Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಸಾಗರ : ಹಾಸ್ಟೆಲ್ ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು

ಸಾಗರ ತಾಲೂಕಿನ ಜೋಗದಲ್ಲಿನ ಶಾಲೆಯೊಂದರ 25ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿಗಳು, ಊಟ ಸೇವಿಸಿದ ನಂತ್ರ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಸಾಗರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಸಾಗರದ ಜೋಗದ ಬಳಿಯ ಕ್ರಿಸ್ತ ಪ್ರಕಾಶ್ ಹಿರಿಯ ಪ್ರಾಥಮಿಕ ಶಾಲೆಯ ಹಾಸ್ಟೆಲ್ ವಿದ್ಯಾರ್ಥಿಗಳು ಇಂದು ರಾತ್ರಿ ನೀಡಿದಂತ ಊಟವನ್ನು ಸೇವಿಸಿದ್ದಾರೆ. ಈ ಬಳಿಕ ತಕ್ಷಣ 25ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಶಾಲಾ ಶಿಕ್ಷಕರು ವಿದ್ಯಾರ್ಥಿಗಳನ್ನು ಸಾಗರದ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಸಿದ್ದಾರೆ….

Read More

ರಿಪ್ಪನ್‌ಪೇಟೆ : ಜೀವನದಲ್ಲಿ ಜಿಗುಪ್ಸೆಗೊಂಡ ವೀಳ್ಯದೆಲೆ ವ್ಯಾಪಾರಿ ಆತ್ಮಹತ್ಯೆ|crime

ರಿಪ್ಪನ್‌ಪೇಟೆ :  ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಅಕೇಶಿಯ ಪ್ಲಾಂಟೇಷನ್ ನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಣಬಂದೂರು ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲ್ಲೂಕಿನ ಹೆದ್ದಾರಿ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗೂಡ್ತಿ ಗ್ರಾಮದ ವಾಸಿ, ನಾಗರಾಜ್ (52) ಎಂಬ ವ್ಯಕ್ತಿಯು ಅನಾರೋಗ್ಯ ಕಾರಣದಿಂದ ಮನನೊಂದು ತಮ್ಮ ಮನೆಯ ಸಮೀಪದ ಪ್ಲಾಂಟೇಷನ್ ನಲ್ಲಿ ಇಂದು ಮಧ್ಯಾಹ್ನ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಹಳ ದಿನಗಳಿಂದ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ಅನಾರೋಗ್ಯ ಸಹಿಸಿಕೊಳ್ಳಲಾಗದೆ ಆತ್ಮಹತ್ಯೆ…

Read More

ನಾಳೆ(19-03-2023) ರಿಪ್ಪನ್‌ಪೇಟೆಯಲ್ಲಿ ಸಹಕಾರ ಸಂಘದ ಆಡಳಿತ ಸಂಕೀರ್ಣ ಕಟ್ಟಡ ಮತ್ತು ವಾಣಿಜ್ಯ ಗೋದಾಮು ಉದ್ಘಾಟನೆ

ರಿಪ್ಪನ್‌ಪೇಟೆ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಮಾ.19ರಂದು ಬೆಳಿಗ್ಗೆ 10.30ಕ್ಕೆ ಸಹಕಾರ ಸಂಘದ ಆಡಳಿತ ಸಂಕೀರ್ಣ ಕಟ್ಟಡ ಮತ್ತು ಬಹುಸೇವಾ ವಾಣಿಜ್ಯ ಗೋದಾಮು ಉದ್ಘಾಟನೆ ಹಾಗೂ ಕರ್ನಾಟಕ ಜಾನಪದ ಪರಿಷತ್ತು ಹೊಸನಗರ ತಾಲೂಕು ಶಾಖೆ ವತಿಯಿಂದ ಜಿಲ್ಲಾ ಮಟ್ಟದ ನಾಲ್ಕನೇ ಜಾನಪದ ಸಮ್ಮೇಳನ ಆಯೋಜಿಸಲಾಗಿದೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ತಾಲೂಕ್ ಜಾನಪದ ಪರಿಷತ್ತು ಅಧ್ಯಕ್ಷ ಎಂ.ಎಂ. ಪರಮೇಶ್ ತಿಳಿಸಿದರು. ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೃಷಿಗೂ ಮತ್ತು…

