Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಸಾಗರ ಸಮೀಪದ ಉಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಗುಂಪು ಗುಂಪಾಗಿ ಕಾಣಿಸಿಕೊಂಡ ಕಾಡು ಕೋಣಗಳು – ಭಯ ಭೀತರಾದ ಸ್ಥಳೀಯರು|wild corner

ಜನನಿಬಿಡ ಸ್ಥಳಗಳಲ್ಲಿ ಗುಂಪು ಗುಂಪಾಗಿ ಕಾಡುಕೋಣ ಕಾಣಿಸಿಕೊಂಡ ಪರಿಣಾಮ ಸ್ಥಳೀಯರು ಭಯಭೀತರಾದ ಘಟನೆ ಶಿವಮೊಗ್ಗ ಜಿಲ್ಲೆಯ ಉಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ. ಕಲ್ಲುಕೊಪ್ಪದ ಗ್ರಾಮದ ಭಾಗದಲ್ಲಿ ಹಿಂಡು‌ಹಿಂಡು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಅಧಿಕ ಭಯ ಹುಟ್ಟಿಸಿವೆ. ಏಕಾಏಕಿ 16 ಕಾಡುಕೋಣಗಳು ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರ ಆತಂಕವನ್ನು ದುಪ್ಪಟ್ಟುಗೊಳಿಸಿವೆ.  ಕಾಡುಕೋಣಗಳು ಚಿರತೆ ಹುಲಿಯಷ್ಟು ಅಪಾಯಕಾರಿಯಾಗದೆ ಇದ್ದರೂ ರೈತರು ಬೆಳೆದ ಬೆಳೆಗಳನ್ನು ನಾಶ ಮಾಡಿರುವ ಉದಾಹರಣೆಗಳಿದೆ. ಕಾಡುಕೋಣಗಳು ಗುಂಪು ಗುಂಪಾಗಿ ರಾಜರೋಷವಾಗಿ ಸುತ್ತಾಡುತ್ತಿರುವುದನ್ನು ಕಂಡು ಸ್ಥಳೀಯರು ಭಯಭೀತರಾಗಿ ಅರಣ್ಯ ಇಲಾಖೆಯ ಗಮನಕ್ಕೆ…

Read More

ಅಕಾಲಿಕ ಮಳೆಯಿಂದ ಕಂಗಾಲಾಗಿರುವ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕು : ಚಂದನ್ ಗೌಡ|jaya Karnataka

ರಿಪ್ಪನ್‌ಪೇಟೆ : ತಮಿಳುನಾಡಿನಲ್ಲಿ ಉಂಟಾಗಿರುವ ಚಂಡಮಾರುತದಿಂದ ಮಲೆನಾಡಿನ ರೈತ ಬದುಕು ಮೂರಾಬಟ್ಟೆಯಾಗಿದ್ದು ಈ ಗಂಭೀರ ಸಮಸ್ಯೆಯನ್ನು ಮಲೆನಾಡಿನ ಸಚಿವರು ಹಾಗೂ ಶಾಸಕರುಗಳು ಸರ್ಕಾರದ ಮುಂದಿಟ್ಟು ಮನದಟ್ಟು ಮಾಡಿ ಸರ್ಕಾರದಿಂದ ರೈತರಿಗೆ ಸೂಕ್ತ ಪರಿಹಾರ ಒದಗಿಸಿಕೊಡಬೇಕು ಎಂದು ಜಯಕರ್ನಾಟಕ ಸಂಘಟನೆ ತಾಲೂಕ್‌ ಅಧ್ಯಕ್ಷ ಚಂದನ್ ಗೌಡ ಹೇಳಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು  ತಮಿಳುನಾಡಿನಲ್ಲಿ ಎದ್ದಿರುವ ಮಂಡೋಸ್ ಚಂಡಮಾರುತ  ಕರುನಾಡಿಗೂ ಅಪಾಯ ಉಂಟು ಮಾಡುತ್ತಿದೆ ಅಕಾಲಿಕ ಮಳೆಯ ಕಾರಣ ದಕ್ಷಿಣ ಒಳನಾಡು ಮತ್ತು ಬಹುಮುಖ್ಯವಾಗಿ ಮಲೆನಾಡು…

Read More

ರಿಪ್ಪನ್ ಪೇಟೆ ಸುತ್ತಮುತ್ತಲಿನ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣ – ಸರ್ಕಾರಿ ಶಾಲೆ ಶಿಕ್ಷಕ ಸೇರಿ ಇಬ್ಬರ ಬಂಧನ

