Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಮಣಿಪಾಲ ಆರೋಗ್ಯಕಾರ್ಡ್ 2022 ರ ನೋಂದಾವಣೆಯನ್ನು 30ನೇ ನವೆಂಬರ್ 2022 ರವರೆಗೆ ವಿಸ್ತರಣೆ | ಕಾರ್ಡ್ ಚಿಕ್ಕದು – ಸೌಲಭ್ಯ ದೊಡ್ಡದು -ಡಾ. ಅವಿನಾಶ್ ಶೆಟ್ಟಿ|Manipal card

ರಿಪ್ಪನ್‌ಪೇಟೆ : ಸಾರ್ವಜನಿಕ ಬೇಡಿಕೆಯ ಮೇರೆಗೆ ಮಣಿಪಾಲ ಆರೋಗ್ಯಕಾರ್ಡ್ 2022 ರ ನೋಂದಾವಣೆಯನ್ನು 30ನೇ ನವೆಂಬರ್ 2022 ರವರೆಗೆ ವಿಸ್ತರಿಸಲಾಗಿದೆ ಎಂದು ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ್ ಶೆಟ್ಟಿ ಹೇಳಿದರು.  ಪಟ್ಟಣದ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಣಿಪಾಲ ಆರೋಗ್ಯಕಾರ್ಡ್ (MAC) ಅನ್ನು ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ಆರಂಭಿಸಲಾಯಿತು. ಮಣಿಪಾಲ್ ಕಾರ್ಡ್ “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಈ ವರ್ಷದ ದ್ಯೇಯ…

Read More

ಮನೆಗೆ ಬೆಂಕಿ ಇಟ್ಟು ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ – ರಿಪ್ಪನ್‌ಪೇಟೆಯ ಗವಟೂರು ಗ್ರಾಮದಲ್ಲೊಂದು ಅಮಾನವೀಯ ಘಟನೆ|Ripponpet

ರಿಪ್ಪನ್‌ಪೇಟೆ;- ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗವಟೂರು ಗ್ರಾಮದ ಸರ್ವೇ ನಂಬರ್ ೧೬೯ ರ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದ ಗಂಗಮ್ಮ ಕೋಂ ಎಸ್.ಚಂದ್ರಪ್ಪ ಎಂಬುವರ ಮೇಲೆ ಸದರಿ ಗ್ರಾಮದ ನಿವಾಸಿಗಳು ಜಾಗದ ವಿಚಾರದಲ್ಲಿ ಗಲಾಟೆ ಮಾಡಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಎಸಗಿ ವಾಸಿಸುತ್ತಿದ್ದ ಮನೆಗೆ ಬೆಂಕಿ ಹಚ್ಚಿ ಸಂಪೂರ್ಣ ನಾಶಗೊಳಿಸಿರುವ ಘಟನೆ ರಿಪ್ಪನ್‌ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಜಾಗದ ವಿಚಾರದಲ್ಲಿ ಕೇಸ್ ನ್ಯಾಯಾಲಯದಲ್ಲಿದ್ದು ನ್ಯಾಯಾಲಯದ ತೀರ್ಪು…

Read More

ಗಾಂಜಾ ಮಾರಾಟಕ್ಕೆ ಯತ್ನ – ಬೈಕ್ ಸಹಿತ ಮೂವರು ಯುವಕರ ಬಂಧನ|Arrested

ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.   ತುಂಗ ನಗರ ಪೊಲೀಸ್ ಠಾಣೆ ವ್ಯಾಪ್ತಿ ನಿಸರ್ಗ ಬಡಾವಣೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಅಡಿ ಮೂವರು ಆರೋಪಿಗಳನ್ನ ಪೊಲೀಸರು ಬಂದಿಸಿದ್ದು 615 ಗ್ರಾಂ ಗಾಂಜಾ ವಶ ಪಡಿಸಿಕೊಂಡಿದ್ದಾರೆ. ಮಂಗಳವಾರ ಶಿವಮೊಗ್ಗ ಡಿವೈಎಸ್.ಪಿ ನೇತೃತ್ವದಲ್ಲಿ, ತುಂಗಾನಗರದ ಪಿಎಸ್ ಐ ಮತ್ತು ಸಿಬ್ಬಂಧಿಗಳ ತಂಡವು ನಿಸರ್ಗ ಲೇ ಔಟ್ ನಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿತರಾದ 1) ಮದಾರಿ ಪಾಳ್ಯದ…

Read More

ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಹಿಂತಿರುಗಿದ ಮಗ ಹೃದಯಾಘಾತದಿಂದ ಸಾವು|Hosanagara

