Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಕೌಟುಂಬಿಕ ಕಲಹ : ಪತಿಯಿಂದ ಪತ್ನಿಯ ಮೇಲೆ ಆಸಿಡ್ ದಾಳಿ|acid

ಹೆಂಡತಿಯೊಂದಿಗೆ ಜಗಳ ಮಾಡಿಕೊಂಡು ಸಿಟ್ಟಿನಿಂದ ಹೆಂಡತಿಯ ಮೈಮೇಲೆ ಆಸಿಡ್ ಎರಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ ಗ್ರಾಮವೊಂದರ ನಿವಾಸಿಯಾದ ಸಂತ್ರಸ್ತೆಯು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ಧಾರೆ. ಬಿಡುವಾದಾಗ ತನ್ನ ಮಕ್ಕಳನ್ನು ನೋಡಲು ತನ್ನ ತಾಯಿ ಮನೆಗೆ ಬರುತ್ತಿದ್ದರು. ಇನ್ನೂ ಪತ್ನಿಯ ಜೊತೆಗೆ ಜಗಳ ತೆಗೆದು ದೂರವೇ ಇದ್ದ ಪತಿಯು ಆಗಾಗ ಪತ್ನಿಯ ತಾಯಿ ಮನೆಗೆ ಬಂದು ಮಕ್ಕಳನ್ನು ನೋಡಿಕೊಂಡು ಹೋಗುತ್ತಿದ್ದನಂತೆ. ಈ ನಡುವೆ ಕಳೆದ ಸಂಕ್ರಾಂತಿಯ ಸಂದರ್ಭದಲ್ಲಿ ಪತ್ನಿಯ ತಾಯಿ ಮನೆಗೆ ಬಂದ ಗಂಡ, ಅದೇ…

Read More

ರಿಪ್ಪನ್‌ಪೇಟೆ : ರಸ್ತೆ ಸುರಕ್ಷತಾ ಸಪ್ತಾಹ ಆಚರಣೆ ಅಂಗವಾಗಿ ಜಾಥಾ|road safety

ರಿಪ್ಪನ್‌ಪೇಟೆ : ಪಟ್ಟಣದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಪಟ್ಟಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಜಾಥಾ ನಡೆಸಿದರು. ಪಟ್ಟಣದ ವಿನಾಯಕ ವೃತ್ತ ಮತ್ತು ನಾಲ್ಕು ಮುಖ್ಯ ರಸ್ತೆಗಳಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು ಮೆರವಣಿಗೆ ನಡೆಸಿದರು. ಸಪ್ತಾಹಕ್ಕೆ ಚಾಲನೆ ನೀಡಿದ ರಿಪ್ಪನ್‌ಪೇಟೆ ಪಿಎಸ್ ಐ ಶಿವಾನಂದ್ ಕೆ ಮಾತನಾಡಿ, ವಾಹನ ಚಲಿಸುವಾಗ ಮದ್ಯಪಾನ ಮಾಡಕೂಡದು. ಮೊಬೈಲ್‌ನಲ್ಲಿ ಮಾತನಾಡಬಾರದು. ನಿಯಮಿತ ವೇಗದಲ್ಲೆ ವಾಹನಗಳನ್ನು ಓಡಿಸಬೇಕು, ವಾಹನ ಸವಾರರು ಅಗತ್ಯ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಪಾದಚಾರಿಗಳು ರಸ್ತೆಯಲ್ಲಿ ಚಲಿಸುವಾಗ ರಸ್ತೆ ನಿಯಮಗಳನ್ನು ಪಾಲಿಸಬೇಕು…

Read More

ಅಬಕಾರಿ ಇಲಾಖೆಯ ಮಿಂಚಿನ ಕಾರ್ಯಾಚರಣೆ – ಗಾಂಜಾ ಸಮೇತ ಆರೋಪಿಯ ಬಂಧನ|Arrested

ಸಾಗರ : ಇಲ್ಲಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಸೂರಗುಪ್ಪೆ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಾಲುಸಹಿತ ವಶಕ್ಕೆ ಪಡೆದಿದ್ದಾರೆ. ಅಬಕಾರಿ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತ್ತಿದ್ದಾಗ ಬಸ್ ನಿಲ್ದಾಣದ ಬಳಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸೊರಬ ತಾಲೂಕಿನ ಗಣಪತಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸುಮಾರು 500 ಗ್ರಾಂ ಒಣ ಗಾಂಜಾವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ. ವಶಕ್ಕೆ ಪಡೆದ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ…

