Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ : ಮದ್ಯದೊಂದಿಗೆ ಸೈನೆಡ್ ಸೇವಿಸಿ ಅಕ್ಕಸಾಲಿಗ ಸಾವು|Crime news

ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಚಿನ್ನದ ಕೆಲಸ ಮಾಡುವ ವ್ಯಕ್ತಿಯೊಬ್ಬ ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗರ್ತಿಕೆರೆ ಗ್ರಾಮದ ಗುರುಮೂರ್ತಿ ಬಿ ಟಿ (43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಗರ್ತಿಕೆರೆ ಮೂಲದ ಗುರುಮೂರ್ತಿ ತನ್ನ ಕುಟುಂಬದೊಂದಿಗೆ ಬೆಳಗಾವಿಯಲ್ಲಿ ಚಿನ್ನದ ಕೆಲಸ ಮಾಡಿಕೊಂಡು ವಾಸವಿದ್ದು,ಕಳೆದ 04 ದಿನದ ಹಿಂದೆ ಗುರುಮೂರ್ತಿ ಮನೆ ಬಿಟ್ಟು ಗರ್ತಿಕೆರೆಗೆ ಬಂದಿದ್ದನು ಈ ಬಗ್ಗೆ ಬೆಳಗಾವಿ ಶಹಾಪೂರ ಪೊಲೀಸ್ ಠಾಣೆಯಲ್ಲಿ ಅವರ ಪತ್ನಿ ಮಿಸ್ಸಿಂಗ್ ಪ್ರಕರಣ ದಾಖಲಿಸಿದ್ದರು. ಗುರುಮೂರ್ತಿ…

Read More

ವಸ್ತುನಿಷ್ಠ ವರದಿಗೆ ಅಡ್ಡಿ, ಪತ್ರಕರ್ತರ ಸ್ವಾತಂತ್ರ್ಯ ಹರಣಕ್ಕೆ ಯತ್ನ – ಶಾಸಕ ಹರತಾಳು ಹಾಲಪ್ಪ ವಿರುದ್ದ ದೂರು|halappa

ಸಾಗರದಲ್ಲಿ  ವರದಿಯೊಂದಕ್ಕೆ ಸಂಬಂಧಿಸಿದಂತೆ ಶಾಸಕರು ಪತ್ರಕರ್ತರೊಬ್ಬರ ಜೊತೆ ನಡೆಸಿದ ಸಂಭಾಷಣೆ, ಅವಮಾನ, ಧಮ್ಕಿ ಹಾಕಿದಂತೆ ಇದ್ದು, ನಿರ್ಭಯವಾಗಿ ವರದಿ ಮಾಡಲು  ಪತ್ರಕರ್ತರಿಗೆ ಸೂಕ್ತ ರಕ್ಷಣೆ ಮತ್ತು ವಾತಾವರಣ ನಿರ್ಮಿಸಬೇಕೆ ಆಗ್ರಹಿಸಿ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘ ಇಂದು ಸಾಗರ ಶಾಖೆ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ಕಾರ್ಯ ನಿರತ ಪತ್ರಕರ್ತರ ಸಂಘ ಇಂದು ಸಾಗರದ ಉಪ ವಿಭಾಗಧಿಕಾರಿಗಳ ಕಛೇರಿ ಎದುರು ಮೌನ ಪ್ರತಿಭಟನೆ ನೆಡೆಸಿ ಮನವಿ ಸಲ್ಲಿಸಲಾಯಿತು. ನಂತರ ಶಾಸಕ ಹರತಾಳು…

