Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ತಾಳಗುಪ್ಪ – ಮೈಸೂರು ರೈಲು ಹತ್ತುವಾಗ ಜಾರಿ ಕೆಳಗೆ ಬಿದ್ದ ಪ್ರಯಾಣಿಕ : ಕರ್ತವ್ಯ ಪ್ರಜ್ಞೆ ಮೆರೆದ ರೈಲ್ವೆ ಸಿಬ್ಬಂದಿಗಳು -ಸಿಸಿಟಿವಿ ವೀಡಿಯೋ ವೈರಲ್|Train

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಿನ್ನೆ ಮೈಸೂರು ತಾಳಗುಪ್ಪ ರೈಲು ಹತ್ತುವಾಗ ಪ್ರಯಾಣಿಕನೋರ್ವ ಸ್ಲಿಪ್ ಆಗಿ ಕೆಳಗೆ ಬಿದ್ದ ಘಟನೆ ನಡೆದಿದ್ದು ಈ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಪ್ರಯಾಣಿಕರು ಕೆಳಗೆ ಬೀಳುವುದನ್ನ ಗಮನಿಸಿದ ರೈಲ್ವೆ ಆರ್ ಪಿ ಎಫ್ ನ ಸಿಬ್ಬಂದಿ ಮಂಜುನಾಥ್ ಮತ್ತು ಅಣ್ಣಪ್ಪ ಅವರನ್ನ ರಕ್ಷಿಸಿದ್ದಾರೆ. ನಂತರ ಸಾರ್ವಜನಿಕರು ಸಹ ಸಿಬ್ವಂದಿಗಳ ಜೊತೆ ಕೈಜೋಡಿಸಿದ್ದಾರೆ. ಈ ವಿಡಿಯೋವನ್ನ ಟ್ವೀಟರ್ ನಲ್ಲಿ ಆರ್ ಪಿ ಎಫ್ ಮೈಸೂರು ವಿಭಾಗದ ರೈಲ್ವೆಯವರು ಪೋಸ್ಟ್ ಮಾಡಿದ್ದಾರೆ. ನಿನ್ನೆ…

Read More

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು,ಓರ್ವ ಗಂಬೀರ|Accident

ಲಾರಿ ಮತ್ತು ಬೊಲೇನೋ ಕಾರಿನ ನಡುವೆ ಉಂಟಾದ ರಸ್ತೆ ಅಪಘಾತದಲ್ಲಿ ಬೊಲೆನೋ ವಾಹನದಲ್ಲಿದ್ದ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. ಮೂವರು ದಾವಣಗೆರೆಯ ಬಿಐಟಿ ಕಾಲೇಜಿನ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.   ಶಿವಮೊಗ್ಗದ ಸವಳಂಗ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಶಿವಮೊಗ್ಗ ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಸಾವು ಕಂಡವರನ್ನ ಕಾರ್ತಿಕ್, ಮೋಹನ್ ಮತ್ತು ವಿವೇಕ್ ಎಂದು ಗುರುತಿಸಲಾಗಿದೆ. ಕಾರ್ತಿಕ್ ಬೊಲೆನೋ ವಾಹನವನ್ನು ಚಲಾಯಿಸುತ್ತಿದ್ದನು ಎಂದು…

Read More

ಯೋಗ ಪ್ರಶಸ್ತಿ ಪಡೆದ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು|GFGCC

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಶಿವಮೊಗ್ಗ ದಲ್ಲಿ ನಡೆದ ಕುವೆಂಪು ವಿಶ್ವವಿದ್ಯಾನಿಲಯ ಮಟ್ಟದ ಯೋಗ ಪಂದ್ಯಾವಳಿಯಲ್ಲಿ  ಭಾಗವಹಿಸಿ ಮಹಿಳಾ ಮತ್ತು ಪುರುಷ ವಿದ್ಯಾರ್ಥಿಗಳು ತೃತೀಯ ಚಾಂಪಿಯನ್ ಪಟ್ಟ ಪಡೆದು ಕೊಂಡಿದ್ದಾರೆ . ಕಾಲೇಜಿನ ವಿದ್ಯಾರ್ಥಿಗಳಾದ ಕಾರ್ತಿಕ್. ಎನ್. ಜಿ, ಉಜ್ವಲ್. ಎಂ, ಮುಸ್ತಾಫ ಎಂ, ನಂದನ್ ಕುಮಾರ್, ಅಭಿಷೇಕ್, ಮೇಘ. ಎನ್ ಕೆ, ಸನು ಜೆ, ಶೈಲಜಾ. ಜೆ. ಎಂ, ಸಂಧ್ಯಾ. ಹೆಚ್. ಎ, ಜಯಶ್ರೀ. ಹೆಚ್. ಎಸ್, ರವರಿದ್ದ…

