Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಹೆಚ್ ಡಿ ಕುಮಾರಸ್ವಾಮಿ|HDK

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಎಚ್ ಡಿ ಕುಮಾರಸ್ವಾಮಿ ರಿಪ್ಪನ್ ಪೇಟೆ : ಬಡಜನರ ಬದುಕಿನಲ್ಲಿ ಬದಲಾವಣೆ ತರಲು ರಾಜ್ಯದ 28 ಜಿಲ್ಲೆಗಳಲ್ಲಿ ಪಂಚರತ್ನ ರಥ ಯಾತ್ರೆಯ ಮೂಲಕ ಪ್ರವಾಸ ಕೈಗೊಂಡಿದ್ದೇನೆ. ಇತರೆ ಪಕ್ಷಗಳಲ್ಲಿ ನಾಯಕರುಗಳ ಗುಂಪೆ ಇದೆ ಆದರೆ ನನ್ನದು ಏಕಾಂಗಿ ಹೋರಾಟ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಶುಕ್ರವಾರ ಸಮೀಪದ ಹುಂಚದ ಕಟ್ಟೆ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಸಲುವಾಗಿ ಆಗಮಿಸಿದ್ದ ಅವರು ಸುದ್ದಿಗಾರರನ್ನು…

Read More

ಹೊಂಬುಜಾ ಜಗನ್ಮಾತೆ ಪದ್ಮಾವತಿ ದರ್ಶನಾಶೀರ್ವಾದ ಪಡೆದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ|hombuja

ರಿಪ್ಪನ್‌ಪೇಟೆ;-ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಇಂದು ಹೊಂಬುಜ ಜೈನಮಠದ ಜಗನ್ಮಾತೆ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ  ದರ್ಶನಾಶಿರ್ವಾದ ಪಡೆದರು. ನಂತರ ಮಠದ ಜಗದ್ಗುರು ಡಾ.ಶ್ರೀಮದ್‌ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಶ್ರೀಗಳು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಸನ್ಮಾನಿಸಿ ಅಶೀರ್ವದಿಸಿದರು. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಮ್,ಎಂ.ಎಲ್.ಸಿ. ಬೋಜೆಗೌಡರು,ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ ಶ್ರೀಕಾಂತ್,ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್, ತಾಲ್ಲೂಕ್…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎರಡನೇ ವಿಮಾನ ಆಗಮನ – 4 ಕಾರು ಸಹಿತ ಆಗಮಿಸಿದ ಪ್ರಧಾನಿ ಭದ್ರತಾ ಪಡೆ|SPG

ಶಿವಮೊಗ್ಗ : ಇವತ್ತು ಇಂಡಿಯನ್ ಏರ್ ಫೋರ್ಸ್ ನ ಎರಡನೆ ವಿಮಾನ ಸೋಗಾನೆಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 11.30ರ ಹೊತ್ತಿಗೆ ಆಗಮಿಸಿತು. ರಷ್ಯಾ ನಿರ್ಮಿತ ಇಲ್ಯೂಷಿನ್ 76 ಮಾದರಿಯ ವಿಮಾನ ಇದಾಗಿದೆ. ಭಾರತೀಯ ವಾಯು ಸೇನೆಯಲ್ಲಿ ಕ್ಯಾರಿಯರ್ ವಿಮಾನ. ಸೇನೆಗೆ ಅಗತ್ಯವಿರುವ ಸರಕು ಸಾಗಣೆಗೆ ಈ ವಿಮಾನ ಬಳಕೆಯಾಗುತ್ತದೆ. ವಿಮಾನದಲ್ಲಿ SPG ತಂಡ ಭಾರತೀಯ ವಾಯು ಸೇನೆಯ ಕ್ಯಾರಿಯರ್ ವಿಮಾನದಲ್ಲಿ ದೆಹಲಿಯಿಂದ ಭದ್ರತಾ ಪಡೆಗಳ ತಂಡ ಆಗಮಿಸಿತು. ವಿಮಾನದಲ್ಲಿ ನಾಲ್ಕು ಕಾರುಗಳ ಸಹಿತ ಹಲವು ಸಿಬ್ಬಂದಿ ಆಗಮಿಸಿದರು….

