Headlines

ರಫ಼ಿ ರಿಪ್ಪನ್ ಪೇಟೆ

ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು. ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.” ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ. ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ. ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ. ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು. - ರಫ಼ಿ ರಿಪ್ಪನ್ ಪೇಟೆ ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಭರದ ಸಿದ್ದತೆ : ಕಾರ್ಯಕ್ರಮದ ಅಹ್ವಾನ ಪತ್ರಿಕೆ ಬಿಡುಗಡೆ|Ripponpet

ರಿಪ್ಪನ್‌ಪೇಟೆ ;-ಇಲ್ಲಿನ ಕಸ್ತೂರಿ ಕನ್ನಡ ಸಂಘದ ನವಂಬರ್ 1 ರಂದು 67 ನೇ ಕನ್ನಡ ರಾಜ್ಯೋತ್ಸವ ಮತ್ತು ದಿ.ಪುನಿತ್‌ರಾಜ್ “ಪುಣ್ಯ ಸ್ಮರಣೆ’’ ಕಾರ್ಯಕ್ರಮದ ಅಹ್ವಾನ ಪತ್ರಿಕೆಯ ಬಿಡುಗಡೆಯನ್ನು ಹಿರಿಯ ಸಾಹಿತಿ ಹ.ಅ..ಪಾಟೀಲ್ ಬಿಡುಗಡೆಗೊಳಿಸಿದರು. ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಕಸ್ತೂರಿ ಕನ್ನಡ ಸಂಘದ ಅಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡ ರಾಜ್ಯೋತ್ಸವ ನವಂಬರ್ ತಿಂಗಳಿಗೆ ಸೀಮಿತಗೊಳ್ಳದೆ ನಿತ್ಯೋತ್ಸವವಾಗಲಿ ಎಂದು ಅಶಿಸಿದರು. ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಮೆಣಸೆ ಅನಂದ ಅಧ್ಯಕ್ಷತೆ ವಹಿಸಿ ಮಾತನಾಡಿ ಭೂಪಾಳಂ ಚಂದ್ರಶೇಖರಯ್ಯ…

Read More

ಚಲಿಸುತಿದ್ದ ರೈಲಿಗೆ ಸಿಲುಕಿ ರಬ್ಬರ್ ಟ್ಯಾಪಿಂಗ್ ಮಾಡುವ ಯುವಕ ಸಾವು|Railway

ರಿಪ್ಪನ್‌ಪೇಟೆ : ಇಲ್ಲಿಗೆ ಸಮೀಪದ ಅರಸಾಳು ಗ್ರಾಮದಲ್ಲಿ ಚಲಿಸುತಿದ್ದ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಇಂದು ಬೆಳಗಿನಜಾವ ನಡೆದಿದೆ. ಅರಸಾಳು ಗ್ರಾಮದ ಕೆರೆ ಏರಿ‌ಮೇಲಿನ ತಿರುವಿನಲ್ಲಿ ಈ ಘಟನೆ ನಡೆದಿದ್ದು ಮೃತಪಟ್ಟ ವ್ಯಕ್ತಿಯನ್ನು ಸಾಗರದ ತ್ಯಾಗರ್ತಿ ಮೂಲದ ಸಂತೋಷ್ (22) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಶಿವಮೊಗ್ಗದ ರೈಲ್ವೆ ಪೊಲೀಸರು ಆಗಮಿಸಿ ಸ್ಥಳ ಮಹಜರು ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅರಸಾಳುವಿನ ರಬ್ಬರ್ ತೋಟದಲ್ಲಿ ಕೆಲಸಕ್ಕಾಗಿ ಎರಡು ದಿನಕೊಮ್ಮೆ ಈತ ಇಲ್ಲಿಗೆ ಬರುತ್ತಿದ್ದನು. ಇಂದು ಬೆಳಗ್ಗೆ…

Read More

ಮಿದುಳು ನಿಷ್ಕ್ರಿಯಗೊಂಡು ಏಳು ವರ್ಷದ ಬಾಲಕ ಸಾವು : ನೇತ್ರದಾನ ಮಾಡಿ ಉದಾರತೆ ಮೆರೆದ ಪೋಷಕರು|Eyedonate