Read More

ರಿಪ್ಪನ್‌ಪೇಟೆ : ಸಾಲಬಾಧೆಗೆ ತತ್ತರಿಸಿದ ರೈತ ಆತ್ಮಹತ್ಯೆ|sucide

ರಿಪ್ಪನ್ ಪೇಟೆ : ಚಿಕ್ಕ ಜೇನಿ ಗ್ರಾಮ  ಪಂಚಾಯತ್ ವ್ಯಾಪ್ತಿಯ ಕಾರಕ್ಕಿ ಗ್ರಾಮದ ನಿವಾಸಿ ರಾಜಪ್ಪ (63) ಅವರು ಸಾಲ ಬಾಧೆ ತಾಳಲಾರದೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಜಮೀನಿಗೆ ತೆರಳಿದ ಅವರು ಗುರುವಾರ ಬೆಳಿಗ್ಗೆ ವರೆಗೆ  ಮನೆಗೆ ಬಾರದ ಕಾರಣ ಕುಟುಂಬಸ್ಥರು ಹುಡುಕಲು ಹೊರಟಾಗ  ಶುಂಠಿ ಗದ್ದೆಯಲ್ಲಿ  ಕಳೆ ನಾಶಕ ಸೇವಿಸಿ ಸಾವನ್ನಪ್ಪಿರುವುದು ಕಂಡು ಬಂದಿದೆ. ಕೊಡೂರು ಕೆನರಾ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರ ಬ್ಯಾಂಕ್,ವಿವಿಧ ಸಂಘ  ಸೇರಿದಂತೆ  ವಿವಿದೆಡೆ …

Read More

ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿ ಖಾಸಗಿ ಕಾಲೇಜು ವಿದ್ಯಾರ್ಥಿ ಸಾವು|train

ಶಿವಮೊಗ್ಗ  : ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿಯೊಬ್ಬ ರೈಲಿಗೆ  ಸಿಲುಕಿ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಸೋಮಿನಕೊಪ್ಪದ ಪಶು ವೈದ್ಯಕೀಯ ಮಹಾವಿದ್ಯಾಲಯದ ಬಳಿ ಘಟನೆ ಸಂಭವಿಸಿದೆ. ರೈಲ್ವೆ ಹಳಿ  ಮೇಲೆ ಯುವಕನೊಬ್ಬನ ಮೃತದೇಹ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದರು. ಮೃತನಿಗೆ ಅಂದಾಜು 17 ವರ್ಷ ಎಂದು ತಿಳಿದು ಬಂದಿದೆ. ಈತ ಶಿವಮೊಗ್ಗ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಎಂದು ಗೊತ್ತಾಗಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಶಿವಮೊಗ್ಗ ರೈಲ್ವೆ…

Read More

ಚಿನ್ನದಂಗಡಿಗೆ ಗ್ರಾಹಕಿಯ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಮಹಿಳೆಯ ಬಂಧನ|arrested

ಮಲಬಾರ್ ಗೋಲ್ಡ್ ಅಂಡ್ ಡೈಮೆಂಡ್ ಅಂಗಡಿಗೆ ಗ್ರಾಹಕಿಯಂತೆ ಬಂದು ಮಾಂಗಲ್ಯ ಸರ ಕಳವು ಮಾಡಿದ್ದ ಮಹಿಳೆಯನ್ನ ಬಂದಿಸುವಲ್ಲಿ ದೊಡ್ಡಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನವನ್ನೆ ತನ್ನ ಕಸುಬನ್ನಾಗಿ ಮಾಡಿಕೊಂಡಿದ್ದ ವಿಜಯಪುರ ಜಿಲ್ಲೆಯ ಚಿರಸ್ತಹಳ್ಳಿ ಗ್ರಾಮದ ಗುಂಡಗತ್ತಿ ರಸ್ತೆಯ ಹರಪ್ಪನಹಳ್ಳಿ ತಾಲೂಕಿನ ಆರೋಪಿ ರತ್ನ ಟಿ ಕೋಮ್ ಗೋಣಿಪ್ಪ @ ಗೋಣಿ ಬಸಪ್ಪ ಎಂಬ ಮಹಿಳೆಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಈ ಮಹಿಳೆ ಕಳೆದ 24.11.2022 ಶಿವಮೊಗ್ಗದ ಬಿ.ಹೆಚ್ ರಸ್ತೆಯಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ…

Read More

ಅಲ್ಪಸಂಖ್ಯಾತರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮೋದಿ ಸೂಚನೆ ನೀಡಿದ್ದಾರೆ – ಬಿ ಎಸ್ ಯಡಿಯೂರಪ್ಪ|bsy