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ – ಇಬ್ಬರು ವಶಕ್ಕೆ|excise

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಎರಡು ಅಂಗಡಿಗಳ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬೆಳ್ಳೂರು ಗ್ರಾಮದ ಬಂಗ್ಲಿದಿಬ್ಬ ಸರ್ಕಲ್ ನಲ್ಲಿರುವ ದಿನಸಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಚಂದ್ರಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ಬೆಳ್ಳೂರು ಗ್ರಾಮದ ಕೋಳಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ…

Read More

ಕೊರೊನಾ ಪಾಸಿಟಿವ್ ಹಿನ್ನಲೆ ರಜೆ ಮೇಲೆ ಹೋಗಿದ್ದ ಕಾನ್ಸ್ ಟೇಬಲ್ ನಾಪತ್ತೆ – ಅದೇ ಸ್ಟೇಷನ್ ನಲ್ಲಿ ದಾಖಲಾಯ್ತು ಕೇಸ್|missing

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಸ್ಟೇಷನ್​ನಲ್ಲಿ ಕೆಲಸ ಮಾಡುತ್ತಿದ್ದ ಪೇದೆಯೊಬ್ಬರು ಕಾಣೆಯಾಗಿದ್ದಾರೆ ಎಂಬ ದೂರೊಂದು ಅದೇ ಸ್ಟೇಷನ್​ನಲ್ಲಿ ದಾಖಲಾಗಿದ್ದು, ಆ ಸಂಬಂಧ ಎಫ್​ಐಆರ್ ಕೂಡ ದಾಖಲಾಗಿದೆ.   ದಿನಾಂಕ: 07-12-2021 ರಿಂದ ಮಾಳೂರು ಪೊಲೀಸ್ ಠಾಣೆಯಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ಸಂತೋಷ್ ಕುಮಾರ್ ಎಂಬವರು ಕೋವಿಡ್ ಪಾಸೀಟಿವ್ ಬಂದ ಹಿನ್ನೆಲೆಯಲ್ಲಿ  24-01-2022 ರಿಂದ ದಿನಾಂಕ:31-01-2022 ರ ವಿಶೇಷ ರಜೆ ತೆಗೆದುಕೊಂಡಿದ್ದರಂತೆ.  ಆನಂತರ  ವಾಪಸ್‌ ಕರ್ತವ್ಯಕ್ಕೆ ಹಾಜರಾಗಿಲ್ಲ. ಅಲ್ಲದೆ ಯಾವುದೇ ರೀತಿಯ ರಜೆಯನ್ನು ಸಹ ಪಡೆದುಕೊಳ್ಳದೆ…

Read More

ರಿಪ್ಪನ್‌ಪೇಟೆ : ನುಗ್ಗೆಕಾಯಿ ಕಿತ್ತ ವಿಚಾರದಲ್ಲಿ ಗಲಾಟೆ – ಒಬ್ಬನಿಗೆ ಮೂವರಿಂದ ಹಲ್ಲೆ,ಜೀವಬೆದರಿಕೆ|Assault

