Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ : ಬಾಳೂರು ಗ್ರಾಪಂ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ಆಯ್ಕೆ|baluru

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪಧ್ಮನಾಭ ರವರು ಆಯ್ಕೆಯಾಗಿದ್ದಾರೆ. ಕಳೆದ ಡಿ.14 ರಂದು ಬಿಜೆಪಿ ಬೆಂಬಲಿತರಾಗಿದ್ದ ಬಾಳೂರು ಗ್ರಾಪಂ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡಿದ್ದರು.ಈ ಹಿನ್ನಲೆಯಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ಜಯಭೇರಿ ಬಾರಿಸುವ ಮೂಲಕ ಬಿಜೆಪಿಗೆ ಭಾರಿ‌ ಮುಖಭಂಗವಾಗಿದೆ. 9 ಜನ ಸದಸ್ಯರಲ್ಲಿ ಕಾಂಗ್ರೆಸ್ ಬೆಂಬಲಿತ ಶಿವಮ್ಮ ಪದ್ಮನಾಭ ರವರು…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗಾವಕಾಶ – ಈ ಸುಳ್ಳು ಜಾಹಿರಾತನ್ನು ನಂಬಿ ಅರ್ಜಿ ಸಲ್ಲಿಸಬೇಡಿ|FAKE

 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉದ್ಯೋಗಿಗಳು ಬೇಕಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ಓಡಾಡುತ್ತಿದೆ. ಇದನ್ನು ನಂಬಿ ಯಾರಾದರೂ ಅರ್ಜಿ ಸಲ್ಲಿಸಿದ್ದರೆ, ಸಲ್ಲಿಸಬೇಕು ಎಂದಿದ್ದರೆ ಹುಷಾರಾಗಿರಿ. ಏಕೆಂದರೆ ಇದು ನಕಲಿ ಪ್ರಕಟಣೆ ಎಂಬ ಸಂಗತಿ ಗೊತ್ತಾಗಿದೆ. ಈ ಬಗ್ಗೆ ಸಾರ್ವಜನಿಕರು ಎಚ್ಚರವಹಿಸಬೇಕೆಂದು ಜಿಲ್ಲಾ ರಕ್ಷಣಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿದ್ದು, ವಿಮಾನ ನಿಲ್ದಾಣದಲ್ಲಿ ಏರ್ ಹೋಸ್ಟೆಸ್, ಬಿಸಿನೆಸ್ ಡೆವಲೆಪ್‍ಮೆಂಟ್ ಮ್ಯಾನೇಜರ್, ಏರ್‌ಲೈನ್ ಎಕ್ಸಿಕ್ಯೂಟಿವ್, ಸೆಕ್ಯೂರಿಟಿ ಗಾರ್ಡ್, ಹೆಲ್ಪರ್ಸ್, ಕ್ಲೀನರ್ಸ್, ಟೀಂ ಮೆಂಬರ್ಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ….

Read More

ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಲಾರಿ ಅಪಘಾತ – ಟ್ರಾಫಿಕ್ ಜಾಮ್ ನಿಂದ ಪರದಾಡಿದ ಪ್ರಯಾಣಿಕರು|agumbe

ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಅಪಘಾತ –  ಟ್ರಾಫಿಕ್ ಜಾಮ್ ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಘಾಟಿಯಲ್ಲಿ ಕ್ಯಾಂಟರ್ ಲಾರಿ ಅಪಘಾತಕ್ಕಿಡಾಗಿದ್ದು ಘಾಟಿ ಸಂಚಾರದಲ್ಲಿ ಕಿ.ಮಿ.ಗಟ್ಟಲೇ ವಾಹನಗಳು ಗಂಟೆಗಟ್ಟಲೇ ನಿಂತು ಭಾರೀ ಸಮಸ್ಯೆಗೆ ಕಾರಣವಾಯಿತು. ಘಾಟಿಯ 9ನೇ ತಿರುವಿನಲ್ಲಿ ಘಾಟಿ ಇಳಿಯುತ್ತಿದ್ದ ವೇಳೆ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಲಾರಿ ಡಿಕ್ಕಿ ಹೊಡೆದಿದೆ. ಯಾವುದೇ ಅನಾಹುತ ಸಂಭವಿಸಿಲ್ಲ.  ಆದರೆ ಉಡುಪಿ ಭಾಗದಿಂದ ಹಾಗೂ ತೀರ್ಥಹಳ್ಳಿ ಮಾರ್ಗದಿಂದ ಹೋಗಿ ಬರುತಿದ್ದ ವಾಹನ ಸವಾರರು ಮತ್ತು ಪ್ರಯಾಣಿಕರು ಗಂಟೆಗಟ್ಟಲೆ ಪರದಾಟ ನಡೆಸಿದರು.

Read More

ಗರ್ತಿಕೆರೆಯಲ್ಲಿ ವ್ಯಕ್ತಿಯೊಬ್ಬನಿಗೆ ಕೆಎಪ್ ಡಿ (ಮಂಗನ ಖಾಯಿಲೆ) ಪತ್ತೆ ಶಂಕೆ!!|KFD

ಶಿವಮೊಗ್ಗ ಜಿಲ್ಲೆಯ ಹೊಸನಗರ  ತಾಲೂಕಿನ ಗರ್ತಿಕೆರೆಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಇವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಲಾಗುತ್ತಿದೆ. ಇವರಿಗೆ 45 ವರ್ಷ ಎಂದು ಹೇಳಲಾಗಿದೆ. ಜ.26 ರಂದು ವಿಪರೀತ ಜ್ವರದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಇವರಿಗೆ ಕಳೆದ ನಾಲ್ಕೈದು ದಿನಗಳಿಂದ ಜ್ವರ ಕಡಿಮೆ ಆಗಿರಲಿಲ್ಲ. ನಿನ್ನೆ ಆರ್ ಟಿ ಪಿ ಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆರ್ ಟಿ ಪಿ ಸಿಆರ್ ಪರೀಕ್ಷೆಯಲ್ಲಿ ಕೆಎಫ್ ಡಿ ನೆಗೆಟಿವ್ ಬಂದಿದೆ. ಆರ್ ಟಿ…

Read More

ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಅಂತ್ಯಕ್ರಿಯೆ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮಾಡಳಿತ|funeral

ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಶವ ಸಂಸ್ಕಾರ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬೆಟ್ಟಿನಕೆರೆ ಗ್ರಾಮದ ಮನೆಯೊಂದರಲ್ಲಿ ವಾರಸುದಾರರಿಲ್ಲದ ಕೊಳೆತ ಸ್ಥಿತಿಯಲ್ಲಿದ್ದ ವೃದ್ದನೊಬ್ಬನ ಅಂತ್ಯಕ್ರಿಯೆ ಯನ್ನು ಗ್ರಾಮಾಡಳಿತದ ವತಿಯಿಂದ ನೆರವೇರಿಸಲಾಯಿತು. ಪಟ್ಟಣದ ಬೆಟ್ಟಿನಕೆರೆ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಒಬ್ಬಂಟಿಯಾಗಿ ವಾಸ ಮಾಡುತಿದ್ದ ಜೋಸ್ (68) ಎಂಬ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈತನು ನಾಲ್ಕೈದು ದಿನಗಳ ಹಿಂದೆಯೇ ಮೃತಪಟ್ಟಿದ್ದನು ಎನ್ನಲಾಗುತ್ತಿದೆ. ಇಂದು ಬೆಳಿಗ್ಗೆ ಜೋಸ್ ಮೃತಪಟ್ಟಿರುವ ವಿಷಯ ತಿಳಿಯುತಿದ್ದಂತೆ…

