Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆ : ಹರತಾಳು ಹಾಲಪ್ಪ|Gfgc

ರಿಪ್ಪನ್‌ಪೇಟೆ : ಇಂದಿನ ವಿದ್ಯಾರ್ಥಿಗಳು ಕೀಳರೀಮೆಯನ್ನು ಬಿಟ್ಟು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಹಳ್ಳಿಯ ವಿದ್ಯಾರ್ಥಿಗಳು ಪಟ್ಟಣದ ಮತ್ತು ಶ್ರೀಮಂತರ ಹಾಗೂ ಕಾನ್ವಂಟ್ ಮಕ್ಕಳ ಮುಂದೆ ಕೀಳರೀಮೆಯಿಂದ ನಡೆದುಕೊಳ್ಳದೇ ಕಠಿಣ ಶ್ರಮ ವಹಿಸಿ ಅಭ್ಯಾಸ ಮಾಡಿದಾಗ ಮಾತ್ರ ಉತ್ತಮ ವ್ಯಕ್ತಿತ್ವದ ವಿದ್ಯಾರ್ಥಿಯಾಗಲು ಸಾಧ್ಯವಾಗುವುದೆಂದ ಅವರು…

Read More

H D ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಲೆಂದು ವರಸಿದ್ದಿ ವಿನಾಯಕನಲ್ಲಿ ಸಂಕಲ್ಪ ಪೂಜೆ :|jds

ರಿಪ್ಪನ್‌ಪೇಟೆ : ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಮೊತ್ತೊಮ್ಮ ರಾಜ್ಯದ ಮುಖ್ಯಮಂತ್ರಿಯಾಗುವಂತೆ ಅವರ ಹುಟ್ಟುಹಬ್ಬದ ಅಂಗವಾಗಿ ರಿಪ್ಪನ್‌ಪೇಟೆಯ ವರಸಿದ್ದಿವಿನಾಯಕ ಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳು ಕಾರ್ಯಕರ್ತರು ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಸಂಕಲ್ಪ ಪೂಜೆ ನೆರವೇರಿಸಿದರು. ಸಂಕಲ್ಪ ಪೂಜೆಯ ನಂತರ ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ರೈತರ ಸಾಲ ಮನ್ನಾ ಯೋಜನೆ ಸೇರಿದಂತೆ ಹತ್ತು ಹಲವು ಜನಹಿತ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುವುದರೊಂದಿಗೆ ಜನಾನುರಾಗಿಯಾಗಿದ್ದು…

Read More

ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆಯ ವಿದ್ಯಾರ್ಥಿಗಳು ಆಯ್ಕೆ|volleyball

ರಿಪ್ಪನ್‌ಪೇಟೆ : ತಮಿಳುನಾಡಿನಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಡಿಸೆಂಬರ್ 23 ರಿಂದ 27 ರವರೆಗೆ ತಮಿಳುನಾಡಿನ ಚೆನ್ನೈನಲ್ಲಿ ನಡೆಯುವ ದಕ್ಷಿಣ ವಲಯದ ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಕುವೆಂಪು ವಿಶ್ವವಿದ್ಯಾಲಯದ ತಂಡಕ್ಕೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿಗಳಾದ ಪ್ರಜ್ವಲ್ ಎನ್ ಎಂ ಮತ್ತು ಮಹಮ್ಮದ್ ಅರ್ಬಾಜ಼್ ಆಯ್ಕೆಯಾಗಿದ್ದಾರೆ. ವಿದ್ಯಾನಗರದ ನಿವಾಸಿಗಳಾದ ಮಹೇಶ್ವರಾಚಾರಿ ಮತ್ತು ಮೀನಾಕ್ಷಿ ದಂಪತಿಗಳ ಪುತ್ರನಾದ…

Read More

ಕುಗ್ರಾಮಗಳಲ್ಲಿ ಪತ್ರಕರ್ತರ ವಾಸ್ತವ್ಯ : ಗ್ರಾಮದ ಅಭಿವೃದ್ಧಿ ಕುರಿತು ಸರ್ಕಾರಕ್ಕೆ ಸಮಗ್ರ ವರದಿ|village stay

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ ಬಂದಾಗಿನಿಂದಲೂ ನೂತನ ಕಾರ್ಯಕ್ರಮಗಳಿಗೆ ನಾಂದಿ ಹಾಡಿದ್ದು, ಇದರ ಮುಂದುವರಿದ ಭಾಗವಾಗಿ ಜಿಲ್ಲೆಯಲ್ಲಿರುವ ಕುಗ್ರಾಮಗಳನ್ನು ಗುರುತಿಸಿ ಅಲ್ಲಿ ಗ್ರಾಮ ವಾಸ್ತವ್ಯವನ್ನು ಮಾಡುವ ಮೂಲಕ ಅಲ್ಲಿಯ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್‌ ಟ್ರಸ್ಟ್‌ ನಲ್ಲಿ ಗುರುವಾರ (ಡಿ.೧೫) ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಮ್ಮ ನಡೆ ಸಮಾಜದ ಕಡೆ ಘೋಷಣೆಯಡಿ ಸಂಗವು ಈ ಕಾರ್ಯವನ್ನು ಕೈಗೆತ್ತಿಕೊಂಡಿದ್ದು, ಜಿಲ್ಲೆಯ ಅತ್ಯಂತ…