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಕೆಂಚನಾಲ ಗ್ರಾಮದಲ್ಲಿ ನುಗ್ಗೆಕಾಯಿ ವಿಚಾರಕ್ಕೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆಯೊಂದು ನಡೆದಿದೆ.  ಸೋಮವಾರ ಸಂಜೆ ಕೆಂಚನಾಲ ಗ್ರಾಮದ ರಾಮ್ ಕುಮಾರ್  ರಿಪ್ಪನ್​ಪೇಟೆಗೆ ಹೋಗಿ ವಾಪಸ್​ ಮನೆಗೆ ಬರುವಾಗ, ಅದೇ ಗ್ರಾಮದ ನಿವಾಸಿ  ನಾಗೇಶ್ ತನ್ನ ಮನೆ ಹಿತ್ತಲಿನಲ್ಲಿ  ಬೆಳೆದಿದ್ದ ನುಗ್ಗೆಕಾಯಿಯನ್ನು ಕೀಳುತ್ತಿರುವುದು ಕಾಣಿಸಿದೆ. ಸಹಜವಾಗಿಯೇ ನಮ್ಮನೆಯ ಹಿತ್ಲಿಂದ ಯಾಕೆ ನುಗ್ಗೆಕಾಯಿ ಕಿತ್ಕೊಂಡು ಹೋಗ್ತಿದ್ದಿಯಾ, ಹೇಳೋದು ಕೇಳೋದು ಏನು ಇಲ್ವಾ ಎಂದು ಪ್ರಶ್ನಿಸಿದ್ದಾರೆ. ಇಷ್ಟಕ್ಕೆ ಸಿಟ್ಟಾದ ವ್ಯಕ್ತಿ ಅದು ನಿನ್ನ…

Read More

ಶ್ರೀಕ್ಷೇತ್ರ ಹೊಂಬುಜಾ ಮಠದಲ್ಲಿ ಹಲವು ಭಾವುಕ ಕ್ಷಣಗಳಿಗೆ ಸಾಕ್ಷಿಯಾದ ಶಿಬಿರ|hombuja

ರಿಪ್ಪನ್‌ಪೇಟೆ : ಸಮೀಪದ ಶ್ರೀಕ್ಷೇತ್ರ ಹೊಂಬುಜದಲ್ಲಿ ಇಂದು ಭಾವುಕ ಕ್ಷಣಗಳಿಗೆ ಸಾಕ್ಷಿಯಾಗುವಂತಹ ಕಾರ್ಯಕ್ರಮವೊಂದನ್ನು ಹೊಂಬುಜ ಮಠದ ವತಿಯಿಂದ ಆಯೋಜಿಸಲಾಗಿತ್ತು. ಕೆಲವೊಂದು ಕಾರಣಗಳಿಂದ ಕೈ ಮತ್ತು ಕಾಲು ಕಳೆದುಕೊಂಡ 72 ವಿಕಲಚೇತನರಿಗೆ ಕೈ ಮತ್ತು ಕಾಲು ಉಚಿತವಾಗಿ ಜೋಡಿಸುವ ಕಾರ್ಯಕ್ರಮದಲ್ಲಿ ಕಣ್ಣಂಚನ್ನು ತೇವಗೊಳಿಸುವಂತಹ ಕೆಲವೊಂದು ಘಟನೆಗಳು ನಡೆದವು. ಹನ್ನೊಂದು ವರ್ಷದ ವಿಕಲಚೇತನ ಬಾಲಕ ಅಪಘಾತದಲ್ಲಿ ಎರಡು ವರ್ಷದ ಹಿಂದೆ ಕಾಲು ಕಳೆದುಕೊಂಡು ತನ್ನ ಬಾಳಿನಲ್ಲಿನ ಇನ್ನು ನಡೆಯಲು ಸಾಧ್ಯವೇ ಇಲ್ಲವೆನೋ ಎಂಬ ಮನಸ್ಥಿತಿಯಲ್ಲಿದ್ದ… ಆ ಬಾಲಕನಿಗೆ ಕಾಲು ಜೋಡಿಸುತ್ತಲೇ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ತೀರ್ಥಹಳ್ಳಿ ಕಾಂಗ್ರೆಸ್ ನ ಜೋಡೆತ್ತುಗಳ ವಾಗ್ದಾಳಿ|RMM-KIMMANE