ಹೊಸನಗರ : ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ ಮಗ ಸಹ ಸಾವನ್ನಪ್ಪಿದ ಘಟನೆ ತಾಲೂಕಿನ ಸುಳಗೋಡು ಗ್ರಾಮ ಪಂಚಾಯತಿಯ ಹುಲ್ಲುಸಾಲೆ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ಹುಲ್ಲುಸಾಲೆ ಗ್ರಾಮದ ಚಿನ್ನಮ್ಮ(78) ವಯೋ ಸಹಜವಾಗಿ ಸಾವನ್ನಪ್ಪಿದ್ದರು. ಇವರ ಅಂತ್ಯ ಸಂಸ್ಕಾರವನ್ನು ಭಾನುವಾರ ನಡೆಸಲಾಯಿತು. ತಾಯಿ ಚಿನ್ನಮ್ಮನ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ 30 ನಿಮಿಷದ ನಂತರ ಚಿನ್ನಮ್ಮನ ಮಗ ತಿಮ್ಮಪ್ಪಗೌಡ(58) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತಿಮ್ಮಪ್ಪಗೌಡ ತನ್ನ ತಾಯಿಯನ್ನು ಬಹಳ ಪ್ರೀತಿಸುತ್ತಿದ್ದರು. ಇದರಿಂದ…

Read More

ರಿಪ್ಪನ್‌ಪೇಟೆಯ ಸುಧೀಂದ್ರ ಆರ್ ಪ್ರಭು(ಕಲ್ಲು ಬಾಬಣ್ಣ) ನಿಧನ – ಸಂತಾಪ|Ripponpet

ರಿಪ್ಪನ್ ಪೇಟೆ ; ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಉಪಾಧ್ಯಕ್ಷ ಹಾಗೂ  ಸಪ್ತಗಿರಿ ಟ್ರೇಡರ್ಸ್  ಮಾಲೀಕ  ಸುಧೀಂದ್ರ ಆರ್ ಪ್ರಭು ಯಾನೆ ಕಲ್ಲು ಬಾಬಣ್ಣ ( 62) ವರ್ಷ  ಅವರು ಬುಧವಾರ ಬೆಳಗ್ಗೆ ಸ್ವಗೃಹದಲ್ಲಿ ಹೃದಯಾಘಾತದಿಂದ  ನಿಧನರಾದರು. 4 ದಶಕಗಳಿಂದ ಪಟ್ಟಣದಲ್ಲಿ ಮನೆ ಕಟ್ಟಡ ನಿರ್ಮಾಣದ ಸಾಮಗ್ರಿಗಳ ಮಾರಾಟದ ಮೂಲಕ  ಚಿರಪರಿಚಿತರಾಗಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡು  ಜನ ಮನ್ನಣೆ ಗಳಿಸಿದ್ದರು.  ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು,ಹಾಗೂ ಅಪಾರ ಬಂಧು ಬಳಗವನ್ನು…

Read More

ಹೆಲ್ಮೆಟ್ ಧರಿಸಿ ಸೈಕಲ್ ತುಳಿದು ಬೈಕ್ ಪ್ರಯಾಣಿಕರಿಗೆ ವಿಭಿನ್ನ ರೀತಿಯಲ್ಲಿ ಜಾಗೃತಿ ಮಾಡಿಸಿದ 72 ರ ಹರೆಯದ ಸಾಮಾಜಿಕ ಹೋರಾಟಗಾರ|Ripponpet

ರಿಪ್ಪನ್‌ಪೇಟೆ : 72 ವರ್ಷದ ಹಿರಿಯ ನಾಗರಿಕರೊಬ್ಬರು ತಮ್ಮ ಇಳಿ ವಯಸ್ಸಿನಲ್ಲಿಯೂ ಜನರಿಗೆ ಹೆಲ್ಮೆಟ್‌ ಜಾಗೃತಿಯನ್ನು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಅದೂ ಸೈಕಲ್‌ ಮೂಲಕ ಎಂಬುದು ಮತ್ತೊಂದು ವಿಶೇಷ ಮೂರು ತಲೆಯ ಹೆಲ್ಮೆಟ್‌ ಹಾಕಿ, ತಮ್ಮ ಹಳೇ ಸೈಕಲ್‌ ಏರಿ ರಸ್ತೆಯುದ್ದಕ್ಕೂ ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದಲ್ಲಿ ಜನಪರ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತರಾಗಿರುವ ಟಿ.ಆರ್.ಕೃಷ್ಣಪ್ಪ, ಸೈಕಲ್ ಸವಾರಿಯ ಮೂಲಕ ವಿಭಿನ್ನ ರೀತಿಯಲ್ಲಿ ಮೂರು ಹೆಲ್ಮೆಟ್ ಹಾಕಿಕೊಂಡು ಜನರಲ್ಲಿ ಜಾಗೃತಿ…

Read More

ರಿಪ್ಪನ್‌ಪೇಟೆ : ಸಿದ್ದಪ್ಪನಗುಡಿ ಬಳಿ ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ|Ripponpet

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಸಿದ್ದಪ್ಪನಗುಡಿ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಪ್ಪನಗುಡಿ ನಿವಾಸಿ ಸಿದ್ದೇಶ್ ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ಡೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯ ಹಿನ್ನಲೆ : ಇಂದು ಬೆನವಳ್ಳಿ ಗ್ರಾಮದ ಸಿದ್ಧಪ್ಪನ ಗುಡಿ ಹತ್ತಿರ ರಿಪ್ಪನ್‌ಪೇಟೆ ಪೊಲೀಸರು ಗಸ್ತು ಸಂಚರಿಸುತ್ತಿರುವಾಗ ಬೆಳಿಗ್ಗೆ 10-45 ಗಂಟೆ ವೇಳೆಗೆ ಸಾರ್ವಜನಿಕ ಸ್ಥಳದಲ್ಲಿ…

