Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಗಡಿ ಗುರುತಿಗೆ ಬಂದ ಅರಣ್ಯಾಧಿಕಾರಿಗಳು – ಜಮೀನು ಕಳೆದುಕೊಳ್ಳುವ ಭಯದಲ್ಲಿ ರೈತ ಸಾವು|forest

ಅರಣ್ಯ ಇಲಾಖೆ ಅಧಿಕಾರಿಗಳು ಈಗ ರೈತರ ಸ್ವಾಧೀನದಲ್ಲಿರುವ ಜಾಗದಲ್ಲಿ ಅರಣ್ಯ ಗಡಿ ಗುರುತು ಹಾಕಲು ಬಂದಿದ್ದನ್ನು ನೋಡಿ, ಭೂಮಿ ಕಳೆದುಕೊಳ್ಳುವ ಭಯದಲ್ಲಿ ರೈತರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದ ಮಂಜಪ್ಪ ಎಂಬವರೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟವರು. ಅವರಿಗೆ ಸೇರಿದ ಜಾಗದ ಅರಣ್ಯ ಇಲಾಖೆ ಅಧಿಕಾರಿಗಳು ಗಡಿಗುರುತಿನ ಬಾಂದ್‌ ಕಲ್ಲು ಹಾಕಿದ್ದರಿಂದ ಅವರು ಆತಂಕಿತರಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರ ತರಾಟೆ ಅರಣ್ಯ ಇಲಾಖೆಯ ಅಧಿಕಾರಿಗಳು ಅರಣ್ಯ ಭೂಮಿ ಸಂರಕ್ಷಣೆಯ ಭಾಗವಾಗಿ ಗಡಿ…

Read More

ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್|DK

ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್  ತೀರ್ಥಹಳ್ಳಿ : ಬಿಜೆಪಿ ಸರ್ಕಾರ ಬಂದು ಆರಗ ಜ್ಞಾನೇಂದ್ರ ಗೃಹ ಸಚಿವರಾದಾಗ ಸಂತೋಷವಾಗಿತ್ತು. ಅವರಿಗೆ ಒಳ್ಳೆಯ ಸಂಸ್ಕೃತಿ ಇದೆ ಅಂದುಕೊಂಡಿದ್ದೆ ಆದರೆ ಪೊಲೀಸ್ ಅನ್ನು ಉಪಯೋಗಿಸಿಕೊಂಡು ದುರಾಡಳಿತ ಮಾಡುತ್ತಿದ್ದಾರೆ. ನಿಮ್ಮ ಆಡಳಿತಾವಧಿಯಲ್ಲಿ ಇನ್ಸ್ಪೆಕ್ಟರ್ ಹುದ್ದೆಗೆ ಓ.ಎಂ.ಆರ್. ಶೀಟ್ ತಿದ್ದುವ ಕೆಲಸ ಮಾಡಿದ್ರು. ಆರಗ ಜ್ಞಾನೇಂದ್ರ ಅವರೇ ಕೇಸ್ ಹಾಕಿಸ್ತೀರೋ ಹಾಕಿಸಿ ಇನ್ನು 60 ದಿನದಲ್ಲಿ ಎಲ್ಲಾ ಬದಲಾಗಲಿದೆ ನಿಮ್ಮ ಅಧಿಕಾರ ಕೊನೆಗೊಳ್ಳಲಿದೆ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ಹೆಸರಿಡಲು ಸಚಿವ ಸಂಪುಟ ನಿರ್ಧಾರ – ಮುಖ್ಯಮಂತ್ರಿ ಬೊಮ್ಮಾಯಿ|airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಈಗಾಗಲೇ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನಿಡಲು ಸಚಿವ ಸಂಪುಟ ನಿರ್ಧರಿಸಿದ್ದು ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 27 ರಂದು ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ನಗರದ ಎನ್‍ಇಎಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ/ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಅಭಿವೃದ್ಧಿ ಒಂದು ನಿರಂತರ ಪ್ರಕ್ರಿಯೆ. 2006 ರ…