ತೀರ್ಥಹಳ್ಳಿ : ಜನರಿಂದ ಆಯ್ಕೆಯಾದಂತಹ ಒಬ್ಬ ಜನಪ್ರತಿನಿಧಿಯನ್ನು ಒಬ್ಬ ಅಧಿಕಾರಿ ಹೊಡಿಯುತ್ತಾರೆ ಅಂದ್ರೆ ಏನರ್ಥ ? ಜ್ಞಾನೇಂದ್ರ ಗೆ ವಿಧಾನಸಭೆಯಲ್ಲಿ ಯಾವುದಾದರೂ ಅಧಿಕಾರಿ ಹೊಡೆದರೆ ಅದರ ಉತ್ತರ ಏನು ?ಒಬ್ಬ ಅಧಿಕಾರಿ ಆರಗ ಜ್ಞಾನೇಂದ್ರ ಅವರಿಗೆ ಹೊಡೆದರೆ ಅವರನ್ನು ಅಧಿಕಾರದಲ್ಲಿ ಇಡುತ್ತಾರ ಇವರಿಗೆ ಕಾಮನ್ ಸೆನ್ಸ್ ಬೇಡವಾ ? ನನ್ನ ಅನಿಸಿಕೆ ಜ್ಞಾನೇಂದ್ರರಂತವರಿಗೆ ಅಧಿಕಾರ ಕೊಟ್ಟಿದ್ದೆ ತಪ್ಪು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ಪಿಡಿಓ ಅವರನ್ನು ಕೆಲಸದಿಂದ ತೆಗೆಯಬೇಕು ಎಂದು ಮಂಗಳವಾರ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮೊಟ್ಟಮೊದಲ ವಿಮಾನ|airport

ಶಿವಮೊಗ್ಗದ ಸೋಗಾನೆಯ ನೂತನ ಕುವೆಂಪು ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಇವತ್ತು ಮಧ್ಯಾಹ್ನ ಬಂದಿಳಿದಿದೆ. ಪ್ರಾಯೋಗಿಕವಾಗಿ ವಾಯು ಸೇನೆಯ ಬೋಯಿಂಗ್ ವಿಮಾನ ಸೋಗಾನೆಯ ಕುವೆಂಪು ವಿಮಾನ ನಿಲ್ದಾಣದ ರನ್ ವೇಯಲ್ಲಿ ಬಂದಿಳಿದಿದ್ದು ಯಾವುದೇ ಅಡೆತಡೆ ಉಂಟಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ವಾಯು ಸೇನೆಯ ಬೋಯಿಂಗ್ 737 – 7HI ಮಾದರಿಯ ವಿಮಾನ ಇಂದು ಮಧ್ಯಾಹ್ನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿದೆ. ಮಧ್ಯಾಹ್ನ 12 ಗಂಟೆಗೆ ಈ ವಿಮಾನ ದೆಹಲಿಯಿಂದ ಹೊರಟಿತ್ತ್ತು. ಮಧ್ಯಾಹ್ನ 2.30ರ ಹೊತ್ತಿಗೆ ವಿಮಾನ ಲ್ಯಾಂಡ್…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರಿಡಲು ಸಂಪುಟ ನಿರ್ಧಾರ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸೋಮವಾರ ಸಿಎಂ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ. ಈ ಹಿಂದೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಕುವೆಂಪು ಅವರ ಹೆಸರನ್ನು ಪ್ರಸ್ತಾಪಿಸಿದ್ದರು.  ’20ನೇ ಶತಮಾನ ಕಂಡ ಈ ದೇಶದ ಶ್ರೇಷ್ಠ ಕವಿ. ಜ್ಞಾನಪೀಠ ಪ್ರಶಸ್ತಿ ಪಡೆದವರು. ರಾಜ್ಯದ ಗೀತೆಯನ್ನು ರಚಿಸಿದ ರಾಷ್ಟ್ರಕವಿ ಕುವೆಂಪು ಅವರ…

Read More
Exit mobile version