Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆ : ಸರ್ಕಾರಿ ಬಿಸಿಎಂ ಮಹಿಳಾ ಹಾಸ್ಟೆಲ್ ನಲ್ಲಿ ಬಿಜೆಪಿ ಪಕ್ಷದಿಂದ ಸದಸ್ಯತ್ವ ಅಭಿಯಾನ ಆರೋಪ – ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ|protest

ರಿಪ್ಪನ್‌ಪೇಟೆ : ಪಟ್ಟಣದ ಬಿಸಿಎಂ ವಿದ್ಯಾರ್ಥಿನಿಯರ ವಸತಿಗೃಹದಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಅಭಿಯಾನದಡಿಯಲ್ಲಿ ಸದಸ್ಯತ್ವ ನೋಂದಣಿ ಮಾಡಿದ್ದಾರೆ ಎಂದು ಆರೋಪಿಸಿ ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ವತಿಯಿಂದ ಹಾಸ್ಟೆಲ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಾಮಾಜಿಕ ಜಾಲತಾಣದಲ್ಲಿ “ಭಾರತೀಯ ಜನತಾ ಪಕ್ಷ ಹೊಸನಗರ ಮಂಡಲ ಮಹಿಳಾ ಮೋರ್ಚ ವಿಜಯ ಸಂಕಲ್ಪ ಅಭಿಯಾನ ದಿನಾಂಕ 27 ರ ಶುಕ್ರವಾರ ರಿಪ್ಪನ್‌ಪೇಟೆಯ ಬಿಸಿಎಂ ಹಾಸ್ಟೆಲ್ ನಲ್ಲಿ ಬಿಜೆಪಿ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಹಾಗೂ ಸುಮಾರು 31 ಸದಸ್ಯತ್ವ ನೋಂದಣಿ ಮಾಡಿಸಲಾಯಿತು” ಎಂಬ…

Read More

ಇಂದಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯ ನಿರ್ವಹಿಸಬೇಕಾಗಿದೆ – ಹರತಾಳು ಹಾಲಪ್ಪ|sagara

ಸಾಗರ : ಸರ್ಕಾರದ ನಾಲ್ಕು ಅಂಗಗಳಲ್ಲಿ ನಾಲ್ಕನೆಯ ಅಂಗವಾದ ಮಾದ್ಯಮ ರಂಗಕ್ಕೆ ತನ್ನದೇ ಆದ ವಿಶೇಷ ಮಹತ್ವವಿದೆ. ಈಗಿನ ಕಾಲಘಟ್ಟದಲ್ಲಿ ಮಾದ್ಯಮಗಳು ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಕಾರ್ಯವನ್ನು ಕೈಗೊಳ್ಳಬೇಕಾಗಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಗಾಂಧಿ ಮೈದಾನದಲ್ಲಿ ಮಲೆನಾಡು ರಹಸ್ಯ ವಾರಪತ್ರಿಕೆ ,ಸುದ್ದಿಮನೆ ಹಾಗೂ ಗ್ಲೋಬಲ್ ಡಿಜಿಟಲ್ ಮೀಡಿಯಾ ಆಯೋಜಿಸಿದ್ದ ವಾರ್ಷಿಕ ಸಂಭ್ರಮಾ‍ಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ಥಳೀಯ ಸಮಸ್ಯೆಗಳನ್ನು…

Read More

ಯುವಕನ ಮೇಲೆ ಪೊಲೀಸರಿಂದ ಹಲ್ಲೆ – ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ|assault

ಶಿಕಾರಿಪುರ : ಪೊಲೀಸರು ಯುವಕನ‌ ಮೇಲೆ ಹಲ್ಲೆ ನೆಡೆಸಿದ್ದಾರೆ ಎಂದು ಮನನೊಂದು ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಅರಶಿಣಗೆರೆಯಲ್ಲಿ ನೆಡೆದಿದೆ.   ಅರಶಿಣಗೆರೆ ಸಚ್ಚಿನ್‌ (24) ವಿಷ ಸೇವಿಸಿದ ಯುವಕ. ಕಳೆದ ಎರಡು ದಿನಗಳ ಹಿಂದೆ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಯುವಕನ ಮೇಲೆ ಏಕಾಏಕಿ ಪೊಲೀಸರು ಹಲ್ಲೆ ಮಾಡಿದ್ದೂ ಊರಿನ ಜನರ ಮುಂದೆ ಅವಮಾನ ಸಹಿಸದೆ ಯುವಕ ಸಚಿನ್ ವಿಷ ಸೇವನೆ ಮಾಡಿದ್ದಾನೆ. ವಿಷಯ ತಿಳಿದ ತಕ್ಷಣ ಶಿಕಾರಿಪುರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…