Read More

ತುಂಗಾ ಸೇತುವೆಯಿಂದ ಹೊಳೆಗೆ ಹಾರಲು‌ ಮುಂದಾದ ಯುವ ಜೋಡಿ – ಯುವತಿ ಬಚಾವ್ ,ಯುವಕ ಗಂಭೀರ|tunga

ಶಿವಮೊಗ್ಗ ನಗರದ ಹಳೆ ಸೇತುವೆಯ ಬಳಿಯಲ್ಲಿ ಯುವ ಜೋಡಿಯೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇನ್ನೂ ಈ ವೇಳೆ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಹಾಗೂ ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದಾರೆ.  ಯುವ ಜೋಡಿಗಳು ಹಳೆಸೇತುವೆ ಬಳಿ ಬಂದು ಕೆಲ ಹೊತ್ತು ಮಾತನಾಡ್ತಿದ್ದ ಜೋಡಿ ಬಳಿಕ ಬ್ರಿಡ್ಜ್​ನಿಂದ ನದಿಗೆ ಹಾರಲು ಮುಂದಾಗಿದ್ದನ್ನ ಅಲ್ಲಿದ್ದವರು ಗಮನಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಯುವಕ ನದಿಗೆ ಹಾರಿದ್ದಾನೆ. ಯುವತಿಯನ್ನು ಅಲ್ಲಿದ್ದವರು ಹಿಡಿದು ರಕ್ಷಿಸಿದ್ದಾರೆ.  ಇನ್ನೂ ನದಿಗೆ ಹಾರಿದ ಯುವಕ ನೇರವಾಗಿ ಹೊಳೆಯ ಬಂಡೆಯ ಮೇಲೆ ಬಿದ್ದಿದ್ದ….

Read More

ಶಿವಮೊಗ್ಗ : ಲೇಡೀಸ್ ನೈಟ್ ಪಾರ್ಟಿ ತಡೆದ ಭಜರಂಗದಳದ ಕಾರ್ಯಕರ್ತರು|Ladies party

ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ. ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ. ಕುವೆಂಪು ರಸ್ತೆಯಲ್ಲಿರುವ ಹೋಟೆಲ್ನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಭಜರಂಗದಳ ಕಾರ್ಯಕರ್ತರು ಲೇಟ್ ನೈಟ್ ಪಾರ್ಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಕೂಡ ಸ್ಥಳಕ್ಕೆ…

Read More

ರಿಪ್ಪನ್‌ಪೇಟೆ : ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಯಾರು ಇಲ್ಲದ ದೇವಸ್ಥಾನದಲ್ಲಿ ತಾಳಿ ಕಟ್ಟಿದ ಯುವಕ – ಪೋಕ್ಸೋ ಪ್ರಕರಣ ದಾಖಲು|pocso

ರಿಪ್ಪನ್‌ಪೇಟೆ : ಇತ್ತೀಚೆಗೆ ಶಿವಮೊಗ್ಗ ಜಿಲ್ಲಾದ್ಯಂತ ಪೋಕ್ಸೋ ಪ್ರಕರಣಗಳು ಹೆಚ್ಚುತಿದ್ದು ಅದರಲ್ಲಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಸಕ್ತ ವರ್ಷದಲ್ಲಿ ಹಲವಾರು ಪೋಕ್ಸೋ ಪ್ರಕರಣ ದಾಖಲಾಗುತ್ತಿರುವುದು ಆತಂಕಕಾರಿಯಾದ ಬೆಳವಣಿಗೆಯಾಗಿದೆ. ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ನಂತರ ಲೈಂಗಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿ ಮದುವೆಯಾದ ಯುವಕನ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ. ನೊಂದ ಬಾಲಕಿಯ ದೂರಿನ ವಿವರ : ನನ್ನ ಊರಿನ ಪರಿಚಯಸ್ಥ ಯುವಕ ಸುಮಾರು ಮೂರ್ನಾಲ್ಕು…

Read More

ಅಪ್ಪು ಜನ್ಮ ದಿನಾಚರಣೆ ಅಂಗವಾಗಿ ಹುಂಚಾದಲ್ಲಿ ಅಭಿಮಾನಿಗಳಿಂದ ಬಿರಿಯಾನಿ ವಿತರಣೆ|ರಿಪ್ಪನ್‌ಪೇಟೆ ಗೇರುಬೀಜ ನೌಕರರಿಂದ ಅಪ್ಪು ಜನ್ಮ ದಿನಾಚರಣೆ|APPU