Read More

ಮಂಗನ ಖಾಯಿಲೆ(KFD) ಬಗ್ಗೆ ಆತಂಕ ಬೇಡ – ಶಾಸಕ ಹರತಾಳು ಹಾಲಪ್ಪ

ಮಂಗನ ಖಾಯಿಲೆ ಬಗ್ಗೆ ಆತಂಕ ಬೇಡ – ಶಾಸಕ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಸಮೀಪದ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಇತ್ತೀಚಿಗೆ ವ್ಯಕ್ತಿಯೋರ್ವನಿಗೆ ಮಂಗನ ಖಾಯಿಲೆ ಕಂಡುಬಂದಿದ್ದು ಜನರಲ್ಲಿ ಆತಂಕ ಮೂಡಿದ್ದ ಹಿನ್ನಲೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಅಧಿಕಾರಿಗಳೊಂದಿಗೆ ಸಮಾಲೋಚನ ಸಭೆ ನಡೆಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮಂಗನ ಖಾಯಿಲೆ ಬಗ್ಗೆ ಗ್ರಾಮೀಣ ಪ್ರದೇಶದ ನಾಗರೀಕರು ಆತಂಕ ಪಡುವ ಅವಶ್ಯಕತೆಯಿಲ್ಲ ಈಗಾಗಲೇ ಆರೋಗ್ಯ ,ಕಂದಾಯ ಹಾಗೂ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷ – ಯುವಕನಿಗೆ 72 ಸಾವಿರ ವಂಚನೆ|fraud

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷವೊಡ್ಡಿ ಯುವಕನೊಬ್ಬನಿಗೆ 72 ಸಾವಿರ ರೂ. ವಂಚನೆ ಮಾಡಿರುವ ಬಗ್ಗೆ ಶಿವಮೊಗ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಳಲೂರಿನ ಯುವಕನೊಬ್ಬ ಈ ರೀತಿ ವಂಚನೆಗೊಳಗಾಗಿದ್ದಾನೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್ ಆಗಿ ನೇಮಕವಾಗಿದ್ದೀರಿ ಎಂದು ಕರೆ ಮಾಡಿ, ನೋಂದಣಿ ಹೆಸರಲ್ಲಿ ಸಾವಿರಾರು ರೂ. ಪಡೆದು ವಂಚಿಸಲಾಗಿದೆ. ಹೊಳಲೂರಿನ ಯುವಕ ಮೊಬೈಲ್ ಫೋನ್ ನಲ್ಲಿ ಏರ್ ಪೋರ್ಟ್ ಅಥಾರಿಟಿ ಅಪ್ಲಿಕೇಶನ್ ತೆರೆದು ತನ್ನ ಆಧಾರ್ ಕಾರ್ಡ್, ಮೊಬೈಲ್ ನಂಬರ್, ಹೆಸರು ದಾಖಲಿಸಿದ್ದರು….

Read More

ಅಂಗವಿಕಲ ಯುವತಿಯ ಮೇಲೆ ಅತ್ಯಾಚಾರ – ಆರೋಪಿಗೆ 10 ವರ್ಷ ಜೈಲು,40 ಸಾವಿರ ದಂಡ ವಿಧಿಸಿ ಕೋರ್ಟ್ ಆದೇಶ