ರಿಪ್ಪನ್‌ಪೇಟೆ : ಇತ್ತೀಚಿಗೆ ರಿಪ್ಪನ್ ಪೇಟೆ ಸುತ್ತಮುತ್ತಲಿನ ಮೂರು ದೇವಸ್ಥಾನಗಳಲ್ಲಿ ಬೀಗ ಒಡೆದು ಕಳ್ಳತನ ಮಾಡಿದ್ದ ಆರೋಪಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಲಿಂಗದೇವರಕೊಪ್ಪ ಸರ್ಕಾರಿ ಶಾಲೆಯ ಶಿಕ್ಷಕ ವಸಂತ್ ಕುಮಾರ್ ಹಾಗೂ ಗುಡ್ಡದೇವರನಳ್ಳಿ ಗ್ರಾಮದ ಸಲೀಂ ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶೋಕಿ ಜೀವನ ನಡೆಸಲು ಕಳೆದ ಮೂರು ವರ್ಷಗಳಿಂದ ಕಳ್ಳತನ ನಡೆಸುತಿದ್ದ ಇವರು ಒಮ್ಮೆಯು ಸಿಕ್ಕಿಬಿದ್ದಿರಲಿಲ್ಲ. ಆರೋಪಿತರು ಕಳೆದ 3-4 ವರ್ಷಗಳಿಂದ ಈ ರೀತಿಯ ಕಳ್ಳತನ ಪ್ರಕರಣದಲ್ಲಿ ಬಾಗಿಯಾಗಿದ್ದು…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಟೊಯೋಟಾ ಫಾರ್ಚ್ಯೂನರ್ ಕಾರು ಪಲ್ಟಿ|Accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡುರೂ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೊಯೋಟಾ ಫಾರ್ಚುನರ್ ಕಾರು ಪಲ್ಟಿಯಾದ ಘಟನೆ ನಡೆದಿದೆ. ಸೂಡೂರು ಗೇಟ್ ಬಳಿ ಚಾಲಕನು ಅತಿ ವೇಗ ಹಾಗೂ ಅಜಾಗರುಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕುಂದಾಪುರ ಮೂಲದವರಾದ ಉದಯ್ ಕುಮಾರ್ ಕುಟುಂಬ ಬೆಂಗಳೂರಿನಲ್ಲಿ ವಾಸಿಸುತಿದ್ದು ಮದುವೆ ಕಾರ್ಯಕ್ರಮದ ನಿಮಿತ್ತ ಕುಂದಾಪುರಕ್ಕೆ ಬಂದು ವಾಪಾಸ್ ತೆರಳುವಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಒಬ್ಬರಿಗೆ ಗಂಭೀರ ಗಾಯವಾಗಿದೆ.ಗಾಯಾಳುಗಳನ್ನು ಶಿವಮೊಗ್ಗದ…

Read More

ಹೊಸನಗರ ತಾಲೂಕಿನ ಮೆಸ್ಕಾಂ ಇಲಾಖೆಗೆ ಇನ್ನೆಷ್ಟು ಬಲಿ ಬೇಕು…!???? ಅಪಾಯದ ಮುನ್ಸೂಚನೆ ನೀಡಿದರು ಸಹ ಸಾವಿನ ಜಾತ್ರೆ ಮಾಡಲು ಹೊರಟ ಕೆಲ ಜಡ್ಡುಗಟ್ಟ ಅಧಿಕಾರಿಗಳು|Mescom

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮದ ನಿವಾಸಿ ರೈತ ಶೇಷಗಿರಿ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾರೆ ಆದರೆ ಈ ದುರ್ಮರಣಕ್ಕೆ ನೇರವಾಗಿ ಮೆಸ್ಕಾಂ ಇಲಾಖೆಯ ಬಿಳಿಯಾನೆಯಂತಹ ಜಡ್ಡು ಹಿಡಿದ ಅಧಿಕಾರಿಗಳು ಹಾಗೂ ಕೆಲ ಸೋಮಾರಿ ಸಿಬ್ಬಂದಿಗಳೇ ನೇರ ಹೊಣೆ. ಇಂದು ಬೆಳಿಗ್ಗೆ ಶೇಷಗಿರಿ ಮೂರು ಬಾರಿ ಕರೆ ಮಾಡಿ ನೀಡಿದ್ದ ದೂರನ್ನು ಮನ್ನಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಲ್ಲಿ ಒಬ್ಬ ಅಮಾಯಕ ರೈತನ ಜೀವ ಉಳಿಸಬಹುದಿತ್ತಲ್ಲವೇ,ವಿದ್ಯುತ್ ತಂತಿ ನೆಲದ ಮೇಲೆ ಬಿದ್ದರೂ fuse ಯಾಕೆ ಕೆಲಸ ನಿರ್ವಹಿಸಿಲ್ಲ..???? ಅದು…