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ಅಪ್ಪು ಅಭಿಮಾನಿ ಬಳಗದವರಿಂದ ಇಂದು ಸಂಭ್ರಮದೊಂದಿಗೆ ಪುನೀತ್‌ ರಾಜ್‍ಕುಮಾರ್ ರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಕೇಕ್ ಕತ್ತರಿಸಿ ಅನ್ನ ಸಂತರ್ಪಣೆ ನಡೆಸುವ ಮೂಲಕ  ಆಚರಿಸಲಾಯಿತು. ಹುಟ್ಟುಹಬ್ಬದ ಅಂಗವಾಗಿ ಹುಂಚ ಗ್ರಾಮದ ಪುನೀತ್ ಕಟ್ಟಾ ಅಭಿಮಾನಿಗಳಾದ ಯದುನಂದನ್ ಹಾಗೂ ನಾಗೇಶ್ ರವರು ತಮ್ಮ ಹೊಟೇಲ್ ಗೆ ಪುನೀತ್ ರಾಜ್ ಕುಮಾರ್ ಹೊಟೇಲ್ ಎಂದು ಕಳೆದ ವರ್ಷ ನಾಮಕರಣ ಮಾಡಿದ್ದರು ಈ ವರ್ಷ ಪುನೀತ್ ಹುಟ್ಟುಹಬ್ಬದ ಅಂಗವಾಗಿ ತಮ್ಮ ಹೊಟೇಲ್ ನಲ್ಲಿ ಕೇಕ್…

Read More

ನಾಗರಹಳ್ಳಿಯಲ್ಲಿ ಆರೋಗ್ಯ ಉಪ ಕೇಂದ್ರ ಕಟ್ಟಡಕ್ಕೆ ಶಂಕುಸ್ಥಾಪನೆ|Hospital

ಹೊಸನಗರ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಿರ್ಮಾಣವಾಗಲಿರುವ ಆರೋಗ್ಯ ಉಪಕೇಂದ್ರ ಕಟ್ಟಡ ನಿರ್ಮಾಣ ಹಾಗೂ 06 ಲಕ್ಷ ವೆಚ್ಚದ ವ್ಯಾಯಾಮ ಶಾಲೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು. ನಂತರ ಮಾತನಾಡಿದ ಗ್ರಾಪಂ ಸದಸ್ಯ ರಾಘವೇಂದ್ರ ತೋಟದಕಟ್ಟು ಶಿಕ್ಷಣ ಮತ್ತು ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳು. ಪ್ರತಿಯೊಬ್ಬರಿಗೂ ಶಿಕ್ಷಣ, ಆರೋಗ್ಯ ಅತ್ಯವಶ್ಯ. ಸಣ್ಣ ಪುಟ್ಟ ಖಾಯಿಲೆಗಳಿಗೆ ತಾಲೂಕ್ ಆಸ್ಪತ್ರೆಯನ್ನು ಅವಲಂಭಿಸಬಾರದು ಆದ್ದರಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಬಲವರ್ಧನೆಗೆ ನಮ್ಮ ಸರ್ಕಾರ ಶ್ರಮಿಸಬೇಕಾಗಿದೆ…

Read More

ರಿಪ್ಪನ್‌ಪೇಟೆ : ಕೋಳಿ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ|Raid

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದ ಆನೆಗದ್ದೆ ಗುಡ್ಡದಲ್ಲಿ ಕೋಳಿ ಅಂಕ ನಡೆಸುತ್ತಿರುವ ಮಾಹಿತಿ ಆಧರಿಸಿ ಪಟ್ಟಣದ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ. ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿರುವ ಕುರಿತು ಬಂದ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು.ಈ ಸಂದರ್ಭ ಜೂಜಾಟದಲ್ಲಿ ಭಾಗಿಯಾಗಿದ್ದ 10 ರಿಂದ 12  ಆರೋಪಿಗಳು ಪರಾರಿಯಾಗಿದ್ದು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಕೋಳಿ ಜೂಜಾಟ ನಡೆಸುತ್ತಿರುವ ಖಚಿತ ಮಾಹಿತಿಯನ್ನಾಧರಿಸಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ನಾಳೆ (17-03-2023) ಸಾಗರಕ್ಕೆ ವಿಜಯ ಸಂಕಲ್ಪ ಯಾತ್ರೆ – ಹರತಾಳು ಹಾಲಪ್ಪ

ಸಾಗರ: ಮಾ. 17 ರಂದು ವಿಜಯ ಸಂಕಲ್ಪ ಯಾತ್ರೆ ಸಾಗರಕ್ಕೆ ಆಗಮಿಸಲಿದ್ದು ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೆ.ಎಸ್. ಈಶ್ವರಪ್ಪ ಸೇರಿದಂತೆ ಅನೇಕ ಸಚಿವರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಜೆ 4:30ಕ್ಕೆ ಕಾನ್ವೆಂಟ್ ಶಾಲೆ ಎದುರಿನ ನೆಹರೂ ಮೈದಾನದಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಯಲ್ಲಿ 25 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು, ಅಭಿಮಾನಿಗಳು, ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸಮಾವೇಶದಲ್ಲಿ ಸಚಿವರಾದ ಆರಗ ಜ್ಞಾನೇಂದ್ರ,…

Read More
Exit mobile version