ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಹೊಸನಗರದ ಉಪನ್ಯಾಸಕ ಅಂಜನ್ ಕುಮಾರ್ ಗೆ ಬೆದರಿಕೆ – ಪ್ರಕರಣ ದಾಖಲು|thret

ಹೊಸನಗರ : ಕಾಲೇಜು ಉಪನ್ಯಾಸಕರೊಬ್ಬರ ಮನೆಯ ಕಾಂಪೌಂಡ್ ಆವರಣಕ್ಕೆ ಸಮಾರು 15 ಜನರ ಗುಂಪು ಅತಿಕ್ರಮಣ ಪ್ರವೇಶ ಮಾಡಿ, ಬೆದರಿಕೆ ಹಾಕಿದ ಘಟನೆ ಪಟ್ಟಣದ ಕ್ರಿಸ್ಟಿಯನ್ ಕಾಲೋನಿಯಲ್ಲಿ ನಡೆದಿದೆ. ಇಲ್ಲಿನ ಕೊಡಚಾದ್ರಿ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಜನ್‌ಕುಮಾರ್ ಎಂಬವವರಿದ್ದ ಬಾಡಿಗೆ ಮನೆಯ ಆವರಣಕ್ಕೆ ಶನಿವಾರ ತಡರಾತ್ರಿ ಪ್ರವೇಶಿಸಿ, ಉಪನ್ಯಾಸಕರಿಗೆ ಬೆದರಿಕೆ ಹಾಕಿದ್ದಾರೆ. ಮನೆ ಒಳಗಡೆ ಅನ್ಯಕೋಮಿನ ಮಹಿಳೆಯನ್ನು ಇರಿಸಿಕೊಂಡಿದ್ದೀಯ, ನಾವು ತಪಾಸಣೆ ಮಾಡಬೇಕು. ಬಾಗಿಲು ತೆಗೆಯದಿದ್ದರೆ, ಬಾಗಿಲು ಒಡೆದು ಒಳ ಪ್ರವೇಶಿಸುವುದಾಗಿ ತಿಳಿಸಿ…

Read More

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ|accident

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ತಪ್ಪಿದ ಭಾರಿ ಅನಾಹುತ ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಹುಲಿಕಲ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಮಂಗಳೂರಿಗೆ ಸಿಮೆಂಟ್ ತುಂಬಿಕೊಂಡು ತೆರಳುತಿದ್ದ 12 ಚಕ್ರದ ಲಾರಿ (KA 19 AB 0933) ಹುಲಿಕಲ್ ಗ್ರಾಮದ ಬಾಬುರಾವ್ ಎಂಬುವವರ ಮನೆಯ ಸಮೀಪದಲ್ಲಿಯೇ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಕಂದಕದಲ್ಲಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಂಭೀರ…

Read More

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ|falls

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ ವಾರದ ಹಿಂದೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಕಸ್ಮಿಕವಾಗಿ ಬಿದ್ದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟವರು. ಕಳೆದೆರಡು ದಿನಗಳಿಂದ ಪರಿಸರದಲ್ಲಿ ಮಳೆ ಇಳಿಮುಖವಾಗಿದ್ದು ನೀರಿನ ಹರಿವು ಕಡಿಮೆಯಾಗಿದೆ. ಇದರಿಂದಾಗಿ ಫಾಲ್ಸ್ ನಲ್ಲಿ ಶರತ್ ಬಿದ್ದ ಸಮೀಪದ ಕಲ್ಲು…

Read More

ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಅತಿಮುಖ್ಯ – ಸಂಸದ ಬಿ ವೈ ರಾಘವೇಂದ್ರ|press day

ಶಿವಮೊಗ್ಗ : ಪತ್ರಿಕಾ ಮಾಧ್ಯಮ ಯಾವತ್ತೂ ವಿರೋಧ ಪಕ್ಷದಂತೆ ಕೆಲಸ ಮಾಡಬೇಕು. ಹೀಗಾದಲ್ಲಿ ಆಳುವ ಸರಕಾರ ಮತ್ತು ಸಾರ್ವಜನಿಕ ಕ್ಷೇತ್ರದಲ್ಲಿರುವವರಿಗೆ ಜವಾಬ್ದಾರಿ ಹೆಚ್ಚಿರುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.  ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಅಭಿನಂದನೆ  ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರ ಪಾತ್ರ ಅತಿಮುಖ್ಯವಾಗಿರುತ್ತದೆ. ನಕಾರಾತ್ಮಕ ವರದಿಗಾರಿಕೆ ಮಾಡುವವರನ್ನು ಸಮಾಜ ಒಪ್ಪುವುದಿಲ್ಲ. ಸಮಾಜಮುಖಿಯಾದ ಸಕಾರಾತ್ಮಕ ಪತ್ರಿಕೋದ್ಯಮಕ್ಕೆ…

Read More

ಖಾಸಗಿ ವಿಡಿಯೊ ವೈರಲ್‌; ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ|self harming