Read More

ಹೊಸನಗರ ಜಾತ್ರೆಯ ಮೆರುಗು ಹೆಚ್ಚಿಸಿದ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೈಭವ|fare

ಹೊಸನಗರ :ಮೈ ಮನ ತಣಿಸುವ ನೃತ್ಯ ವೈಭವ ಕಾರ್ಯಕ್ರಮ, ಮನಕ್ಕೆ ಮುದ ನೀಡುವ ಪುಟ್ಟ ಪುಟಾಣಿಗಳ, ಚಿಣ್ಣರ ಹಾಡು ,ನೃತ್ಯಗಳು. ಹೌದು ಈ ಸುಂದರ ಕಾರ್ಯಕ್ರಮವು ಹೊಸನಗರದ ಶ್ರೀ ಮಾರಿಕಾಂಬಾ ಜಾತ್ರೆಯಲ್ಲಿ ಅದ್ದೂರಿಯಿಂದ ಸಾವಿರಾರು ಜನಗಳ ಸಮ್ಮುಖದಲ್ಲಿ ನಡೆದಿದ್ದು,ಹೊಸನಗರ ಜಾತ್ರೆಯ ಮೆರಗನ್ನು ಇನ್ನಷ್ಟು ಹೆಚ್ಚಿಸಿದೆ!! ಏಕೆಂದರೆ ಕಳೆದ ಬಾರಿ ಅದೇ ವೇದಿಕೆಯಲ್ಲಿ ನಡೆದಂತಹ ಕಾರ್ಯಕ್ರಮಗಳು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ವಿರೋಧ ಸಹ ಕೇಳಿ ಬಂದಿತ್ತು,ಅದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿ ವಿರೋಧದ ಅಲೆಯೇ ಎದ್ದಿತ್ತು.. ಆದರೆ…

Read More

ಜೈನ ಬೀಜಾಕ್ಷರಿ ಮಂತ್ರ ನಿತ್ಯ ಪಠಣದಿಂದ ಆನಂತ ಶಕ್ತಿ ವೃದ್ದಿ|hombuja

ರಿಪ್ಪನ್‌ಪೇಟೆ;- ಜೈನ ಬೀಜಾಕ್ಷರಿ ಮಂತ್ರವನ್ನು ನಿತ್ಯ ಪಠಣಮಾಡುವುದರಿಂದ  ನಮಗೆ ಎದುರಾಗಿರುವ ನೂರೆಂಟು ಸಮಸ್ಯೆಗಳು ಪರಿಹಾರವಾಗುವುದು ಎಂದು ರಾಷ್ಟ ಸಂತ ಅಚಾರ್ಯ 108 ಗುಣಧರನಂದಿ ಮುನಿಮಹಾರಾಜರು ಹೇಳಿದರು.   ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಶುಕ್ರವಾರ ಕೊನೆಯ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದ ಸಾನಿಧ್ಯವಹಿಸಿ ಅಶೀರ್ವಚನ ನೀಡಿ ಹೊಂಬುಜ ಜೈನಮಠದಲ್ಲಿ ನಡೆದ ಪಂಚಕಲ್ಯಾಣ ಮಹೋತ್ಸವು ದೇವರಾಯ ಇಂದ್ರ ಸಾಕ್ಷಾತ್ಕಾರ ಮಾಡಿದಂತಾಗಿದ್ದು ಈ ಪುಣ್ಯ ಕಾರ್ಯ ಜನಮಾನಸದಲ್ಲಿ ನುರಾರು ವರ್ಷ ಕಾಲ ಉಳಿಯುವಂತಾಗಿದೆ…

Read More

ಮಕ್ಕಳು ಹೆಚ್ಚು ಪುಸ್ತಕಗಳನ್ನು ಓದುವಂತೆ ಪೋಷಕರು ಪ್ರೇರೇಪಿಸಬೇಕು – ಹಿರಿಯ ಪತ್ರಕರ್ತ ಪದ್ಮರಾಜ್ ದಂಡಾವತಿ|hombuja

