Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ 2 ವರ್ಷ ವಯೋಮಿತಿ ಹೆಚ್ಚಳ :

ಪೊಲೀಸ್ ಅಭ್ಯರ್ಥಿಗಳ ಬೇಡಿಕೆಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಕರ್ನಾಟಕ ಸರಕಾರ ಆದೇಶ ಹೊರಡಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯೋಮಿತಿಯನ್ನು 25 ರಿಂದ 27 ವರ್ಷ ಹಾಗೂ ಎಸ್‍ಸಿ/ಎಸ್‍ಟಿ ಹಾಗೂ ಹಿಂದುಳಿದ ವರ್ಗಗಳಿಗೆ 27 ರಿಂದ 29 ವರ್ಷಳಿಗೆ ಹಾಗೂ ಬುಡ ಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 32…

Read More

ಬೊಮ್ಮಾಯಿ ಸರ್ಕಾರಕ್ಕೆ ತಾಕತ್ ಇದ್ರೆ ಶರಾವತಿ ಸಂತ್ರಸ್ತರಿಗೆ ಹಕ್ಕುಪತ್ರ ನೀಡಲಿ – ಮಧು ಬಂಗಾರಪ್ಪ|Sharavathi

ಬೊಮ್ಮಾಯಿ ಸರ್ಕಾರಕ್ಕೆ ತಾಕತ್ ಇದ್ರೆ ಶರಾವತಿ ಸಂತ್ರಸ್ತರಿಗೆ ಹಕ್ಕು ಪತ್ರ ನೀಡಿ ಎಂದು ಕೆಪಿಸಿಸಿ ಹಿಂದೂಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಶಿವಮೊಗ್ಗದಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶರಾವತಿ ಮುಳುಗಡೆ ಸಂತ್ರಸ್ತರ ಬುಡಕ್ಕೆ ಕೈ ಹಾಕುವ ಮೂಲಕ ಜೇನುಗೂಡಿಗೆ ಬಿಜೆಪಿ ಸರ್ಕಾರಕ್ಕೆ ಕೈ ಹಾಕಿದೆ ಇದು ಅವರನ್ನು ಸುಮನ್ನೆ ಬಿಡುವುದಿಲ್ಲ. ನಾಡಿಗೆ ಬೆಳಕು ಕೊಟ್ಟವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ. ಬಿಜೆಪಿ ಸರ್ಕಾರದ ಅಂತ್ಯ ಶುರುವಾಗಿದೆ. ಮಾನ ಮಾರ್ಯಾದೆ ಇಲ್ಲ, ಸರ್ಕಾರಕ್ಕೆ ದಮ್…

Read More

ಹೊಸನಗರ ತಾಲೂಕಿನ 1167 ಹಳ್ಳಿಗಳ ಕುಡಿಯುವ ನೀರಿನ ಯೋಜನೆಗೆ 422 ಕೋಟಿ ರೂ : ಹರತಾಳು ಹಾಲಪ್ಪ | ರಿಪ್ಪನ್‌ಪೇಟೆ ದ್ವಿಪಥ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ|Halappa

ರಿಪ್ಪನ್‌ಪೇಟೆ : ಹೊಸನಗರ ತಾಲ್ಲೂಕಿನ ಕಸಬಾ ಮತ್ತು ಕೆರೆಹಳ್ಳಿ ಹೋಬಳಿಯ 1167 ಹಳ್ಳಿಗಳ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಸರ್ಕಾರದಿಂದ 422 ಕೋಟಿ ರೂ ಪ್ರಸ್ತಾವನೆಗೆ ಸರ್ಕಾರದಿಂದ ಅಡಳಿತಾತ್ಮಕ ಅನುಮೋದನೆ ದೊರಕಿದೆ ಎಂದು ಸಾಗರ ಹೊಸನಗರ ವಿಧಾನ ಸಭಾ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಬಿಜೆಪಿ ಪಕ್ಷದ ಕಛೇರಿಯಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿ ಹೊಸನಗರ ತಾಲ್ಲೂಕಿನ ಪಟ್ಟಣ ಪಂಚಾಯ್ತಿ ಮತ್ತು 30 ಗ್ರಾಮ ಪಂಚಾಯ್ತಿಗಳಿಗೆ 50.25.15.10 ಮತ್ತು 5 ಸಾವಿರ ಲೀಟರ್ ಸಾಮರ್ಥ್ಯದ…

Read More

ಕುಟುಂಬದವರೊಂದಿಗೆ ಅಪ್ಪು ಅಭಿನಯದ ಗಂಧದಗುಡಿ ಸಿನಿಮಾ ವೀಕ್ಷಿಸಿದ ಯಡಿಯೂರಪ್ಪ|ಸೆಲ್ಪಿಗೆ ಮುಗಿಬಿದ್ದ ಯುವಕ_ಯುವತಿಯರು|BSY

ಮಾಜಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಶಿವಮೊಗ್ಗದಲ್ಲಿ ಫುಲ್ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ನಗರದ ಮೀನಾಕ್ಷಿ ಭವನ್ ನಲ್ಲಿ ದೋಸೆ ಸವಿದ ಬಳಿಕ ಕರ್ನಾಟಕ ರತ್ನ ಡಾ ಪುನೀತ್ ರಾಜ್‍ಕುಮಾರ್ ಅಭಿನಯದ ಕೊನೆಯ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ನಗರದಲ್ಲಿರುವ ಶಿವಪ್ಪ ನಾಯಕ ಮಾಲ್‌ಗೆ ಭೇಟಿ ನೀಡಿದ ಅವರು ಚಿತ್ರವನ್ನು ವೀಕ್ಷಿಸಿದರು. ಅವರಿಗೆ ಪುತ್ರ, ಸಂಸದ ಬಿ.ವೈ. ರಾಘವೇಂದ್ರ, ಅವರ ಪತ್ನಿ ತೇಜಸ್ವಿನಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಸೂಡಾ ಮಾಜಿ ಅಧ್ಯಕ್ಷ ಜ್ಯೋತಿಪ್ರಕಾಶ, ಡಿಸಿಸಿ ಅಧ್ಯಕ್ಷ…

Read More

ನಾಡು-ನುಡಿಯ ಅಭಿವೃದ್ಧಿಗಾಗಿ ನಾಡಿನ ಪ್ರತಿಯೊಬ್ಬ ಪ್ರಜೆಯು ಶ್ರಮಿಸಬೇಕು : ಆರಗ ಜ್ಞಾನೇಂದ್ರ|Ripponpet

ರಿಪ್ಪನ್‌ಪೇಟೆ: ನಾಡು-ನುಡಿಯ ಅಭಿವೃದ್ಧಿಗಾಗಿ ಕನ್ನಡ ನಾಡಿನ ಪ್ರತಿಯೊಬ್ಬ ಪ್ರಜೆಯು ಶ್ರಮಿಸಬೇಕು ಹಾಗೇಯೇ ವಿಶಾಲ ಭಾವನೆಯನ್ನು ಹೊಂದುವ ಜನಸಮೂಹ ಭಾಷಾ ಪ್ರೇಮದಿಂದ ನಾಡನ್ನು ಕಟ್ಟಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಕಸ್ತೂರಿ ಕನ್ನಡ ಸಂಘ, ಪುನಿತ್ ರಾಜ್ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದ್ದ 67 ನೇ ಕನ್ನಡ ರಾಜ್ಯೋತ್ಸವ ಹಾಗೂ ಪುನಿತ್ ರಾಜ್ ಪುಣ್ಯಸ್ಮರಣೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಪ್ರಪಂಚದಲ್ಲಿಯೇ ಇಸ್ರೇಲ್‌ನ ಜನರು ಹೆಚ್ಚು ಭಾಷಾಭಿಮಾನಿಗಳಾಗಿದ್ದು, ಅವರ ನಿರಂತರ ಚಟುವಟಿಕೆಯಲ್ಲಿ…

Read More

ನಾಪತ್ತೆಯಾಗಿದ್ದ ಶಾಸಕ ರೇಣುಕಾಚಾರ್ಯರ ಸೋದರನ ಪುತ್ರ ಶವವಾಗಿ ಪತ್ತೆ :|Honnali

ಕಳೆದ ಐದು ದಿನಗಳಿಂದ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆಯಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ಬಳಿಯ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಚಂದ್ರಶೇಖರ್ ಕಾರು ಪತ್ತೆಯಾಗಿದ್ದು, ಕಾರಿನ ಹಿಂಬದಿ ಸೀಟಿನಲ್ಲಿ ಚಂದ್ರಶೇಖರ್ ಶವ ಕೂಡ ಪತ್ತೆಯಾಗಿದೆ. ಭದ್ರಾ ಮೇಲ್ದಂಡೆ ಕಾಲುವೆಗೆ ಕಾರು ಬಿದ್ದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಲುವೆಯಲ್ಲಿ ಶೋಧ ಮಾಡಿದಾಗ ಬಿಳಿ ಬಣ್ಣದ ಕ್ರೇಟಾ ಕಾರು ಪತ್ತೆಯಾಗಿದೆ. ಶೋಧ ಕಾರ್ಯಾಚರಣೆ ವೇಳೆ ಶಾಸಕ ರೇಣುಕಾಚಾರ್ಯ, ಪೊಲೀಸರು…

Read More

ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಹೋದರನ ಮಗ ನಾಪತ್ತೆ ಪ್ರಕರಣ : ಕಾರು ತುಂಗಾ ಕಾಲುವೆಯಲ್ಲಿ ಬಿದ್ದಿರುವ ಶಂಕೆ|honnali

ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಸೋದರ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಹೌದು, ಕಳೆದ ಐದು ದಿನಗಳಿಂದ ನಾಪತ್ತೆಯಾಗಿರುವ ಚಂದ್ರಶೇಖತ್ ಪತ್ತೆಗೆ ಪೊಲಿಸರು ತೀವ್ರ ಹುಡುಕಾಟ ನಡೆಸಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೊನ್ನಾಳಿ ತಾಲೂಕಿನ ಕಡದಕಟ್ಟೆ ಗ್ರಾಮದ ತುಂಗಾ ಕಾಲುವೆ ಬಳಿ ಚಂದ್ರಶೇಖರ್ ಕಾರು ಸಂಚರಿಸಿದೆ ಎಂಬ ಕುರುಹು ಪತ್ತೆಯಾಗಿದೆ. ಈ ಹಿನ್ನೆಲೆ ಪೊಲೀಸರು ಚಂದ್ರಶೇಖರ್ ಕಾರು ತುಂಗಾ ಕಾಲುವೆಗೆ…

Read More

ಕಾಸ್ಪಾಡಿ ತಿರುವಿನಲ್ಲಿ ಬೈಕ್ ಅಪಘಾತ : ಸವಾರ ಸ್ಥಳದಲ್ಲೇ ಸಾವು|Accident

ಸಾಗರ : ಬೈಕ್ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ ಗ್ರಾಮದ ಹರೀಶ್ ಕುಮಾರ್ (42) ಎಂಬುವರು ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಹೋದರಿಯ ಮನೆಗೆ ಹೋಗಿ ವಾಪಾಸ್ ಮನೆಗೆ ಬೈಕ್ ನಲ್ಲಿ ಮರಳುವಾಗ ಕಾಸ್ಪಾಡಿ ತಿರುವಿನಲ್ಲಿ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡು ಉರುಳಿ ಬಿದ್ದಿದ್ದಾರೆ.ತೀವ್ರ ಸ್ವರೂಪದ ಗಾಯವಾಗಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಕುರಿತು ಸಾಗರ ಗ್ರಾಮಾಂತರ ಬುಧವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಪಾತ್ರವೂ ಅದ್ವಿತೀಯವಾದದ್ದು- : ಪ್ರದೀಪ್ ಎಸ್ ಹೆಬ್ಬೂರ್|Shivamogga

ಶಿವಮೊಗ್ಗ: ಪುರದಾಳ್ ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಕನ್ನಡ ರಾಜ್ಯೋತ್ಸವ       ಪ್ರತಿಭಾ ಪುರಸ್ಕಾರ ಗುರುವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು,  ಗ್ರಾಮ ಪಂಚಾಯಿತಿ ಅನುದಾನದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ  2021-22ನೇ  ಸಾಲಿನಲ್ಲಿ     ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ     ಯಲ್ಲಿ ಶೇಕಡಾ 90ಕ್ಕಿಂತ  ಹೆಚ್ಚಿನ ಅಂಕ ಪಡೆದ ಮತ್ತು ಕ್ರೀಡೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ವಿದ್ಯಾರ್ಥಿನಿಗೆ ಅಭಿನಂದನೆ…

Read More

ಈಶ್ವರಪ್ಪ ರಾಜಕೀಯ ದಾಹಕ್ಕೆ ಇನ್ನೆಷ್ಟು ಅಮಾಯಕ ಯುವಕರ ಹೆಣ ಬೀಳಬೇಕು|Shivamogga

ಶಿವಮೊಗ್ಗ : ಮಾಜಿ ಸಚಿವ ಈಶ್ವರಪ್ಪ ನಾಲಗೆ ಬಿಗಿ ಹಿಡಿದು ಮಾತನಾಡಬೇಕು. ಇವರ ರಾಜಕೀಯ ದಾಹಕ್ಕೆ ಇನ್ನೆಷ್ಟು ಅಮಾಯಕ ಯುವಕರ ಹೆಣ ಬೀಳಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್‌.ಸುಂದರೇಶ್ ಪ್ರಶ್ನಿಸಿದರು.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್ ಅವರು, ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಂದ ಕೋಮು ಗಲಭೆ ಆಗುತ್ತಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ. ತಮ್ಮ ಹೇಳಿಕೆಗಳ ಮೂಲಕ ಈಶ್ವರಪ್ಪ ಅವರೆ ಯುವಕರನ್ನು ಪ್ರಚೋದಿಸುತ್ತಿದ್ದಾರೆ. ಇತಿಹಾಸದ ಅಧ್ಯಯನ ಇಲ್ಲದ ಯುವಕರು ಅವರು ಮಾತು ನಂಬುತ್ತಿದ್ದಾರೆ. ಶಿವಮೊಗ್ಗದಲ್ಲಿ ಪದೇ ಪದೆ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದೆ….

Read More
Exit mobile version