Read More

ಸೇವಾ ಕಾರ್ಯ ಜನಮಾನಸದಲ್ಲಿ ಉಳಿಯುವಂತಾಗಲು ಸದಾ ಶ್ರಮಿಸಬೇಕು : ಡಾ ಜಿ ಡಿ ನಾರಾಯಣಪ್ಪ|Ripponpet

ರಿಪ್ಪನ್‌ಪೇಟೆ : ಮನುಷ್ಯನ ಹುಟ್ಟು- ಆಕಸ್ಮಿಕ ಸಾವು ನಿಶ್ಚಿತ ಈ ಮಧ್ಯದಲ್ಲಿನ ಬದುಕು ಜನಮಾನಸದಲ್ಲಿ ಉಳಿಯವಂತಾಗಲು ಸದಾ ಶ್ರಮಿಸುವಂತಾಗಬೇಕು ಅಂತಹ ಕಾರ್ಯದಲ್ಲಿ ಜಿ.ಆರ್.ಕೆ.ಮೂರ್ತಿ ಜನಸೇವಾ ಕಾರ್ಯ ಪ್ರಶಂಸನೀಯವೆಂದು ವೈದ್ಯರತ್ನ, ಮಾಜಿ ಶಾಸಕ ಡಾ.ಜಿ.ಡಿ.ನಾರಾಯಣಪ್ಪ ಹೇಳಿದರು. ಪಟ್ಟಣದ ಜಿ.ಆರ್.ಕೆ.ಮೂರ್ತಿ ಸೇವಾ ಟ್ರಸ್ಟ್ ಗೆಳೆಯರ ಬಳಗ ಇವರ ಸಹಯೋಗದಲ್ಲಿ ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಕ್ರೀಡಾಂಗಣದಲ್ಲಿ ಅಯೋಜಿಸಲಾದ ಅಭಿನಂದನಾ ಮಹೋತ್ಸವ ಮತ್ತು ನಗೆಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಇಂದಿನ ದಿನಮಾನಗಳಲ್ಲಿ ಸ್ವಾರ್ಥ ಮನೋಭಾವನೆಯಿಂದಾಗಿ ನಮ್ಮ ತನವನ್ನು ಮರೆಯುವಂತಾಗಿದೆ. ಸಂಬಂಧಗಳಿಂದಲೂ…

Read More

ಗುಜರಾತ್ ಮತ್ತು ಹಿಮಾಚಲ ಚುನಾವಣೆ ಹಿನ್ನಲೆಯಲ್ಲಿ ರಿಪ್ಪನ್‌ಪೇಟೆಯಲ್ಲಿ ವಿವಿಧ ಪಕ್ಷಗಳಿಂದ ಸಂಭ್ರಮಾಚರಣೆ|Ripponpet

ರಿಪ್ಪನ್‌ಪೇಟೆ : ಗುಜರಾತ್‌, ಹಿಮಾಚಲ ಪ್ರದೇಶದ ಚುನಾವಣೆಯ ಫಲಿತಾಂಶವು ಗುರುವಾರ ಪ್ರಕಟಗೊಂಡಿದೆ. ಗುಜರಾತ್‌ನಲ್ಲಿ ಬಿಜೆಪಿ ಪಕ್ಷವು ಐತಿಹಾಸಿಕ ಗೆಲವು ಸಾಧಿಸಿದೆ. ಇದರಿಂದ ಸಂತಸಗೊಂಡಿರುವ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ತಿನ್ನಿಸಿ ಸಂಭ್ರಮಿಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರ ವಿಜಯೋತ್ಸವ ಜೋರಾಗಿತ್ತು. ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಸಾಧಿಸಿದ ಹಿನ್ನೆಲೆ ಪಟಾಕಿ ಸಿಡಿಸಿ,‌ ಪರಸ್ಪರ ಸಿಹಿ ತಿನ್ನಿಸಿದರು.ಬಿಜೆಪಿ ಪಕ್ಷದ ಬಾವುಟ ಹಿಡಿದು ಜಯಘೋಷಣೆ ಕೂಗಿದರು. ಶಕ್ತಿ ಕೇಂದ್ರದ ಅಧ್ಯಕ್ಷ ಎಂ ಬಿ ಮಂಜುನಾಥ್ ,ಮುಖಂಡರಾದ ಎನ್…

