್ಯಮಂತ್ರಿಗಳ ಪದಕ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಐ ಅಂಜನ್ ಕುಮಾರ್, ಆಗುಂಬೆ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಕೆ.ಶಿವಕುಮಾರ್, ಡಿಎಆರ್ ನ ಸಿಬ್ಬಂದಿ ಜೈಜಗದೀಶ್ ಗೆ ಲಭಿಸಿದೆ. ಮುಖ್ಯಮಂತ್ರಿ ಪದಕವನ್ನ ನೀಡುವ…

Read More

ರಿಪ್ಪನ್‌ಪೇಟೆ : ಬಿದರಹಳ್ಳಿ ಕುಮಧ್ವತಿ ನದಿಯಲ್ಲಿ ಮೀನುಗಳ ಮಾರಣಹೋಮ – ನದಿಯ ಒಡಲಿಗೆ ವಿಷ ಬೆರೆಸಿದ ಪಾಪಿಗಳು|kumadwathi

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬಿದರಹಳ್ಳಿ ಗ್ರಾಮದ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ವಿಷ ಬೆರೆಸಿ ಮೀನು ಸೇರಿದಂತೆ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ ಕುಮದ್ವತಿ ನದಿಯಲ್ಲಿ ಕಿಡಿಗೇಡಿಗಳು ನದಿಯ ನೀರಿಗೆ  ಮೈಲುತುತ್ತ ವಿಷ ಬೆರೆಸಿ ಪ್ರಾಣಿ ಪ್ರಭೇದಗಳ ಮಾರಣಹೋಮ ನಡೆಸಿದ್ದಾರೆ.ಕುಮದ್ವತಿ ನದಿಯಲ್ಲಿ ಬೇಸಿಗೆ ಕಾರಣದಿಂದ ನೀರು ಇಂಗಿ ಹೋಗಿದ್ದು ಅಲ್ಲಲ್ಲಿ ಕೆಲ ಹೊಂಡದಲ್ಲಿ ಪ್ರಾಣಿ ಪ್ರಭೇದಗಳು ಜೀವಿಸುತ್ತವೆ.ಇದನ್ನೇ ಗುರಿಯಾಗಿಸಿಕೊಂಡು ಕಿಡಿಗೇಡಿಗಳು ವಿಷಯುಕ್ತ “ಮೈಲುತುತ್ತ” ವನ್ನು ಆ ನೀರಿಗೆ ಬೆರೆಸಿ ಲಕ್ಷಾಂತರ…

Read More

ತೀರ್ಥಹಳ್ಳಿ : ಪೊಲೀಸ್ ಪೇದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ‌ ಕೊಲೆ ಪ್ರಕರಣ – ಓರ್ವನ ಬಂಧನ|arrested

ತೀರ್ಥಹಳ್ಳಿ : ತರಕಾರಿ ಮಾರ್ಕೆಟ್​ನಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.   ಮಾರ್ಚ್​ 25 ರಂದು ಪಟ್ಟಣದ ಸಮೀಪವಿರುವ ತರಕಾರಿ ಮಾರ್ಕೆಟ್  ಬಳಿಯಲ್ಲಿ  ತೀರ್ಥಹಳ್ಳಿ ಪೊಲೀಸ್ ಸ್ಟೇಷನ್​ ಸೇರಿದಂತೆ ವಿವಿಧ ಠಾಣೆಗಳಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್​ ಎಂಬಾತನನ್ನ ಹತ್ಯೆ ಮಾಡಲಾಗಿತ್ತು. ಭಾರೀ ಗಾತ್ರದ ಕಲ್ಲನ್ನು ತಲೆಮೇಲೆ ಎತ್ತಿಹಾಕಿ ಪೂರ್ಣೇಶ್​ನನ್ನ ಕೊಲೆ ಮಾಡಲಾಗಿತ್ತು.ವಿಪರೀತ ಮದ್ಯವ್ಯಸನಿಯಾಗಿದ್ದ ಪೂರ್ಣೇಶ್​, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ. ಆನಂತರವೂ ಆತ ಬದಲಾಗಿರಲಿಲ್ಲ. ಘಟನೆ ನಡೆದ ದಿನ ಪೊಲೀಸರು…

Read More

ಶಿಕಾರಿಪುರ-ಶಿವಮೊಗ್ಗ ಹೆದ್ದಾರಿಯಲ್ಲಿ ಬೆಂಕಿ ಹಚ್ಚಿ ಗ್ರಾಮಸ್ಥರ ಆಕ್ರೋಶ – ಶಿವಮೊಗ್ಗಕ್ಕೂ ವ್ಯಾಪಿಸಿದ ಮೀಸಲಾತಿ ಹೋರಾಟ|Protest

ಶಿಕಾರಿಪುರ ತಾಲ್ಲೂಕಿನ ತಾಲ್ಲೂಕು ಆಫೀಸ್ ಹಾಗೂ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ನಿವಾಸದ ಬಳಿ ನಡೆದ ಬಂಜಾರ, ಬೋವಿ, ಕೊರಮ, ಕೊರಚ ಸಮುದಾಯದ ಪ್ರತಿಭಟನೆ ಇದೀಗ ಜಿಲ್ಲಾ ಕೇಂದ್ರಕ್ಕೂ ವ್ಯಾಪಿಸಿದೆ.   ಒಳ ಮೀಸಲಾತಿ ಜಾರಿ ಸಂಬಂಧ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿ ಹೆದ್ದಾರಿಯಲ್ಲಿ ರಸ್ತೆ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.  ರಸ್ತೆ ಮೇಲೆ ತೆಂಗಿನ ಗರಿ ಇಟ್ಟು ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಶಿವಮೊಗ್ಗ –…

