Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಅಂಬಲಿಗೋಳ ಡ್ಯಾಮ್ ನಲ್ಲಿ ಕಾಲು ತೊಳೆಯಲು ಇಳಿದ ವ್ಯಕ್ತಿ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|dam

ಕಾಲು ತೊಳೆಯಲು ಹೋಗಿ ಅಂಬಲಿಗೋಳ ಡ್ಯಾಮ್ ನಲ್ಲಿ ಜಾರಿ ಬಿದ್ದ ವ್ಯಕ್ತಿ : ಅಗ್ನಿಶಾಮಕ ದಳದಿಂದ ತೀವ್ರ ಶೋಧ…!!! ಶಿಕಾರಿಪುರ ತಾಲೂಕಿನ ಅಂಬಲಿಗೋಳ ಡ್ಯಾಮ್ ನಲ್ಲಿ ಯುವಕ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ನೀರು ಪಾಲಾಗಿರುವ ಘಟನೆ ನಡೆದಿದೆ. ಕಪ್ಪನಹಳ್ಳಿ ಗ್ರಾಮದ ನಿವಾಸಿ ಜಗದೀಶ್ ಎಂಬ ವ್ಯಕ್ತಿ ತಮ್ಮ ಸ್ನೇಹಿತರೊಂದಿಗೆ ವಿಹಾರಕ್ಕೆ ಆಗಮಿಸಿದಾಗ ಅಂಬಲಿಗೋಳ ಡ್ಯಾಮ್ ಮೇಲಿನ ರಸ್ತೆಯಲ್ಲಿ ತಿರುಗಾಡಿದ್ದಾರೆ.ನಂತರ ಅಂಬಲಿಗೋಳ ಡ್ಯಾಮ್ ನಲ್ಲಿ ಇಳಿದು ಕಾಲು ತೊಳೆಯುವಾಗ ಆಕಸ್ಮಿಕವಾಗಿ ಜಾರಿ ಬಿದ್ದು ನೀರುಪಾಲಾಗಿರುವ ಘಟನೆ ಇಂದು…

Read More

ಹೊಬುಜಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು – ಆರಗ ಜ್ಞಾನೇಂದ್ರ|hombuja

ಹೊಂಬುಜ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ ಒತ್ತು –  ಆರಗ ಜ್ಞಾನೇಂದ್ರ   ರಿಪ್ಪನ್ ಪೇಟೆ : ಜೈನರ ಪ್ರಸಿದ್ಧ ಯಾತ್ರಾಸ್ಥಳವಾದ  ಹೊಂಬುಜ ಕ್ಷೇತ್ರದ ಸರ್ವಾಂಗಿಣ  ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು  ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಭಾನುವಾರ ಶ್ರೀ ಕ್ಷೇತ್ರ ಹೊಂಬುಜದ ಮಠದ ಆಸುಪಾಸಿನ  ರಸ್ತೆ ಹಾಗೂ ಒಳಚರಂಡಿ ಯೋಜನೆಯ ರೂ ಎರಡು ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಚಾಲನೆ ನೀಡಿ ಅವರು ಮಾತನಾಡಿದರು. ಮಾತೆ ಪದ್ಮಾವತಿ ದೇವಿ ನೆಲೆ ನಿಂತಿರುವ ಮಲೆನಾಡಿನ ಪ್ರಸಿದ್ಧ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಕೋಮು ಗಲಾಟೆ – ನಾಲ್ವರಿಗೆ ಗಾಯ|crime

ಶಿವಮೊಗ್ಗ ಮತ್ತು ಶಿರಾಳಕೊಪ್ಪದಲ್ಲಿ ಅನ್ಯಕೋಮಿನ ಯುವಕರ ಮಧ್ಯ ಗಲಾಟೆ ನಡೆದಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ನಾಲ್ವರು ಯುವಕರಿಗೆ ಗಾಯಗಳಾಗಿವೆ. ಶಿವಮೊಗ್ಗದಲ್ಲಿ ಈಜಲು ಹೋಗಿದ್ದಾಗ ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಅನ್ಯಕೋಮಿನ ಯುವಕರು ಅಪ್ರಾಪ್ತ ಬಾಲಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಅಪ್ರಾಪ್ತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದಲ್ಲಿ ಅನ್ಯಕೋಮಿನವರಿಂದ ಹಲ್ಲೆ ನಡೆದಿದೆ. ವೇಗವಾಗಿ ಹಾಗೂ ನಿರ್ಲಕ್ಷದಿಂದ…