Read More

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಇಬ್ಬರು ಯುವಕರ ಬಂಧನ|arrest

ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಮಾರಿಗುಡ್ಡದ ಹೆಲಿಪ್ಯಾಡ್ ಬಳಿ ಇಬ್ಬರು ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದು ಈ ಆರೋಪಿಗಳನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಟ್ಟೆಮಲ್ಲಪ ಗ್ರಾಮದ ಫಯಾಜ್ ಬಿನ್ ಕರೀಂ ಸಾಬ್ ಹಾಗೂ ಮೊಹಮ್ಮದ್ ತಾಯಿಜ್ ಬಿನ್ ಮೊಹಮ್ಮದ್ ಎಂಬುವವರನ್ನು ಬಂಧಿಸಲಾಗಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ನೀರರಾಜ್ ನರಲಾರರವರ ಆದೇಶದ ಮೇರೆಗೆ ಪೊಲೀಸ್ ಸಿಬ್ಬಂದಿಗಳು ಕೇಸ್ ದಾಖಲಿಸಿಕೊಂಡು ತನಿಖೆ ಕಾರ್ಯ ಕೈಗೊಂಡಿದ್ದಾರೆ.

Read More

ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ : ಕಂಗಾಲಾದ ಕುಟುಂಬಸ್ಥರು !!!!ಹೀಗೊಂದು ವಿಚಿತ್ರ ಘಟನೆ|TTH

ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ: ಕಂಗಾಲಾದ ಕುಟುಂಬಸ್ಥರು ! ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬುಕ್ಲಾಪುರ ಸಮೀಪದ ಹೊರಬೈಲಿನ ಸ್ಮಶಾನದಲ್ಲಿ ಸುಟ್ಟ ಶವದ  ಬೂದಿಯನ್ನು ಹಾಗೂ ಸ್ಮಶಾನದಲ್ಲಿದ್ದ ಕಬ್ಬಿಣದ ರಾಡ್‌ನ್ನು ಯಾರೋ ಕದ್ದೊಯ್ದ ವಿಚಿತ್ರ ಘಟನೆ ನಡೆದಿದೆ. ಪಟ್ಟಣದ ಸಮೀಪವಿರುವ ಹೊರಬೈಲಿನ ಗಂಗಾಧರೇಶ್ವರ ಸ್ಮಶಾನದಲ್ಲಿ 3 ದಿನದ ಹಿಂದೆ ಊರಿನ ಮಹಿಳೆಯೊಬ್ಬರ ಶವವನ್ನು ಸಂಸ್ಕಾರ ಮಾಡಲಾಗಿತ್ತು. ಮಾರನೇ ದಿನ ಕುಟುಂಬದವರು ಸ್ಮಶಾನದಲ್ಲಿ ಅಳಿದುಳಿದ ಕಟ್ಟಿಗೆ ಕೊಳ್ಳಿಯನ್ನು ದೂಡುವ ಪದ್ಧತಿಯಂತೆ ಕಟ್ಟಿಗೆಯನ್ನು ಮುಂದೆ ಹಾಕಿ…

Read More

ರಿಪ್ಪನ್‌ಪೇಟೆ – ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ|deadbody

ರಿಪ್ಪನ್‌ಪೇಟೆ – ಕೊಳೆತ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಬೆಟ್ಟಿನಕೆರೆ ಗ್ರಾಮದ ಮನೆಯೊಂದರಲ್ಲಿ ಪುರುಷನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೆಟ್ಟಿನಕೆರೆ ನಿವಾಸಿ ಜೋಸ್ (ಆಲುವ) ಎಂಬ ವ್ಯಕ್ತಿ ಮೃತಪಟ್ಟಿದ್ದಾನೆ ಎನ್ನಲಾಗುತಿದೆ. ಈತನು ಮನೆಯಲ್ಲಿ ಒಬ್ಬನೇ ವಾಸ ಮಾಡುತಿದ್ದು ಪತ್ನಿ ಮತ್ತು ಮಕ್ಕಳು ಹಲವು ವರ್ಷಗಳ ಹಿಂದೆಯೇ ಈತನನ್ನು ಬಿಟ್ಟು ಹೋಗಿದ್ದರು. ಮನೆಯಲ್ಲಿ ಒಬ್ಬನೇ ವಾಸ ಮಾಡುತಿದ್ದ ಈತನು ನಾಲ್ಕು ದಿನಗಳ ಹಿಂದೆ ಈತ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಈತ ಮನೆಮನೆಗೆ…