ರಿಪ್ಪನ್ ಪೇಟೆ : ಏಳು ವರ್ಷದ ಮಗುವಿನ ಮೆದುಳಿನಲ್ಲಿ ರಕ್ತಸ್ತ್ರಾವ ಉಂಟಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿತ್ತು. ಮಗನನ್ನು ಬದುಕಿಸುವುದಕ್ಕೆ ಪೋಷಕರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿ, ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ಮೆದುಳು ನಿಷ್ಕ್ರೀಯಗೊಂಡ ಬಳಿಕ ಬಾಲಕ ಸಾವಿನ ಮನೆಯ ಅಂಚು ತಲುಪಿಯಾಗಿತ್ತು. ಎತ್ತಿ ಮುದ್ದಾಡಿ ಸಾಕಿ ಸಲುಹಿದ ಪುಟ್ಟ ಮಗನ ಸಾವಿನ ನೋವಿನ ನಡುವೆಯೂ ಪೋಷಕರು ಆತನ ಅಂಗಾಂಗ ದಾನ ಮಾಡುವ ನಿರ್ಧಾರ ಮಾಡಿದ್ದಾರೆ. ಈ ಮೂಲಕ ಮಗನ ಸಾವಿನ ನೋವಿನಲ್ಲಿಯೂ ಸಾರ್ಥಕತೆಯನ್ನು ಮೆರೆದಿದ್ದಾರೆ. ಹೌದು…

Read More

ರಿಪ್ಪನ್‌ಪೇಟೆ : ಶಿವಮಂದಿರದ ಬಳಿ ಬೈಕ್ ಗಳ ನಡುವೆ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ, ಮೆಗ್ಗಾನ್ ಗೆ ದಾಖಲು|Accident

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಳಿಬೈಲ್ ನಿವಾಸಿ ಆಸೀಫ಼್ ಮತ್ತು ಮಾದಪುರ ಗ್ರಾಮದ ಪ್ರಶಾಂತ್ ಗಂಭೀರ ಗಾಯಗೊಂಡವರು. ಗಾಳಿಬೈಲ್ ಗ್ರಾಮದ ಆಸೀಪ್ ಎಂಬುವವನು ಬಜಾಜ್ ಪಲ್ಸರ್(NS) ಬೈಕ್‌ನಲ್ಲಿ ರಿಪ್ಪನ್‌ಪೇಟೆಯಿಂದ ಗಾಳಿಬೈಲ್ ಕಡೆಗೆ ತೆರಳುತಿದ್ದನು, ಮಾದಾಪುರ ಗ್ರಾಮದ ಪ್ರಶಾಂತ್ ಎಂಬುವವನು ಬಜಾಜ್ ಡಿಸ್ಕವರಿ ಬೈಕ್ ನಲ್ಲಿ ಅದೇ ಮಾರ್ಗದಲ್ಲಿ ತೆರಳುತಿದ್ದಾಗ ಆಸೀಫ಼್ ಹಿಂಬದಿಯಿಂದ ಡಿಕ್ಕಿ ಹೊಡೆದ…

Read More

ಭಾರತ್ ಜೋಡೋ ಯಾತ್ರೆಯಲ್ಲಿ ಮೃತಪಟ್ಟಿದ್ದ ಸಾಗರದ ಕಾರ್ಯಕರ್ತನ ಮನೆಗೆ ಡಿ ಕೆ ಶಿವಕುಮಾರ್ ಭೇಟಿ – 10 ಲಕ್ಷ ನೆರವಿನ ಚೆಕ್ ವಿತರಣೆ|KPCC

ಭಾರತ್ ಜೋಡೋ ಯಾತ್ರೆಗೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತ್ಯಾಗರ್ತಿಯ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಅಪಘಾತದಲ್ಲಿ ಮೃತಪಟ್ಟಿದ್ದರು.ಆ ಕಾರ್ಯಕರ್ತನ ಮನೆಗೆ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ, 10 ಲಕ್ಷ ನೆರವಿನ ಚೆಕ್ ವಿತರಿಸಿದರು. ಭಾರತ್ ಜೋಡೋ ಯಾತ್ರೆ ವೇಳೆ ಹಿರಿಯೂರು ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತ್ಯಾಗರ್ತಿ ಹೋಬಳಿ ಹುತ್ತದಿಂಬ ಗ್ರಾಮದ ರಮೇಶ್ ಅವರ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು…

Read More

ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬದ ದಿನವೇ ಆತ್ಮಹತ್ಯೆಗೆ ಶರಣಾದ ರಿಪ್ಪನ್‌ಪೇಟೆ ಮೂಲದ ಮಹಿಳೆ : ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರು|Ripponpet