Read More

ಬಿಎಸ್ ವೈ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ – ಘಟನೆಯಿಂದ ನೋವಾಗಿದೆ ,ಯಾರನ್ನು ಬಂಧಿಸಬೇಡಿ : ಯಡಿಯೂರಪ್ಪ|Bsy

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿರುವ ತಮ್ಮ ಮನೆ ಮೇಲೆ ನಡೆದ ಕಲ್ಲೂ ತೂರಾಟದ ಘಟನೆಯ ಬಗ್ಗೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಯಾರನ್ನು ಬಂಧಿಸಬೇಡಿ! ಬಂಜಾರ ಸಮುದಾಯದ ಕಾರ್ಯಕರ್ತರು ನಮ್ಮ ಮನೆಗೆ ಹಲ್ಲೆ ಮಾಡಿ, ಕಲ್ಲು ತೂರಾಟ ಮಾಡಿದಂತಹ ಘಟನೆಗಳು ನಡೆದಿವೆ. ಈ ಸಂಬಂಧ ಎಸ್​ಪಿ ಮತ್ತು ಡಿಸಿಯವರ ಬಳಿಯಲ್ಲಿ ಮಾತನಾಡಿ, ಬಂಜಾರ ಸಮುದಾಯದವರು ನಮ್ಮ ಜೊತೆ ಇದ್ದಾರೆ. ತಾಂಡಗಳ ಅಭಿವೃದ್ಧಿ ಮಾಡಿದ್ದೇನೆ, ತಪ್ಪು ಗೃಹಿಕೆಯಿಂದ ಈ ಘಟನೆ ಯಾಗಿದೆ. ಯಾರ ವಿರುದ್ಧವೂ ಕ್ರಮ…

Read More

ಮನಸ್ಸುಗಳನ್ನು ಕಟ್ಟುವ ಪ್ರಕ್ರಿಯೆಯೇ ರಂಗಭೂಮಿ – ಡಾ. ರತ್ನಾಕರ ಸಿ ಕುನುಗೋಡು|Ripponpet news

ಮನಸ್ಸುಗಳನ್ನು ಕಟ್ಟುವ ಪ್ರಕ್ರಿಯೆಯೇ ರಂಗಭೂಮಿ- ಡಾ. ರತ್ನಾಕರ ಸಿ ಕುನುಗೋಡು.  ರಿಪ್ಪನ್ ಪೇಟೆ :  ಎಲ್ಲ ಭೇದಗಳನ್ನು ಅಳಿಸಿ ಸಮತೆಯ ಕಣ್ಣಲ್ಲಿ ಒಡೆದ ಮನಸ್ಸುಗಳನ್ನು ಕಟ್ಟುವ ಸಮರ್ಥ ಮಾಧ್ಯಮ ರಂಗಭೂಮಿ. ರಂಗಭೂಮಿಯ ಮುಖಾಂತರ ಆರೋಗ್ಯಕರ ಮನಸ್ಸುಳ್ಳ ಯುವಜನತೆಯನ್ನು ರೂಪಿಸುವ ತುರ್ತು ಇದೆ ಎಂದು ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ರತ್ನಾಕರ ಸಿ ಕುನುಗೋಡು ಹೇಳಿದರು. ದಿ. ರೇಣುಕಪ್ಪಗೌಡ ಪ್ರತಿಷ್ಠಾನ, ಮಲೆನಾಡು ಕಲಾತಂಡ ಮಸರೂರು ಹಾಗ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ …

Read More

ಬೇಳೂರು ಗೋಪಾಲಕೃಷ್ಣ ರನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು – ಕಾಗೋಡು ತಿಮ್ಮಪ್ಪ|Sagara

ಶಿವಮೊಗ್ಗ ಜಿಲ್ಲೆಯ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಲು ಏಳು ಜನ ಆಕಾಂಕ್ಷಿಗಳು ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದರು ಅದರಲ್ಲಿ ಹಿರಿಯ ಮುತ್ಸದಿ ಕಾಗೋಡು ತಿಮ್ಮಪ್ಪ ಹಾಗೂ ಅವರ ಮಗಳು ಡಾ.ರಾಜನಂದಿನಿ ಪ್ರಬಲ ಆಕಾಂಕ್ಷಿಯಾಗಿದ್ದರು. ಕೊನೆಯಲ್ಲಿ ಹೈಕಮಾಂಡ್ ಪಕ್ಷದ ಆಂತರಿಕ ಸಮೀಕ್ಷೆಗೆ ಮನ್ನಣೆ ನೀಡಿ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರನ್ನು ಹೈಕಮಾಂಡ್ ಅಂತಿಮಗೊಳಿಸಿದ್ದು ಕಾಂಗ್ರೆಸ್ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಯಾಗಿಸಿತ್ತು. ಆದರೆ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಬಣಗಳಿವೆ…

Read More