ಶಿವಮೊಗ್ಗ ಜಿಲ್ಲೆಯಲ್ಲಿ ಅಂಗವಿಕಲೆ ಯುವತಿಯ ಕೈಕಾಲು ಕಟ್ಟಿ ಹಾಕಿ, ಬಾಯಿಗೆ ಬಟ್ಟೆ ತುರುಕಿ, ಬಲತ್ಕಾರದಿಂದ ಅತ್ಯಾಚಾರ ಎಸಗಿದಂತ ಆರೋಪಿಗೆ, ಇಂದು ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ, 40 ಸಾವಿರ ದಂಡವನ್ನು ವಿಧಿಸಿ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗಾರ್ಡರಗದ್ದೆ, ಹುರಳಿ ಗ್ರಾಮದ ಕೃಷ್ಣಯ್ಯ ಶೆಟ್ಟಿ ಎಂಬುವರ ಅಂಗವಿಕಲೆ ಮಗಳ ಮೇಲೆ, ಶಿವರಾಜಪುರ, ಸುರಳಿ ಬಾಳೆ ಬೈಲು ಗ್ರಾಮದ ಸತೀಶ್ ಎಂಬಾತ ಎಂಬಾತ, ತಮ್ಮ ಮನೆಯ ಪಕ್ಕದಲ್ಲಿಯೇ ಇದ್ದಂತ ಅಂಗವಿಕಲೆ ಯುವತಿಯನ್ನು ಕೈಕಾಲು ಕಟ್ಟಿ ಹಾಕಿ,…

Read More

ಹೊಂಬುಜದಲ್ಲಿ ಶಿಲ್ಪ ಸಹಿತ ಮೊದಲ ಕಂದುಕ (ಪೋಲೋ) ಕ್ರೀಡಾ ಶಾಸನಗಂಭ ಪತ್ತೆ|hombuja

ಶಿಲ್ಪ ಸಹಿತ ಮೊದಲ ಕಂದುಕ(ಪೋಲೋ)ಕ್ರೀಡಾ ಶಾಸನಗಂಭ ಪತ್ತೆ. ಶ್ರೀಕ್ಷೇತ್ರ ಹೊಂಬುಜದಲ್ಲಿ ಇತ್ತೀಚೆಗೆ ಶಿಲ್ಪ ಸಹಿತ ಕಂದುಕ ಕ್ರೀಡೆಯ ಮಹತ್ವದ ಮೊದಲ ಶಾಸನವೊಂದು ಪತ್ತೆಯಾಗಿದೆ. ಸ್ವಸ್ತಿ ಶ್ರೀ ಜಗದ್ಗುರು ಡಾ.ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯರ ನೇತೃತ್ವದಲ್ಲಿ ಹೊಂಬುಜದ ಅಧಿದೇವಿ ಪದ್ಮಾವತಿ ಅಮ್ಮನವರ ಬಸದಿಯನ್ನು ಜೀರ್ಣೋದ್ಧಾರ ಮಾಡುವ ಸಂದರ್ಭದಲ್ಲಿ ಈ ಶಾಸನ ಪತ್ತೆಯಾಗಿದೆ. ಪದ್ಮಾವತಿ ಅಮ್ಮನವರ ಬಸದಿಯ ಹಿಂದಿನ ಲಕ್ಕಿಗಿಡದ ಒತ್ತುಗಟ್ಟೆಯ ಗೋಡೆಯಲ್ಲಿದ್ದ ಈ ಶಾಸನಗಂಭದ ಒಂದೇ ಮುಖದ ಶಾಸನವು ಇದುವರೆಗೂ ಗೋಚರಿಸುತ್ತಿತ್ತು. ಈಗ ಈ ಶಾಸನವನ್ನು ಗೋಡೆಯಿಂದ ಹೊರ ತೆಗೆದಾಗ…

Read More

“ಖೇಲೋ ಇಂಡಿಯಾ” ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ರಿಪ್ಪನ್‌ಪೇಟೆ ಮೂಲದ ಯುವ ಪ್ರತಿಭೆ ಭೂಮಿಕಾ|khelo india