Read More

ತೀರ್ಥಹಳ್ಳಿ : ಮುಸ್ಲಿಂ ಮಹಿಳೆಯರಂತೆ ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ತಿರುಗಾಡುತಿದ್ದ ಪುರುಷ ವಶಕ್ಕೆ|Thirthahalli

ತೀರ್ಥಹಳ್ಳಿ : ಪಟ್ಟಣದ ಕುವೆಂಪು ವೃತ್ತದಲ್ಲಿ ಮಹಿಳೆಯರಂತೆ ಬುರ್ಖಾ ಧರಿಸಿ ಅನುಮಾನಾಸ್ಪದವಾಗಿ ಮತ್ತು  ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಈತನ ಹೆಸರು ರಾಜಾ ಎನ್ನಲಾಗಿದ್ದು ಸುಮಾರು 35 ವರ್ಷ ವಯಸ್ಸಿನವನು. ತಾನು ರಾಯಚೂರಿನಿಂದ ಬಂದವನು ಎಂದು  ಪೋಲಿಸರ ಮುಂದೆ ಹೇಳಿಕೊಂಡಿದ್ದಾನೆ.  ಮಂಗಳವಾರ ಬೆಳಿಗ್ಗೆ ಕುವೆಂಪು ವೃತ್ತದಲ್ಲಿ ಬುರ್ಖಾ ಧರಿಸಿದ್ದ ಈತನ ವೇಷ ಭೂಷಣ ವರ್ತನೆಯನ್ನು ನೋಡಿ ಸಾರ್ವಜನಿಕರು ಅನುಮಾನದಿಂದ ಪೋಲೀಸರಿಗೆ ಮಾಹಿತಿಯನ್ನು ನೀಡಿ ಆತನನ್ನು ಪೊಲೀಸರಿಗೊಪ್ಪಿಸಿದ್ದರು. ರಾಜಾನನ್ನು ಠಾಣೆಗೆ ಕರೆದೊಯ್ದ ಪೋಲೀಸರು…

Read More

ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ದ ಆಕ್ರೋಶಗೊಂಡು ತನ್ನ ಬೈಕ್ ಗೆ ಬೆಂಕಿ ಹಚ್ಚಿದ ಯುವಕ – ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತವರಣ|Shivamogga

ಶಿವಮೊಗ್ಗ : ಬೇಡಿಕೆ ಈಡೇರಿಸದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯುವಕನೊಬ್ಬ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ತನ್ನ ಬೈಕ್ ಗೆ ಬೆಂಕಿ ಹಚ್ಚಿ ತನ್ನ ಆಕ್ರೋಶವನ್ನು ಹೊರಹಾಕಿದ್ದಾನೆ.  ಈ ಘಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.  ಬೈಕ್ ಗೆ ಬೆಂಕಿ ಹಚ್ಚಿದ್ದ ಗಾಡಿಕೊಪ್ಪ ಸಮೀಪದ ಡಾ.ಅಂಬೇಡ್ಕರ್ ನಗರದ ರಾಜು (29) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರಾಜು, ತನ್ನ ಬೈಕಿಗೆ ಬೆಂಕಿ ಹಚ್ಚಿ ಅಧಿಕಾರಿಗಳ ವಿರುದ್ಧ ಆಕ್ರೋಶ…

Read More

ಹೊಸನಗರ : ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಇಬ್ಬರು ಯುವಕರ ಬಂಧನ|Hosanagara

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ಬಾಣಿಗ ಬಸ್ ನಿಲ್ದಾಣದ ಬಳಿ ಶುಕ್ರವಾರ ರಾತ್ರಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಮಾರುತಿಪುರ ಗ್ರಾಮ ಪಂಚಾಯಿತಿಯ ಹೊಸಕೆಸರೆ ಛತ್ರಳ್ಳಿಯ ಚಾಲಕ ಪ್ರತಾಪ್ ಹಾಗೂ ಮೇಲಿನಸಂಪಳ್ಳಿ ಗ್ರಾಮದ ಅಭಿಷೇಕ್ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆಯ ಹಿನ್ನಲೆ: ಹೊಸನಗರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಉಪಟಳವಾಗುವುದನ್ನು ತಪ್ಪಿಸಲು ಅದೇ ದಾರಿಯಲ್ಲಿ ಬಟ್ಟೆಮಲ್ಲಪ್ಪ, ಹರಿದ್ರಾವತಿ, ಹೆಬೈಲು, ಪುರಪೆಮನೆ ಭಾಗಗಳಲ್ಲಿ ತಮ್ಮ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸಿ ವಾಪಾಸಾಗುತ್ತಿದ್ದ ಹೊಸನಗರ…

Read More