Read More

ರಿಪ್ಪನ್‌ಪೇಟೆ : ಚಲಿಸುತಿದ್ದ ಟಾಟಾ ಏಸ್ ವಾಹನದಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು|accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕಣಬಂದೂರು ಶಾಲೆಯ ಬಳಿ ಟಾಟಾ ಏಸ್ ವಾಹನದಲ್ಲಿ ಹಿಂಬದಿ ಕುಳಿತಿದ್ದ ವ್ಯಕ್ತಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕಣಬಂದೂರು ಗ್ರಾಮದ ರಾಘವೇಂದ್ರ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಟಾಟಾ ಏಸ್(tata ace) ವಾಹನದಲ್ಲಿ  ತೋಟಕ್ಕೆ ದರಗಲು ತರುತ್ತಿರುವಾಗ ಕಣಬಂದೂರು ಶಾಲೆಯ(school) ಸಮೀಪದಲ್ಲಿ ಹಿಂಬದಿ ಕುಳಿತಿದ್ದ ರಾಘವೇಂದ್ರ ಆಯ ತಪ್ಪಿ ಕೆಳಗಿನ ಸಿಮೆಂಟ್ ರಸ್ತೆಯ ಮೇಲೆ ಬಿದ್ದು ತೀವ್ರತರವಾಗಿ ಗಾಯಗೊಂಡಿದ್ದನು. ಕೂಡಲೇ ಸ್ಥಳೀಯರು ಹಾಗೂ ಸಂಬಂಧಿಕರು ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ(hospital) ದಾಖಲಿಸಿದ್ದಾರೆ ಆದರೆ…

Read More

ಶಿವಮೊಗ್ಗದ ಭೂಪಾಳಂ ನಿವಾಸದಲ್ಲಿ ಅಗ್ನಿ ಅವಘಡ – ಯುವ ಉದ್ಯಮಿ ಸಾವು|fire accident

ಶಾರ್ಟ್ ಸರ್ಕಿಟ್ ನಿಂದಾಗಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಒಳಗೆ ಸಿಲುಕಿಕೊಂಡಿದ್ದ ಯುವ ಉದ್ಯಮಿ ದಟ್ಟ ಹೊಗೆಯಿಂದಾಗಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಛೇರಿ ಮುಂಭಾಗ ಇರುವ ಭೂಪಾಳಂ ನಿವಾಸದಲ್ಲಿ ಘಟನೆ ಸಂಭವಿಸಿದೆ. ಯುವ ಉದ್ಯಮಿ ಭೂಪಾಳಂ ಶರತ್ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾತ್ರಿ ಭೂಪಾಳಂ ನಿವಾಸದಲ್ಲಿ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯ ಜೊತೆಗೆ ಮನೆಯಲ್ಲಿ ದಟ್ಟ ಹೊಗೆಯುವ ಆವರಿಸಿಕೊಂಡಿತ್ತು. ಮನೆ ಒಳಗಿದ್ದ ಭೂಪಾಳಂ ಶಶಿಧರ್ ಸೇರಿದಂತೆ ನಾಲ್ವರು ಹೊರಗೆ ಬಂದಿದ್ದರು….

Read More

ತೀರ್ಥಹಳ್ಳಿ : ಚಾಕಲೇಟ್ ಎಂದು ಇಲಿ ಪಾಷಾಣ ತಿಂದ ಐದು ವರ್ಷದ ಮಗು – ಚಿಕಿತ್ಸೆ ಫಲಿಸದೇ ಸಾವು|rat poison

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿಯ ಮೇಲಿನಕೊಪ್ಪದ ಬಳಿಯಲ್ಲಿ ಮಗುವೊಂದು ಇಲಿ ಪಾಷಾಣದ ಪೇಸ್ಟ್ ತಿಂದು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಕೂಲಿ ಕಾರ್ಮಿಕ ಚಂದ್ರಪ್ಪ ಮತ್ತು ಗೀತಾ ದಂಪತಿಯ ಎಂಬುವವರ ಪುತ್ರ ಪ್ರೀತಮ್ (5) ಮೃತ ಬಾಲಕ.  ಇಲಿಗೆ ಅಂತಾ ಇಟ್ಟಿದ್ದ ಪಾಷಾಣವನ್ನು ಮಗು ಚಾಕೊಲೆಟ್ ಎಂದು ಭಾವಿಸಿ ಬಾಯಿಗೆ ಹಾಕಿಕೊಂಡಿದೆ. ನಿನ್ನೆ ರಾತ್ರಿ ಮಗು ಅಸ್ಥಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಇಂದು ಸಾವನ್ನಪ್ಪಿದೆ.  ಮಗುವನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ…

Read More

ವಿದ್ಯುತ್ ಟ್ರಾನ್ಸ್ ಫಾರ್ಮ್ ದುರಸ್ತಿ ವೇಳೆ ವಿದ್ಯುತ್ ತಗುಲಿ ಪವರ್ ಮ್ಯಾನ್ ಸಾವು – ಜಿಲ್ಲೆಯಲ್ಲಿ ವಾರದಲ್ಲಿ ಎರಡು ದುರಂತ ಘಟನೆ|mescom