Read More

ಅಧಿಕಾರಕ್ಕಿಂತ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯೇ ನನ್ನ ಮೊದಲ ಆದ್ಯತೆ – ಆರ್ ಎನ್ ಮಂಜುನಾಥ್ ಗೌಡ|RMM

ತೀರ್ಥಹಳ್ಳಿ : ಸಹಕಾರಿ ಕ್ಷೇತ್ರದಲ್ಲಿ ಮಂಜುನಾಥ್ ಗೌಡರ ಇನ್ನಿಂಗ್ಸ್ ಮುಗಿತು ಮಂಜುನಾಥ್ ಗೌಡರನ್ನು ಮುಗಿಸಿ ಬಿಟ್ವಿ ಅಂತ ಬಹಳ ಜನ ಎಂದು ಕೊಳ್ಳುತ್ತಾರೆ ಕನಸು ಕಾಣುತ್ತಾರೆ. ನಾವು ಕನಸು ಕಂಡರೆ ನನಸು ಆಗುವಂತಹ ಕನಸು ಕಾಣಬೇಕು.  ಡಿಸಿಸಿ ಅಥವಾ ಯಾವುದೇ ಸೊಸೈಟಿಯಲ್ಲಿ ಭಾಗಿಯಾಗಬೇಕಾದರೆ ಶಿವಮೊಗ್ಗದ ಟಿಎಪಿಸಿಎಂಎಸ್ ಅಲ್ಲಿ ಗೆದ್ದರೆ ಮಾತ್ರ. ಆದ್ದರಿಂದ ಅಲ್ಲಿ ಸೋಲಿಸಬೇಕೆಂದು ನಮ್ಮ ವಿರೋಧ ಪಕ್ಷದವರ ಆಸೆಗೆ ಅಲ್ಲಿನ ಜನರು ಸುಳ್ಳು ಮಾಡಿ ನನನ್ನು ಗೆಲ್ಲಿಸಿದರು. ಅಲ್ಲಿನ ಗೆಲುವಿನ ಮೂಲಕ  ಅಲ್ಲಿಂದ ನನ್ನ ಎರಡನೇ…

Read More

ಆಸ್ತಿಯಲ್ಲಿ ಪಾಲು ಕೊಡದೇ ಎರಡನೇ ಮದುವೆಯಾದ ಅಪ್ಪ – ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಮಕ್ಕಳು|Murder mystery

ಆಸ್ತಿಯಲ್ಲಿ ಪಾಲು ಕೊಡದೆ, ಎರಡನೇ ಮದುವೆಯಾಗಿ ಮಗು ಮಾಡಿಕೊಂಡ ಅಪ್ಪನನ್ನು ಮೂವರು ಮಕ್ಕಳೇ ಸುಪಾರಿ ಕೊಟ್ಟು ಕೊಲ್ಲಿಸಿದ ಘಟನೆ ಶಿಕಾರಿಪುರದಲ್ಲಿ ನಡೆದಿದೆ.  ತಾಲೂಕಿನ ಶಿರಾಳಕೊಪ್ಪದಲ್ಲಿ ನಡೆದ ಘಟನೆಯನ್ನು ಪೊಲೀಸರು ಭೇದಿಸಿದ್ದಾರೆ. ನ. 29ರಂದು ಕೆಎಸ್‌ಆರ್‌ಪಿಯ ನಿವೃತ್ತ ಎಸ್‌ಐ ನಾಗೇಂದ್ರಪ್ಪ ಎಂಬವರ ಶವ ಚರಂಡಿಯಲ್ಲಿ ಸಿಕ್ಕಿತ್ತು. ಇವರು ಶಿರಾಳಕೊಪ್ಪದ ಬೋವಿ ಗ್ರಾಮದವರು. ಆಸ್ತಿ ವಿಚಾರದಲ್ಲಿ ಕೊಲೆ ಶಂಕಿಸಿದ್ದ ಪೊಲೀಸರು ಆ ದಿಕ್ಕಿನಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಕಂಬಿ ಎಣಿಸುವಂತೆ ಮಾಡಿದ್ದಾರೆ. ಬೋವಿ ಗ್ರಾಮದ ರಿಜ್ವಾನ್, ಹಬೀಬುಲ್ಲಾ, ಸುಹೇಲ್ ಎಂಬವರಿಂದ…