ಖಾಸಗಿ ವಿಡಿಯೊ ವೈರಲ್‌; ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ ದಾವಣಗೆರೆ : ಸರ್ಕಾರಿ ಪದವಿ ಕಾಲೇಜಿನ ಕಟ್ಟಡದಲ್ಲಿ ಯುವಕ-ಯುವತಿ ಸರಸ ಸಲ್ಲಾಪದಲ್ಲಿ ತೊಡಗಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ನಗರದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಮಹಡಿ ಮೇಲೆ ಏಕಾಂತದಲ್ಲಿ ಇದ್ದರು. ದಾವಣಗೆರೆ ಜಿಲ್ಲೆಯ ಕಾಲೇಜೊಂದರ ಕಟ್ಟಡದಲ್ಲಿ ಯುವಕ-ಯುವತಿಯ ಖಾಸಗಿ ಕ್ಷಣಗಳನ್ನು ಎದುರಿನ ಕಾಲೇಜು ಕಟ್ಟಡದಿಂದ ಯಾರೋ ಮೊಬೈಲ್ ನಲ್ಲಿ ಚಿತ್ರೀಕರಿಸಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು….

Read More

ವಿದ್ಯುತ್ ತಂತಿ ತಗುಲಿ ಕುರಿಗಾಹಿ ಸಾವು|electric shock

ವಿದ್ಯುತ್ ತಂತಿ ತಗುಲಿ ಕುರಿಗಾಹಿ ಸಾವು ಶಿವಮೊಗ್ಗ : ವಿದ್ಯುತ್‌ ತಂತಿ ತಗುಲಿ ಕುರಿಗಾಹಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮಲ್ಲಿಕಾರ್ಜುನ ನಗರ 3ನೇ ಕ್ರಾಸ್ ಬಳಿಯ ರಾಗಿಗುಡ್ಡದಲ್ಲಿ ನಡೆದಿದೆ. ಚಟ್ನಹಳ್ಳಿ ನಿವಾಸಿ ಗಿರೀಶ್ (27) ಮೃತು ಕುರಿಗಾಹಿ. ರಾಗಿಗುಡ್ಡದ ಚಾನಲ್‌ ಸಮೀಪ ಶುಕ್ರವಾರ ಮಧ್ಯಾಹ್ನ ಗಿರೀಶ ಕುರಿ ಮೇಯಿಸುತ್ತ ಬಂದಿದ್ದ. ಈ ವೇಳೆ ವಿದ್ಯುತ್‌ ಕಂಬದ ತಂತಿ ತಗುಲಿ ಕರೆಂಟ್‌ ಶಾಕ್‌ ಹೊಡೆದಿದೆ ಎಂದು ಶಂಕಿಸಲಾಗಿದೆ. ರಾತ್ರಿಯಾದರು ಗಿರೀಶ ಮನೆಗೆ ಬಾರದ ಹಿನ್ನೆಲೆ ಆತನ ಕುಟುಂಬದವರು…

Read More

ವಿಟಿಯು ಇಂಜಿನಿಯರಿಂಗ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಹಾಗೂ 9ನೇ ರ‌್ಯಾಂಕ್ ಪಡೆದ JNNC ವಿದ್ಯಾರ್ಥಿನಿಯರು

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ 2020-23 ನೇ ಸಾಲಿನ ವಿವಿಧ ಎಂಜಿನಿಯರಿಂಗ್ ವಿಭಾಗಗಳ ಪರೀಕ್ಷೆಗಳಲ್ಲಿ ಶಿವಮೊಗ್ಗ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಪಾರ್ವತಿ ಸಲೇರಾ ರಾಜ್ಯಕ್ಕೆ ಪ್ರಥಮ ರ‌್ಯಾಂಕ್ ಪಡೆದಿದ್ದಾರೆ. ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸ್ಮೃತಿ.ಕೆ.ವಂತಕರ್ ರಾಜ್ಯಕ್ಕೆ ಒಂಬತ್ತನೆ ರ‌್ಯಾಂಕ್ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಅಮೋಘ ಸಾಧನೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ…

Read More

ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ಅಧಿಕಾರ ಸ್ವೀಕಾರ|kuvempu university

ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ಅಧಿಕಾರ ಸ್ವೀಕಾರ ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ನೇಮಕಗೊಂಡಿದ್ದಾರೆ. ಈ ಹಿಂದೆ ಕುಲಸಚಿವರಾಗಿದ್ದ ಅನುರಾಧ ಅವರ ಸ್ಥಾನಕ್ಕೆ ಈಗ ಅಧಿಕೃತ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. 8 ತಿಂಗಳ ಹಿಂದೆ ಕುಲಸಚಿವರಾಗಿದ್ದ ಅನುರಾಧರವರು ವರ್ಗಾವಣೆಗೊಂಡು ಹೋದ ನಂತರ ಪ್ರಭಾರ ಕುಲಸಚಿವರನ್ನಾಗಿ ಸಿ ಗೀತಾರನ್ನ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. 8 ತಿಂಗಳ ಕಾಲ ಪ್ರಭಾರರನ್ನ ನೇಮಿಸಿದ್ದ ಸರ್ಕಾರ ಈಗ ಅವರ ಸ್ಥಾನಕ್ಕೆ ಅಧಿಕೃತವಾಗಿ ಪ್ರೊ.ಪಿ.ಕಣ್ಣನ್ ರನ್ನ ನೇಮಿಸಿ ಆದೇಶಿಸಿದೆ. ಕುವೆಂಪು ವಿಶ್ವವಿದ್ಯಾಲಯದ ನೂತನ…