Read More

ಪೊಲೀಸ್ ಇಲಾಖೆಯ ಭರ್ಜರಿ ಬೇಟೆ – 50 ಲಕ್ಷ ಮೌಲ್ಯದ ಬಟ್ಟೆ,ಕುಕ್ಕರ್,ಸೀರೆ ,ಅಕ್ಕಿ ಸೀಜ್

ಕರ್ನಾಟಕ ರಾಜ್ಯ ವಿಧಾನಸಭಾ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸ್ ಇಲಾಖೆ ಕೂಡ ಅಲರ್ಟ್ ಆಗಿದ್ದು, ಅಕ್ರಮ ವಸ್ತು ಸಾಗಾಟ ಹಾಗೂ ಹಣ ಸರಭರಾಜಿನ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಹಲವೆಡೆ ನಾಖಾಬಂಧಿ ಹಾಕಲಾಗಿದೆ. ಅಲ್ಲದೆ, 50 ಲಕ್ಷ ರೂಪಾಯಿಗೂ ಅಧಿಕ ಮೌಲ್ಯ ವಸ್ತುಗಳನ್ನು ವಶಕ್ಕೆ ಪಡೆದಿದೆ.  ಈ ಸಂಬಂಧ ಪ್ರಕಟಣೆಯನ್ನು ಹೊರಡಿಸಿರುವ ಪೊಲೀಸ್​ ಇಲಾಖೆ  ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ…

Read More

ತೀರ್ಥಹಳ್ಳಿ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಮತ್ತೊಂದು ಕಾರು ಡಿಕ್ಕಿ|accident

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಸಮೀಪದಲ್ಲಿ ಅಪಘಾತವೊಂದು ಸಂಭವಿಸಿ ಎರಡು ಕಾರು ನಜ್ಜುಗುಜ್ಜಾದ ಘಟನೆ ನಡೆದಿದೆ. ಮಾಳೂರು ಕ್ರಾಸ್ ಬಳಿ ಬರುವ ಮಟನ್ ಶಾಪ್​ನ ಎದುರು ಈ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕಾರೊಂದು , ನಿಲ್ಲಿಸಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಇನ್ನೂ ಅದೃಷ್ಟವಶಾತ್ ನಿಂತಿದ್ದ ಕಾರುಗಳಲ್ಲಿ ಯಾರು ಕುಳಿತಿರಲಿಲ್ಲ . ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ.  ಇನ್ನೂ ಸ್ಥಳಕ್ಕೆ ಮಾಳೂರು ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆದುತಿದ್ದಾರೆ.

Read More

ದನದ ಕುತ್ತಿಗೆ ಕಡಿದು ತುಂಗಾ ನದಿಗೆ ಎಸೆದು ವಿಕೃತಿ ಮೆರೆದ ದುಷ್ಕರ್ಮಿಗಳು|thirthahalli news

ತೀರ್ಥಹಳ್ಳಿ : ಇಲ್ಲಿನ ಚಕ್ರತೀರ್ಥದಲ್ಲಿ ಕಿಡಿಗೇಡಿಗಳು ಹಸುವಿನ ಕತ್ತನ್ನು ಕಡಿದು ಬಳಿಕ ರುಂಡವನ್ನು ತುಂಗಾ ನದಿಗೆ ಎಸೆದು ಪರಾರಿ ಆಗಿರುವ ಘಟನೆ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಸ್ವಕ್ಷೇತ್ರದಲ್ಲಿ ವಿಕೃತಿ ಮೆರೆದಿದ್ದು, ಸ್ಥಳೀಯರು ದುಷ್ಕೃತ್ಯಕ್ಕೆ ಕಿಡಿಕಾರಿದ್ದಾರೆ. ಸ್ಥಳೀಯರು ಸ್ನಾನ ಮಾಡಲು ಹೊಳೆಗೆ ಇಳಿದಾಗ ವಿಷಯ ಬೆಳಕಿಗೆ ಬಂದಿದ್ದು ತುಂಗಾನದಿಯಲ್ಲಿ ನಾಲ್ಕು ಪವಿತ್ರ ಸ್ಥಳಗಳಲ್ಲಿ ಒಂದಾದ ಚಕ್ರತೀರ್ಥದಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ದನದ ರುಂಡವನ್ನು ಬಿಟ್ಟು ಮಾಂಸ ತೆಗೆದುಕೊಂಡು ಹೋಗಲಾಗಿದೆ.  ಇದು ತೀರ್ಥಹಳ್ಳಿ ಪೊಲೀಸರ ವೈಫಲ್ಯ…