Read More

ವಿದ್ಯುತ್ ಸ್ಪರ್ಶದಿಂದ ಪತ್ನಿಯನ್ನು ರಕ್ಷಿಸಲು ಹೋದ ಪತಿ ಸಾವು – ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯಕ್ಕೆ ರೈತನೊಬ್ಬನ ದುರ್ಮರಣ|Electric shock

ರಿಪ್ಪನ್‌ಪೇಟೆ : ವಿದ್ಯುತ್ ತಂತಿ ತುಳಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ಇಲ್ಲಿನ ಸಮೀಪದ ನಂಜವಳ್ಳಿ ಗ್ರಾಮದಲ್ಲಿ  ನಡೆದಿದೆ. ಹರತಾಳು ಗ್ರಾಪಂ ವ್ಯಾಪ್ತಿಯ ಹರತಾಳು ಗ್ರಾಮದ ರೈತ ಶೇಷಗಿರಿ(45) ಮೃತ ದುರ್ದೈವಿಯಾಗಿದ್ದಾರೆ. ಇಂದು ಬೆಳಗ್ಗೆ ಮನೆಯ ಬಳಿ ಶೇಷಗಿರಿ ರವರ ಪತ್ನಿ ಹೂ ಕೀಳಲು ಹೋದಾಗ ಅವರಿಗೆ ವಿದ್ಯುತ್ ಸ್ಪರ್ಶಿಸಿ ಕೂಗಿದ್ದಾರೆ ಕೂಡಲೇ ಅವರನ್ನು ರಕ್ಷಿಸಲು ಹೋದ ಶೇಷಗಿರಿ ರವರು ಪಾದರಕ್ಷೆ ಧರಿಸದೆ ವಿದ್ಯುತ್ ತಂತಿಯನ್ನು ತುಳಿದಿದ್ದಾರೆ. ಮೂಲತಃ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿ ಗ್ರಾಮದ ಒಡ್ಡಿನಬೈಲು ನಿವಾಸಿಯಾದ ಇವರು…

Read More

ಪೋಟೋ ಕ್ಲಿಕ್‌ ಮಾಡುವಾಗ ಹೃದಯಾಘಾತದಿಂದ ಫೋಟೋಗ್ರಾಫರ್ ಸಾವು|photographer

ಸಾಗರ ನಗರದ ವೃತ್ತಿನಿರತ ಫೋಟೊಗ್ರಾಫರ್ ಒಬ್ಬರು ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುತ್ತಿರುವಾಗಲೇ ಹೃದಯಾಘಾತದಿಂದ ಕುಸಿದುಬಿದ್ದು ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ತಾಲೂಕಿನ ಹೆಗ್ಗೋಡು ಸಮೀಪದ ಹೆಬ್ಬೈಲಿನ ಸೋಮೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ ಈ ಘಟನೆ ನಡೆದಿದ್ದು ಇಲ್ಲಿನ ರಾಮನಗರದ ನಿವಾಸಿ ಚಂದ್ರು (42) ಮೃತ ದುರ್ದೈವಿ. ಕಾರ್ಯಕ್ರಮದಲ್ಲಿ ಫೋಟೊ ತೆಗೆಯುವ ವೇಳೆ ಚಂದ್ರು ಕುಸಿದು ಬಿದ್ದರು. ತಕ್ಷಣ ಅವರನ್ನು ನಗರದ ಉಪವಿಭಾಗೀಯ ಆಸ್ಪತ್ರೆಗೆ ಸೇರಿಸುವ ಪ್ರಯತ್ನ ನಡೆಯಿತಾದರೂ ಆ ವೇಳೆಗೆ ಕೊನೆಯುಸಿರೆಳೆದಿದ್ದರು. ನಗರದ ಶಿಲ್ಪ ಸ್ಟುಡಿಯೋ ಮಾಲೀಕರಾಗಿದ್ದ…

Read More

ಅಥ್ಲೆಟಿಕ್ಸ್ ವಿಭಾಗದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು|Athletic

ರಿಪ್ಪನ್‌ಪೇಟೆ : ಅಥ್ಲೆಟಿಕ್ಸ್ 17 ವರ್ಷದೊಳಗಿನ ವಿಭಾಗದಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿಗಳಾದ ನಿತೀಶ್ ಟಿ ,ನಿತಿನ್ ಟಿ ,ಆಯುಷ್ ಎಸ್ ಆರ್ ಮತ್ತು ಅರ್ಜುನ್ 4*100 ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ  ಕ್ರೀಡಾಕೂಟದಲ್ಲಿ…

Read More