Read More

ರಿಪ್ಪನ್‌ಪೇಟೆ : ಮಸೀದಿ ಮುಂಭಾಗದಲ್ಲಿ ಮದ್ಯದಂಗಡಿ ಅರಂಭಿಸುವುದನ್ನು ವಿರೋಧಿಸಿ ಮೌನ ಪ್ರತಿಭಟನೆಗೆ ಸಿದ್ದತೆ|ಮದ್ಯದಂಗಡಿ ಪ್ರಾರಂಭದ ಹುನ್ನಾರದಲ್ಲಿ ಪ್ರತಿಷ್ಠಿತ ಧರ್ಮದರ್ಶಿಯೊಬ್ಬರ ಹೆಸರು ದುರ್ಬಳಕೆ.???

“ಮಸೀದಿ ಬಳಿ ಮಧ್ಯದಂಗಡಿ ಅರಂಭಿಸುವುದನ್ನು ವಿರೋಧಿಸಿ ಮೌನ ಪ್ರತಿಭನೆಗೆ ಸಿದ್ದತೆ” ರಿಪ್ಪನ್‌ಪೇಟೆ;-ಸರ್ಕಾರದ ಅಬಕಾರಿ ನಿಯಮದಂತೆ ಮಸೀದಿ ಚರ್ಚ್ ದೇವಸ್ಥಾನ ಹಾಗೂ ಶಾಲೆ ಅಸ್ಪತ್ರೆಗೆ 100 ಮೀಟರ್ ಸುತ್ತಳಲೆತೆಯಲ್ಲಿ ಮಧ್ಯದಂಗಡಿ ತೆರೆಯಬಾರದೆಂಬ ನಿಯಮ ಜಾರಿಯಲ್ಲಿದ್ದರೂ ಕೂಡಾ ಇಲ್ಲಿನ ಹೊಸನಗರ ರಸ್ತೆಯ ಜುಮ್ಮಾಮಸೀದಿಯಿಂದ ಕೆಲವೇ ಅಂತರದಲ್ಲಿರುವ ರಾಯಲ್ ಕಂಪರ್ಟ್ ಕಟ್ಟಡದಲ್ಲಿ ಸಿ.ಎಲ್.ನಂ 7 ಬಾರ್ ಅಂಡ್ ರೆಸ್ಟೊರೆಂಟ್‌ಯನ್ನು ಆರಂಭಿಸುವ ಎಲ್ಲ ಸಿದ್ದತೆ ನಡೆದಿದ್ದು ಈ ಬಗ್ಗೆ ಇಂದು ಮುಸ್ಲಿಂ ಸಮುದಾಯದವರು ಶುಕ್ರವಾರದ ನಮಾಜ್ (ಪ್ರಾರ್ಥನೆ) ಮುಗಿಸಿ ಠಾಣೆಗೆ ತೆರಳಿ ಮಸೀದಿ ಬಳಿ…

Read More

ಆರ್ ಎಂ ಮಂಜುನಾಥ್ ಗೌಡ ಹಿಡಿತಕ್ಕೆ ಡಿಸಿಸಿ ಬ್ಯಾಂಕ್ – ಉಪಾಧ್ಯಕ್ಷರಾಗಿದ್ದ ಷಡಾಕ್ಷರಿ ಪ್ರಭಾರ ಅಧ್ಯಕ್ಷರಾಗಿ ಆಯ್ಕೆ..!!!|DCC

ಶಿವಮೊಗ್ಗ: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಮಂಡನೆ ಆಗಿದ್ದು, 9 ನಿರ್ದೇಶಕರ ಬೆಂಬಲದೊಂದಿಗೆ ಮತ್ತೆ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಡಾ. ಆರ್.ಎಂ. ಮಂಜುನಾಥ ಗೌಡ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲಾ ಬ್ಯಾಂಕ್ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಪರವಾಗಿ 9 ಮತಗಳೊಂದಿಗೆ, ಅವಿಶ್ವಾಸ ನಿರ್ಣಯಕ್ಕೆ ಜಯ ಸಿಕ್ಕಿದೆ. ಉಪಾಧ್ಯಕ್ಷರಾಗಿದ್ದ ಷಡಕ್ಷರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 13 ಸದಸ್ಯರಿದ್ದು ಈಗ ಗೌಡರ ಪಾಳಯ ಅಧಿಕಾರ ಹಿಡಿದಿದೆ. ಚುನಾವಣೆ ಅಧಿಕಾರಿಯಾಗಿ ಜೆಸಿ ವೆಂಕಟಾಚಲಪತಿ ನೇತೃತ್ವದಲ್ಲಿ ಗೌಪ್ಯ…

Read More