Read More

ಇಂದು ಸಂಜೆ ರಿಪ್ಪನ್‌ಪೇಟೆಯಲ್ಲಿ ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ್ ರವರಿಂದ ನಗೆ ಹಬ್ಬ – ಕಾರ್ಯಕ್ರಮಕ್ಕೆ ಭರದ ಸಿದ್ದತೆ|Ripponpet

ರಿಪ್ಪನ್‌ಪೇಟೆ : ಇಂದು ಸಂಜೆ 07 ಗಂಟೆಗೆ ಪಟ್ಟಣದಲ್ಲಿ ಹಾಸ್ಯಬ್ರಹ್ಮ ಗಂಗಾವತಿ ಪ್ರಾಣೇಶ್ ಮತ್ತು ಬಸವರಾಜ್ ಮಾಮನಿ ರವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಬರುವೆ ಶಾಲಾ ಮೈದಾನದಲ್ಲಿ ಇಂದು ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಅಭಿನಂದನಾ ಮಹೋತ್ಸವ ಹಾಗೂ ನಗೆಹಬ್ಬ ಕಾರ್ಯಕ್ರಮದಲ್ಲಿ ಅಭಿನವ ಬೀಚಿ, ಹಾಸ್ಯ ಬ್ರಹ್ಮ ಗಂಗಾವತಿ ಪ್ರಾಣೇಶ, ನರಸಿಂಹ ಜೋಶಿ, ಬಸವರಾಜ ಮಾಮನಿಯವರಿಂದ ‘ನಗೆ ಹಬ್ಬ’ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ, ಅರಸಾಳು, ಕೆಂಚನಾಲ, ಬಾಳೂರು,…

Read More

ಲಂಚ ಸ್ವೀಕರಿಸುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಭೂಮಾಪಕ|surveyor arrested

ಜಮೀನು ಸರ್ವೆ ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಭೂಮಾಪಕರೊಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಂಗನಾಥ್ ಲೋಕಾಯುಕ್ತದ ಬಲೆಗೆ ಬಿದ್ದ ಭೂಮಾಪಕ ಎಂದು ತಿಳಿದು ಬಂದಿದೆ. ಸಾಗರ ತಾಲೂಕಿನ ತ್ಯಾಗರ್ತಿಯ ಎಡಿಎಲ್ಆರ್ ಕಚೇರಿಯಲ್ಲಿ ಭೂಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಂಗನಾಥ್, ಸಾಗರದ ನಿವಾಸಿ ಉಮೇಶ್ ಎಂಬುವವರ  ಜಮೀನು ಸರ್ವೆ ಮಾಡಲು  ಮೂರು ಸಾವಿರ ರೂ ಹಣದ ಬೇಡಿಕೆ ಇಟ್ಟಿದ್ದಾರೆ. ಮುಂಗಡವಾಗಿ 1500 ರೂ  ಪಡೆದುಕೊಂಡಿದ್ದರು. ಉಳಿದ ಹಣವನ್ನು ಪಡೆಯುವಾಗ  ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ…

Read More

ವಿದ್ಯುತ್ ಸ್ಪರ್ಶದಿಂದ ಯುವಕ ಸಾವು|electric shock

ಮನೆಯಲ್ಲಿ ಹೋಲ್ಡರ್‌ಗೆ ಬಲ್ಪ್ ಹಾಕಲು ಹೋಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಾಗರ ನಗರದ ಶಾಂತಿನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಾಂತಿನಗರದ ನಿವಾಸಿ ರೂಪ್ ಸಿಂಗ್ (33) ಮೃತ ದುರ್ದೈವಿ. ಮನೆಯಲ್ಲಿ ಬಲ್ಬ್‌ ಬದಲಾವಣೆ ಮಾಡುವ ಸಂದರ್ಭದಲ್ಲಿ ಇವರಿಗೆ ಕರೆಂಟ್‌ ಶಾಕ್‌ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದರೂ, ಅದಾಗಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಸಾಗರ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ…