ರಿಪ್ಪನ್‌ಪೇಟೆ : ಇಂದಿನ ಅಧುನಿಕ ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬರು ಒತ್ತಡದ ಜೀವನದಲ್ಲಿ ಬದುಕುತ್ತಿದ್ದಾರೆ. ನಿರ್ಧಾರಗಳನ್ನು ದಿಢೀರ್ ತೆಗೆದುಕೊಂಡು ತಮ್ಮ ಜೀವನವನ್ನು ಕೊನೆಗಾಣಿಸುತ್ತಿರುವ ಯುವ ಸಮೂಹಕ್ಕೆ ಶ್ರೇಷ್ಠ ಗ್ರಂಥಗಳ ಅಧ್ಯಯನದ ಬಗ್ಗೆ ಜಾಗೃತಿಗೊಳಿಸುವುದು ಸಮಾಜದಲ್ಲಿನ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ ಹೇಳಿದರು. ಸಮೀಪದ ಹೊಂಬುಜ ಅತಿಶಯ ಮಹಾಕ್ಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಐದನೇ ದಿನವಾಗ ಗುರುವಾರ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಮಾನವನ ಬದುಕಿನಲ್ಲಿ ನೆಮ್ಮದಿ ಕಾಣಬೇಕಾದರೆ ಧಾರ್ಮಿಕ…

Read More

ಅಕ್ರಮ ಮರ ಕಡಿತಲೆ – ಲಕ್ಷಾಂತರ ರೂ ಮೌಲ್ಯದ ಸಾಗುವಾನಿ ನಾಟ ಹಾಗೂ ವಿದ್ಯುತ್ ಚಾಲಿತ ಮರ ಕೊಯ್ಯುವ ಯಂತ್ರ ವಶಕ್ಕೆ|Teak

ಅಕ್ರಮವಾಗಿ ಸಾಗುವನಿ ಮರ ಕಡಿತಲೆ ಮಾಡುತಿದ್ದ ವೇಳೆ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ನಾಟ ಹಾಗೂ ವಿದ್ಯುತ್ ಚಾಲಿತ ಯಂತ್ರವನ್ನು ಪೊಲೀಸ್ ಅರಣ್ಯ ಸಂಚಾರಿ ದಳ ವಶಪಡಿಸಿಕೊಂಡ ಘಟನೆ ಸಾಗರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದಿದೆ. ಖಚಿತ ಮಾಹಿತಿಯನ್ನು ಆಧರಿಸಿ ಕಲ್ಮನೆ  ಗ್ರಾಮದಲ್ಲಿ ದಾಳಿ ನಡೆಸಿದ ಪೊಲೀಸ್ ಅರಣ್ಯ ಸಂಚಾರಿ ದಳ ಅಕ್ರಮವಾಗಿ ಸಾಗುವಾನಿ ಮರವನ್ನು ಕಡಿದು ವಿದ್ಯುತ್ ಚಾಲಿತ ಯಂತ್ರದಿಂದ ಕೊಯ್ಯುತ್ತಿರುವಾಗ ದಾಳಿ ನಡೆಸಿ ಆರೋಪಿತರ ಮೇಲೆ ಪ್ರಕರಣ ದಾಖಲಿಸಿ ಲಕ್ಷಾಂತರ…

Read More

ಆನಂದಪುರ – ಶಿಕಾರಿಪುರ – ರಾಣೆಬೆನ್ನೂರು ನೂತನ ರೈಲು ಮಾರ್ಗ – ಫೆ.27 ಕ್ಕೆ ಪಿಎಂ ಮೋದಿಯಿಂದ ಕಾಮಗಾರಿಗೆ ಚಾಲನೆ : ಬಿ ವೈ ರಾಘವೇಂದ್ರ