ಶಿವಮೊಗ್ಗ : ರಾಷ್ಟ್ರೀಯ ಕಾರ್ಯಕಾರಿಣಿ ಉತ್ತಮವಾಗಿ ನಡೆಯಿತು ದೇಶದ ಹಾಗೂ ರಾಜ್ಯಗಳ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆಯಾಗಿದ್ದು, ಅಲ್ಪಸಂಖ್ಯಾತ ಮುಸ್ಲಿಂ ಬಂಧುಗಳನ್ನು ಜೊತೆಗೆ ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬುಧವಾರ ಹೇಳಿಕೆ ನೀಡಿದ್ದಾರೆ. ಚುನಾವಣೆ ಗೆಲ್ಲಲು ಬೇಕಾದ ತಂತ್ರಗಾರಿಕೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಮೋದಿಯವರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾರ್ಗದರ್ಶನ ಮಾಡಿದರು. ಬಹಳ ಉತ್ಸಾಹದಿಂದ ವಾಪಸ್ ಬಂದಿದ್ದೇವೆ. ಪಕ್ಷವನ್ನು ಬಲಪಡಿಸಿ, ರಾಜ್ಯದಲ್ಲಿ ಅಧಿಕಾರಕ್ಕೆ ನಾವು ಬರಲೇಬೇಕು.ಮೋದಿ,…

Read More

ಮುರ್ಡೇಶ್ವರ ಬೀಚ್ ನಲ್ಲಿ ಈಜಲು ತೆರಳಿ ನಾಪತ್ತೆಯಾಗಿದ್ದ ಸಾಗರ ತಾಲೂಕಿನ ಇಬ್ಬರು ಯುವಕರ ಮೃತದೇಹ ಪತ್ತೆ|beach death

ಮುರ್ಡೇಶ್ವರ ಬೀಚ್ ನಲ್ಲಿ ಈಜಲು ತೆರಳಿ ಸಮುದ್ರಪಾಲಾಗಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಇಬ್ಬರು ಯುವಕರ ಮೃತದೇಹಗಳು ಪತ್ತೆಯಾಗಿವೆ. ಸಾಗರ ತಾಲೂಕಿನ ತುಮರಿ ಗ್ರಾಮದ ಪುನೀತ್ ಚೌಡಪ್ಪ(30) ಹಾಗೂ ರಾಘವೇಂದ್ರ(22) ಮೃತಪಟ್ಟವರು. ಮುರ್ಡೇಶ್ವರ ಬೀಚ್ ನಲ್ಲಿ ಈಜಲು ತೆರಳಿದ್ದ ಪುನೀತ್ ಮತ್ತು ರಾಘವೇಂದ್ರರ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರದಿಂದ ಪುನೀತ, ರಾಘವೇಂದ್ರ ಸೇರಿದಂತೆ ಮೂವರು ಯುವಕರು ಸೋಮವಾರ ಸಂಜೆ ಮುರ್ಡೇಶ್ವರಕ್ಕೆ ಪ್ರವಾಸ ಬಂದಿದ್ದರು. ಈ ವೇಳೆ ಸಮುದ್ರಕ್ಕೆ ಈಜಲು ಇಳಿದ ಇಬ್ಬರು ನಾಪತ್ತೆಯಾಗಿದ್ದರು. ಇಬ್ಬರ ಮೃತದೇಹ…

Read More

ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ|kenchanala

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ…

Read More

ಶಾಲಾ ವಿದ್ಯಾರ್ಥಿಗಳ ಅಪಘಾತ ಹೆಚ್ಚಳ ಹಿನ್ನೆಲೆ – ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ತಿಳಿಹೇಳಿದ ಶಾಸಕ ಹಾಲಪ್ಪ : ವೀಡಿಯೋ ವೈರಲ್|viral

ಕಳೆದ ಕೆಲವು ದಿನಗಳಿಂದ ಸಾಗರ ತಾಲೂಕಿನಲ್ಲಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳ ಸಾವು-ನೋವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಬಗ್ಗೆ  ಶಾಸಕ ಹಾಲಪ್ಪ ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಕೈ ಹಾಕಿದ್ದಾರೆ.  ಶಾಲಾ ಕಾಲೇಜುಗಳ ಸಭೆ ಸಮಾರಂಭಗಳಲ್ಲಿ ಹಾಗೂ ಕ್ಷೇತ್ರದಾದ್ಯಂತ ಕಾರಿನಲ್ಲಿ ಪ್ರಯಾಣಿಸುವಾಗ ವಿದ್ಯಾರ್ಥಿಗಳು ರಸ್ತೆಯಲ್ಲಿ ಸಂಚರಿಸುವಾಗ ಸುರಕ್ಷತೆಯಿಂದ ಹೇಗೆ ಸಂಚಾರ ಮಾಡಬೇಕು ಎಂಬುದರ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆ ಸಾಗರ ಪಟ್ಟಣದಲ್ಲಿ ಹಾಗೂ ಆನಂದಪುರ ಸಮೀಪದಲ್ಲಿ ರಸ್ತೆ ಅಪಘಾತಗಳಲ್ಲಿ ವಿದ್ಯಾರ್ಥಿಗಳು ಮೃತಪಟ್ಟಿದ್ದರು….

Read More