Read More

ರಿಪ್ಪನ್‌ಪೇಟೆಯ ಜೆ ಎನ್ ಆರ್ ರೈಸ್ ಮಿಲ್ ಮಾಲೀಕ ಜೆ ಎನ್ ರುದ್ರಪ್ಪಗೌಡ ನಿಧನ|Rpet

ರಿಪ್ಪನ್‌ಪೇಟೆ : ಪಟ್ಟಣದ ಶಿವಮೊಗ್ಗ ರಸ್ತೆಯ ಜೆ ಎನ್ ಆರ್ ರೈಸ್ ಮಿಲ್ ಮಾಲೀಕರಾಗಿದ್ದ ಜೆ ಎನ್ ರುದ್ರಪ್ಪ ಗೌಡರು (93) ತಮ್ಮ ಸ್ವಗೃಹದಲ್ಲಿ ಇಂದು ಬೆಳಿಗ್ಗೆ ವಯೋಸಹಜ ನಿಧನರಾದರು. ಮೂಲತಃ ಜಂಬಳ್ಳಿ ಮನೆತನದವರಾದ ಜೆ ಎನ್ ರುದ್ರಪ್ಪ ಗೌಡರು ಕಳೆದ 70 ವರ್ಷಗಳ ಹಿಂದೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿ ಜೆ ಎನ್ ಆರ್  ರೈಸ್ ಮಿಲ್ ಪ್ರಾರಂಭಿಸಿದ್ದರು. ಮೃತರಿಗೆ ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರಿದ್ದಾರೆ. ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಜಂಬಳ್ಳಿಯಲ್ಲಿ ಇಂದು ಸಂಜೆ 5…

Read More

ಡೆತ್ ನೋಟ್ ಬರೆದಿಟ್ಟು ಯಡಗುಡ್ಡೆ ಬೆಟ್ಟದ ಮೇಲೆ ಅಗ್ನಿಸ್ಪರ್ಶ ಮಾಡಿಕೊಂಡ ಮಹಿಳೆ…!!!! ಜ್ಯೋತಿಷಿ ಮಾತು ಕೇಳಿ ಮೋಕ್ಷ ಪ್ರಾಪ್ತಿಗೆ ಆತ್ಮಹತ್ಯೆ ಮಾಡಿಕೊಂಡರಾ ಜಯಶ್ರೀ…????ಈ ಸುದ್ದಿ ನೋಡಿ|sucide

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಯಡಗುಡ್ಡೆ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಮಹಿಳೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕಳೆದ ಸೋಮವಾರದಿಂದ ಹೊದಲ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಸಮೀಪದ ಹೊಸಳ್ಳಿ ಗ್ರಾಮದ ಜಯಶ್ರೀ (52) ಎಂಬುವರು ನಾಪತ್ತೆಯಾಗಿದ್ದರು.  ಜ. 23 ರಂದು ಸಂಜೆ ವಾಕಿಂಗ್ ಹೋದವರು ಮನೆಗೆ ಹಿಂದಿರುಗಿಲ್ಲ. ಎಂದು ದೂರು ದಾಖಲಾಗಿತ್ತು. ಜ. 27ರಂದು ಯಡಗುಡ್ಡೆ ಗ್ರಾಮದ ಗುಡ್ಡದ ಮೇಲೆ ಜಯಶ್ರೀ ಅವರ ಶವ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ….

Read More