Read More

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ – 18 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು|Accident

ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿಯಾಗಿ ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಕರೂರು ಹೋಬಳಿಯ ತುಮರಿ ಬಳಿ ಶಾಲಾ ಪ್ರವಾಸಿ ಬಸ್ಸು ಪಲ್ಟಿಯಾಗಿದ್ದೂ, ಕೆಲ ಶಾಲಾ ಮಕ್ಕಳಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ  ಅಂದಾಜು 18 ಜನ ಮಕ್ಕಳು ಹಾಗೂ ಎಂಟು ಜನ ಶಿಕ್ಷಕರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆ ತರಲಾಗಿದೆ.  ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಪ್ರೌಢ ಶಾಲಾ ಮಕ್ಕಳು ಪ್ರವಾಸಕ್ಕೆ ಬಂದ ಸಂಧರ್ಭದಲ್ಲಿ ಘಟನೆ…

Read More

ಹೆತ್ತ ತಾಯಿಯ ಮನೆಯಲ್ಲಿಯೇ ಕಳ್ಳತನ ಮಾಡಿದ ಮಗ – ಬಂಧನ|Theft

ಹೆತ್ತ ತಾಯಿಯ ಮನೆಗೆ ಕನ್ನ ಹಾಕಿದ ಮಗನನ್ನು ಶಿವಮೊಗ್ಗ ಜಿಲ್ಲೆಯ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಗೋಪಾಳದ ಶ್ರೀರಾಮನಗರದ ಗಿರೀಶ್ ಅಲಿಯಾಸ್ ಸುಣ್ಣ ಬಂಧಿತ ಮನೆ ಕಳ್ಳ. ಆರೋಪಿಯು ತನ್ನ ತಾಯಿ ಮನೆಯಲ್ಲಿಲ್ಲದ ವೇಳೆ ಕಳ್ಳತನ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ಗಿರೀಶ್​ ತಾಯಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಗಿರೀಶ್​​ ಕದ್ದಿರುವ ಅನುಮಾನದಿಂದ ವಿಚಾರಣೆ ನಡೆಸಿದಾಗ ಕೃತ್ಯ ಒಪ್ಪಿಕೊಂಡಿದ್ದಾನೆ. ಈತ ಹಮಾಲಿ ಕೆಲಸ ಮಾಡುತ್ತಿದ್ದು,…

Read More

ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ದಿಡೀರ್ ರಾಜೀನಾಮೆ|Resign

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ಅಧ್ಯಕ್ಷೆ ಸ್ಥಾನಕ್ಕೆ ದಿಡೀರ್ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ಪಕ್ಷದ ಬೆಂಬಲಿತ ಸದಸ್ಯರಿಂದ ಅಧ್ಯಕ್ಷರಾಗಿ ಆಯ್ಕೆಯಾದ ಲೀಲಾವತಿ ದೊಡ್ಡಯ್ಯ ಕಳೆದ 20 ತಿಂಗಳ ಕಾಲ ಬಾಳೂರು ಗ್ರಾಪಂ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು. ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಗೆ ಬಂದ ಮಾಹಿತಿ ಪ್ರಕಾರ ಗ್ರಾಪಂ ಅಧ್ಯಕ್ಷೆ ಲೀಲಾವತಿ ದೊಡ್ಡಯ್ಯ ತಮ್ಮ ವೈಯಕ್ತಿಕ ಕಾರಣಗಳ ಹಿನ್ನಲೆಯಲ್ಲಿ ಸ್ವ ಇಚ್ಚೆಯಿಂದ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ. ಇಂದು ಲೀಲಾವತಿ ದೊಡ್ಡಯ್ಯ ಸಾಗರದ…

Read More

ರಾಷ್ಟ್ರ ಮಟ್ಟದಲ್ಲಿ‌ ಮಲೆನಾಡಿನ ಮರ್ಯಾದೆ ಕಳೆದ ಸಾಗರ ತಾಲೂಕಿನ ಸರ್ಕಾರಿ ಶಾಲೆಯ ಸೀರೆ ಶೌಚಾಲಯ|viral video