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕಾರಗೋಡು ಗ್ರಾಮದ ಮಹಿಳೆ ಆಲಗೇರಿ ಮಂಡ್ರಿ ಸಮೀಪದ ಗಂಟಿನಕೊಪ್ಪ ಗ್ರಾಮದ ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾರಗೋಡು ಗ್ರಾಮದ ಆಟೋ ಕೃಷ್ಣ ರವರ ಪುತ್ರಿ ಐಶ್ವರ್ಯ (22) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ರಿಪ್ಪನ್‌ಪೇಟೆ ಸಮೀಪದ ಕಾರಗೋಡು ಗ್ರಾಮದ ನಿವಾಸಿ ಆಟೋ ಕೃಷ್ಣ ರವರ ಪುತ್ರಿ ಐಶ್ವರ್ಯ ವಿವಾಹ ಎರಡು ವರ್ಷಗಳ ಹಿಂದೆ ಆಲಗೇರಿ ಮಂಡ್ರಿ ಸಮೀಪದ ಗಂಟಿನಕೊಪ್ಪ ಗ್ರಾಮದ ಚಂದ್ರಶೇಖರ್ ಎಂಬುವವರ ಜೊತೆ ನಡೆದಿತ್ತು. ಮೃತ…

Read More

ಸಾಹಿತಿಗಳಿಗೆ ಬೆದರಿಕೆಯೊಡ್ಡುವುದನ್ನು ಸಹಿಸಲು ಸಾಧ್ಯವಿಲ್ಲ : ಹರತಾಳು ಹಾಲಪ್ಪ | ಸಾಹಿತಿ ನಾ ಡಿಸೋಜಾ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದ ಶಾಸಕರು|sagara

ಸಾಗರ : ಲೇಖಕರು, ಸಾಹಿತಿಗಳು ನಿರ್ಭಯವಾಗಿ ಬರವಣಿಗೆ ಮಾಡಲು ಅವಕಾಶವಾಗಬೇಕು. ಹಿಂಸೆ, ಭಯದ ಮೂಲಕ ಲೇಖನಿಯನ್ನು ತಡೆಯುವ ಯಾವುದೇ ಪ್ರಯತ್ನ ಸರಿಯಲ್ಲ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು.  ಬೆದರಿಕೆ ಪತ್ರ ಬಂದಿರುವ ಹಿನ್ನೆಲೆಯಲ್ಲಿ ಹಿರಿಯ ಸಾಹಿತಿ ಡಾ| ನಾ.ಡಿಸೋಜಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಅವರು ಮಾತನಾಡಿದರು. ಹಿಂದೆ ಗೌರಿ ಲಂಕೇಶ್‌, ಕಲಬುರ್ಗಿ ಅಂತವರ ಹತ್ಯೆ ನಡೆದಿದೆ. ಬೇರೆ ಬೇರೆ ವಿಚಾರಧಾರೆಯುಳ್ಳವರಿಂದ ಇಂತಹ ಕೆಲಸ ನಡೆದಿದೆ. ಚರ್ಚೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕೇ ವಿನಃ ಹಿಂಸೆಗೆ ಇಳಿಯಬಾರದು…

Read More

ಭದ್ರಾವತಿ ಆಟೋ ಚಾಲಕನ ಕೊಲೆ ಪ್ರಕರಣ : ಸ್ನೇಹಿತರಿಂದಲೇ ನಡೆಯಿತು ಕೊಲೆ | ಮಗನ ಸಾವಿಗೆ ನೊಂದು ತಾಯಿ ಆತ್ಮಹತ್ಯೆ!!!!!???|Bhadravathi

ಭದ್ರಾವತಿ : ಸ್ನೇಹಿತರು ಅಂದರೆ ಪ್ರಾಣಕ್ಕೆ ಪ್ರಾಣ ಕೊಡೋರು ಅಂತಾರೆ, ಆದರೆ  ಭದ್ರಾವತಿಯಲ್ಲಿ ಸ್ನೇಹಿತರೆ ತಮ್ಮ ಗೆಳೆಯನನ್ನು ಕೊಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಕ್ಟೋಬರ್ 24ರಂದು ಭದ್ರಾವತಿಯ ಎಪಿಎಂಸಿ ಆವರಣದ ಮ್ಯಾಮ್ ಕೋಸ್ ಕಟ್ಟಡ ಬಳಿ ರೂಪೇಶ್ ಎಂಬಾತನ ಶವ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿಯ ಹಳೇ ನಗರ ಠಾಣೆ ಪೊಲೀಸರು ತನಿಖೆ ನಡೆಸಿದಾಗ ಸ್ನೇಹಿತರ ಕೃತ್ಯ ಬಯಲಾಗಿದೆ. ಆಟೋ ಚಾಲಕನಾಗಿದ್ದ ರೂಪೇಶ್​ನನ್ನು ಆತನ ಸ್ನೇಹಿತರೇ ಆದ ಭದ್ರಾವತಿ ಕಾಚಗೂಂಡನಹಳ್ಳಿಯ ಕುಶಾಲ್(35) ಹಾಗೂ ಭದ್ರಾವತಿ ಹುತ್ತಾ…