Read More

ಗಾಂಜಾ ಧಂಧೆಕೋರರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ : ಸಿಪಿಐ ಗಿರೀಶ್ ಬಿ ಸಿ|CPI

ರಿಪ್ಪನ್‌ಪೇಟೆ : ಗಾಂಜಾ ಮಾರಾಟ ಹಾಗೂ ಸೇವನೆಯನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ ಎಂದು ಹೊಸನಗರ ಸಿಪಿಐ ಗಿರೀಶ್ ಹೇಳಿದರು. ಅವರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ‘ಅಪರಾಧ ತಡೆ ಮಾಸಾಚರಣೆ ಡಿಸೆಂಬರ್-೨೦೨೨ರ’ ಕಾರ್ಯಕ್ರಮದಲ್ಲಿ ಮಾತನಾಡಿ ಗಾಂಜಾ ಸೇವನೆ ವ್ಯಕ್ತಿಯನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿಸುತ್ತದೆ.ಗಾಂಜಾ ವ್ಯಸನಿಗಳು ಎಂತಹ ಅಪರಾಧ ಚಟುವಟಿಕೆ ಮಾಡಲು ಹಿಂಜರಿಯುವುದಿಲ್ಲ,ಅಂತಹ ದುಷ್ಟ ಶಕ್ತಿಗಳನ್ನು ಬಗ್ಗುಬಡಿಯುವ ಕೆಲಸ ಪೊಲೀಸ್ ಇಲಾಖೆ ಯಾವುದೇ ಮುಲಾಜಿಲ್ಲದೇ ಮಾಡುತ್ತದೆ ಎಂದರು. ವಿವಿಧ ಕಾರಣಗಳಿಂದ ಸಮಾಜದಲ್ಲಿ ನಿತ್ಯವೂ ಒಂದಿಲ್ಲೊಂದು…

Read More

ನಾಳೆ(09-12-2022) ಸಂಜೆ 7 ರಿಂದ 12 ಗಂಟೆ ರಿಪ್ಪನ್‌ಪೇಟೆ – ಆಯನೂರು ಮಾರ್ಗ ಬಂದ್ – ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಜಿಲ್ಲಾಡಳಿತ ಪ್ರಕಟಣೆ|Ripponpet

ರಿಪ್ಪನ್‌ಪೇಟೆ : ಕುಂಸಿ – ಆನಂದಪುರ ರೈಲ್ವೆ ಮಾರ್ಗದ ಲೆವೆಲ್ ಕ್ರಾಸಿಂಗ್ ನಂ 92 ರಲ್ಲಿ ತಾಂತ್ರಿಕ ಪರಿಶೀಲನೆ ಇರುವುದರಿಂದ 12 ಗಂಟೆಗಳ ಕಾಲ ರಿಪ್ಪನ್‌ಪೇಟೆ ಯಿಂದ ಆಯನೂರು ಮಾರ್ಗ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ. ರೈಲ್ವೆ ಗೇಟ್ ಸಂಖ್ಯೆ 92 ರಲ್ಲಿ (ಆರಸಾಳು ಗ್ರಾಮದಲ್ಲಿರುವ ರೈಲ್ವೆ ಗೇಟ್) ತಾಂತ್ರಿಕವಾಗಿ ಪರಿಶೀಲನೆ ಮಾಡಲು ದಿನಾಂಕ 09-12-22ರ ಸಂಜೆ 7:೦೦ ಗಂಟೆಯಿಂದ 10-12-22ರ ಬೆಳಿಗ್ಗೆ 7:೦೦ ಗಂಟೆಯವರೆಗೆ ಗೇಟನ್ನು ಮುಚ್ಚುವುದರಿಂದ ತಾತ್ಕಾಲಿಕ  ಪರ್ಯಾಯ ಮಾರ್ಗಗಳು…

Read More