Read More

“ಮೋದಿ ರಾಂಗ್ ನಂಬರ್”-“ಬಿಜೆಪಿ ರಾಂಗ್ ನಂಬರ್ ” : ವಿನೂತನ ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿ ಸಂಘಟನೆ|modi-wrong-number

ಶಿವಮೊಗ್ಗ : ಬೆಲೆ ಏರಿಕೆ, ಭ್ರಷ್ಠಾಚಾರ, ಕಳಪೆ ಕಾಮಗಾರಿ, ಜಾತಿ ಧರ್ಮದ ನಡುವಿನ ವೈಷಮ್ಯ ಕುರಿತು ವಿದ್ಯಾರ್ಥಿ ಸಂಘಟನೆ ವಿನೂತನ ಪ್ರತಿಭಟನೆಗೆ ಮುಂದಾಗಿದೆ. ಚುನಾವಣೆ ಹಿನ್ನಲೆಯಲ್ಲಿ ಈ ಪ್ರತಿಭಟನೆ ಮಹತ್ವ ಪಡೆದುಕೊಂಡಿದೆ. ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿ ಸಂಘಟನೆಯ ಸಂಸ್ಥಾಪಕರ ಅಧ್ಯಕ್ಷ ವಿನಯ್ ಕೆ ಸಿ ರಾಜವತ್ “ಮೋದಿ ರಾಂಗ್ ನಂಬರ್” “ಬಿಜೆಪಿ ರಾಂಗ್ ನಂಬರ್ ” ಎಂಬ ಘೋಷಣೆ ಅಡಿ ಮಾ.30 ರಂದು  ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ…

Read More

ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ|ಯಾವೆಲ್ಲಾ ಮಾರ್ಗ???ಎಷ್ಟಿದೆ ಟಿಕೆಟ್ ರೇಟ್..??? ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಈ ಸುದ್ದಿ ನೋಡಿ|airport

ಈ ತಿಂಗಳ ಅಂತ್ಯದಲ್ಲಿ ವಿಮಾನಯಾನ ಸೇವೆ ಆರಂಭವಾಗುವ ನಿರೀಕ್ಷೆಯಿದೆ. ಮೊದಲಿಗೆ ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ವಿಮಾನ ಹಾರಾಡಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಆರು ಕೋಟಿ ರೂ. ವೆಚ್ಚದ ಮೂರು ಅಗ್ನಿಶಾಮಕ ವಾಹನಗಳು ಬರುವವರೆಗೆ ಕ್ಲಿಯರೆನ್ಸ್ ನೀಡುವುದಿಲ್ಲ ಎಂದು ವಿಮಾನಯಾನ ಸಚಿವಾಲಯ ಸೂಚನೆ ನೀಡಿತ್ತು. ಈಗ ಅದು ಕೂಡ ವಾರದೊಳಗೆ ಬರುತ್ತಿದ್ದು, ಈ ತಿಂಗಳ ಕೊನೆಯೊಳಗೆ ಅಧಿಕೃತವಾಗಿ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದರು. ಇಂಡಿಗೋ ವಿಮಾನಯಾನ ಕಂಪನಿಯೊಂದಿಗೆ…

Read More

ಬಸ್ ಹಾಗೂ ಬೊಲೆರೊ ಪಿಕಪ್ ನಡುವೆ ಮುಖಾಮುಖಿ ಡಿಕ್ಕಿ – ಎರಡು ತುಂಡಾದ ಬೊಲೆರೊ ಪಿಕಪ್,ಮೂವರಿಗೆ ಗಾಯ|accident