ರಿಪ್ಪನ್‌ಪೇಟೆ : ಬ್ರಿಟೀಷ್ ಕಾಲದ ರೈಲ್ವೆ ಮಾರ್ಗ ಹೊರತು ಈತನಕ ಶಿವಮೊಗ್ಗದಿಂದ ಯಾವುದೆ ಹೊಸ ಮಾರ್ಗಗಳು ಇರಲಿಲ್ಲ.ಇದೆ ಮೊದಲ ಭಾರಿ ಹೊಸ ರೈಲ್ವೆ ಮಾರ್ಗ ಸಿದ್ಧವಾಗಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ತಿಳಿಸಿದರು. ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಸ್ವಾತಂತ್ರ್ಯ ಬಂದ ನಂತರ ಶಿವಮೊಗ್ಗದಿಂದ ಯಾವುದೆ ಹೊಸ ಮಾರ್ಗಗಳನ್ನು ಮಾಡಿಲ್ಲ. 2500 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸುತ್ತಿರುವ ಆನಂದಪುರ…

Read More

ಕಾರ್ಯನಿರ್ವಹಿಸುತಿದ್ದ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ|suicide

ಶಿವಮೊಗ್ಗ : ತಾನು ಕೆಲಸ ಮಾಡುತ್ತಿರುವ ಕಚೇರಿಯಲ್ಲೇ ಮಹಿಳೆಯೋರ್ವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆಗೆ ಆಕೆಯ ಕುಟುಂಬ ಮಹಾನಗರ ಪಾಲಿಕೆಯ ವಾಹನ ಚಾಲಕ ಕಾರಣವೆಂದು ಆರೋಪಿಸಿದೆ. ಗಾರ್ಡನ್ ಏರಿಯಾ 3ನೇ ಕ್ರಾಸ್ ನಲ್ಲಿರುವ ಚುಂಚಾದ್ರಿ ಮಹಿಳಾ ವಿವಿದೋದ್ದೇಶ ಸಹಕಾರ ಸಂಘದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದ ಅನಿತಾ(32) ಇಂದು ಎಂದಿನಂತೆ ಕೆಲಸಕ್ಕೆ ಹೋಗಿದ್ದು ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದು ಮಧ್ಯಾಹ್ನ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅನಿತಾಳಿಗೆ ರಾಮಮೂರ್ತಿಯೊಂದಿಗೆ 14 ವರ್ಷದ ಹಿಂದೆ ‌ಮದುವೆಯಾಗಿತ್ತು. ಮದುವೆಯಾಗಿ 13 ವರ್ಷದ ಮಗಳಿದ್ದಾಳೆ. ಎರಡು…

Read More

ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಸುಳ್ಳು ಕೇಸ್ – ಪೊಲೀಸ್ ಠಾಣೆ ಮುಂದೆಯೇ ಮಲಗಿದ ಕಿಮ್ಮನೆ : ಅಹೋರಾತ್ರಿ ಪ್ರತಿಭಟನೆ|kimmane

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕ್ಷೇತ್ರದಲ್ಲಿ ಪೊಲೀಸ್ v/s ಕಾಂಗ್ರೆಸ್ ಎಂಬ ಪರಿಸ್ಥಿತಿ ಬಂದಿದೆ. ಗೃಹಸಚಿವರ ಕ್ಷೇತ್ರದಲ್ಲಿ ಪೊಲೀಸರು ರಾಜಕಾರಣ ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿ ಜಿಲ್ಲಾ ರಕ್ಷಣಾಧಿಕಾರಿಗಳು ಬರುವವರೆಗೂ ತೀರ್ಥಹಳ್ಳಿ ಪೊಲೀಸ್ ಠಾಣೆ ಮುಂಭಾಗ ಅಹೋರಾತ್ರಿ ಪ್ರತಿಭಟನೆ ನಡೆಸುತಿದ್ದಾರೆ. ಮಂಗಳವಾರ ನಡೆದ ಹರೀಶ್​ ಮೇಲಿನ ಹಲ್ಲೆ ಕೇಸ್​ನಲ್ಲಿ ಪೊಲೀಸರು ಘಟನಾ ಸ್ಥಳದಲ್ಲಿ ಇಲ್ಲದವರ ಮೇಲೂ ಕೇಸ್ ಹಾಕಿದ್ದಾರೆ ಎಂದು ಆರೋಪಿಸಿದ ಕಿಮ್ಮನೆ ರತ್ನಾಕರ್​ ನೇರವಾಗಿ ಬಂದು ಪೊಲೀಸ್ ಠಾಣೆ ಎದುರು ಧರಣಿ ಕೂತರು, ಅಲ್ಲಿಯೇ ಜಮಖಾನ ತರಿಸಿ…

Read More