ಶಿಕಾರಿಪುರ : ಇಲ್ಲಿನ ಕಪ್ಪನಹಳ್ಳಿ ಗ್ರಾಮದಲ್ಲಿ ಟ್ರಾನ್ಸಪಾರ್ಮ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್​  ಸಾವನ್ನಪ್ಪಿರುವ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಶ್ರೀಶೈಲಾ ಎನ್ನುವವರು ಮೃತಪಟ್ಟಿದ್ದಾರೆ. ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿ ಟ್ರಾನ್ಸಫಾರಮ್​ನಲ್ಲಿ ದೋಷ ಕಾಣಿಸಿಕೊಂಡಿತ್ತು ಆ ಹಿನ್ನಲೆಯಲ್ಲಿ ಲೈನ್​ ಮ್ಯಾನ್​ ಶ್ರೀಶೈಲ ಸ್ಥಳಕ್ಕೆ ತೆರಳಿ ಸಂಬಂಧಿಸಿದ ಸ್ಟೇಷನ್ ನಿಂದ ಲೈನ್ ಕ್ಲಿಯರೆನ್ಸ್ ಪಡೆದು ದುರಸ್ತಿ ಕಾರ್ಯ ಕೈಗೊಂಡಿದ್ದರು. ಆದರೆ ಏಕಾಏಕಿ ಆಫ಼್ ಆಗಿದ್ದ ವಿದ್ಯುತ್ ಲೈನ್ ನಲ್ಲಿ ವಿದ್ಯುತ್ ಪ್ರವಹಿಸಿದ್ದರಿಂದ ಶ್ರೀಶೈಲಾ ಮೃತಪಟ್ಟಿದ್ದಾರೆ. ಲೈನ್​ ಮ್ಯಾನ್​…

Read More

ರೈತರಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ವಿವಿಧ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ|farmer loan

2022-23 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ರೈತರ ಆದಾಯವನ್ನು ದ್ವಿಗುಣಗೊಳಿಸಲು, ರೈತರನ್ನು ಬೆಳೆಗಳ ಗುಣಮಟ್ಟದ ಉತ್ಪಾದನೆಗೆ ಉತ್ತೇಜಿಸಲು ಹಾಗೂ ತೋಟಗಾರಿಕೆಯಲ್ಲಿ ಕೊಯ್ಲೋತ್ತರ ನಿರ್ವಾಹಣಾ ಚಟುವಟಿಕೆಗಳ ಕಾರ್ಯಕ್ರಮಗಳಡಿಯಲ್ಲಿ ನೀರಿನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಂಶಗಳು , ಮೋಹಕ ಕೀಟ ಬಲೆಗಳು/ಜಿಗುಟಾದ ಬಲೆಗಳು, ಸೌರ ಶಕ್ತಿ. ಕೃತಕ ಬುದ್ದಿಯ ಕೀಟ ನಿಯಂತ್ರಕ ಬಲೆಗಳು, ಸೋಲಾರ್ ಪಂಪ್ ಸೆಟ್, ಪ್ಲಾಸ್ಟಿಕ್ ಕ್ರೇಟ್ಸ್ ಮತ್ತು ಕೊರುಗೇಟೆಡ್ ಬಾಕ್ಸ್‍ಗಳ ಖರೀದಿಸಲು ಸಾಮಾನ್ಯ…

Read More

ಸಿದ್ದರಾಮಯ್ಯ ಮತ್ತು ಹೆಚ್ ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ ಗೃಹ ಸಚಿವ ಆರಗ ಜ್ಞಾನೇಂದ್ರ|araga

ಮೈಸೂರಿನ ಸ್ಯಾಂಟ್ರೋ ರವಿ ಪ್ರಕರಣದಲ್ಲಿ ಮಾಜಿ ಮುಖ್ಯ ಮಂತ್ರಿ ಕುಮಾರ ಸ್ವಾಮಿ ಮತ್ತು ಆರ್ ಎಸ್ ಎಸ್ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನವರ ಹೇಳಿಕೆ ವಿರುದ್ಧ ಗೃಹ ಸಚಿವ ಆರಗ ಜ್ಞಾನೇಂದ್ರ ಗರಂ ಆಗಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವರು ಮೈಸೂರಿನ ಸ್ಯಾಂಟ್ರೋ ರವಿ ಪ್ರಕರಣದ ವಿಚಾರದಲ್ಲಿ, ಆತನನ್ನು ಬಂಧಿಸಿ ಆತನ ಮೇಲಿರುವ ಎಲ್ಲಾ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲು ಮೈಸೂರು ಕಮಿಷನರಿಗೆ ತಿಳಿಸಿದ್ದೇನೆ ಎಂದರು. ಸ್ಯಾಂಟ್ರೋ ರವಿಯ ಹಿನ್ನೆಲೆ ಆತನ ಮೇಲೆ ಯಾರಾದರೂ…

Read More

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ 19 ವರ್ಷದ ಯುವಕನಿಗೆ 20 ವರ್ಷ ಜೈಲು,1ಲಕ್ಷ ದಂಡ ವಿಧಿಸಿದ ಕೋರ್ಟ್|POCSO

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಯುವಕನಿಗೆ ಶಿವಮೊಗ್ಗ  ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್ ಪೆಕ್ಟರ್ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯದ (ಪೋಕ್ಸೋ ವಿಭಾಗ) ನ್ಯಾಯಾಧೀಶರಾದ ನ್ಯಾ….

Read More
Exit mobile version