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬರುವೆ ಗ್ರಾಮದ ಸಮೀಪ ಇರುವ ಏಳಿಗೆ ಗ್ರಾಮದಲ್ಲಿನ ಶಾಲೆಯೊಂದರ ಸೀರೆ ಶೌಚಾಲಯದ ವಿಡಿಯೋವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ.  ಇಂತಹದ್ದೊಂದು ಅವ್ಯವಸ್ಥೆಯು ಇನ್ನೂ ಇದೇ ಎಂದು ರಾಷ್ಟ್ರೀಯವಾಹಿನಿಗಳು ಸೀರೆ ಶೌಚಾಲಯದ ಸರ್ಕಾರಿ ಶಾಲೆಯ ಸ್ಥಿತಿಯನ್ನು ಬಿಚ್ಚಿಡುತ್ತಿದೆ. ಅಲ್ಲದೆ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗುತ್ತಿದ್ದು, ಮಾಜಿ ಸಿಎಂ ಬಿಎಸ್​ ವೈ ತವರು, ಘಟಾನುಘಟಿ ರಾಜಕಾರಣಗಳ ಶಕ್ತಿಕೇಂದ್ರ  ಹಾಗೂ ವಿಮಾನ ನಿಲ್ಧಾಣವನ್ನು ಹೊಂದಿ ಅಭಿವೃದ್ಧಿ ಕಾಣುತ್ತಿರುವ ಶಿವಮೊಗ್ಗದಲ್ಲಿ ಸರ್ಕಾರಿ ಶಾಲೆಗೆ ಶೌಚಾಲಯ ಕಟ್ಟಿಸಿಕೊಡುವಂತಹ…

Read More

ಪತಿಗೆ ಕತ್ತಿಯಿಂದ ಬೆದರಿಸಿ ಪತ್ನಿಯ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್ – ಭಗ್ನ ಪ್ರೇಮಿಯಿಂದಲೇ ಅಪಹರಣ|Kidnap

ವಿವಾಹಿತೆಯೊಬ್ಬಳು ಕಿಡ್‌ನ್ಯಾಪ್‌ ಆಗಿರುವ ಪ್ರಕರಣವನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಚುರುಕಾದ ಕಾರ್ಯಾಚರಣೆಯಿಂದ ಭೇದಿಸಿದ್ದು, ಪ್ರಿಯಕರನಿಂದಲೇ ಮಹಿಳೆಯ ಅಪಹರಣವಾಗಿರುವುದು ಪತ್ತೆಯಾಗಿದೆ. ಡಿ.4ರಂದು ಎನ್‌ಟಿಬಿ ಲೇಔಟ್‌ನಲ್ಲಿದ್ದ ಮನೆಯಿಂದ ಮಹಿಳೆಯ ಅಪಹರಣವಾಗಿತ್ತು. ಮಹಿಳೆಯ ಗಂಡನಿಗೆ ಮಚ್ಚು ತೋರಿಸಿ ಅಪಹರಣ ಮಾಡಲಾಗಿದ್ದಲ್ಲದೆ, ಆಕೆಯ ಗಂಡನ ಕಾರಲ್ಲೇ ಆರೋಪಿಗಳು ಎಸ್ಕೇಪ್ ಆಗಿದ್ದರು. ಈ ಪ್ರಕರಣದಲ್ಲಿ ಆಕೆಯ ಪ್ರಿಯಕರ ಸುರೇಶ್ ಸಹಿತ ನಾಲ್ವರನ್ನು ಬಂಧಿಸಲಾಗಿದೆ. ಅಬ್ದುಲ್ ಅಬ್ರಾರ್, ಮಹೇಶ್, ಮಂಜುನಾಥ್ ಇತರ ಮೂವರು ಆರೋಪಿಗಳು. ಬಾಲ್ಯದ ಸ್ನೇಹಿತ ಸುರೇಶ್‌ ಜತೆಗೆ ಈಕೆಗೆ ಮೊದಲಿನಿಂದಲೂ ಪ್ರೇಮವಿದ್ದು, ಆದರೂ…

Read More

ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ – ಗಾಯಾಳು ಮೆಗ್ಗಾನ್ ಗೆ ದಾಖಲು|crime

ರಿಪ್ಪನ್‌ಪೇಟೆ : ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಬಿಯರ್ ಬಾಟಲಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ & ರೆಸ್ಟೋರೆಂಟ್ ಮುಂಭಾಗದಲ್ಲಿ ನಡೆದಿದೆ. ಪಟ್ಟಣದ ಗಾಂಧಿನಗರದ ನಿವಾಸಿ ಮಂಜುನಾಥ್ (27) ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾನೆ. ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ವೊಂದರ ಮುಂಂಭಾಗದಲ್ಲಿ ಕ್ಷುಲ್ಲಕ ಕಾರಣಕ್ಕೆ ತೀರ್ಥಹಳ್ಳಿ ರಸ್ತೆ ನಿವಾಸಿ ಪ್ರವೀಣ್ ಎಂಬಾತ ಮಂಜುನಾಥ್ ಮೇಲೆ ಏಕಾಏಕಿ ಬಿಯರ್ ಬಾಟಲಿಯಲ್ಲಿ ತಲೆಗೆ ಹಲ್ಲೆ ನಡೆಸಿದ್ದಾನೆ. ಗಾಯಾಳು ಮಂಜುನಾಥ್ ನನ್ನು ಸ್ಥಳೀಯರು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ…

Read More
Exit mobile version