ಖಾಸಗಿ ಬಸ್ ಹಾಗೂ ಬೊಲೆರೊ ಪಿಕಪ್ ನಡುವೆ ಮುಖಮುಖಿ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಪ್ಪರಗುಂಡಿ ಸೇತುವೆ ಬಳಿ ನಡೆದಿದೆ. ಶರ್ಮಣ್ಯಾವತಿ ನರ್ಸರಿ ಹತ್ತಿರ ಶಿವಮೊಗ್ಗದಿಂದ ಕುಂದಾಪುರಕ್ಕೆ ಕಡೆಗೆ ಹೋಗುತಿದ್ದ ದುರ್ಗಾಂಬ ಬಸ್ಸು ಹಾಗೂ ಹೊಸನಗರದಿಂದ ರಿಪ್ಪನ್ ಪೇಟೆಗೆ ಹೊರಟ ಬೊಲೆರೋ ಪಿಕಪ್ ಗಾಡಿ ನಡುವೆ ಮುಖಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಬೊಲೆರೊ ಪಿಕಪ್ ವಾಹನ ಎರಡು ತುಂಡಾಗಿದೆ. ಬೊಲೆರೊ ಪಿಕಪ್ ನಲ್ಲಿದ್ದ ಮೂವರು ವ್ಯಕ್ತಿಗಳಿಗೆ ಗಂಭೀರ ಗಾಯಗಳಾಗಿದ್ದು ಹೊಸನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತಿದ್ದು…

Read More

ಚಿಕ್ಕಜೇನಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ – ಹಳ್ಳಿಯ ಕಡೆ | ಅಕ್ರಮ ಮದ್ಯಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರ ಒತ್ತಾಯ|chikkajeni

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಮದಲ್ಲಿ ಶನಿವಾರ ನಡೆದ ”ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ ಸಾರ್ವಜನಿಕ ಅಹವಾಲುಗಳ ಸ್ವೀಕಾರ  ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳು ಬಾರದೇ ಇರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕಜೇನಿ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮವನ್ನು ಹೊಸನಗರ ತಹಶೀಲ್ದಾರ್ ಧರ್ಮಂತ ಗಂಗರಾಮ್ ಕೋರಿ ಉದ್ಘಾಟಿಸಿದರು. ನಂತರ ಸಾರ್ವಜನಿಕ ಅಹವಾಲು ಸ್ವೀಕರಿಸುತಿದ್ದ ಸಂಧರ್ಭದಲ್ಲಿ ಗ್ರಾಮಸ್ಥರು ನಮ್ಮೂರಿನಲ್ಲಿ ಹಲವಾರು ಜ್ವಲಂತ ಸಮಸ್ಯೆಗಳಿವೆ ಅದನ್ನು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಪ್ರಸ್ತಾಪಿಸಿ ಪರಿಹಾರ ಪಡೆಯುವ…

Read More

ರಂಜಾನ್ ಉಪವಾಸ ತಿಂಗಳ ಪ್ರಥಮ‌ ಚಂದ್ರ ದರ್ಶನ – ಗುರುವಾರದಿಂದ ಉಪವಾಸ ಆಚರಣೆ|Ramzan

ರಂಜಾನ್ ಮಾಸದ ಚಂದ್ರ ದರ್ಶನವಾದ ಹಿನ್ನೆಲೆ ನಾಳೆಯಿಂದ ಕೇರಳ ಮತ್ತು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರಂಜಾನ್ ಉಪವಾಸ ಆರಂಭವಾಗಲಿದೆ. ಇಂದು ರಂಝಾನ್ ತಿಂಗಳ ಚಂದ್ರ ದರ್ಶನ ವಾಗಿರುವುದರಿಂದ ಮಾರ್ಚ್ 23 (ಗುರುವಾರ) ರಂದು ರಂಝಾನ್ ಉಪವಾಸ ವ್ರತ ಪ್ರಾರಂಭವಾಗುತ್ತದೆ, ಮುಸ್ಲಿಮರ ಪವಿತ್ರ ರಮಝಾನ್‌ ಉಪವಾಸ ತಿಂಗಳ ಪ್ರಥಮ ಚಂದ್ರದರ್ಶನವು ಇಂದು ಕೇರಳದ ಕಲ್ಲಿಕೋಟೆಯ ಕಾಪಾಡ್ ಎಂಬಲ್ಲಿ ಆಗಿದೆ. ಈ ಹಿನ್ನೆಲೆಯಲ್ಲಿ ಗುರುವಾರದಿಂದ ರಂಝಾನ್ ಉಪವಾಸ ಆಚರಿಸಲು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಪರವಾಗಿ…

Read More
Exit mobile version