Read More

ಭಾವೈಕ್ಯತೆಯಿಂದ ಸಮಾಜದ ಅಭಿವೃದ್ಧಿ ಸಾಧ್ಯ: ಜೋಸೆಫ್ ಅರಮಚ್ಚಾಡತ್ | ರಿಪ್ಪನ್‌ಪೇಟೆ ನವೀಕೃತ ಗುಡ್‌ಶಫರ್ಡ್ ಚರ್ಚ್ ಲೋಕಾರ್ಪಣೆ|Ripponpet

ರಿಪ್ಪನ್ ಪೇಟೆ: ಪ್ರತಿಯೊಂದು ಧರ್ಮದ ಮೂಲ ಸಾರ ಮನುಕುಲದ ಒಳಿತು. ಜಗತ್ತಿಗೆ ಶಾಂತಿ ಸಂದೇಶವನ್ನು ನೀಡಿದ ಪ್ರಭು ಯೇಸುಕ್ರಿಸ್ತರು ಕರುಣೆ ಪ್ರೀತಿ  ಮತ್ತು ದೇವರ ಮೇಲಿನ ನಂಬಿಕೆಯಿಂದ ಮಾತ್ರ ನೆಮ್ಮದಿಯ ಜೀವನವನ್ನು ಸಾಗಿಸಬಹುದು ಎಂದು ಶುಭ ಸಂದೇಶವನ್ನು ನೀಡಿದ್ದಾರೆ.ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಬೆರೆತು ಎಲ್ಲರೂ ಸಹೋದರ ಸಹೋದರಿಯಂತೆ  ಇದ್ದಾಗ ಮಾತ್ರ ನೆಮ್ಮದಿಯ ಸಮಾಜಕ್ಕೆ ದಾರಿದೀಪವಾಗಲಿದೆ ಎಂದು ಭದ್ರಾವತಿ ಧರ್ಮ ಕ್ಷೇತ್ರದ ಧರ್ಮಧ್ಯಕ್ಷ ಜೋಸೆಫ್ ಅರಮಚ್ಚಾಡತ್  ಹೇಳಿದರು. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿನ ನವೀಕರಣಗೊಂಡ  ಗುಡ್‌ಶಫರ್ಡ್…

Read More

ಶ್ರದ್ದಾ ಭಕ್ತಿಯಿಂದ ನೆರವೇರಿದ ಸಂಭ್ರಮದ ಗೋಪೂಜೆ|Ripponpet

ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಮತ್ತು ಮಜರಾಯಿ ಇಲಾಖೆಯವರ ಅದೇಶದನ್ವಯ ಹಲವು ದೇವಸ್ಥಾನಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಸಂಭ್ರಮಸಿದರು. ಇಲ್ಲಿನ ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆ ಗೋವುಯನ್ನು ಶೃಂಗರಿಸಿ ದೇವಸ್ಥಾನದ ಪ್ರದಾನ ಅರ್ಚಕ ವೇ.ಚಂದ್ರಶೇಖರ ಭಟ್ ಮತ್ತು ಗುರುರಾಜ್ ಭಟ್ ನೇತೃತ್ವದಲ್ಲಿ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಧರ್ಮದರ್ಶಿ ಆರ್.ಈ.ಈಶ್ವರಶೆಟ್ಟಿ, ಎಂ.ಡಿ.ಇಂದ್ರಮ್ಮ,ಗಣೇಶ್ ಎನ್.ಕಾಮತ್, ಎನ್.ಸತೀಶ್,ಸುಧೀಂದ್ರ ಪೂಜಾರಿ,ಮಂಜಪ್ಪ, ಮೋಹನ್,ಜಯಲಕ್ಷಿ, ರಾಘವೇಂದ್ರ,ಕೆ.ಆರ್.ಭೀಮರಾಜ್‌ಗೌಡರು, ವೈ.ಜೆ.ಕೃಷ್ಣ,ರಾಘವೇಂದ್ರ ಆರ್.ಸರಸ್ವತಿ ರಾಘವೇಂದ್ರ,ಇನ್ನಿತರರು ಹಾಜರಿದ್ದರು. [ ರಿಪ್ಪನ್‌ಪೇಟೆಯ ಸಮೀಪದ…

Read More