ಚಲಿಸುತಿದ್ದ ರೈಲಿನಿಂದ ಕೆಳಗೆ ಬಿದ್ದು ರಿಪ್ಪನ್ಪೇಟೆಯ ಸರ್ಕಾರಿ ವೈದ್ಯ ಸಾವು|accident
ರಿಪ್ಪನ್ಪೇಟೆ : ತುಮಕೂರು ಜಿಲ್ಲೆಯ ಕ್ಯಾತಸಂದ್ರ ಬಳಿ ಚಲಿಸುತಿದ್ದ ರೈಲಿನಿಂದ ಬಿದ್ದು ಪಟ್ಟಣದ ಶಬರೀಶನಗರದ ವೈದ್ಯರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಬರೀಶನಗರದ ಡಾ. ಗುರುರಾಜ್ ((46) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶುಕ್ರವಾರ ಬೆಂಗಳೂರಿನಿಂದ – ಶಿವಮೊಗ್ಗಕ್ಕೆ ರೈಲಿನಲ್ಲಿ ಸಂಚರಿಸುತಿದ್ದಾಗ ಕ್ಯಾತಸಂದ್ರದ ಬಳಿ ರೈಲಿನ ಬಾಗಿಲು ತಾಗಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗುತಿದೆ. ಡಾ. ಗುರುರಾಜ್ ರಿಪ್ಪನ್ಪೇಟೆ,ಹೊಸನಗರ ಮತ್ತು ಗೌತಮಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.ಪ್ರಸ್ತುತ ಸಂಪೆಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯ ನಿರ್ವಹಿಸುತಿದ್ದರು.ಇತ್ತೀಚಿಗೆ ಕೊಡಗು ಜಿಲ್ಲೆಯಲ್ಲಿ…