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಜೀರಿಗೆಮನೆ ಗ್ರಾಮದ ಯುವ ಪ್ರತಿಭೆಯೊಂದು 2023 ನೇ ಸಾಲಿನ “ಖೇಲೋ ಇಂಡಿಯಾ ” ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿದ್ದಾಳೆ. ಹೌದು ಮಧ್ಯಪ್ರದೇಶ ರಾಜ್ಯದ ಭೋಫಾಲ್ ನಲ್ಲಿ ಜನವರಿ 30 ರಿಂದ ಫೆ 11 ರವರೆಗೆ ನಡೆಯುತ್ತಿರುವ ಖೇಲೋ ಇಂಡಿಯಾ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಜೀರಿಗೆಮನೆ ಗ್ರಾಮದ ನಾಗರಾಜ್ ಮತ್ತು ಜಯಮ್ಮ ದಂಪತಿಗಳ ಪುತ್ರಿ ಭೂಮಿಕಾ‌…

Read More

ನವ ವಿವಾಹಿತ ಮಹಿಳೆ ಅನುಮಾನಸ್ಪದವಾಗಿ ಸಾವು|crimenews

ಶಿವಮೊಗ್ಗ : ಒಂದು ವರ್ಷ 2 ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ  ಅನುಮಾನಸ್ಪದವಾಗಿ  ಸಾವನ್ನಪ್ಪಿದ್ದು ಇದು ಆತ್ಮಹತ್ಯೆ ಎಂದು  ಗಂಡನ ಮನೆಯ ಕಡೆಯವರು ಹೇಳಿದರೆ ಯುವತಿಯ ತವರು ಮನೆಯವರು ಇದು ಕೊಲೆ ಎಂದು ಆರೋಪಿಸಿದ್ದಾರೆ. ಸೋಮವಾರ ಸಂಜೆ ನಗರದ ಪ್ರತಿಷ್ಠಿತ ದೇವಸ್ಥಾನಕ್ಕೆ ವಾಲಗ ಊದಲು ಪತಿ ಚಂದ್ರಶೇಖರ್ ಸಿದ್ದರಾಗುತ್ತಿದ್ದು ಆ ವೇಳೆ ಯಾವುದೊ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಸ್ನಾನದ ಮನೆಗೆ ಪತಿ ಹೋದಾಗ ಪತ್ನಿ ಧನ್ಯಶ್ರೀ ನೇಣು ಹಾಕಿಕೊಂಡಿದ್ದಾರೆ ಎಂದು ಗಂಡನ ಮನೆಯವರು ಹೇಳಿದ್ದಾರೆ. ಧನ್ಯಶ್ರೀ(23)…

Read More

ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆ ಅಕ್ರಮ ಮಾರಾಟಕ್ಕೆ ಯತ್ನ – ಮಾಲು ಸಮೇತ ಓರ್ವನ ಬಂಧನ|arrested

ರಿಪ್ಪನ್‌ಪೇಟೆ : ಅಪರೂಪದ ವನ್ಯಜೀವಿ ಪ್ಲಾಪ್ ಶೆಲ್ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಅಪರೂಪದ ವನ್ಯ ಜೀವಿಯಾದ ಭಾರತೀಯ ಫ್ಲಾಪ್‌ಶೆಲ್ ಆಮೆ( ಲಿಸ್ಸೆಮಿಸ್ ಪಂಕ್ಟೇಟ್) ಸರೀಸೃಪವನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಆರೋಪಿ ಚಂದ್ರಹಾಸ್ ಎಂಬಾತನನ್ನು ಆಯನೂರು – ಹಾರನಹಳ್ಳಿ ರಾಜ್ಯ ಹೆದ್ದಾರಿ ಸಮೀಪದಲ್ಲಿ ಬಂಧಿಸಿ ವನ್ಯಜೀವಿಯನ್ನು ರಕ್ಷಿಸಲಾಗಿದೆ. ಭಾರತೀಯ ಫ್ಲಾಪ್‌ಶೆಲ್ ಆಮೆಯನ್ನು ರಕ್ಷಣೆ (ಲಿಸ್ಸೆಮಿಸ್ ಪಂಕ್ಟೇಟ್)ಮಾಡಿ   ವನ್ಯಜೀವಿ ಸಂರಕ್ಷಣಾ…

Read More